Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆತನು ಒಂದು ವೇಳೆ ಮನಸ್ಸನ್ನು ಬದಲಾಯಿಸಿ, ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಯೆಹೋವನಿಗೆ ನೀವು ಅರ್ಪಿಸುವ ನೈವೇದ್ಯವನ್ನು ಸ್ವೀಕರಿಸಿ ಸುವರಗಳನ್ನು ದಯಪಾಲಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಒಂದು ವೇಳೆ ಸರ್ವೇಶ್ವರ ತಮ್ಮ ಮನಸ್ಸನ್ನು ಬದಲಾಯಿಸಬಹುದು. ನಿಮ್ಮ ಕಡೆಗೆ ತಿರುಗಿ ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಅವರಿಗೆ ಅರ್ಪಿಸಲು ಬೇಕಾದ ನೈವೇದ್ಯಗಳನ್ನು ಧಾರಾಳವಾಗಿ ಅನುಗ್ರಹಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆತನು ಒಂದು ವೇಳೆ ಪಶ್ಚಾತ್ತಾಪಪಟ್ಟು ಹಿಂದಿರುಗಿ ನಿಮ್ಮ ದೇವರಾದ ಯೆಹೋವನ ಧಾನ್ಯಪಾನನೈವೇದ್ಯಗಳಿಗೆ ಅನುಕೂಲವಾದ ಸುವರಗಳನ್ನು ದಯಪಾಲಿಸಿ ಹೋದಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಒಂದುವೇಳೆ ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿದರೂ ಬದಲಾಯಿಸಬಹುದು. ಒಂದುವೇಳೆ ಆತನು ನಿಮಗಾಗಿ ಆಶೀರ್ವಾದವನ್ನು ಬಿಟ್ಟುಹೋಗಬಹುದು. ಆಗ ನೀವು ದೇವರಾದ ಯೆಹೋವನಿಗೆ ಧಾನ್ಯ ಮತ್ತು ಪಾನಸಮರ್ಪಣೆ ಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ದೇವರು ಒಂದು ವೇಳೆ ತಮ್ಮ ಮನಸ್ಸನ್ನು ಬದಲಾಯಿಸಬಹುದು. ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು. ನಿಮ್ಮ ಯೆಹೋವ ದೇವರಿಗೆ ಅರ್ಪಿಸಲು ಬೇಕಾದ ಧಾನ್ಯ ಸಮರ್ಪಣೆ ಹಾಗು ಪಾನಾರ್ಪಣೆಯನ್ನು ನಿಮಗೆ ಧಾರಾಳವಾಗಿ ಉಳಿಸಬಹುದು, ಯಾರಿಗೆ ಗೊತ್ತು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:14
20 ತಿಳಿವುಗಳ ಹೋಲಿಕೆ  

ದೇವರು ಒಂದು ವೇಳೆ ಮನಮರುಗಿ, ಮನಸ್ಸನ್ನು ಬದಲಾಯಿಸಿಕೊಂಡು ತನ್ನ ಉಗ್ರಕೋಪವನ್ನು ತೊರೆದರೆ, ನಾವು ನಾಶವಾಗದೆ ಉಳಿದೇವು” ಎಂಬುದನ್ನು ನಿನೆವೆಯಲ್ಲೆಲ್ಲಾ ಸಾರಿಸಿದನು.


ಕಣಜದಲ್ಲಿ ಕಾಳು ಇನ್ನು ಇದೆಯೋ? ದ್ರಾಕ್ಷಿ, ಅಂಜೂರ, ದಾಳಿಂಬೆ, ಒಲೀವ್ ಈ ಗಿಡಗಳು ಫಲಿಸಲಿಲ್ಲವಲ್ಲಾ. ಇದೇ ದಿನ ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.”


ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಗೋಳಾಡಿರಿ! ಯಜ್ಞವೇದಿಯ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಬಿದ್ದುಕೊಂಡಿರಿ. ಏಕೆಂದರೆ ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ನಿಮ್ಮ ದೇವರ ಆಲಯಕ್ಕೆ ಬಾರದೆ ನಿಂತುಹೋಗಿದೆ.


ಯೆಹೋವನ ನಿಯಮವನ್ನು ಕೈಕೊಂಡು ನಡೆಯುವ ಲೋಕದ ದೀನರೇ, ನೀವೆಲ್ಲರೂ ಯೆಹೋವನ ನೀತಿಯನ್ನು ಅನುಸರಿಸಿರಿ, ಧರ್ಮವನ್ನು ಅಭ್ಯಾಸಿಸಿರಿ, ನಮ್ರತೆಯನ್ನು ಹೊಂದಿಕೊಳ್ಳಿರಿ; ಬಹುಶಃ ಯೆಹೋವನ ಸಿಟ್ಟಿನ ದಿನದಲ್ಲಿ ನೀವು ಮರೆಯಾಗುವಿರಿ.


ಹೀಗಿರಲು ಹಡಗಿನ ನೌಕಾಧಿಕಾರಿ ಅವನ ಬಳಿಗೆ ಬಂದು, “ಇದೇನು, ನೀನು ನಿದ್ದೆಮಾಡುತ್ತಿರುವುದು? ಎದ್ದೇಳು, ನಿನ್ನ ದೇವರಿಗೆ ಮೊರೆಯಿಡು; ಒಂದು ವೇಳೆ ನಿನ್ನ ದೇವರು ನಮ್ಮನ್ನು ರಕ್ಷಿಸಾನು, ನಾವೆಲ್ಲರು ನಾಶವಾಗದೆ ಉಳಿದೇವು” ಎಂದು ಹೇಳಿದನು.


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸೇನಾಧೀಶ್ವರ ದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದನು.


ಜೀವಸ್ವರೂಪನಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದನೆಯ ಮಾತುಗಳನ್ನು, ನಿನ್ನ ದೇವರಾದ ಯೆಹೋವನು ಕೇಳಿರುವನು. ನಿನ್ನ ದೇವರಾದ ಯೆಹೋವನು ತಾನು ಹೇಳಿದ ಮಾತುಗಳ ನಿಮಿತ್ತ ಮುಯ್ಯಿತೀರಿಸುವನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗಾಗಿಯಾದರೂ ಆತನನ್ನು ಪ್ರಾರ್ಥಿಸು ಎಂಬುದಾಗಿ ಹಿಜ್ಕೀಯನು ಹೇಳುತ್ತಾನೆ” ಎಂದು ಹೇಳಿರಿ ಅಂದನು.


ದಾವೀದನು ಅವರಿಗೆ, “ಹುಡುಗನು ಜೀವದಿಂದಿದ್ದಾಗ ಒಂದು ವೇಳೆ ಯೆಹೋವನು ಕೃಪೆಮಾಡಿ ಅವನನ್ನು ಉಳಿಸಾನು ಅಂದುಕೊಂಡು ಉಪವಾಸ ಮಾಡಿದೆನು, ಅತ್ತೆನು.


ಮರುದಿನದಲ್ಲಿ ಮೋಶೆಯು ಜನರಿಗೆ, “ನೀವು ಮಹಾ ಪಾಪವನ್ನು ಮಾಡಿರುವಿರಿ. ಆದರೂ ನಾನು ಬೆಟ್ಟವನ್ನು ಹತ್ತಿ ಯೆಹೋವನ ಸನ್ನಿಧಿಗೆ ಹೋಗುವೆನು. ಒಂದು ವೇಳೆ ನೀವು ಮಾಡಿದ ಪಾಪಕೃತ್ಯಕ್ಕೆ ಪ್ರಾಯಶ್ಚಿತ್ತವನ್ನು ನಾನು ಮಾಡಬಹುದೇನೋ” ಎಂದು ಹೇಳಿದನು.


ಎದುರಿಸುವವರನ್ನು ಸೌಮ್ಯತೆಯಿಂದ ತಿದ್ದುವವನೂ ಆಗಿರಬೇಕು. ಬಹುಶಃ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು.


ನಮ್ಮ ಆಹಾರವು ನಮ್ಮ ಕಣ್ಣೆದುರಿಗೆ ಹಾಳಾಯಿತಲ್ಲಾ, ಸಂತೋಷವೂ ಹಾಗೂ ಉಲ್ಲಾಸವೂ ನಮ್ಮ ದೇವರ ಆಲಯವನ್ನು ಬಿಟ್ಟುಹೋಯಿತ್ತಲ್ಲಾ!


ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ಯೆಹೋವನ ಆಲಯದಿಂದ ತೆಗೆಯಲ್ಪಟ್ಟಿದೆ. ಯೆಹೋವನ ಸೇವಕರಾದ ಯಾಜಕರು ಗೋಳಾಡುತ್ತಾರೆ.


ಯೆಹೋವನು ಹೀಗನ್ನುತ್ತಾನೆ, “ರಸ ದೊರೆಯಬಹುದಾದ ದ್ರಾಕ್ಷಿಯ ಗೊಂಚಲನ್ನು ಒಬ್ಬನು ನೋಡಿ, ‘ಹಾಳುಮಾಡಬೇಡ, ಅದರಲ್ಲಿ ಪ್ರಯೋಜನವಿದೆ’ ಎನ್ನುವಂತೆ, ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು, ಇವರನ್ನೆಲ್ಲಾ ಹಾಳುಮಾಡಬಾರದು ಎಂದು ಅಂದುಕೊಳ್ಳುವೆನು,


ನೀವು ನಿಮ್ಮ ದೇಶನಿವಾಸಿಗಳ ವಿನಾಶಕ್ಕೆ ಕಾರಣವಾಗಿರುವ ಗಡ್ಡೆ ಮತ್ತು ಇಲಿ ಇವುಗಳ ಸ್ವರೂಪಗಳನ್ನು ಚಿನ್ನದಿಂದ ಮಾಡಿಸಿ, ಇಸ್ರಾಯೇಲಿನ ದೇವರಿಗೆ ಅದನ್ನು ಅರ್ಪಿಸಿ ಮಹಿಮೆಯನ್ನು ಸಲ್ಲಿಸಿದರೆ, ಆತನ ಶಿಕ್ಷಾಹಸ್ತವು ನಿಮ್ಮನ್ನೂ, ನಿಮ್ಮ ದೇವತೆಗಳನ್ನೂ, ಪ್ರಾಂತ್ಯಗಳನ್ನೂ ಬಿಟ್ಟುಹೋದೀತು.


ಹೀಗಿರಲು ಯೆಹೋವನು ಆ ದಿನದಂದು ಸೂಚಿಸಿದಂತೆ ಈ ಪರ್ವತ ಪ್ರದೇಶವನ್ನು ನನಗೆ ಕೊಡು ಇದರಲ್ಲಿ ಉನ್ನತ ಪುರುಷರು (ಅನಾಕ್ಯರು) ಇರುತ್ತಾರೆ ಎಂದು ಈ ಪಟ್ಟಣಗಳು ದೊಡ್ಡದೂ, ಕೋಟೆಕೊತ್ತಲುಳ್ಳವುಗಳೂ ಆಗಿವೆ ಎಂದೂ ಆ ಕಾಲದಲ್ಲಿ ನೀನೇ ಕೇಳಿದ್ದೀಯಲ್ಲಾ. ಅವರೆಲ್ಲರನ್ನು ಓಡಿಸಿಬಿಡುವುದಕ್ಕೋಸ್ಕರ ಯೆಹೋವನು ತನ್ನ ಮಾತಿಗನುಸಾರವಾಗಿ ನನಗೆ ಸಹಾಯ ಮಾಡುವನೆಂದು ನಂಬಿಕೊಂಡಿದ್ದೇನೆ” ಅಂದನು.


ಅವರು ಒಂದು ವೇಳೆ ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಹಾಗೆ ಮಾಡಿದರೆ ಅವರ ದುಷ್ಕೃತ್ಯಗಳ ನಿಮಿತ್ತ ನಾನು ಅವರಿಗೆ ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.


ನಾನು ದಂಡನೆಯನ್ನು ನಿರ್ಣಯಿಸಿದ ಆ ಜನಾಂಗದವರು ತಮ್ಮ ಕೆಟ್ಟತನದಿಂದ ತಿರುಗಿಕೊಂಡರೆ, ನಾನು ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.


ಈಗಲೇ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನ್ನೂ ತಿದ್ದಿಕೊಂಡು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡಿರಿ; ಹಾಗೆ ಮಾಡಿದರೆ ಯೆಹೋವನು ನಿಮ್ಮ ವಿಷಯವಾಗಿ ನುಡಿದಿರುವ ಕೇಡನ್ನು ಮನಮರುಗಿ ಮಾಡದಿರುವನು.


ಒಂದು ವೇಳೆ ಯೆಹೋವನು ನನ್ನ ಕಷ್ಟವನ್ನು ನೋಡಿ ಈ ಹೊತ್ತಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಾನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು