Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಾನು ಅಲ್ಲಿ ಇಲ್ಲದೆ ಹೋದದ್ದು ಒಳ್ಳೆಯದೇ, ನಿಮಗೆ ನನ್ನಲ್ಲಿ ನಂಬಿಕೆ ಬರುವಂತೆ ಇದೆಲ್ಲಾ ನಡೆದಿದೆ. ಬನ್ನಿ, ನಾವು ಅವನ ಬಳಿಗೆ ಹೋಗೋಣ” ಎಂದು ಹೇಳಿದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಾನು ಅಲ್ಲಿ ಇಲ್ಲದೆಹೋದದ್ದು ನಿಮಗೆ ಒಳ್ಳೆಯದೇ ಆಯಿತು. ನಿಮಗೆ ನನ್ನಲ್ಲಿ ವಿಶ್ವಾಸ ಮೂಡುವಂತೆ ಇದೆಲ್ಲಾ ನಡೆದಿದೆ. ಬನ್ನಿ, ಅವನ ಬಳಿಗೆ ಹೋಗೋಣ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮತ್ತು ನಾನು ಅಲ್ಲಿ ಇಲ್ಲದೆ ಇದ್ದದ್ದಕ್ಕೆ ನಿಮ್ಮ ನಿವಿುತ್ತವಾಗಿ ಸಂತೋಷಪಡುತ್ತೇನೆ, ಯಾಕಂದರೆ ಅದರಿಂದ ನೀವು ನಂಬುವದಕ್ಕೆ ಮಾರ್ಗವಾಯಿತು; ಆದರೆ ಅವನ ಬಳಿಗೆ ಹೋಗೋಣ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ನಾನು ಅಲ್ಲಿ ಇಲ್ಲದಿದ್ದ ಕಾರಣ ಸಂತೋಷಿಸುತ್ತೇನೆ. ನಿಮ್ಮ ವಿಷಯದಲ್ಲಿಯೂ ನಾನು ಸಂತೋಷಪಡುತ್ತೇನೆ. ಏಕೆಂದರೆ, ಆಗ ನೀವು ನನ್ನಲ್ಲಿ ನಂಬಿಕೆ ಇಡುವಿರಿ. ಬನ್ನಿ, ಅವನ ಬಳಿಗೆ ಹೋಗೋಣ” ಎಂದು ಸ್ವಷ್ಟವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ನಾನು ಅಲ್ಲಿ ಇಲ್ಲದೆ ಹೋದದ್ದು ನಿಮ್ಮ ನಿಮಿತ್ತವಾಗಿ ಸಂತೋಷಪಡುತ್ತೇನೆ, ಯಾಕೆಂದರೆ ನಿಮಗೆ ನನ್ನಲ್ಲಿ ನಂಬಿಕೆ ಬರುವಂತೆ ಇದೆಲ್ಲಾ ನಡೆದಿದೆ. ಆದರೆ ಅವನ ಬಳಿಗೆ ಹೋಗೋಣ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಖರೆ ತುಮ್ಕಾ ಲಾಗುನ್ ಮಿಯಾ ತ್ಯೆಚ್ಯಾ ವಾಂಗ್ಡಾ ನಸಲ್ಲ್ಯಾಸಾಟಿ ಮಾಕಾ ಖುಶಿ ಹೊತಾ, ಅಶೆಚ್ ತುಮಿ ವಿಶ್ವಾಸ್ ಕರ್‍ತ್ಯಾಶಿ. ಚಲಾ ಅಮಿ ಲಾಜರಾಕ್ಡೆ ಜಾಂವ್ವಾ” ಮಟ್ಲ್ಯಾನ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:15
16 ತಿಳಿವುಗಳ ಹೋಲಿಕೆ  

ಆದಕಾರಣ ದೇವರು ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆಯ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನು ತಾಳಿಕೊಳ್ಳುತ್ತೇನೆ.


ಇವರು ನಿಜವಾಗಿ ಪ್ರತಿಷ್ಠಿರಾಗಬೇಕೆಂದು, ನನ್ನನ್ನು ನಾನೇ ಇವರಿಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ.


ಯೇಸು ಅವರಿಗೆ, “ಈ ಶಬ್ದವು ನನಗಾಗಿ ಆಗಲಿಲ್ಲ, ನಿಮಗಾಗಿಯೇ ಆಯಿತು.


ಯೇಸು ಇದನ್ನು ಕೇಳಿ, “ಈ ರೋಗವು ಮರಣಕ್ಕಾಗಿ ಬಂದದ್ದಲ್ಲ; ಇದರಿಂದ ದೇವಕುಮಾರನಿಗೆ ಮಹಿಮೆ ಉಂಟಾಗುವಂತೆ ದೇವರ ಮಹಿಮೆಗೋಸ್ಕರ ಬಂದದ್ದು” ಎಂದು ಹೇಳಿದನು.


ಯೇಸು ಈ ಮೊದಲನೆಯ ಸೂಚಕ ಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ, ತನ್ನ ಮಹಿಮೆಯನ್ನು ತೋರ್ಪಡಿಸಿದನು. ಇದರಿಂದ ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು.


ಯೆಹೋವನು ಹೀಗನ್ನುತ್ತಾನೆ, “ರಸ ದೊರೆಯಬಹುದಾದ ದ್ರಾಕ್ಷಿಯ ಗೊಂಚಲನ್ನು ಒಬ್ಬನು ನೋಡಿ, ‘ಹಾಳುಮಾಡಬೇಡ, ಅದರಲ್ಲಿ ಪ್ರಯೋಜನವಿದೆ’ ಎನ್ನುವಂತೆ, ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು, ಇವರನ್ನೆಲ್ಲಾ ಹಾಳುಮಾಡಬಾರದು ಎಂದು ಅಂದುಕೊಳ್ಳುವೆನು,


ನೋಡು, ಯಾರಾದರೂ ನಿನ್ನ ಸಂಗಡ ವ್ಯಾಜ್ಯವಾಡಿದರೆ ಅದು ನನ್ನ ಅಪ್ಪಣೆಯಿಂದ ಅಲ್ಲ; ಯಾರು ನಿನ್ನ ಮೇಲೆ ವ್ಯಾಜ್ಯವಾಡುತ್ತಾರೋ ಅವರು ನಿನ್ನ ನಿಮಿತ್ತ ಕೆಡವಲ್ಪಡುವರು.


ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಟ್ಟಿರುವವರಾದ ನಿಮ್ಮಲ್ಲಿ ಆ ನಿತ್ಯಜೀವ ಉಂಟೆಂಬುದು ಗೊತ್ತಾಗುವುದಕ್ಕಾಗಿ ನಿಮಗೆ ಈ ವಿಷಯಗಳನ್ನು ಬರೆದಿದ್ದೇನೆ.


ಆ ಬಾಧೆಗಳೆಲ್ಲಾ ನಿಮ್ಮ ಹಿತಕ್ಕಾಗಿಯೇ ನಮಗೆ ಸಂಭವಿಸುತ್ತವೆ. ಅವುಗಳಲ್ಲಿ ಅಧಿಕವಾಗಿ ದೊರಕುವ ದೈವಕೃಪೆಯು ಬಹು ಜನರೊಳಗೆ ಕೃತಜ್ಞತೆಯನ್ನು ಹುಟ್ಟಿಸುವುದರಿಂದ ದೇವರ ಮಹಿಮೆಗೆ ಅಧಿಕವಾದ ಸ್ತುತಿ ಸ್ತೋತ್ರಗಳು ಉಂಟಾಗುವುದು.


ಅವರಿಗೆ ಯಾರಿಂದಲೂ ಅನ್ಯಾಯವಾಗಗೊಡಿಸಲಿಲ್ಲ. ಆತನು ಅವರ ವಿಷಯದಲ್ಲಿ ಅರಸರನ್ನೂ ಗದರಿಸಿ,


ಅವನು ಯೋಸೇಫನನ್ನು ತನ್ನ ಮನೆಯ ಮೇಲೆಯೂ, ಆಸ್ತಿಯ ಮೇಲೆಯೂ ಮೇಲ್ವಿಚಾರಕನನ್ನಾಗಿ ಇಟ್ಟಿದ್ದರಿಂದ ಯೆಹೋವನು ಯೋಸೇಫನ ನಿಮಿತ್ತವಾಗಿ ಆ ಐಗುಪ್ತನ ಮನೆಯನ್ನು ಅಭಿವೃದ್ಧಿಗೆ ತಂದನು. ಮನೆಯಲ್ಲಾಗಲಿ, ಹೊಲದಲ್ಲಾಗಲಿ ಅವನಿಗಿದ್ದ ಎಲ್ಲಾದರ ಮೇಲೆ ಯೆಹೋವನ ಆಶೀರ್ವಾದವುಂಟಾಯಿತು.


ಆ ರಾತ್ರಿ ಯೆಹೋವನು ಅವನಿಗೆ ಕಾಣಿಸಿಕೊಂಡು, “ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು; ನೀನು ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ಸೇವಕನಾದ ಅಬ್ರಹಾಮನ ನಿಮಿತ್ತ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು” ಎಂದು ಹೇಳಿದನು.


ಆಗ ಯೇಸು ಸ್ಪಷ್ಟವಾಗಿ ಅವರಿಗೆ, “ಲಾಜರನು ಸತ್ತು ಹೋಗಿದ್ದಾನೆ.


ಆಗ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಸಹ ಯೇಸುವಿನೊಂದಿಗೆ ಸಾಯುವುದಕ್ಕೆ ಹೋಗೋಣ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು