Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಾನು ನೀತಿವಂತನಾಗಿದ್ದರೂ ಉತ್ತರಕೊಡೆನು; ಆದರೆ ನನ್ನ ನ್ಯಾಯಾಧಿಪತಿಗೆ ಮೊರೆಯಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಾನು ಸತ್ಯವಂತನಾಗಿದ್ದರೂ ವಾದಿಸಲಾರೆನು ನನ್ನ ನ್ಯಾಯಾಧೀಶನಲ್ಲಿ ದಯೆಯನು ಕೋರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನನಗೆ ನ್ಯಾಯವಿದ್ದರೂ ಪ್ರತಿವಾದ ಮಾಡಲಾರದೆ ನನ್ನ ವಿರೋಧಿಗೆ ಶರಣಾಗತನಾಗುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೋಬನಾದ ನಾನು ನಿರಪರಾಧಿಯಾಗಿದ್ದರೂ ಆತನಿಗೆ ಉತ್ತರವನ್ನು ಕೊಡಲಾರೆ. ನನಗೆ ಕರುಣೆ ತೋರುವಂತೆ ನ್ಯಾಯಾಧಿಪತಿಯಾದ ದೇವರನ್ನು ಬೇಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಾನು ನೀತಿವಂತನಾಗಿದ್ದರೂ ಉತ್ತರ ಕೊಡೆನು; ಆದರೆ ನನ್ನ ನ್ಯಾಯಾಧಿಪತಿಗೆ ಕರುಣೆಗೋಸ್ಕರ ಮೊರೆಯಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:15
18 ತಿಳಿವುಗಳ ಹೋಲಿಕೆ  

ಅಯ್ಯೋ, ನಾನು ದುರ್ಮಾರ್ಗಿಯಾದರೆ ನನಗೇನು ಗತಿ! ನಾನು ಸನ್ಮಾರ್ಗಿಯಾದರೂ, ನನ್ನ ಶ್ರಮೆಗಳನ್ನು ನೋಡುತ್ತಾ ಅವಮಾನಭರಿತನಾಗಿ ತಲೆಯೆತ್ತಲಾರೆನು.


ನೀನು ಶುದ್ಧನೂ, ಯಥಾರ್ಥನೂ ಆಗಿ ಕುತೂಹಲದಿಂದ ಆತನ ಪ್ರಸನ್ನತೆಯನ್ನು ಬಯಸಿ, ಸರ್ವಶಕ್ತನಾದ ದೇವರಿಗೆ ನಿನ್ನ ವಿಜ್ಞಾಪನೆಯನ್ನು ಮಾಡಿಕೊಂಡರೆ,


ಬಯ್ಯುವವರನ್ನು ಆತನು ಪ್ರತಿಯಾಗಿ ಬಯ್ಯಲಿಲ್ಲ, ಆತನು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ, ನ್ಯಾಯವಾಗಿ ತೀರ್ಪು ಮಾಡುವಾತನಿಗೆ ತನ್ನ ಕಾರ್ಯವನ್ನು ಒಪ್ಪಿಸಿದನು.


ನೀನು ಪ್ರಾರ್ಥಿಸುವಿ, ಆತನು ಲಾಲಿಸುವನು, ಆತನಿಗೆ ಹರಕೆಗಳನ್ನು ಒಪ್ಪಿಸುವಿ.


ನಾನು ದೇವರ ಮುಂದೆ, “ನನ್ನನ್ನು ಅಪರಾಧಿಯೆಂದು ನಿರ್ಣಯಿಸಬೇಡ, ನನ್ನೊಡನೆ ಏಕೆ ವ್ಯಾಜ್ಯವಾಡುತ್ತೀ ತಿಳಿಸು ಎನ್ನುವೆನು.


(ಈ ಸಂದರ್ಭದಲ್ಲಿ) ನಾನಾದರೋ ದೇವರನ್ನೇ ಆಶ್ರಯಿಸುತ್ತಿದ್ದೆನು; ನನ್ನ ಸಂಗತಿಯನ್ನು ದೇವರಿಗೇ ಅರಿಕೆಮಾಡಿಕೊಳ್ಳುತ್ತಿದ್ದೆನು.


ನನ್ನಲ್ಲಿ ದೋಷವಿದೆಯೆಂದು ನನ್ನ ಮನಸ್ಸಿಗೆ ತೋರುವುದಿಲ್ಲವಾದರೂ ನಾನು ನಿರ್ದೋಷಿಯೆಂದು ನಿರ್ಣಯಿಸುವಂತಿಲ್ಲ. ನನ್ನನ್ನು ನ್ಯಾಯವಿಚಾರಣೆ ಮಾಡುವವನು ಕರ್ತನೇ.


ನನ್ನ ದೇವರೇ, ಕಿವಿಗೊಟ್ಟು ಕೇಳು, ಕಣ್ಣುತೆರೆದು ನಮ್ಮ ಹಾಳು ಪ್ರದೇಶಗಳನ್ನೂ, ನಿನ್ನ ಹೆಸರುಗೊಂಡಿರುವ ಪಟ್ಟಣವನ್ನೂ ನೋಡು; ನಾವು ಸದ್ಧರ್ಮಿಗಳೇನೂ ಅಲ್ಲ. ನಿನ್ನ ಮಹಾ ಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿನ್ನ ಮುಂದೆ ಅರಿಕೆ ಮಾಡುತ್ತಿದ್ದೇವೆ.


ನಾನು ಉಪವಾಸವಿದ್ದು ಗೋಣಿತಟ್ಟು ಸುತ್ತಿಕೊಂಡು ಬೂದಿ ಬಳಿದುಕೊಂಡು ಕರ್ತನಾದ ದೇವರ ಕಡೆಗೆ ಮುಖವೆತ್ತಿ ಪ್ರಾರ್ಥನೆ, ವಿಜ್ಞಾಪನೆಗಳಲ್ಲಿ ನಿರತನಾದೆನು.


ಅವರು ತಮ್ಮ ವಿಜ್ಞಾಪನೆಗಳಿಂದ ಅಳುತ್ತಾ ನಡೆದು ಬರುವರು, ನಾನು ಅವರನ್ನು ಸಂತೈಸಿ ಮುನ್ನಡೆಸುವೆನು. ಎಡವದ ಸಮಮಾರ್ಗದಲ್ಲಿ ನಡೆಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು. ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.


ಅಲ್ಲಿ ಯಥಾರ್ಥಚಿತ್ತನು ಆತನೊಂದಿಗೆ ವಾದಿಸುವನು. ನನ್ನ ನ್ಯಾಯಾಧಿಪತಿಯಿಂದ ನನಗೆ ನಿತ್ಯವಾದ ಬಿಡುಗಡೆಯಾಗುವುದು.


ಆತನು ಲಾಲಿಸಿ, ಅವನಿಗೆ ಸದುತ್ತರವನ್ನು ದಯಪಾಲಿಸಿ ಅವನನ್ನು ತಿರುಗಿ ಯೆರೂಸಲೇಮಿಗೆ ಬರಮಾಡಿ ಅರಸುತನವನ್ನು ಕೊಟ್ಟನು. ಆಗ ಯೆಹೋವನೇ ದೇವರೆಂಬುದು ಮನಸ್ಸೆಗೆ ಮನದಟ್ಟಾಯಿತು.


ನಾನು ಕರೆದಾಗ ಆತನು ನನಗೆ ಕಾಣಿಸಿಕೊಂಡಿದ್ದರೂ, ನನ್ನ ವಿಜ್ಞಾಪನೆಯನ್ನು ಲಾಲಿಸುವನೆಂದು ನಂಬುತ್ತಿರಲಿಲ್ಲ.


ನಾನು ನೀತಿವಂತನಾಗಿದ್ದರೂ ನನ್ನ ಬಾಯೇ ನನ್ನನ್ನು ಅಪರಾಧಿಯೆಂದು ತೋರ್ಪಡಿಸುವುದು. ನಾನು ನಿರ್ದೋಷಿಯಾಗಿದ್ದರೂ ಆತನು ನನ್ನನ್ನು ದುರ್ಮಾರ್ಗಿಯೆಂದು ನಿರೂಪಿಸುವನು.


ನಾನು ನಿರ್ದೋಷಿಯೇ ಹೌದು; ನನ್ನ ವಿಷಯದಲ್ಲಿ ನನಗೇನೂ ಚಿಂತೆಯಿಲ್ಲ; ನನ್ನ ಪ್ರಾಣವನ್ನು ತಿರಸ್ಕರಿಸುತ್ತೇನೆ.


ಒಂದು ಸಾರಿ ಮಾತನಾಡಿದ್ದೇನೆ, ಪ್ರತಿವಾದ ಮಾಡಲಾರೆನು; ಎರಡು ಸಲ ಹೌದು, ಇನ್ನೇನೂ ನುಡಿಯಲಾರೆನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು