Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಯೇಲ 3:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿಮ್ಮ ನೇಗಿಲುಗಳನ್ನು ಕುಲುಮೆಗೆ ಹಾಕಿ, ಕತ್ತಿಗಳನ್ನಾಗಿ ಮಾಡಿರಿ. ಕುಡುಗೋಲುಗಳನ್ನು ಭರ್ಜಿಗಳನ್ನಾಗಿ ಮಾರ್ಪಡಿಸಿರಿ. ಬಲಹೀನನು, “ನಾನು ಶೂರನು” ಎಂದು ಹೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಿಮ್ಮ ನೇಗಿಲುಗಳನ್ನು ಕುಲುಮೆಗೆ ಹಾಕಿ ಕತ್ತಿಗಳನ್ನಾಗಿ ಮಾಡಿರಿ; ಕುಡುಗೋಲುಗಳನ್ನು ಭರ್ಜಿಗಳನ್ನಾಗಿ ಮಾರ್ಪಡಿಸಿರಿ; ಬಲಹೀನನು ಸಹ ಬಲಾಢ್ಯನಂತೆ ಯುದ್ಧಕ್ಕೆ ನಿಂತುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿಮ್ಮ ಗುಳಗಳನ್ನು ಕುಲುಮೆಗೆ ಹಾಕಿ ಕತ್ತಿಗಳನ್ನಾಗಿಯೂ ಕುಡುಗೋಲುಗಳನ್ನು ಬರ್ಜಿಗಳನ್ನಾಗಿಯೂ ಮಾಡಿರಿ; ದುರ್ಬಲನೂ ಶೂರನೆಂದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಿಮ್ಮ ನೇಗಿಲ ಗುಳಗಳನ್ನು ಕತ್ತಿಯನ್ನಾಗಿ ಮಾಡಿರಿ. ಕುಡುಗೋಲುಗಳಿಂದ ಬರ್ಜಿಯನ್ನು ಮಾಡಿರಿ. ನಿಮ್ಮ ಬಲಹೀನನಾದ ಸೈನಿಕನು, “ನಾನು ಬಲಶಾಲಿ” ಅನ್ನಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿಮ್ಮ ನೇಗಿಲುಗಳ ಗುಳಗಳನ್ನು ಖಡ್ಗಗಳನ್ನಾಗಿಯೂ ನಿಮ್ಮ ಕುಡುಗೋಲುಗಳನ್ನು ಈಟಿಗಳನ್ನಾಗಿಯೂ ಬಡಿಯಿರಿ ಬಲಹೀನನು ಸಹ ನಾನು ಶಕ್ತಿವಂತನು ಎಂದು ಹೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಯೇಲ 3:10
7 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ಯೆಹೋವನು ಯೆರೂಸಲೇಮಿನವರನ್ನು ಸುತ್ತಲು ಕಾಪಾಡುವನು; ಅವರೊಳಗೆ ಈಗಿನ ಕುಂಟನು ಆ ದಿನದಲ್ಲಿ ದಾವೀದನಂತಿರುವನು; ದಾವೀದ ವಂಶವು ದೇವರಂತೆ, ಯೆಹೋವನ ದೂತನ ಹಾಗೆ ಅವರಿಗೆ ಮುಂದಾಳಾಗುವುದು.


ನೀನೇ ಹೋಗಿ ಆ ಕಾರ್ಯವನ್ನು ನಿರ್ವಹಿಸು; ಧೈರ್ಯದಿಂದ ಯುದ್ಧಮಾಡು. ಹಾಗೆ ಮಾಡದಿದ್ದರೆ ದೇವರು ಶತ್ರುಗಳಿಂದ ನೀನು ಅಪಜಯಹೊಂದುವಂತೆ ಮಾಡುವನು, ಜಯಾ, ಅಪಜಯಗಳನ್ನು ಉಂಟುಮಾಡುವುದಕ್ಕೆ ಆತನು ಶಕ್ತನಾಗಿರುತ್ತಾನಲ್ಲವೆ?” ಎಂದನು.


ಆತನು ಬಹು ರಾಷ್ಟ್ರದವರ ವ್ಯಾಜ್ಯಗಳನ್ನು ವಿಚಾರಿಸುವನು, ಪ್ರಬಲ ಜನಾಂಗಗಳಿಗೆ ನ್ಯಾಯತೀರಿಸುವನು. ಅವರೋ ತಮ್ಮ ಕತ್ತಿಗಳನ್ನು ಕುಲುಮೆಗೆ ಹಾಕಿ ಗುಳಗಳನ್ನಾಗಿಯೂ, ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗವು ಜನಾಂಗಕ್ಕೆ ವಿರುದ್ಧವಾಗಿ ಕತ್ತಿಯನ್ನೆತ್ತದು. ಇನ್ನು ಯುದ್ಧಾಭ್ಯಾಸವು ನಡೆಯುವುದೇ ಇಲ್ಲ.


ಆತನು ದೇಶದೇಶಗಳ ವ್ಯಾಜ್ಯವನ್ನು ವಿಚಾರಿಸುವನು, ಬಹು ರಾಷ್ಟ್ರದವರಿಗೆ ನ್ಯಾಯತೀರಿಸುವನು; ಅವರೋ ತಮ್ಮ ಆಯುಧಗಳನ್ನು ಕುಲುಮೆಗೆ ಹಾಕಿ, ಕತ್ತಿಗಳನ್ನು ನೇಗಿಲ ಗುಳಗಳನ್ನಾಗಿಯೂ, ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರುದ್ಧವಾಗಿ ಜನಾಂಗವು ಕತ್ತಿಯನ್ನೆತ್ತದು. ಇನ್ನು ಮೇಲೆ ಯುದ್ಧಾಭ್ಯಾಸವು ನಡೆಯುವುದೇ ಇಲ್ಲ.


ಅದಕ್ಕೆ ಆತನು, “ಈಗಲಾದರೋ ಹಣವಿದ್ದವನು ಅದನ್ನು ತೆಗೆದುಕೊಳ್ಳಲಿ, ಕೈಚೀಲವಿರುವವನು ಅದನ್ನು ತೆಗೆದುಕೊಳ್ಳಲಿ, ಮತ್ತು ಕತ್ತಿಯಿಲ್ಲದವನು ತನ್ನ ಮೇಲಂಗಿಯನ್ನು ಮಾರಿ ಒಂದು ಕತ್ತಿಯನ್ನು ಕೊಂಡುಕೊಳ್ಳಲಿ.


ಯೆಹೋವನು ಬಾಬೆಲನ್ನು ಹಾಳುಮಾಡಬೇಕೆಂದು ಉದ್ದೇಶಿಸಿ, ಮೇದ್ಯರ ಅರಸರು ಅದನ್ನು ನಾಶಮಾಡುವಂತೆ ಅವರ ಮನಸ್ಸನ್ನು ಪ್ರೇರೇಪಿಸಿದ್ದಾನೆ. ಆ ನಾಶನವು ಯೆಹೋವನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತಿಕಾರವೇ; ಮೇದ್ಯರೇ, ಬಾಣಗಳನ್ನು ಮಸೆಯಿರಿ, ಗುರಾಣಿಗಳನ್ನು ಸನ್ನದ್ಧ ಮಾಡಿರಿ!


ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ, “ನಿನ್ನ ರೋಗವು ಬಿಡುಗಡೆಯಾಯಿತು” ಎಂದು ಹೇಳಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು