Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಭೂಮಿಯೇ, ಹೆದರಬೇಡ, ಹರ್ಷಿಸು, ಉಲ್ಲಾಸಿಸು, ಯೆಹೋವನು ಮಹತ್ಕಾರ್ಯಗಳನ್ನು ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ಭೂನಿವಾಸಿಗಳೇ, ಭಯಪಡಬೇಡಿರಿ; ಹರ್ಷಿಸಿ ಆನಂದಿಸಿರಿ. ಸರ್ವೇಶ್ವರ ಮಹತ್ಕಾರ್ಯಗಳನ್ನು ಎಸಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಭೂವಿುಯೇ, ಹೆದರಬೇಡ, ಹರ್ಷಿಸು, ಉಲ್ಲಾಸಿಸು; ಯೆಹೋವನು ಮಹತ್ಕಾರ್ಯಗಳನ್ನು ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದೇಶವೇ, ಭಯಪಡದಿರು. ಯೆಹೋವನು ಮಹತ್ಕಾರ್ಯವನ್ನು ಮಾಡಲಿರುವದರಿಂದ ಸಂತೋಷದಿಂದ ಆನಂದಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯಹೂದ ದೇಶವೇ, ಭಯಪಡಬೇಡ; ಉಲ್ಲಾಸಿಸಿ, ಸಂತೋಷವಾಗಿರು. ಏಕೆಂದರೆ, ಯೆಹೋವ ದೇವರು ಮಹತ್ತಾದವುಗಳನ್ನು ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:21
21 ತಿಳಿವುಗಳ ಹೋಲಿಕೆ  

“ಹೆದರಬೇಡ, ನಿನಗೆ ಅವಮಾನವಾಗುವುದಿಲ್ಲ, ನಾಚಿಕೆಪಡದಿರು, ನಿನಗೆ ಆಶಾಭಂಗವಾಗದು; ಯೌವನದಲ್ಲಿ ನಿನಗಾದ ಅವಮಾನವನ್ನು ಮರೆತುಬಿಡುವಿ, ವೈಧವ್ಯದಲ್ಲಿ ನಿನಗೆ ಸಂಭವಿಸಿದ ನಿಂದೆಯು ಇನ್ನು ನಿನ್ನ ನೆನಪಿಗೆ ಬಾರದು.


ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


‘ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ, ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.


ಅರಣ್ಯವೂ, ಮರುಭೂಮಿಯೂ ಆನಂದಿಸುವವು; ಒಣನೆಲವು ಹರ್ಷಿಸಿ ತಾವರೆಯಂತೆ ಕಳಕಳಿಸುವುದು.


ಈಗ ಯೆಹೋವನು ನಿಮ್ಮ ಕಣ್ಣುಮುಂದೆ ಮಾಡುವ ಮಹತ್ಕಾರ್ಯವನ್ನು ಹತ್ತಿರ ಬಂದು ನೋಡಿರಿ.


ಈ ಕಾಲದಲ್ಲಿಯೂ ಯೆರೂಸಲೇಮಿಗೂ, ಯೆಹೂದ ಕುಲಕ್ಕೂ ಮೇಲುಮಾಡಬೇಕೆಂದು ಹೊಸ ಸಂಕಲ್ಪ ಮಾಡಿಕೊಂಡಿದ್ದೇನೆ; ಹೆದರಬೇಡಿರಿ. ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ನಾನು ಉತ್ತರ ದಿಕ್ಕಿನ ಸೈನ್ಯವನ್ನು ನಿಮ್ಮ ಕಡೆಯಿಂದ ದೂರಮಾಡುವೆನು, ಅದನ್ನು ಹಾಳುಬಿದ್ದ ಬಂಜರು ಭೂಮಿಗೂ ಓಡಿಸುವೆನು. ಅದರ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ, ಅದರ ಹಿಂಭಾಗವನ್ನು ಪಶ್ಚಿಮ ಸಮುದ್ರಕ್ಕೂ ತಳ್ಳಿಬಿಡುವೆನು. ಅದರ ದುರ್ವಾಸನೆಯು ಏರುವುದು. ಏಕೆಂದರೆ ಆತನು ಮಹತ್ಕಾರ್ಯಗಳನ್ನು ಮಾಡುತ್ತಾನೆ.


ನೀವಾದರೋ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಆತನು ನಿಮಗೋಸ್ಕರವಾಗಿ ಮಾಡಿದ ಮಹತ್ಕಾರ್ಯಗಳನ್ನು ಸ್ಮರಿಸಿಕೊಂಡು, ಆತನನ್ನು ಸತ್ಯದಿಂದಲೂ, ಪೂರ್ಣಮನಸ್ಸಿನಿಂದಲೂ ಸೇವಿಸುತ್ತಾ ಬರಬೇಕು;


ದೇವರು, ಮನುಷ್ಯರನ್ನು ಸೃಷ್ಟಿಸಿ ಭೂಮಿಯ ಮೇಲೆ ಇರಿಸಿದ ದಿನ ಮೊದಲುಗೊಂಡು ಇಂದಿನವರೆಗೂ ಒಂದು ದಿಕ್ಕಿನಿಂದ ಮತ್ತೊಂದು ದಿಕ್ಕಿನವರೆಗೂ ಇಂತಹ ಅದ್ಭುತ ಕಾರ್ಯವು ನಡೆದದ್ದುಂಟೋ, ಇಲ್ಲವೆ ಇಂತಹ ಸುದ್ದಿ ಕೇಳಿದ್ದುಂಟೋ ಎಂದು ವಿಚಾರಿಸಿಕೊಳ್ಳಿರಿ.


ನದಿಗಳು ಚಪ್ಪಾಳೆ ಹೊಡೆಯಲಿ; ಪರ್ವತಗಳೆಲ್ಲಾ ಉತ್ಸಾಹಧ್ವನಿಮಾಡಲಿ.


ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”


ಆ ದಿನದಲ್ಲಿ ಯೆಹೋವನು, “ಆ ಕಾಲದಲ್ಲಿ ನಾನು ಒಲುಮೆ ತೋರಿಸುವೆನು. ಬೇಡುವ ಆಕಾಶಕ್ಕೆ ನಾನು ಒಲಿಯಲು, ಬೇಡುವ ಭೂಮಿಗೆ ಅದು ಒಲಿಯುವುದು.


ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭಟಿಸು. ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಉತ್ಸಾಹಧ್ವನಿಮಾಡಿರಿ. ಏಕೆಂದರೆ ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.


ನೀವು ಆನಂದಭರಿತರಾಗಿ ಹೊರಡುವಿರಿ, ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ; ಬೆಟ್ಟ ಗುಡ್ಡಗಳು ನಿಮ್ಮ ಮುಂದೆ ಜಯಘೋಷ ಮಾಡುವವು.


ದೇವರೇ, ನಿನ್ನ ನೀತಿಯು ಆಕಾಶವನ್ನು ನಿಲುಕುವಷ್ಟು ಮಹೋನ್ನತವಾಗಿದೆ. ಮಹತ್ತರವಾದ ಕೃತ್ಯಗಳನ್ನು ನಡೆಸಿದ ದೇವರೇ, ನಿನಗೆ ಸಮಾನರು ಯಾರು?


ನೀವು ಹೊಟ್ಟೆ ತುಂಬಾ ಊಟಮಾಡಿ ತೃಪ್ತಿಗೊಂಡು, ನಿಮಗಾಗಿ ಅದ್ಭುತಕಾರ್ಯಗಳನ್ನು ಮಾಡಿದ ನಿಮ್ಮ ದೇವರಾದ ಯೆಹೋವನ ನಾಮವನ್ನು ಕೊಂಡಾಡುವಿರಿ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು