Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಯೆಹೂದ್ಯರು, “ನಾವು ನಿನ್ನ ಮೇಲೆ ಕಲ್ಲೆಸೆಯುವುದು ಒಳ್ಳೆಯ ಕಾರ್ಯಗಳಿಗಾಗಿ ಅಲ್ಲ, ಆದರೆ ದೇವದೂಷಣೆಗಾಗಿಯೂ ಮತ್ತು ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರನ್ನಾಗಿ ಮಾಡಿಕೊಳ್ಳುವುದಕ್ಕಾಗಿಯೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ” ಎಂದು ಉತ್ತರ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅದಕ್ಕೆ ಯೆಹೂದ್ಯರು, “ನಿನ್ನ ಮೇಲೆ ಕಲ್ಲೆಸೆಯುವುದು ಸತ್ಕಾರ್ಯಕ್ಕಾಗಿ ಅಲ್ಲ, ದೇವದೂಷಣೆಗಾಗಿ. ನೀನು ಮನುಷ್ಯ ಮಾತ್ರನು; ಆದರೂ ನಿನ್ನನ್ನೇ ದೇವರನ್ನಾಗಿ ಮಾಡಿಕೊಳ್ಳುತ್ತಿದ್ದೀಯೇ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಯೆಹೂದ್ಯರು - ನಾವು ನಿನ್ನ ಮೇಲೆ ಕಲ್ಲೆಸೆಯುವದು ಒಳ್ಳೇ ಕಾರ್ಯದ ದೆಸೆಯಿಂದಲ್ಲ, ದೇವದೂಷಣೆಯ ದೆಸೆಯಿಂದಲೂ ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರನ್ನಾಗಿ ಮಾಡಿಕೊಳ್ಳುವದರ ದೆಸೆಯಿಂದಲೂ ನಿನ್ನ ಮೇಲೆ ಕಲ್ಲೆಸೆಯುತ್ತೇವೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಯೆಹೂದ್ಯರು, “ನಾವು ನಿನ್ನನ್ನು ಕೊಲ್ಲುತ್ತಿರುವುದು ನೀನು ಮಾಡಿದ ಯಾವುದೇ ಒಳ್ಳೆಯ ಕಾರ್ಯದ ನಿಮಿತ್ತದಿಂದಲ್ಲ. ನೀನು ಮಾಡುತ್ತಿರುವ ದೇವದೂಷಣೆಗಾಗಿ. ನೀನು ಕೇವಲ ಒಬ್ಬ ಮನುಷ್ಯ. ನೀನು ನಿನ್ನನ್ನೇ ದೇವರೆಂದು ಹೇಳಿಕೊಳ್ಳುತ್ತಿರುವೆ! ಆದಕಾರಣ ಕಲ್ಲುಗಳಿಂದ ನಿನ್ನನ್ನು ಕೊಲ್ಲಬೇಕೆಂದಿದ್ದೇವೆ!” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅದಕ್ಕೆ ಯೆಹೂದ್ಯರು ಯೇಸುವಿಗೆ, “ಒಳ್ಳೆಯ ಕಾರ್ಯಗಳಿಗಾಗಿಯಲ್ಲ. ನೀನು ಮನುಷ್ಯನಾಗಿದ್ದು ನಿನ್ನನ್ನೇ ದೇವರನ್ನಾಗಿ ಮಾಡಿಕೊಂಡದ್ದಕ್ಕೂ ದೇವದೂಷಣೆ ಮಾಡುತ್ತಿರುವದಕ್ಕೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ತ್ಯಾ ಲೊಕಾನಿ ತೆಕಾ, “ಅಮಿ ತಿಯಾ ಕರಲ್ಲ್ಯಾ ಖಲ್ಯಾಬಿ ಬರ್‍ಯಾ ಕಾಮಾಸಾಟ್ನಿ ತುಕಾ ಗುಂಡ್ಯಾನಿ ಮಾರುಕ್ ಉಟುಕ್ನಾವ್! ತಿಯಾ ಕರ್‍ತಲ್ಯಾ ನಿಂದ್ಯಾಸಾಟ್ನಿ ಅಮಿ ಮಾರುಕ್ ಉಟ್ಲಾವ್! ತಿಯಾ ಎಕ್ ಮಾನುಸ್, ಖರೆ ತಿಯಾ ತುಕಾಚ್ ದೆವ್ ಕರುಕ್ ಬಗುಲಾಲೆಯ್” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:33
11 ತಿಳಿವುಗಳ ಹೋಲಿಕೆ  

ಯೇಸು ಈ ಮಾತನ್ನು ಹೇಳಿದ್ದರಿಂದ, ಆತನು ಸಬ್ಬತ್ ದಿನವನ್ನು ಅಲಕ್ಷ್ಯಮಾಡಿದ್ದಲ್ಲದೇ, ದೇವರನ್ನು ತನ್ನ ಸ್ವಂತ ತಂದೆ ಎಂದು ಹೇಳಿ ತನ್ನನ್ನು ದೇವರಿಗೆ ಸರಿಸಮಾನ ಮಾಡಿಕೊಂಡನೆಂದು ಯೆಹೂದ್ಯರು ಆತನನ್ನು ಕೊಲ್ಲುವುದಕ್ಕೆ ಇನ್ನಷ್ಟು ಪ್ರಯತ್ನಪಟ್ಟರು.


ಯೆಹೋವನ ಹೆಸರನ್ನು ನಿಂದಿಸಿದವನಿಗೆ ಮರಣ ಶಿಕ್ಷೆಯಾಗಬೇಕು; ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅನ್ಯದೇಶಸ್ಥನೇ ಆಗಿರಲಿ ಅಥವಾ ಸ್ವದೇಶಸ್ಥನೇ ಆಗಿರಲಿ ಯೆಹೋವನ ಹೆಸರನ್ನು ನಿಂದಿಸಿದರೆ ಅವನಿಗೆ ಮರಣಶಿಕ್ಷೆಯಾಗಬೇಕು.


ನಾನೂ ಮತ್ತು ನನ್ನ ತಂದೆಯೂ ಒಂದಾಗಿದ್ದೇವೆ” ಎಂದನು.


ಆತನು ದೇವಸ್ವರೂಪನಾಗಿದ್ದರೂ, ದೇವರಿಗೆ ಸರಿಸಮಾನನಾಗಿರುವನೆಂಬ ಅಮೂಲ್ಯ ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ,


ಪ್ರತಿ ಮನುಷ್ಯನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ. ಯಾಕೆಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವು ದೊರೆತಿರುವುದಿಲ್ಲ. ಇರುವ ಅಧಿಕಾರಿಗಳಾದರೋ ದೇವರಿಂದ ನೇಮಿಸಲ್ಪಟ್ಟವರು.


“ನೀವು ದೇವರುಗಳು, ಎಲ್ಲರೂ ಪರಾತ್ಪರನಾದ ದೇವರ ಮಕ್ಕಳು,


ಅವನು ದೇವರನ್ನೂ ಮತ್ತು ಅರಸನನ್ನೂ ಶಪಿಸಿದನು ಎಂಬುದಾಗಿ ಇಬ್ಬರ ಸಾಕ್ಷಿ ಹೇಳಿಸಿ, ಅವನನ್ನು ಹೊರಗೆ ಒಯ್ದು ಕಲ್ಲೆಸೆದು ಕೊಲ್ಲಿರಿ” ಎಂದು ಬರೆದಿದ್ದಳು.


“ದೂಷಿಸಿದ ಆ ಮನುಷ್ಯನನ್ನು ಪಾಳೆಯದ ಹೊರಗೆ ಒಯ್ಯಬೇಕು. ಅವನ ದೂಷಣೆಯ ಮಾತುಗಳನ್ನು ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು.


ಯೆಹೂದ್ಯರು ಆತನನ್ನು ಸುತ್ತುವರೆದು ಆತನಿಗೆ, “ಇನ್ನು ಎಷ್ಟು ಕಾಲ ನಮ್ಮನ್ನು ಸಂದಿಗ್ಧದಲ್ಲಿ ಇಡುತ್ತಿ? ನೀನು ಕ್ರಿಸ್ತನಾಗಿದ್ದರೆ ಅದನ್ನು ನಮಗೆ ಸ್ಪಷ್ಟವಾಗಿ ಹೇಳು” ಎಂದರು.


ಯೇಸು ಅವರಿಗೆ, “ನನ್ನ ತಂದೆಯಿಂದ ಅನೇಕ ಒಳ್ಳೆಯ ಕ್ರಿಯೆಗಳನ್ನು ನಿಮಗೆ ತೋರಿಸಿದ್ದೇನೆ. ಅವುಗಳಲ್ಲಿ ಯಾವ ಕ್ರಿಯೆಗಳ ನಿಮಿತ್ತ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದು ಕೇಳಿದ್ದಕ್ಕೆ,


ಯೆಹೂದ್ಯರು ಅವನಿಗೆ, “ನಮಗೆ ಒಂದು ನೇಮ ಉಂಟು. ಆ ನೇಮದ ಪ್ರಕಾರ ಆತನು ಸಾಯಲೇಬೇಕು. ಏಕೆಂದರೆ ಆತನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು