Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 2:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನು ಮಾಡುವೆನು. ರಕ್ತ, ಬೆಂಕಿ, ಧೂಮಸ್ತಂಭ ಈ ಉತ್ಪಾತಗಳನ್ನು ಉಂಟುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಭೂಮ್ಯಾಕಾಶಗಳಲ್ಲಿ ಸೂಚಕಕಾರ್ಯಗಳನ್ನು ಮಾಡುವೆನು. ರಕ್ತಧಾರೆ, ಅಗ್ನಿಪ್ರಳಯ, ಧೂಮಕೇತು ಕಾಣಿಸುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವದಕ್ಕೆ ಮುಂಚೆ ಭೂಮ್ಯಾಕಾಶಗಳಲ್ಲಿ ರಕ್ತ ಬೆಂಕಿ ಧೂಮಸ್ತಂಭ ಈ ಉತ್ಪಾತಗಳನ್ನು ಉಂಟುಮಾಡುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಭೂಮ್ಯಾಕಾಶಗಳಲ್ಲಿ ವಿಚಿತ್ರ ಸಂಗತಿಗಳನ್ನು ನಾನು ತೋರಿಸುವೆನು. ಅಲ್ಲಿ ರಕ್ತ, ಬೆಂಕಿ ಮತ್ತು ದಟ್ಟವಾದ ಹೊಗೆಯು ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನು, ರಕ್ತ, ಬೆಂಕಿ, ಹಬೆಯನ್ನು ತೋರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 2:30
16 ತಿಳಿವುಗಳ ಹೋಲಿಕೆ  

ಮತ್ತು ಮಹಾಭೂಕಂಪಗಳಾಗುವವು, ಅಲ್ಲಲ್ಲಿ ಬರಗಳೂ ಉಪದ್ರವಗಳೂ ಬರುವವು, ಭಯಾನಕ ಘಟನೆಗಳೂ ಮಹಾ ಸೂಚನೆಗಳೂ ಆಕಾಶದಲ್ಲಿ ತೋರುವವು.


“ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು.


ಆದರೆ ಪಟ್ಟಣದಿಂದ ಹೊಗೆ ಎದ್ದು ಸ್ತಂಭದೋಪಾದಿಯಲ್ಲಿ ಕಾಣಿಸಿಕೊಳ್ಳಲು ಇಸ್ರಾಯೇಲರು ತಿರುಗಿ ನಿಂತರು.


“ಅವಳೊಂದಿಗೆ ಜಾರತ್ವಮಾಡಿ ಭೋಗಿಗಳಾದ ಭೂರಾಜರು ಅವಳ ದಹನದಿಂದೇರುವ ಹೊಗೆಯನ್ನು ನೋಡಿ ಭಯಪಟ್ಟು ಅವಳಿಗಾಗಿ ದೂರದಲ್ಲಿ ನಿಂತು ಅಳುತ್ತಾ ಗೋಳಾಡುತ್ತಾ, ‘ಅಯ್ಯೋ ಅಯ್ಯೋ ಮಹಾ ನಗರವಾದ ಬಾಬೆಲ್ ಪಟ್ಟಣವೇ, ಬಲಿಷ್ಠವಾದ ಬಾಬೆಲ್ ನಗರಿಯೇ ನಿನಗೆ ವಿಧಿಸಲ್ಪಟ್ಟ ದಂಡನೆಯು ಒಂದೇ ತಾಸಿನಲ್ಲಿ ಬಂದಿತಲ್ಲಾ’ ಎಂದು ಶೋಕಿಸುವರು.


ಸೊದೋಮ್ ಗೊಮೋರದ ಸುತ್ತಲಿನ ಎಲ್ಲಾ ದಿಕ್ಕುಗಳ ಕಡೆಗೂ ನೋಡಿದಾಗ, ಅಯ್ಯೋ, ಆ ಪ್ರದೇಶದಿಂದ ಹೊಗೆಯು ಆವಿಗೆಯ ಹೊಗೆಯಂತೆ ಮೇಲಕ್ಕೇರುತ್ತಿತ್ತು.


ಅವಳ ದಹನದ ಹೊಗೆಯನ್ನು ನೋಡಿ ‘ಈ ಮಹಾ ಪಟ್ಟಣಕ್ಕೆ ಸಮಾನವಾದದ್ದು ಯಾವುದು?’ ಎಂದು ಮೊರೆಯಿಡುವರು.


ವರ್ತಕರು ಮಾರುವ ಸಕಲ ಸುಗಂಧತೈಲಗಳಿಂದ, ರಸಗಂಧ, ಸಾಂಬ್ರಾಣಿಧೂಪ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿಯಲ್ಲಿ ಹೊರಹೊಮ್ಮುತ್ತಿರುವ, ಅರಣ್ಯಮಾರ್ಗವಾಗಿ ಬರುತ್ತಿರುವ ಈ ಮೆರವಣಿಗೆ ಯಾರದು?


ಅಡಗಿದ್ದವರು ಊರಿಗೆ ಬೆಂಕಿಹೊತ್ತಿಸಿ ಹೊಗೆ ಏರಿಹೋಗುವಂತೆ ಮಾಡಿದ ಮೇಲೆ, ಓಡಿಹೋಗುತ್ತಿದ್ದವರು ಪುನಃ ಯುದ್ಧಕ್ಕೆ ನಿಲ್ಲಬೇಕೆಂದು ಹೊಂಚು ಹಾಕುವವರೂ ಹಾಗು ಉಳಿದ ಇಸ್ರಾಯೇಲರೂ ತಮ್ಮ ತಮ್ಮೊಳಗೆ ಮೊದಲೇ ಗೊತ್ತುಮಾಡಿಕೊಂಡಿದ್ದರು.


ಆಯಿ ಎಂಬ ಊರಿನ ಜನರು ಹಿಂದಿರುಗಿ ನೋಡಿದಾಗ ಪಟ್ಟಣದ ಹೊಗೆಯು ಆಕಾಶದೆತ್ತರಕ್ಕೆ ಏರಿಹೋಗುವುದನ್ನು ಕಂಡು ಯಾವ ಮಾರ್ಗದಿಂದಲೂ ತಪ್ಪಿಸಿಕೊಳ್ಳಲಾರದೆ ಇದ್ದರು. ಅರಣ್ಯದ ಕಡೆಗೆ ಓಡಿಹೋಗಿದ್ದ ಇಸ್ರಾಯೇಲ್ಯರು ಹಿಂದಟ್ಟುವವರ ಕಡೆಗೆ ತಿರುಗಿದರು.


ಮೊದಲನೆಯ ದೇವದೂತನು ತನ್ನ ತುತ್ತೂರಿಯನ್ನೂದಲು ರಕ್ತ ಮಿಶ್ರಿತವಾದ ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿಯಿತು. ಭೂಮಿಯ ಮೂರರಲ್ಲಿ ಒಂದು ಭಾಗವು ಸುಟ್ಟು ಹೋಯಿತು. ಮರಗಳಲ್ಲಿ ಮೂರರಲ್ಲೊಂದು ಭಾಗ ಸುಟ್ಟು ಹೋದವು. ಹಸಿರು ಹುಲ್ಲೆಲ್ಲಾ ಸುಟ್ಟು ಹೋಯಿತು.


ಇದಕ್ಕಾಗಿ ಭೂಲೋಕವು ಪ್ರಲಾಪಿಸುವುದು, ಮೇಲೆ ಆಕಾಶವು ಕಪ್ಪಾಗುವುದು; ನಾನು ನುಡಿದಿದ್ದೇನೆ, ಪಶ್ಚಾತ್ತಾಪಪಡೆನು; ಇದರಿಂದ, ಹಿಂದೆಗೆಯನು” ಎಂದು ನುಡಿಯುತ್ತಾನೆ.


ಆ ದಿನದಲ್ಲಿ ಬೆಳಕಿರದು, ಜ್ಯೋತಿಗಳು ಅಡಗಿಹೋಗುವವು, ಇಂಥಾ ದಿನವು ಒಂದೇ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು