Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 3:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಗೋ ಆ ದಿನಗಳಲ್ಲಿಯೂ ಆ ಸಮಯದಲ್ಲಿಯೂ, ನಾನು ಯೆಹೂದದ ಮತ್ತು ಯೆರೂಸಲೇಮಿನ ಸಂಪತ್ತನ್ನು ಪುನಃಸ್ಥಾಪಿಸುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರಸ್ವಾಮಿಯ ನುಡಿಯಿದು: “ಆ ದಿನಗಳಲ್ಲಿ ಜುದೇಯ ಹಾಗೂ ಜೆರುಸಲೇಮಿನ ಸಿರಿಸಂಪತ್ತನ್ನು ಮರಳಿ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಗೋ, ಆ ದಿನಗಳಲ್ಲಿ, ನಾನು ಯೆಹೂದದ ಮತ್ತು ಯೆರೂಸಲೇವಿುನ ದುರವಸ್ಥೆಯನ್ನು ತಪ್ಪಿಸುವ ಕಾಲದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಆ ಸಮಯದಲ್ಲಿ ನಾನು ಯೆಹೂದ ಮತ್ತು ಜೆರುಸಲೇಮನ್ನು ಸೆರೆಯಿಂದ ಹಿಂದಕ್ಕೆ ತರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಆ ದಿವಸಗಳಲ್ಲಿಯೂ, ಆ ಸಮಯದಲ್ಲಿಯೂ ನಾನು ಯೆಹೂದ ಮತ್ತು ಯೆರೂಸಲೇಮಿನ ಸಿರಿಸಂಪತ್ತನ್ನು ಪುನಃ ಸ್ಥಾಪಿಸುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 3:1
23 ತಿಳಿವುಗಳ ಹೋಲಿಕೆ  

ಇಗೋ, ನಾನು ನನ್ನ ಜನರಾದ ಇಸ್ರಾಯೇಲರನ್ನು ಮತ್ತು ಯೆಹೂದ್ಯರನ್ನು ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪೂರ್ವಿಕರಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ” ಎಂಬುದೇ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಅನುಕಂಪವುಳ್ಳವನಾಗಿ ಯಾಕೋಬ್ಯರ ದುರಾವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆ ತೋರಿಸುವೆನು.


ನಾನು ನನ್ನ ಜನರಾದ ಇಸ್ರಾಯೇಲರ ದುರಾವಸ್ಥೆಯನ್ನು ತಪ್ಪಿಸುವೆನು. ಅವರು ಹಾಳು ಬಿದ್ದ ಪಟ್ಟಣಗಳನ್ನು ಪುನಃ ಕಟ್ಟಿ ಅವುಗಳಲ್ಲಿ ವಾಸಿಸುವರು ಮತ್ತು ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು ಅವುಗಳ ದ್ರಾಕ್ಷಾರಸವನ್ನು ಕುಡಿಯುವರು, ತೋಟಗಳನ್ನು ಮಾಡಿಕೊಂಡು ಅವುಗಳ ಫಲಗಳನ್ನು ತಿನ್ನುವರು.


ನಾನು ನಿಮಗೆ ದೊರೆಯುವೆನು, ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಾನು ನಿಮ್ಮನ್ನು ಅಟ್ಟಿಬಿಟ್ಟಿದ್ದ ಸಮಸ್ತ ದೇಶಗಳಿಂದಲೂ, ಸಕಲಜನಾಂಗಗಳ ಮಧ್ಯದಿಂದಲೂ ಒಟ್ಟುಗೂಡಿಸಿ ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ತಿರುಗಿ ಬರಮಾಡುವೆನು, ಇದು ಯೆಹೋವನ ನುಡಿ” ಎಂಬುದೇ.


ಯೆಹೋವನೇ, ನಿನ್ನ ದೇಶವನ್ನು ಕಟಾಕ್ಷಿಸಿದ್ದಿ; ಯಾಕೋಬ್ಯರನ್ನು ಸೆರೆಯಿಂದ ಬಿಡಿಸಿ ಬರಮಾಡಿದ್ದಿ.


ನಿಮ್ಮ ದೇವರಾದ ಯೆಹೋವನು ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ, ನಿಮ್ಮನ್ನು ಕನಿಕರಿಸಿ, ತಾನು ನಿಮ್ಮನ್ನು ಚದರಿಸಿರುವ ಎಲ್ಲಾ ದೇಶಗಳಿಂದ ಪುನಃ ಕೂಡಿಸುವನು.


ಯೆಹೋವನು ಹೀಗೆನ್ನುತ್ತಾನೆ, “ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ, ಅದರ ನಿವಾಸಗಳನ್ನು ಕರುಣಿಸುವೆನು. ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವುದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವುದು.


‘ಇಸ್ರಾಯೇಲರನ್ನು ಬಡಗಣ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಉದ್ಧರಿಸಿದ ಯೆಹೋವನ ಜೀವದಾಣೆ’ ಎಂದು ಪ್ರಮಾಣಮಾಡುವರು; ನಾನು ಅವರ ಪೂರ್ವಿಕರಿಗೆ ದಯಪಾಲಿಸಿದ ದೇಶಕ್ಕೆ ಅವರನ್ನು ಹಿಂದಿರುಗಿಸುವೆನಷ್ಟೆ” ಎಂದು ಯೆಹೋವನು ಘೋಷಿಸುತ್ತಾನೆ.


ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬೇಗನೆ ಬರಲಿ. ಯೆಹೋವನು ತನ್ನ ಜನರನ್ನು ದುರವಸ್ಥೆಯಿಂದ ತಪ್ಪಿಸಿದಾಗ, ಆತನ ಪ್ರಜೆಗಳಾಗಿರುವ ಯಾಕೋಬವಂಶದವರು ಉಲ್ಲಾಸಗೊಳ್ಳುವರು, ಇಸ್ರಾಯೇಲರು ಹರ್ಷಿಸುವರು.


“ಸೊದೋಮ್ ಮತ್ತು ಆಕೆಯ ಕುಮಾರ್ತೆಯರು, ಸಮಾರ್ಯ ಮತ್ತು ಆಕೆಯ ಕುಮಾರ್ತೆಯರು, ಇವರ ದುರಾವಸ್ಥೆಯನ್ನು ನಾನು ತಪ್ಪಿಸುವೆನು, ಅದರೊಂದಿಗೆ ನಿನ್ನ ದುರಾವಸ್ಥೆಯನ್ನೂ ತಪ್ಪಿಸುವೆನು.


ಇದಲ್ಲದೆ ಆ ದಿನಗಳಲ್ಲಿ ದಾಸದಾಸಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು.


“ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ದೇವದೂತ ಮೀಕಾಯೇಲನು ಆ ಕಾಲದಲ್ಲಿ ಏಳುವನು. ಮೊಟ್ಟಮೊದಲು ಜನಾಂಗವು ಉಂಟಾದ ದಿನದಿಂದ ಇಂದಿನವರೆಗೂ ಸಂಭವಿಸದಂಥ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು.


ಅದಕ್ಕೆ ಮೋಶೆ, “ನನ್ನ ನಿಮಿತ್ತವಾಗಿ ನೀನು ಹೊಟ್ಟೆಕಿಚ್ಚುಪಡುತ್ತೀಯೋ? ಯೆಹೋವನ ಅನುಗ್ರಹದಿಂದ ಆತನ ಜನರೆಲ್ಲರೂ ಆತ್ಮವನ್ನು ಹೊಂದಿದವರೂ, ಪ್ರವಾದಿಸುವವರೂ ಆದರೆ ಎಷ್ಟೋ ಒಳ್ಳೆಯದು” ಎಂದನು.


ಯೆಹೋವನು ಅವರಿಗೆ, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಪ್ರಕಟಿಸುವೆನು, ಮತ್ತು ಕನಸಿನಲ್ಲಿ ಅವನ ಸಂಗಡ ಮಾತನಾಡುವೆನು.


ನನ್ನ ಗದರಿಕೆಗೆ ಲಕ್ಷ್ಯಕೊಡಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ, ನನ್ನ ಮಾತುಗಳನ್ನು ನಿಮಗೆ ತಿಳಿಯಪಡಿಸುವೆನು.


ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು, ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು