Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನೊಂದಿಗೆ ವ್ಯಾಜ್ಯಮಾಡಬೇಕೆಂದು ಇಷ್ಟಪಟ್ಟರೂ, ಆತನ ಸಾವಿರ ಪ್ರಶ್ನೆಗಳಲ್ಲಿ ಒಂದಕ್ಕೂ ಉತ್ತರಕೊಡಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯಾರಾದರೂ ಆತನೊಡನೆ ವಾದಿಸಲು ಇಷ್ಟಪಟ್ಟರೂ ಆತನ ಸಹಸ್ರ ಪ್ರಶ್ನೆಗಳೊಂದಕ್ಕೂ ಉತ್ತರಿಸಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನೊಂದಿಗೆ ವ್ಯಾಜ್ಯವಾಡಬೇಕೆಂದು ಇಷ್ಟಪಟ್ಟರೂ ಆತನ ಸಾವಿರ ಪ್ರಶ್ನೆಗಳಲ್ಲಿ ಒಂದಕ್ಕೂ ಉತ್ತರಕೊಡಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಒಬ್ಬನು ದೇವರೊಂದಿಗೆ ವಾದಿಸಬಯಸಿದರೆ, ದೇವರ ಸಾವಿರ ಪ್ರಶ್ನೆಗಳಲ್ಲಿ ಮನುಷ್ಯನು ಒಂದಕ್ಕೂ ಉತ್ತರ ಕೊಡಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದೇವರ ಸಂಗಡ ವ್ಯಾಜ್ಯವಾಡಲು ಮನುಷ್ಯನು ಬಯಸಿದರೂ, ದೇವರ ಸಾವಿರ ಪ್ರಶ್ನೆಗಳಲ್ಲಿ ಒಂದಕ್ಕೂ ಉತ್ತರ ಕೊಡಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:3
18 ತಿಳಿವುಗಳ ಹೋಲಿಕೆ  

ನಾನು ದೇವರ ಮುಂದೆ, “ನನ್ನನ್ನು ಅಪರಾಧಿಯೆಂದು ನಿರ್ಣಯಿಸಬೇಡ, ನನ್ನೊಡನೆ ಏಕೆ ವ್ಯಾಜ್ಯವಾಡುತ್ತೀ ತಿಳಿಸು ಎನ್ನುವೆನು.


“ತರ್ಕಮಾಡುವವನು ಸರ್ವಶಕ್ತನಾದ ದೇವರ ಸಂಗಡಲೂ ವ್ಯಾಜ್ಯವಾಡುವನೋ? ದೇವರೊಂದಿಗೆ ವಿವಾದಮಾಡುವವನು ಇದಕ್ಕೆಲ್ಲಾ ಉತ್ತರಕೊಡಲಿ” ಎಂದು ಹೇಳಿದನು.


ಏಕೆಂದರೆ ನಮ್ಮ ಹೃದಯವು ಯಾವ ವಿಷಯದಲ್ಲಾದರು ನಮ್ಮನ್ನು ದೋಷಿಗಳೆಂದು ನಿರ್ಣಯಿಸಿದರೆ, ದೇವರು ನಮ್ಮ ಹೃದಯವನ್ನು ಬಲ್ಲವನಾಗಿರುವುದರಿಂದ ನಮ್ಮ ಹೃದಯವನ್ನು ಆತನಲ್ಲಿ ದೃಢಪಡಿಸಬಹುದು.


ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಗೊಳಿಸಿಕೊಂಡ ಹಾಗಾಯಿತು ಮತ್ತು ಸತ್ಯವೆಂಬುದು ನಮ್ಮಲ್ಲಿಲ್ಲವೆಂದು ತಿಳಿಯುತ್ತದೆ.


ಎಲೋ ಮನುಷ್ಯನೇ ಹಾಗೆನ್ನಬೇಡ ದೇವರಿಗೆ ವಿರುದ್ಧವಾಗಿ ಮಾತನಾಡುವುದಕ್ಕೆ ನೀನು ಎಷ್ಟರವನು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ, “ಏಕೆ ನನ್ನನ್ನು ಹೀಗೆ ರೂಪಿಸಿದೆ”, ಎಂದು ಕೇಳುವುದುಂಟೇ?


ಏಕೆಂದರೆ ಲೆಕ್ಕವಿಲ್ಲದ ಆಪತ್ತುಗಳು ನನ್ನನ್ನು ಸುತ್ತಿಕೊಂಡಿವೆ; ನನ್ನ ಪಾಪಗಳು ನನ್ನನ್ನು ಹಿಂದಟ್ಟಿ ಹಿಡಿದಿರುತ್ತವೆ, ನನಗೆ ದಿಕ್ಕೇ ತೋರುವುದಿಲ್ಲ. ಅವು ನನ್ನ ತಲೆಯ ಕೂದಲುಗಳಿಗಿಂತಲೂ ಹೆಚ್ಚಾಗಿವೆ, ನಾನು ಎದೆಗುಂದಿ ಹೋದೆನು.


ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವವನು ಯಾರು? ಮರೆಯಾದ ದೋಷಗಳಿಂದ ನನ್ನನ್ನು ನಿರ್ಮಲಮಾಡು.


ಆತನು ನಿನ್ನ ಮಾತುಗಳಲ್ಲಿ ಒಂದಕ್ಕಾದರೂ ಉತ್ತರ ದಯಪಾಲಿಸನೆಂಬುದಾಗಿ, ನೀನು ಆತನೊಂದಿಗೆ ವ್ಯಾಜ್ಯವಾಡುವುದೇಕೆ?


ನಾನು ನೀತಿವಂತನಾಗಿದ್ದರೂ ನನ್ನ ಬಾಯೇ ನನ್ನನ್ನು ಅಪರಾಧಿಯೆಂದು ತೋರ್ಪಡಿಸುವುದು. ನಾನು ನಿರ್ದೋಷಿಯಾಗಿದ್ದರೂ ಆತನು ನನ್ನನ್ನು ದುರ್ಮಾರ್ಗಿಯೆಂದು ನಿರೂಪಿಸುವನು.


ನಾನಾದರೋ ದೇವರೊಂದಿಗೆ ವಾದಿಸಿ, ಆತನಿಗೆ ಉತ್ತರಕೊಡುವುದಕ್ಕೆ ಮತ್ತೂ ಅಶಕ್ತನು.


ನನಗೆ ಪ್ರತಿವಾದಿ ಇದ್ದಾನೋ? ಇದ್ದರೆ, ನಾನು ನನ್ನನ್ನು ನಿನ್ನ ದೃಷ್ಟಿಗೆ ಮರೆಮಾಡಿಕೊಂಡು, ಮೌನನಾಗಿ ಪ್ರಾಣಬಿಡುವೆನು.


ಒಂದು ಸಾರಿ ಮಾತನಾಡಿದ್ದೇನೆ, ಪ್ರತಿವಾದ ಮಾಡಲಾರೆನು; ಎರಡು ಸಲ ಹೌದು, ಇನ್ನೇನೂ ನುಡಿಯಲಾರೆನು” ಎಂದು ಹೇಳಿದನು.


ದೇವರು ಮನುಷ್ಯನ ಮೇಲೆ ಹೆಚ್ಚು ಗಮನವಿಡುವುದೂ, ಮನುಷ್ಯನೂ ಆತನ ನ್ಯಾಯವಿಚಾರಣೆಗೆ ಬರುವುದೂ, ಅವಶ್ಯವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು