Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 1:50 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಅದಕ್ಕೆ ಯೇಸು “ಆ ಅಂಜೂರದ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ನಾನು ನಿನಗೆ ಹೇಳಿದ ಮಾತ್ರಕ್ಕೆ ನಂಬುತ್ತೀಯೋ? ನೀನು ಇವುಗಳಿಗಿಂತಲೂ ಹೆಚ್ಚಿನ ಮಹತ್ಕಾರ್ಯಗಳನ್ನು ನೋಡುವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ಆಗ ಯೇಸು, “ಅಂಜೂರದ ಮರದಡಿಯಲ್ಲಿ ನಿನ್ನನ್ನು ಕಂಡೆ ಎಂದು ನಾನು ಹೇಳಿದ ಮಾತ್ರಕ್ಕೆ ಇಷ್ಟೊಂದು ವಿಶ್ವಾಸವೆ? ಇದಕ್ಕೂ ಮಿಗಿಲಾದವುಗಳನ್ನು ನೀನು ಕಾಣುವೆ,” ಎಂದು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಅದಕ್ಕೆ ಯೇಸು - ಆ ಅಂಜೂರದ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ನಾನು ನಿನಗೆ ಹೇಳಿದ ಮಾತ್ರದಿಂದ ನಂಬುತ್ತೀಯೋ? ಇದಕ್ಕಿಂತ ಹೆಚ್ಚಿನ ಕಾರ್ಯಗಳನ್ನು ನೋಡುವಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಯೇಸು ನತಾನಿಯೇಲನಿಗೆ, “ನಿನ್ನನ್ನು ಅಂಜೂರದ ಮರದ ಕೆಳಗೆ ನೋಡಿದೆನೆಂದು ನಾನು ನಿನಗೆ ಹೇಳಿದ್ದರಿಂದ ನೀನು ನನ್ನನ್ನು ನಂಬುವೆ. ಆದರೆ ಅದಕ್ಕಿಂತಲೂ ಹೆಚ್ಚು ದೊಡ್ಡ ಕಾರ್ಯಗಳನ್ನು ನೀನು ನೋಡುವೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಯೇಸು ಅವನಿಗೆ, “ನಿನ್ನನ್ನು ಅಂಜೂರದ ಮರದ ಕೆಳಗೆ ಕಂಡಿದ್ದೆ ಎಂದು ನಾನು ಹೇಳಿದ್ದಕ್ಕೆ ನೀನು ನಂಬುತ್ತೀಯೋ? ನೀನು ಇವುಗಳಿಗಿಂತಲೂ ಮಹಾಕಾರ್ಯಗಳನ್ನು ಕಾಣುವೆ,” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

50 ಜೆಜುನ್ ತೆಕಾ, “ಅಂಜುರಾಚ್ಯಾ ಝಾಡಾ ಬುಡಿ ಹೊತ್ತ್ಯಾ ತನ್ನಾ ಮಿಯಾ ತುಕಾ ಬಗಟ್ಲೊ ಮನುನ್ ಸಾಂಗಟಲ್ಲ್ಯಾಸಾಟಿ ತಿಯಾ ಮಾಕಾ ವಿಶ್ವಾಸ್ ಕರ್‍ತೆ ಕಾಯ್? ಹೆಚ್ಯಾನ್ಕಿಬಿ ಮೊಟಿ ಕಾಮಾ ತಿಯಾ ಬಗ್ತೆಯ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 1:50
9 ತಿಳಿವುಗಳ ಹೋಲಿಕೆ  

ಯೇಸು ಆಕೆಗೆ, “ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವಿ ಎಂದು ನಾನು ನಿನಗೆ ಹೇಳಲಿಲ್ಲವೇ?” ಎಂದು ಉತ್ತರ ಕೊಟ್ಟನು


ಯೇಸು ಆತನಿಗೆ, “ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ, ನೋಡದೆ ನಂಬಿದವರು ಧನ್ಯರು” ಎಂದು ಹೇಳಿದನು.


ಕರ್ತನು ನಿನಗೆ ಹೇಳಿದ ಮಾತುಗಳು ನೆರವೇರುವವು ಅಂದಳು. ಇದನ್ನು ನಂಬಿದವಳಾದ ನೀನು ಧನ್ಯಳು.”


ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲ್ಪಡುವುದು, ಅವರಿಗೆ ಇನ್ನೂ ಹೆಚ್ಚಾಗುವುದು; ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು.


ಯೇಸು ಈ ಮಾತನ್ನು ಕೇಳಿ ಅವನ ವಿಷಯದಲ್ಲಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿರುವ ಗುಂಪನ್ನು ನೋಡಿ, “ನಾನು ಇಂಥ ದೊಡ್ಡ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲೂ ಕಾಣಲಿಲ್ಲವೆಂದು ನಿಮಗೆ ಹೇಳುತ್ತೇನೆ” ಅಂದನು.


ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು ಅವನಿಗೆ ಇನ್ನೂ ಹೆಚ್ಚು ಸಮೃದ್ಧಿಯಾಗುವುದು ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು.


ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳು ಮಾತ್ರ ಇರುವುದನ್ನು ಕಂಡು ಅದಕ್ಕೆ, “ಇನ್ನು ಮೇಲೆ ನಿನ್ನಲ್ಲಿ ಎಂದೆಂದಿಗೂ ಫಲವು ಫಲಿಸದೆ ಹೋಗಲಿ” ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು.


ಅದಕ್ಕೆ ನತಾನಯೇಲನು, “ಗುರುವೇ, ನೀನು ದೇವಕುಮಾರನು! ನೀನೇ ಇಸ್ರಾಯೇಲಿನ ಅರಸನು” ಎಂದನು.


ಯೇಸು “ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ. ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆ ದೇವದೂತರು ಏರುತ್ತಾ ಇಳಿಯುತ್ತಾ ಇರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು