Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವರಲ್ಲಿ ಅನೇಕರು ಆತನಿಗೆ, “ದೆವ್ವ ಹಿಡಿದಿದೆ, ಹುಚ್ಚನಾಗಿದ್ದಾನೆ, ನೀವು ಏಕೆ ಆತನ ಮಾತುಗಳನ್ನು ಕೇಳುತ್ತೀರಿ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅವರಲ್ಲಿ ಹಲವರು, “ಅವನಿಗೆ ದೆವ್ವಹಿಡಿದಿದೆ: ಅವನೊಬ್ಬ ಹುಚ್ಚ, ಅವನಿಗೇಕೆ ಕಿವಿಗೊಡುತ್ತೀರಿ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವರಲ್ಲಿ ಅನೇಕರು - ಅವನಿಗೆ ದೆವ್ವಹಿಡಿದದೆ, ಹುಚ್ಚುಹಿಡಿದದೆ, ಯಾಕೆ ಅವನ ಮಾತು ಕೇಳುತ್ತೀರಿ? ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅವರಲ್ಲಿ ಅನೇಕರು, “ಅವನೊಳಗೆ ದೆವ್ವವು ಸೇರಿಕೊಂಡು ಅವನನ್ನು ಹುಚ್ಚನನ್ನಾಗಿ ಮಾಡಿದೆ. ಅವನಿಗೆ ಏಕೆ ಕಿವಿಗೊಡುತ್ತೀರಿ?” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವರಲ್ಲಿ ಅನೇಕರು, “ಆತನಿಗೆ ದೆವ್ವ ಹಿಡಿದಿದೆ. ಆತನು ಹುಚ್ಚನಾಗಿದ್ದಾನೆ, ನೀವು ಏಕೆ ಆತನಿಗೆ ಕಿವಿಗೊಡುತ್ತೀರಿ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತೆಂಚ್ಯಾತ್ಲೆ ಲೈ ಲೊಕಾ “ತೆಕಾ ಗಿರೊಲಾಗ್ಲಾ! ತೊ ಪಿಸೊ ಹೊಲಾ ತೆಚ್ಯೆ ಅಮಿ ಕಶ್ಯಾಕ್ ಆಯ್ಕುಚೆ” ಮನುಲಾಗಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:20
15 ತಿಳಿವುಗಳ ಹೋಲಿಕೆ  

ಅದಕ್ಕೆ ಆ ಜನರು, “ನಿನಗೆ ದೆವ್ವ ಹಿಡಿದಿದೆ. ನಿನ್ನನ್ನು ಕೊಲ್ಲುವುದಕ್ಕೆ ಯಾರು ಹುಡುಕುತ್ತಿದ್ದಾರೆ?” ಎಂದರು.


ಇದನ್ನು ಕೇಳಿ ಆತನ ಬಂಧುಗಳು “ಅವನಿಗೆ ಹುಚ್ಚುಹಿಡಿದಿದೆ” ಎಂದು ಹೇಳಿ ಆತನನ್ನು ಹಿಡಿಯುವುದಕ್ಕೆ ಹೊರಟರು.


ಅದಕ್ಕೆ ಯೆಹೂದ್ಯರು “ನೀನು ದೆವ್ವಹಿಡಿದವನೆಂದು ಈಗ ನಮಗೆ ತಿಳಿಯಿತು. ಅಬ್ರಹಾಮನು ಸತ್ತನು ಮತ್ತು ಪ್ರವಾದಿಗಳೂ ಸತ್ತರು, ಆದರೆ ನೀನು ‘ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ’ ಎಂದು ಹೇಳುತ್ತೀಯಲ್ಲಾ?


ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ, ಫೆಸ್ತನು ಮಹಾಶಬ್ದದಿಂದ; “ಪೌಲನೇ, ನಿನಗೆ ಹುಚ್ಚು ಹಿಡಿದಿದೆ; ಅಧಿಕ ಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿಸಿದೆ,” ಎಂದು ಹೇಳಿದನು.


ಗುರುವಿನಂತೆ ಆಗುವುದು ಶಿಷ್ಯನಿಗೆ ಸಾಕು, ಒಡೆಯನಂತೆ ಆಗುವುದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆ ಬೆಲ್ಜೆಬೂಲನೆಂದು ಹೆಸರಿಟ್ಟು ಕರೆದ ಮೇಲೆ ಆತನ ಮನೆಯವರನ್ನು ಇನ್ನೆಷ್ಟು ಅವಹೇಳನವಾಗಿ ಕರೆದಾರು?


ಆದರೆ ಫರಿಸಾಯರು, “ಇವನು ದೆವ್ವಗಳ ಒಡೆಯನ ಸಹಾಯದಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ” ಎಂದು ಹೇಳಿದರು.


ಹಿಂಸೆಯ ನ್ಯಾಯದಿಂದ ಕೊಲ್ಲಲ್ಪಟ್ಟನು, ಆಹಾ, ಇವನು ಜೀವಲೋಕದಿಂದ ತೆಗೆದುಹಾಕಲ್ಪಟ್ಟಿದ್ದಾನೆ. ನಮ್ಮ ಜನಗಳ ದ್ರೋಹಗಳ ದೆಸೆಯಿಂದ ಈ ಪೆಟ್ಟು ಅವನ ಮೇಲೆ ಬಿತ್ತಲ್ಲಾ ಎಂದು ಅವನ ಕಾಲದವರಲ್ಲಿ ಯಾರು ಮನಮುಟ್ಟಿ ಮರುಗಿದರು?


“ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇಮಿಸಿ, ಯಾರು ತನ್ನನ್ನು ತಾನೇ ಪ್ರವಾದಿಯಂತೆ ನಟಿಸುತ್ತಾನೋ ಅವನನ್ನು ಕೋಳಕ್ಕೆ ಹಾಕಿ, ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ತನ್ನ ಆಲಯದಲ್ಲಿ ನಿನಗೆ ವಹಿಸಿದ್ದಾನಲ್ಲಾ.


ಯೋಹಾನನು ಬಂದನು, ಅವನು ಅನ್ನ ಪಾನಗಳನ್ನು ತೆಗೆದುಕೊಳ್ಳದವನಾಗಿದುದರಿಂದ, ಅವರು ಅವನಿಗೆ, ‘ದೆವ್ವ ಹಿಡಿದಿದೆ’ ಅನ್ನುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು