Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವುಗಳ ಆಗಮನದಿಂದ ಭೂಮಿಯು ಕಂಪಿಸುತ್ತದೆ, ಆಕಾಶಮಂಡಲವು ನಡಗುತ್ತದೆ, ಸೂರ್ಯ ಮತ್ತು ಚಂದ್ರರು ಮಂಕಾಗುತ್ತಾರೆ, ಮತ್ತು ನಕ್ಷತ್ರಗಳು ಕಾಂತಿಗುಂದುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವುಗಳ ಮುಂದೆ ಭೂಮಂಡಲ ಕಂಪಿಸುತ್ತದೆ, ಆಕಾಶಮಂಡಲ ನಡುಗುತ್ತದೆ. ಸೂರ್ಯಚಂದ್ರಗಳು ಮಂಕಾಗುತ್ತವೆ, ನಕ್ಷತ್ರಗಳು ಕಾಂತಿಗುಂದುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವುಗಳ ಆಗಮನದಿಂದ ಭೂವಿುಯು ಕಂಪಿಸುತ್ತದೆ, ಆಕಾಶಮಂಡಲವು ನಡುಗುತ್ತದೆ, ಸೂರ್ಯಚಂದ್ರರು ಮಂಕಾಗುತ್ತಾರೆ, ನಕ್ಷತ್ರಗಳು ಕಾಂತಿಯನ್ನು ಅಡಗಿಸಿಕೊಳ್ಳುತ್ತವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವರ ಮುಂದೆ ಭೂಮಿಯೂ ಆಕಾಶವೂ ನಡುಗುವುದು; ಸೂರ್ಯಚಂದ್ರರು ಕಪ್ಪಾಗಿಹೋಗುವರು; ನಕ್ಷತ್ರಗಳು ಹೊಳಪನ್ನು ಕಳೆದುಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವುಗಳ ಮುಂದೆ ಭೂಮಿಯು ನಡುಗುತ್ತದೆ. ಆಕಾಶಗಳು ಅದರುತ್ತವೆ. ಸೂರ್ಯ ಚಂದ್ರರು ಕಪ್ಪಾಗುತ್ತವೆ. ನಕ್ಷತ್ರಗಳು ಇನ್ನು ಮುಂದೆ ಹೊಳೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:10
22 ತಿಳಿವುಗಳ ಹೋಲಿಕೆ  

“ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು.


ಆಕಾಶದ ತಾರೆಗಳೂ, ನಕ್ಷತ್ರ ರಾಶಿಗಳೂ ಬೆಳಕನ್ನು ಕೊಡುವುದಿಲ್ಲ. ಸೂರ್ಯನು ಮೂಡುತ್ತಲೇ ಕತ್ತಲಾಗುವನು. ಚಂದ್ರನು ಪ್ರಕಾಶಿಸುವುದಿಲ್ಲ.


ಆಗ ಆತನಿಗೆ ಸಿಟ್ಟೇರಿದ್ದರಿಂದ, ಭೂಮಿಯು ಗಡಗಡನೆ ಕಂಪಿಸಿತು, ಪರ್ವತಗಳ ಬುಡಗಳು ನಡುಗಿ ಕದಲಿದವು.


ಆತನು ಆರನೆಯ ಮುದ್ರೆಯನ್ನು ಒಡೆಯುವುದನ್ನು ಕಂಡೆನು. ಆಗ ಮಹಾಭೂಕಂಪ ಉಂಟಾಯಿತು. ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು ಮತ್ತು ಪೂರ್ಣಚಂದ್ರನು ರಕ್ತದಂತಾದನು.


ನಾನು ದಿವ್ಯಜ್ಞಾನದಿಂದ ನೋಡಿದೆನು, ಆಹಾ! ಭೂಲೋಕವು ಹಾಳುಪಾಳಾಗಿತ್ತು; ಆಕಾಶವನ್ನು ನೋಡಿದೆನು, ಅದರಲ್ಲಿ ಬೆಳಕೇ ಇರಲಿಲ್ಲ.


ನಾಲ್ಕನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು, ಆಗ ಸೂರ್ಯನ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ಕತ್ತಲಾಯಿತು. ಅದೇ ಪ್ರಕಾರ ಚಂದ್ರನಲ್ಲಿ ಮತ್ತು ನಕ್ಷತ್ರಗಳಲ್ಲಿ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ಕತ್ತಲಾಗಿ ಹೋಯಿತು. ಇದರಿಂದ ಹಗಲಿನಲ್ಲಿ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಕತ್ತಲಾಗಿ, ರಾತ್ರಿಯ ಹಾಗೆಯೇ ಆಯಿತು.


ಆತನ ಮುಂದೆ ಬೆಟ್ಟಗಳು ಅದರುತ್ತವೆ, ಗುಡ್ಡಗಳು ಕರಗುತ್ತವೆ; ಆತನ ದರ್ಶನಕ್ಕೆ ಭೂಮಿಯು ಕಂಪಿಸುತ್ತದೆ, ಹೌದು, ಲೋಕವೂ ಲೋಕನಿವಾಸಿಗಳೆಲ್ಲರೂ ತಲ್ಲಣಿಸುತ್ತವೆ.


ಯೆಹೋವನ ಮಹಾ ಭಯಂಕರವಾದ ದಿನವು ಬರುವುದಕ್ಕಿಂತ ಮೊದಲು, ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.


ನಕ್ಷತ್ರ ಸೈನ್ಯವೆಲ್ಲಾ ಗತಿಸಿ ಹೋಗುವುದು, ಆಕಾಶ ಮಂಡಲವು ಸುರಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ, ಅಂಜೂರ ಮರದಿಂದ ಮಾಗಿದ ಹಣ್ಣು ಉದುರುವ ಹಾಗೂ ತಾರಾಮಂಡಲವೆಲ್ಲಾ ಬಾಡಿ ಕೆಳಗೆ ಉದುರುವುದು.


ಭೂಲೋಕವೇ, ಕರ್ತನು ಪ್ರತ್ಯಕ್ಷನಾಗಿದ್ದಾನೆ, ಯಾಕೋಬನ ದೇವರು ನಿನ್ನ ಮುಂದೆ ಇದ್ದಾನೆ, ಕಂಪಿಸು.


ಆಗ ಇಗೋ, ದೇವಾಲಯದ ಪರದೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು; ಭೂಮಿಯು ನಡುಗಿತು;


ಕೃತ್ತಿಕಾ ಮತ್ತು ಒರಿಯನ್ ಎಂಬ ಪ್ರಕಾಶಮಾನವಾದ ನಕ್ಷತ್ರಗಳನ್ನು ಸೃಷ್ಟಿಸಿ, ಕಾರ್ಗತ್ತಲನ್ನು ಬೆಳಕನ್ನಾಗಿ ಮಾಡಿ, ಹಗಲನ್ನು ಇರುಳಾಗಿ ಮಾರ್ಪಡಿಸಿ, ಸಾಗರದ ಜಲವನ್ನು ಬರಮಾಡಿಕೊಂಡು, ಭೂಮಂಡಲದ ಮೇಲೆ ಸುರಿಯುವಾತನ ಕಡೆಗೆ ತಿರುಗಿಕೊಳ್ಳಿರಿ, ಯೆಹೋವನೆಂಬುದೇ ಆತನ ನಾಮಧೇಯ!


ಅದು ಕತ್ತಲೆಯ ಮತ್ತು ಮೊಬ್ಬಿನ ದಿನವೂ, ಕಾರ್ಮುಗಿಲಿನ ಕಗ್ಗತ್ತಲ ದಿನವೂ ಆಗಿದೆ. ಉದಯವು ಬೆಟ್ಟಗಳ ಮೇಲೆ ಹರಡಿಕೊಳ್ಳುವ ಹಾಗೆ, ಪ್ರಬಲವಾದ ದೊಡ್ಡ ಸೈನ್ಯವು ಬರುತ್ತದೆ. ಅದರ ಹಾಗೆ ಹಿಂದೆಂದೂ ಬಂದಿಲ್ಲ, ಇನ್ನು ಮುಂದೆಯೂ ಬರುವುದಿಲ್ಲ, ತಲತಲಾಂತರಗಳ ವರ್ಷಗಳವರೆಗೂ ಬರುವುದಿಲ್ಲ.


ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.


ಅವನು ಅಧೋಲೋಕದ ಕೂಪವನ್ನು ತೆರೆಯಲು ಕೂಪದಿಂದ ಬಂದ ಹೊಗೆ ದೊಡ್ಡ ಕುಲುಮೆಯ ಹೊಗೆಯಂತೆ ಏರಿತು. ಕೂಪದ ಹೊಗೆಯಿಂದ ಸೂರ್ಯನೂ ಆಕಾಶವೂ ಕಪ್ಪಾಗಿ ಹೋದವು.


ಸಮುದ್ರವು ಭೋರ್ಗರೆಯುವಂತೆ ಆ ದಿನದಲ್ಲಿ ಇವರು ಯೆಹೂದ್ಯರನ್ನು ಕಂಡು ಗರ್ಜಿಸುವರು. ಭೂಮಿಯನ್ನು ದೃಷ್ಟಿಸಿದರೆ ಅಂಧಕಾರವೂ, ವ್ಯಾಕುಲವೂ ತುಂಬಿರುವುದು. ಮೋಡ ಕವಿದು ಬೆಳಕು ಕತ್ತಲಾಗುವುದು.


ತೂರ್, ಚೀದೋನ್, ಫಿಲಿಷ್ಟಿಯರ ಎಲ್ಲಾ ಪ್ರಾಂತ್ಯಗಳೇ, ನನ್ನ ವಿರುದ್ಧ ನಿಮಗೆ ಕೋಪವೇಕೆ? ನನಗೆ ಪ್ರತಿಕಾರ ಮಾಡುವಿರೋ? ನೀವು ನನಗೆ ಪ್ರತಿಕಾರ ಮಾಡಿದರೆ, ನೀವು ಮಾಡುವ ಕೇಡನ್ನು ತ್ವರೆಯಾಗಿ ನಿಮ್ಮ ತಲೆಗೆ ಬರುವಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು