Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 8:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಿನ್ನ ಶತ್ರುಗಳನ್ನು ಅವಮಾನವು ಮುಸುಕುವುದು; ದುಷ್ಟರ ನಿವಾಸವು ನಿರ್ಮೂಲವಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವಮಾನ ಮುಸುಕುವುದು ನಿನ್ನ ಹಗೆಗಳನ್ನು ದುರುಳರಾ ನಿವಾಸವಾದರೋ ನಿರ್ಮೂಲವಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಿನ್ನ ಹಗೆಗಳನ್ನು ಅವಮಾನವು ಮುಸುಕುವದು; ದುಷ್ಟರ ನಿವಾಸವು ನಿರ್ಮೂಲವಾಗುವದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದರೆ ನಿನ್ನನ್ನು ದ್ವೇಷಿಸುವವರಿಗೆ ದೇವರು ಅವಮಾನ ಮಾಡುವನು; ದುಷ್ಟರ ಮನೆಗಳನ್ನು ನಾಶಮಾಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನಿನ್ನ ಶತ್ರುಗಳಿಗೆ ನಾಚಿಕೆಯಾಗುವುದು; ದುಷ್ಟರ ವಾಸಸ್ಥಳವು ಇಲ್ಲದೆ ಹೋಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 8:22
17 ತಿಳಿವುಗಳ ಹೋಲಿಕೆ  

ಅವನ ವೈರಿಗಳನ್ನು ನಾಚಿಕೆಯೆಂಬ ವಸ್ತ್ರದಿಂದ ಹೊದಿಸುವೆನು; ಆದರೆ ಅವನ ಮೇಲೆ ಕಿರೀಟವು ಶೋಭಿಸುತ್ತಿರುವುದು.”


ಮಾನಭಂಗವೇ ನನ್ನ ವಿರೋಧಿಗಳಿಗೆ ವಸ್ತ್ರವಾಗಲಿ; ನಾಚಿಕೆಯೇ ಅವರ ಹೊದಿಕೆಯಾಗಲಿ.


ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರು ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನನ್ನು ಹೀಯಾಳಿಸಿ ಆತ್ಮಸ್ತುತಿಮಾಡಿಕೊಳ್ಳುವವರು, ಅವಮಾನವನ್ನೂ, ಅಪಕೀರ್ತಿಯನ್ನೂ ಹೊಂದಲಿ.


ಅವನ ನಿರ್ಭಯದ ಗುಡಾರದಿಂದ ಅವನನ್ನು ಎಳೆದು, ಮಹಾಭೀತಿಗಳ ರಾಜನ ಸನ್ನಿಧಿಗೆ ಸಾಗಿಸಿಕೊಂಡು ಹೋಗುವನು.


ಅವನನ್ನು ಅಲ್ಲಿಂದ ಕಿತ್ತು ಹಾಕಿದರೆ ಆ ಸ್ಥಳವು, ‘ನಿನ್ನನ್ನು ಕಾಣೆ’ ಎಂದು ಕೂಗುವುದು.


ನೀನು ನನ್ನ ಅಪರಾಧವನ್ನು ಕ್ಷಮಿಸಿ ನನ್ನ ದೋಷವನ್ನು ಏಕೆ ಪರಿಹರಿಸುವುದಿಲ್ಲ? ನಾನು ಈಗ ಮಣ್ಣಿನಲ್ಲಿ ಮಲಗಿಕೊಳ್ಳುವೆನು; ನೀನು ನನ್ನನ್ನು ಹುಡುಕುವಾಗ ನಾನು ಇಲ್ಲದೆ ಹೋಗಿರುವೆನು.


ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”


ಅವರ ಗುಡಾರದ ಹಗ್ಗವು ಬಿಚ್ಚಿಹೋಗುವುದಷ್ಟೆ. ಅವರು ಜ್ಞಾನವಿಲ್ಲದವರಾಗಿ ಸಾಯುವರು” ಎಂಬುದೇ.


ಅವನು ಆ ಮನೆಯನ್ನು ಆತುಕೊಂಡರೆ ಅದು ನಿಲ್ಲುವುದಿಲ್ಲ; ಅದನ್ನು ಹಿಡುಕೊಂಡರೆ ಅದು ಸ್ಥಿರವಾಗಿರದು.


ಆ ಮೇಲೆ ಯೋಬನು ಪ್ರತ್ಯುತ್ತರವಾಗಿ ಇಂತೆಂದನು,


ಭ್ರಷ್ಟರ ಸಂಘವು ನಿರರ್ಥಕ, ಬೆಂಕಿಯು ಲಂಚಕೋರರ ಗುಡಾರಗಳನ್ನು ಸುಟ್ಟು ಹಾಕುವುದು.


‘ಪ್ರಧಾನನ ಮನೆ ಏನಾಯಿತು? ದುಷ್ಟರು ವಾಸಿಸಿದ ಗುಡಾರವೆಲ್ಲಿ?’ ಎನ್ನುತ್ತೀರಷ್ಟೆ.


ಆತನು ದುಷ್ಟರ ಪ್ರಾಣವನ್ನು ಉಳಿಸುವುದಿಲ್ಲ, ಗತಿಹೀನರ ನ್ಯಾಯವನ್ನು ಸ್ಥಾಪಿಸುವನು.


ಅರಸನು ದುಃಖಿಸುವನು, ಭಯವು ಪ್ರಭುವನ್ನು ಮುಸುಕುವುದು, ಸಾಧಾರಣಜನರ ಕೈಗಳು ತತ್ತರಿಸುವವು; ನಾನು ಅವರ ದುರ್ನಡತೆಗೆ ತಕ್ಕ ಪ್ರತಿಕಾರವನ್ನು ಮಾಡಿ, ಅವರ ದುಷ್ಟ ಕಾರ್ಯಗಳಿಗೆ ಸರಿಯಾಗಿ ದಂಡನೆಯನ್ನು ವಿಧಿಸುವೆನು; ಆಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.”


ಆಗ ಸಮುದ್ರದ ಸುತ್ತುಮುತ್ತಲಿನ ಸಕಲ ಅರಸರು ತಮ್ಮ ಸಿಂಹಾಸನದಿಂದ ಇಳಿದು, ನಿಲುವಂಗಿಗಳನ್ನು ತೆಗೆದುಹಾಕಿ, ವಿಚಿತ್ರವಾಗಿ ಹೊಲೆದ ತಮ್ಮ ಕಸೂತಿಯ ಬಟ್ಟೆಯನ್ನು ಕಿತ್ತುಹಾಕಿ, ತತ್ತರವನ್ನೇ ಹೊದ್ದುಕೊಂಡು, ನೆಲದ ಮೇಲೆ ಕುಳಿತು, ಕ್ಷಣ ಕ್ಷಣಕ್ಕೂ ನಡುಗುತ್ತಾ, ನಿನ್ನ ವಿಷಯವಾಗಿ ಆಶ್ಚರ್ಯಪಡುವರು.


ದುಷ್ಟರ ಮನೆಗೆ ನಾಶನ, ಶಿಷ್ಟರ ಗುಡಾರಕ್ಕೆ ಏಳಿಗೆ.


ನಾನು ಶಾಪವನ್ನು ಕಳುಹಿಸುತ್ತೇನೆ. ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನನ್ನ ಅಪ್ಪಣೆಯಂತೆ ಅದು ಕಳ್ಳನ ಮನೆಯಲ್ಲಿಯೂ, ನನ್ನ ಹೆಸರೆತ್ತಿ ಸುಳ್ಳು ಸಾಕ್ಷಿಹೇಳುವವನ ಮನೆಯೊಳಗೆ ನುಗ್ಗಿ ಮತ್ತು ಅವನ ಮನೆಯಲ್ಲಿನ ಮರಗಳನ್ನೂ, ಅದರ ಕಲ್ಲುಗಳನ್ನೂ ನಾಶಮಾಡುವುದು’” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು