Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ನೀತಿವಂತನಾಗಿದ್ದರೂ ನನ್ನ ಬಾಯೇ ನನ್ನನ್ನು ಅಪರಾಧಿಯೆಂದು ತೋರ್ಪಡಿಸುವುದು. ನಾನು ನಿರ್ದೋಷಿಯಾಗಿದ್ದರೂ ಆತನು ನನ್ನನ್ನು ದುರ್ಮಾರ್ಗಿಯೆಂದು ನಿರೂಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಾನು ಸತ್ಯವಂತನಾಗಿದ್ದರೂ ಬಾಯೇ ನಾನು ಅಪರಾಧಿಯೆಂದು ಒಪ್ಪಿಕೊಳ್ಳುತ್ತದೆ. ನಾನು ನಿರ್ದೋಷಿಯಾಗಿದ್ದರೂ ‘ನಿನ್ನದು ವಕ್ರಬುದ್ಧಿ’ ಎನ್ನುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಾನು ನೀತಿವಂತನಾಗಿದ್ದರೂ ನನ್ನ ಬಾಯೇ ನನ್ನನ್ನು ಅಪರಾಧಿಯೆಂದು ತೋರ್ಪಡಿಸುವದು. ನಾನು ನಿರ್ದೋಷಿಯಾಗಿದ್ದರೂ ಆತನು ನನ್ನನ್ನು ದುರ್ಮಾರ್ಗಿಯೆಂದು ನಿರೂಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾನು ನಿರಪರಾಧಿಯಾಗಿದ್ದರೂ ನನ್ನ ಬಾಯಿ ನನ್ನನ್ನು ಖಂಡಿಸುವುದು; ನಾನು ನಿರ್ದೋಷಿಯಾಗಿದ್ದರೂ ನನ್ನ ಬಾಯಿ ನನ್ನನ್ನು ದೋಷಿಯೆಂದು ಹೇಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಾನು ನೀತಿವಂತನಾಗಿದ್ದರೂ, ನನ್ನ ಸ್ವಂತ ಬಾಯೇ ನನ್ನನ್ನು ಖಂಡಿಸುತ್ತದೆ; ನಾನು ನಿರ್ದೋಷಿಯಾಗಿದ್ದರೂ, ದೇವರು ನನ್ನನ್ನು ಅಪರಾಧಿ ಎಂದು ನಿರೂಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:20
24 ತಿಳಿವುಗಳ ಹೋಲಿಕೆ  

‘ಯೋಬನು ತಿಳಿವಳಿಕೆಯಿಲ್ಲದೆ ನುಡಿಯುತ್ತಾನೆ, ಅವನ ಮಾತುಗಳಲ್ಲಿ ಬುದ್ಧಿಯಿಲ್ಲ.’


ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುಮಾಡುವವರಾಗಿದ್ದಾರೆ. ಒಬ್ಬನು ಮಾತಿನಲ್ಲಿ ತಪ್ಪಿ ನಡೆಯದಿದ್ದರೆ ಅವನು ಸರ್ವಸುಗುಣವುಳ್ಳವನೂ ತನ್ನ ಇಡೀ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.


ಇದಲ್ಲದೆ ಬುದ್ಧಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ನಿತ್ಯವಾದ ಕಚ್ಚಾಟಗಳು ಉಂಟಾಗುತ್ತವೆ.


ಆಗ ಆತನು ಅವರಿಗೆ ಹೇಳಿದ್ದೇನಂದರೆ, “ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು, ಆದರೆ ದೇವರು ನಿಮ್ಮ ಹೃದಯಗಳನ್ನು ಬಲ್ಲವನಾಗಿದ್ದಾನೆ. ಮನುಷ್ಯರ ದೃಷ್ಟಿಯಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.


ಆದರೆ ಅವನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳುವುದಕ್ಕೆ ಅಪೇಕ್ಷಿಸಿ, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಕೇಳಲು,


ಆಗ ನಾನು, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು. ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು. ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡೆವಲ್ಲಾ!” ಎಂದು ಕೂಗಿಕೊಳ್ಳಲು,


ವಕ್ರ ಹೃದಯನು ಶುಭವನ್ನು ಪಡೆಯನು, ಕೆಟ್ಟ ನಾಲಿಗೆಯವನು ವಿಪತ್ತಿಗೆ ಸಿಕ್ಕಿಬೀಳುವನು.


ಮಾತಾಳಿಗೆ ಪಾಪ ತಪ್ಪದು, ಮೌನಿಯು ವಿವೇಕಿ.


ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ; ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ.


ಕರ್ತನೇ, ಯೆಹೋವನೇ, ನೀನು ಪಾಪಗಳನ್ನು ಲೆಕ್ಕಿಸುವುದಾದರೆ ನಿನ್ನ ಮುಂದೆ ಯಾರು ನಿಲ್ಲಲು ಸಾಧ್ಯ?


ಯೋಬನು ಸುಮ್ಮನೆ ಬಾಯಿ ತೆರೆಯುತ್ತಾನೆ, ಯಾವ ತಿಳಿವಳಿಕೆಯೂ ಇಲ್ಲದೆ ಬಹಳ ಮಾತನಾಡುತ್ತಾನೆ.”


“ನೀನು ಹೇಳಿದ್ದು ಸತ್ಯವೇ ಸರಿ. ಆದರೆ ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತನಾಗಿರುವುದು ಹೇಗೆ?


ಅದೇನೆಂದರೆ, “ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತನಾದಾನೇ? ಮಾನವನು ಸೃಷ್ಟಿಕರ್ತನ ಸನ್ನಿಧಿಯಲ್ಲಿ ಪರಿಶುದ್ಧನಾಗಿರಬಹುದೇ?


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ, ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದನು.


ನಾನು ನೀತಿವಂತನಾಗಿದ್ದರೂ ಉತ್ತರಕೊಡೆನು; ಆದರೆ ನನ್ನ ನ್ಯಾಯಾಧಿಪತಿಗೆ ಮೊರೆಯಿಡುವೆನು.


ನಾನು ಅಪರಾಧಿಯೆಂದು ನಿರ್ಣಯಿಸಲ್ಪಡಬೇಕಷ್ಟೆ. ನಾನು ವ್ಯರ್ಥವಾಗಿ ಪ್ರಯಾಸಪಡುವುದೇಕೆ?


ನನ್ನ ಎಲ್ಲಾ ಸಂಕಟಗಳಿಂದ ನನಗೆ ಭಯವುಂಟಾಗುತ್ತದೆ; ನೀನು ನನ್ನನ್ನು ನಿರ್ದೋಷಿಯೆಂದು ಎಣಿಸುವುದಿಲ್ಲವೆಂದು ತಿಳಿದುಕೊಳ್ಳುತ್ತೇನೆ.


ಅಯ್ಯೋ, ನಾನು ದುರ್ಮಾರ್ಗಿಯಾದರೆ ನನಗೇನು ಗತಿ! ನಾನು ಸನ್ಮಾರ್ಗಿಯಾದರೂ, ನನ್ನ ಶ್ರಮೆಗಳನ್ನು ನೋಡುತ್ತಾ ಅವಮಾನಭರಿತನಾಗಿ ತಲೆಯೆತ್ತಲಾರೆನು.


ನನ್ನ ದ್ರೋಹವನ್ನು ಚೀಲದಲ್ಲಿಟ್ಟು ಮುದ್ರಿಸಿ, ನನ್ನ ದೋಷವನ್ನು ಭದ್ರವಾಗಿ ಕಟ್ಟಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು