Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದೇವರ ಹೃದಯವು ವಿವೇಕವುಳ್ಳದ್ದು, ಆತನ ಶಕ್ತಿಯು ಪ್ರಬಲವಾದದ್ದು. ಆತನ ವಿರುದ್ಧವಾಗಿ ಮನಸ್ಸು ಕಠಿಣಮಾಡಿಕೊಂಡವನು ಸಾರ್ಥಕನಾದದ್ದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ದೇವರ ಹೃದಯ ಧೀಮಂತ, ಅವರ ಶಕ್ತಿ ಅತುಳ ಆತನನ್ನು ಪ್ರತಿಭಟಿಸಿ ಜಯಗಳಿಸಿದವನಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದೇವರ ಹೃದಯವು ವಿವೇಕವುಳ್ಳದ್ದು, ಆತನ ಶಕ್ತಿಯು ಪ್ರಬಲವಾದದ್ದು; ಆತನಿಗೆ ವಿರುದ್ಧವಾಗಿ ಮನಸ್ಸು ಕಠಿಣಮಾಡಿಕೊಂಡವನು ಸಾರ್ಥಕನಾದದ್ದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇವರ ಜ್ಞಾನವು ಅಗಾಧವಾದದ್ದು; ಆತನ ಶಕ್ತಿಯು ಮಹತ್ವವಾದದ್ದು; ಯಾವನೂ ದೇವರಿಗೆ ವಿರೋಧವಾಗಿ ಜಯಗಳಿಸಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇವರ ಜ್ಞಾನವು ಆಳವಾದದ್ದು, ಶಕ್ತಿಯಲ್ಲಿ ದೇವರು ಪ್ರಬಲರೂ ಆಗಿದ್ದಾರೆ; ದೇವರ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:4
39 ತಿಳಿವುಗಳ ಹೋಲಿಕೆ  

ಇಗೋ, ದೇವರು ಮಹಾಶಕ್ತನಾಗಿದ್ದರೂ ಯಾರನ್ನೂ ತಿರಸ್ಕರಿಸುವುದಿಲ್ಲ, ಆತನ ಬುದ್ಧಿ ಸಾಮರ್ಥ್ಯವು ಅಪಾರವಾಗಿದೆ.


ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಈ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ


ದೇವರು ನಮ್ಮ ಕರ್ತನಾದ ಕ್ರಿಸ್ತಯೇಸುವಿನಲ್ಲಿ ಮಾಡಿದ ನಿತ್ಯಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು, ಪರಲೋಕದಲ್ಲಿ ರಾಜತ್ವಗಳಿಗೂ, ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂದು ಉದ್ದೇಶಿಸಿದನು.


ಬಹಳವಾಗಿ ಗದರಿಸಿದರೂ ತಗ್ಗದವನು, ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.


ನಾನು ಬಲಿಷ್ಠನ ಶಕ್ತಿಯನ್ನು ಮೊರೆಹೋಗುವೆನೆಂದರೆ ದೇವರು, ‘ಇಗೋ, ಇದ್ದೇನೆ’ ಎನ್ನುವನು. ನ್ಯಾಯವಿಚಾರಣೆಯು ಆಗಲಿ ಎಂದರೆ ಆತನು ನನಗೆ, ‘ಕಾಲ ನಿಯಾಮಕರು ಯಾರು?’ ಎನ್ನುವನು.


ಮತ್ತು ನಂಬುವವರಾದ ನಮ್ಮಲ್ಲಿ ಕಾರ್ಯ ಸಾಧಿಸುವ ಆತನ ಪರಾಕ್ರಮ ಶಕ್ತಿಯ ಅಪಾರವಾದ ಮಹತ್ವವು ಎಂಥದೆಂಬುದನ್ನೂ ನೀವು ತಿಳಿಯುವಂತೆ ದೇವರು ನಿಮಗೆ ಅನುಗ್ರಹಿಸಲಿ.


ಈ ಕೃಪೆಯನ್ನು ಆತನು ಎಲ್ಲಾ ಜ್ಞಾನ ವಿವೇಕಗಳೊಂದಿಗೆ ನಮಗೆ ಹೇರಳವಾಗಿ ಸುರಿಸಿದ್ದಾನೆ.


ಕರ್ತನಿಗೆ ಕೋಪವನ್ನುಂಟುಮಾಡಿ ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೋ?


ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.


“ದೇವರ ನಾಮಕ್ಕೆ ಯುಗಯುಗಾಂತರಗಳಲ್ಲಿಯೂ ಸ್ತುತಿಸ್ತೋತ್ರ ಉಂಟಾಗಲಿ! ಜ್ಞಾನ ತ್ರಾಣಗಳು ಆತನವುಗಳೇ.


ಕೆಟ್ಟದನ್ನು ಮಾಡುವುದಕ್ಕೆ ಯಾವಾಗಲೂ ಭಯಪಡುವವನು ಧನ್ಯನು, ಕಠಿಣಹೃದಯನು ಕೇಡಿಗೆ ಸಿಕ್ಕಿಬೀಳುವನು.


ಆತನು ಆಕಾಶವನ್ನು ಜ್ಞಾನದಿಂದ ನಿರ್ಮಿಸಿದ್ದಾನೆ, ಆತನ ಪ್ರೀತಿಯು ಶಾಶ್ವತವಾದದ್ದು.


ಯೆಹೋವನೇ, ನಿನ್ನ ಕೈಕೆಲಸಗಳು ಬಗೆ ಬಗೆಯಾಗಿವೆ. ಅವುಗಳನ್ನೆಲ್ಲಾ ಜ್ಞಾನದಿಂದಲೇ ಮಾಡಿರುವೆ; ಭೂಲೋಕವು ನಿನ್ನ ಆಸ್ತಿಯಿಂದ ತುಂಬಿರುತ್ತದೆ.


ನಿನ್ನ ಕೈಯೂ, ದೇವರ ಕೈಯೂ ಸಮವೋ? ದೇವರ ಧ್ವನಿಯಂತೆ ಗುಡುಗಬಲ್ಲಿಯಾ?


ಆತನಲ್ಲಿ ಜ್ಞಾನವೂ ಶಕ್ತಿಯೂ ಉಂಟು, ಆಲೋಚನೆಯೂ, ವಿವೇಕವೂ ಆತನವೇ.


ಆತನು ಜ್ಞಾನದ ರಹಸ್ಯಗಳನ್ನು ನಿನಗೆ ತಿಳಿಸಿ, ಸುಜ್ಞಾನವು ಬಹುಮುಖವಾಗಿದೆ ಎಂದು ತೋರಿಸಿಕೊಟ್ಟರೆ ಎಷ್ಟೋ ಲೇಸು! ದೇವರು ನಿನ್ನ ಅಧರ್ಮವನ್ನೆಲ್ಲಾ ಗಣನೆಗೆ ತರಲಿಲ್ಲವೆಂದು ತಿಳಿದುಕೋ!


ಆಗ ನಾನು ಆದರಣೆ ಹೊಂದಿ ಮಿತಿಯಿಲ್ಲದ ಯಾತನೆಯಲ್ಲಿಯೂ ಉಲ್ಲಾಸಿಸುವೆನು. ಪರಿಶುದ್ಧ ದೇವರ ಆಜ್ಞೆಗಳನ್ನು ನಾನು ತೊರೆದುಬಿಟ್ಟವನಲ್ಲ.


ಇಗೋ, ದೇವರು ನಾಯಕನಾಗಿ ನಮ್ಮೊಂದಿಗಿದ್ದಾನೆ; ನಿಮಗೆ ವಿರುದ್ಧವಾಗಿ ಅರ್ಭಟದಿಂದ ಊದತಕ್ಕ ತುತ್ತೂರಿಗಳನ್ನು ಹಿಡಿದಿರುವ ಯಾಜಕರೂ ನಮ್ಮೊಂದಿಗಿದ್ದಾರೆ. ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನೊಡನೆ ಯುದ್ಧ ಮಾಡಬೇಡಿರಿ, ನೀವು ಜಯಿಸಲಾರಿರಿ” ಎಂದು ಕೂಗಿ ಹೇಳಿದನು.


ಆತನು ತನ್ನ ಮಹಾಶಕ್ತಿಯಿಂದ ನನ್ನ ಸಂಗಡ ವ್ಯಾಜ್ಯವಾಡುವನೋ? ಇಲ್ಲವೇ ಇಲ್ಲ; ನನ್ನ ವಿಜ್ಞಾಪನೆಯನ್ನು ಗಮನಿಸುವನು.


ದೇವರಂತು ತನ್ನ ಶಕ್ತಿಯಿಂದ ಬಲಿಷ್ಠರನ್ನು ಉಳಿಸುತ್ತಾನೆ, ಅವರು ತಮ್ಮ ಜೀವವು ಇನ್ನು ಉಳಿಯುವುದಿಲ್ಲವೆಂದು ನಂಬಿದ್ದರೂ ಉದ್ಧಾರವಾಗುವರು.


“ಆತನಲ್ಲಿ ಪ್ರಭುತ್ವವೂ ಭೀಕರತ್ವವೂ ಉಂಟು, ತನ್ನ ಉನ್ನತ ಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವನು ಆತನೇ.


ಅದರ ಮಾರ್ಗವನ್ನು ಬಲ್ಲವನು ದೇವರೇ; ಅದರ ಸ್ಥಳವು ಆತನೊಬ್ಬನಿಗೇ ಗೊತ್ತು.


ಇಂಥ ಸರ್ವಶಕ್ತನಾದ ದೇವರನ್ನು ನಾವು ಕಂಡುಹಿಡಿಯಲಾರೆವು; ಆತನ ಪರಾಕ್ರಮವು ಬಹಳ; ಆತನು ನ್ಯಾಯವನ್ನಾಗಲಿ, ಪರಿಪೂರ್ಣ ಧರ್ಮವನ್ನಾಗಲಿ ಕುಂದಿಸುವುದಿಲ್ಲ.


ಯಾರು ಕಾರ್ಮುಗಿಲಿಗೆ ಜ್ಞಾನವನ್ನು ದಯಪಾಲಿಸಿದರು? ಉತ್ಪಾತಗಳಿಗೆ ವಿವೇಕವನ್ನು ಅನುಗ್ರಹಿಸಿದವರು ಯಾರು?


ಜ್ಞಾನದಿಂದ ಯಾರು ಮೇಘಗಳನ್ನು ಲೆಕ್ಕಿಸುವರು? ಆಕಾಶದಲ್ಲಿನ ಬುದ್ದಲಿಗಳನ್ನು ಮೊಗಚಿಹಾಕಿ,


ಬಾಬೆಲೇ, ನಾನು ನಿನಗೆ ಉರುಲೊಡ್ಡಿದೆನು; ನೀನು ತಿಳಿಯದೆ ಸಿಕ್ಕಿಕೊಂಡಿ; ನೀನು ಯೆಹೋವನೊಂದಿಗೆ ಹೋರಾಡಿದ್ದರಿಂದ ಬೋನಿಗೆ ಬಿದ್ದು ವಶವಾದಿ.


ಫರೋಹನು ವಿಚಾರಿಸಿದಾಗ, ಇಸ್ರಾಯೇಲ್ಯರ ಪಶುಗಳಲ್ಲಿ ಒಂದೂ ಸಾಯಲಿಲ್ಲವೆಂಬುದನ್ನು ತಿಳಿದುಕೊಂಡನು. ಆದರೂ ಫರೋಹನ ಹೃದಯವು ಕಠಿಣವಾಗಿದ್ದರಿಂದ ಆ ಜನರಿಗೆ ಹೋಗುವುದಕ್ಕೆ ಅಪ್ಪಣೆಕೊಡಲಿಲ್ಲ.


ನೀನು ಅತ್ಯಧಿಕ ಮಹತ್ವವುಳ್ಳವನಾಗಿ ನಿನ್ನೆದುರಿಗೆ ನಿಲ್ಲುವವರನ್ನು ಕೆಡವಿಬಿಟ್ಟಿರುವೆ. ನಿನ್ನ ಕೋಪಾಗ್ನಿಯು ಹೊರಟು ಅವರನ್ನು ಒಣಗಿದ ಹುಲ್ಲನ್ನೋ ಎಂಬಂತೆ ಸುಟ್ಟು ಭಸ್ಮಮಾಡಿ ಬಿಟ್ಟಿದೆ.


“ಯೆಹೋವನೇ, ನಮ್ಮ ಪೂರ್ವಿಕರ ದೇವರೇ, ಪರಲೋಕದಲ್ಲಿ ದೇವರಾಗಿ ಇರುವಾತನು ನೀನಲ್ಲವೋ? ನೀನು ಜನಾಂಗಗಳನ್ನೂ, ಎಲ್ಲಾ ರಾಜ್ಯಗಳನ್ನು ಆಳುವವನಾಗಿರುವೆ. ಬಲ, ಪರಾಕ್ರಮಗಳು ನಿನ್ನ ಕೈಗಳಲ್ಲಿ ಇರುತ್ತವೆ: ನಿನ್ನೆದುರಿನಲ್ಲಿ ನಿಲ್ಲುವವರು ಯಾರಿದ್ದಾರೆ?


ನೀನು ದೇವರಿಗೆ ವಿರುದ್ಧವಾಗಿ ತಿರುಗಿಬಿದ್ದು ವ್ಯರ್ಥವಾದ ಮಾತುಗಳನ್ನು ಸುಮ್ಮನೆ ಸುರಿಸುತ್ತೀಯಲ್ಲಾ!


ಅದರ ಮೂಗಿಗೆ ಗಾಳವನ್ನು ಇಡುವೆಯೋ? ಅದರ ದವಡೆಗೆ ಮುಳ್ಳನ್ನು ಚುಚ್ಚುವಿಯೋ?


ಅಯ್ಯೋ, ತನ್ನನ್ನು ರೂಪಿಸಿದಾತನ ಸಂಗಡ ವ್ಯಾಜ್ಯವಾಡುವವನ ಗತಿ ಏನು! ಮಣ್ಣಿನ ಮಡಿಕೆಗಳಲ್ಲಿ ಅವನೂ ಒಂದು ಮಡಿಕೆಯಲ್ಲವೆ! ಮಣ್ಣು ಕುಂಬಾರನಿಗೆ, ‘ನೀನು ಏನು ಮಾಡುತ್ತೀ?’ ಎಂದು ಕೇಳುವುದುಂಟೇ? ಅಥವಾ ನಿನ್ನ ಕಾರ್ಯವು, ‘ಅವನಿಗೆ ಕೈಯಿಲ್ಲ’ ಅಂದೀತೇ?


ಯೆಹೋವನು ದೀರ್ಘಶಾಂತನಾಗಿದ್ದರೂ ಆತನ ಶಕ್ತಿಯು ಅಪಾರ, ಅಪರಾಧಿಗಳನ್ನು ಶಿಕ್ಷಿಸದೆ ಬಿಡನು; ಯೆಹೋವನು ಬಿರುಗಾಳಿಯಲ್ಲಿಯೂ, ತುಫಾನಿನಲ್ಲಿಯೂ ನಡೆಯುತ್ತಾನೆ; ಮೋಡಗಳು ಆತನ ಹೆಜ್ಜೆಯಿಂದೇಳುವ ಧೂಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು