Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 1:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಉಪವಾಸ ಪ್ರಾರ್ಥನೆಯ ದಿನವನ್ನು ಏರ್ಪಡಿಸಿರಿ, ಪವಿತ್ರ ಸಭೆಯನ್ನು ಸೇರಿಸಿರಿ. ಹಿರಿಯರನ್ನೂ ಮತ್ತು ಸಮಸ್ತ ದೇಶದ ನಿವಾಸಿಗಳನ್ನೂ ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಬರಮಾಡಿ, ಯೆಹೋವನಿಗೆ ಮೊರೆಯಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಉಪವಾಸ ವ್ರತವನ್ನು ಕೈಗೊಂಡು ಮಹಾಸಭೆಯನ್ನು ಕರೆಯಿರಿ; ಹಿರಿಯರನ್ನೂ ನಾಡಿನ ಜನಸಾಮಾನ್ಯರನ್ನೂ ಸೇರಿಸಿರಿ; ದೇವರಾದ ಸರ್ವೇಶ್ವರಸ್ವಾಮಿಯ ಆಲಯಕ್ಕೆ ಬರಮಾಡಿರಿ; ಆ ಸ್ವಾಮಿಗೆ ಪ್ರಾರ್ಥನೆಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಉಪವಾಸ ದಿನವನ್ನು ಏರ್ಪಡಿಸಿರಿ; ಸಂಘವನ್ನು ಕೂಡಿಸಿರಿ; ಹಿರಿಯರನ್ನೂ ಸಮಸ್ತ ದೇಶನಿವಾಸಿಗಳನ್ನೂ ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಬರಮಾಡಿ ಯೆಹೋವನಿಗೆ ಮೊರೆಯಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಉಪವಾಸ ದಿನವನ್ನು ಗೊತ್ತುಪಡಿಸಿರಿ. ಆ ದಿನಕ್ಕಾಗಿ ಜನರನ್ನು ಒಟ್ಟುಗೂಡಿಸಿರಿ. ದೇಶದಲ್ಲಿ ವಾಸವಾಗಿರುವ ನಾಯಕರುಗಳೆಲ್ಲರನ್ನೂ ಜನರನ್ನೂ ಒಟ್ಟುಗೂಡಿಸಿರಿ; ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಅವರನ್ನೆಲ್ಲ ಪ್ರಾರ್ಥನೆಗಾಗಿ ಕರೆದುಕೊಂಡು ಬನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಪವಿತ್ರ ಉಪವಾಸವನ್ನು ಘೋಷಿಸಿರಿ. ಪವಿತ್ರ ಸಭೆಯನ್ನು ಕರೆಯಿರಿ. ಹಿರಿಯರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ಯೆಹೋವ ದೇವರ ಆಲಯದಲ್ಲಿ ಕೂಡಿಸಿ, ಯೆಹೋವ ದೇವರಿಗೆ ಮೊರೆಯಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 1:14
15 ತಿಳಿವುಗಳ ಹೋಲಿಕೆ  

ಜನರಿಗೂ ಪಶುಗಳಿಗೂ ಗೋಣಿತಟ್ಟು ಹೊದಿಕೆಯಾಗಲಿ; ಎಲ್ಲರೂ ದೇವರಿಗೆ ಬಲವಾಗಿ ಮೊರೆಯಿಡಲಿ; ಒಬ್ಬೊಬ್ಬನು ತನ್ನ ತನ್ನ ದುರ್ಮಾರ್ಗಗಳನ್ನೂ, ತಾನು ನಡಿಸುತ್ತಿದ್ದ ಹಿಂಸೆಯನ್ನೂ ತೊರೆದು ಬಿಡಲಿ.


ಎಲ್ಲಾ ಯೆಹೂದ್ಯರೂ ಅವರ ಹೆಂಡತಿ ಮಕ್ಕಳೂ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದರು.


ಆ ಏಳು ದಿನಗಳಲ್ಲಿಯೂ ನೀವು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಎಂಟನೆಯ ದಿನದಲ್ಲಿಯೂ ದೇವಾರಾಧನೆಗಾಗಿ ಸಭೆಸೇರಬೇಕು, ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಅದು ಸಭೆಸೇರುವ ದಿನವಾದುದರಿಂದ ಆ ದಿನದಲ್ಲಿ ಯಾವ ಉದ್ಯೋಗವನ್ನು ಮಾಡಬಾರದು.


ಎಜ್ರನು ಮೊದಲನೆಯ ದಿನದಿಂದ ಕೊನೆಯ ದಿನದವರೆಗೆ ಪ್ರತಿದಿನವೂ ದೇವರ ಧರ್ಮನಿಯಮಗಳನ್ನು ಜನರಿಗೋಸ್ಕರ ಪಾರಾಯಣ ಮಾಡುತ್ತಿದ್ದನು. ಏಳು ದಿನಗಳವರೆಗೂ ಉತ್ಸವದ ಜಾತ್ರೆ ನಡೆಯಿತು. ನಿಯಮದ ಪ್ರಕಾರ ಎಂಟನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆ ಸೇರಿತು.


ಇದಲ್ಲದೆ, ಯೇಹುವು ದೂತರ ಮುಖಾಂತರವಾಗಿ, “ಬಾಳ್ ದೇವತೆಯನ್ನು ಆರಾಧಿಸುವ ಎಲ್ಲಾ ಭಕ್ತರೂ ತಮ್ಮನ್ನು ಶುದ್ಧಿಮಾಡಿಕೊಂಡು ಉತ್ಸವಕ್ಕೆ ಬರಬೇಕು” ಎಂದು ಹೇಳಿದನು.


ನೀವೆಲ್ಲರೂ ಮೂರು ದಿನ ಹಗಲಿರುಳು ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸ ಮಾಡಿರಿ; ಅದರಂತೆ ನಾನೂ ನನ್ನ ಸೇವಕಿಯರೊಡನೆ ಉಪವಾಸದಿಂದಿರುವೆನು. ಅನಂತರ ನಾನು ವಿಧಿಮೀರಿ ಅರಸನ ಬಳಿಗೆ ಹೋಗುವೆನು, ಸತ್ತರೆ ಸಾಯುತ್ತೇನೆ” ಎಂದು ಹೇಳಿಸಿದಳು.


ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಐದನೆಯ ವರ್ಷದ ಒಂಭತ್ತನೆಯ ತಿಂಗಳಿನಲ್ಲಿ ಯೆರೂಸಲೇಮಿನವರೆಲ್ಲರೂ, ಯೆಹೂದದ ಊರುಗಳಿಂದ ಯೆರೂಸಲೇಮಿಗೆ ಬಂದವರೆಲ್ಲರೂ ಯೆಹೋವನ ಆರಾಧನೆಯ ಉಪವಾಸವನ್ನು ಗೊತ್ತುಮಾಡಿ ಪ್ರಕಟಿಸಿದರು.


ವೃದ್ಧರೇ, ಇದನ್ನು ಕೇಳಿರಿ, ದೇಶದ ನಿವಾಸಿಗಳೇ, ನೀವೆಲ್ಲರೂ ಕಿವಿಗೊಡಿರಿ. ಇಂಥ ಬಾಧೆಯು ನಿಮ್ಮ ಕಾಲದಲ್ಲಾಗಲಿ ನಿಮ್ಮ ಪೂರ್ವಿಕರ ಕಾಲದಲ್ಲಿಯಾಗಲಿ ಸಂಭವಿಸಿತ್ತೋ?


ಇದನ್ನು ಕೇಳಿ ನಿನೆವೆಯವರು ದೇವರಲ್ಲಿ ನಂಬಿಕೆಯಿಟ್ಟು ಉಪವಾಸವನ್ನು ಮಾಡಬೇಕೆಂದು ಸಾರಿ ಹೇಳಿದರು; ದೊಡ್ಡವರು ಮೊದಲುಗೊಂಡು ಚಿಕ್ಕವರ ತನಕ ಎಲ್ಲರೂ ಗೋಣಿತಟ್ಟನ್ನು ಸುತ್ತಿಕೊಂಡರು.


ನಾಚಿಕೆಗೇಡಿ ಜನಾಂಗದವರೇ, ತೀರ್ಪು ಫಲಿಸುವುದರೊಳಗೆ, ಯೆಹೋವನ ಉಗ್ರಕೋಪವು ನಿಮ್ಮ ಮೇಲೆ ಬರುವುದಕ್ಕೆ ಮೊದಲೇ ಯೆಹೋವನ ಸಿಟ್ಟಿನ ದಿನವೂ ಉರಿದು ನಿಮ್ಮ ಮೇಲೆ ಬರುವುದಕ್ಕಿಂತ ಮೊದಲೇ, ನೀವೆಲ್ಲರೂ ಸೇರಿ ಬನ್ನಿರಿ, ಒಟ್ಟಾಗಿ ಕೂಡಿರಿ.


ಯೆಹೂದವು ದುಃಖಿಸುತ್ತದೆ, ಅಲ್ಲಿಯ ಜನರು ಕಂಗೆಟ್ಟು ಕರ್ರಗಾಗಿ ನೆಲದ ಮೇಲೆ ಬಿದ್ದಿದ್ದಾರೆ, ಯೆರೂಸಲೇಮಿನವರ ಗೋಳಾಟವು ಕೇಳಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು