Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೇಸು ಇದನ್ನು ಕೇಳಿ, “ಈ ರೋಗವು ಮರಣಕ್ಕಾಗಿ ಬಂದದ್ದಲ್ಲ; ಇದರಿಂದ ದೇವಕುಮಾರನಿಗೆ ಮಹಿಮೆ ಉಂಟಾಗುವಂತೆ ದೇವರ ಮಹಿಮೆಗೋಸ್ಕರ ಬಂದದ್ದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇದನ್ನು ಕೇಳಿದ ಯೇಸು, “ಈ ಕಾಯಿಲೆ ಮರಣಕ್ಕಾಗಿ ಬಂದುದಲ್ಲ, ದೇವರ ಮಹಿಮೆಗೋಸ್ಕರ ಬಂದಿದೆ. ಇದರ ಮೂಲಕ ದೇವರ ಪುತ್ರನಿಗೆ ಮಹಿಮೆ ಉಂಟಾಗಲಿದೆ,” ಎಂದು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೇಸು ಅದನ್ನು ಕೇಳಿ - ಈ ರೋಗವು ಮರಣಕ್ಕಾಗಿ ಬಂದದ್ದಲ್ಲ; ಇದರಿಂದ ದೇವಕುಮಾರನಿಗೆ ಮಹಿಮೆ ಉಂಟಾಗುವಂತೆ ದೇವರ ಮಹಿಮೆಗೋಸ್ಕರ ಬಂದದ್ದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೇಸು ಇದನ್ನು ಕೇಳಿದಾಗ, “ಈ ಕಾಯಿಲೆಯು ದೇವರ ಮತ್ತು ದೇವಕುಮಾರನ ಮಹಿಮೆಗಾಗಿ ಬಂದಿದೆಯೇ ಹೊರತು ಮರಣಕ್ಕಾಗಿಯಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೇಸು ಅದನ್ನು ಕೇಳಿ, “ಈ ಕಾಯಿಲೆಯು ಮರಣಕ್ಕಾಗಿಯಲ್ಲ. ದೇವರ ಮಹಿಮೆಗಾಗಿಯೇ ಬಂದದ್ದು. ಇದರಿಂದ ದೇವರ ಪುತ್ರನಿಗೆ ಮಹಿಮೆಯಾಗುವುದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಹಿ ಬಾತ್ಮಿ ಆಯ್ಕಲ್ಲ್ಯಾ ತನ್ನಾ ಜೆಜುನ್ “ಹ್ಯಾ ಪಿಡೆಚೊ ಪರಿನಾಮ್ ಲಾಜರಾಚ್ಯಾ ಮರ್‍ನಾಚ್ಯಾ ವೈನಾ ಸರಿನಾ, ಹೆ ದೆವಾಕ್ ಮಹಿಮಾ ಹಾನುಸಾಟ್ನಿ ಮನುನ್ ಹೊಲಾ, ಅನಿ ಹಿಚ್ಯಾ ವೈನಾ ಮಾನ್ಸಾಚೊ ಲೆಕ್ ಮಹಿಮಾ ಜೊಡುನ್ ಘೆತಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:4
20 ತಿಳಿವುಗಳ ಹೋಲಿಕೆ  

ಯೇಸು ಆಕೆಗೆ, “ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವಿ ಎಂದು ನಾನು ನಿನಗೆ ಹೇಳಲಿಲ್ಲವೇ?” ಎಂದು ಉತ್ತರ ಕೊಟ್ಟನು


ಯೇಸು, “ಇವನಾಗಲಿ ಇವನ ತಂದೆತಾಯಿಗಳಾಗಲಿ ಪಾಪ ಮಾಡಲಿಲ್ಲ. ಆದರೆ ದೇವರ ಕ್ರಿಯೆಗಳು ಇವನಲ್ಲಿ ತೋರಿಬರುವುದಕ್ಕಾಗಿ ಹೀಗಾಯಿತು.


ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಧನ್ಯರು. ಮಹಿಮೆಯ ಆತ್ಮನಾಗಿರುವ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲಾ.


ಎಲ್ಲರೂ ತಂದೆಯನ್ನು ಯಾವ ರೀತಿಯಲ್ಲಿ ಗೌರವಿಸುವರೋ ಅದೇ ರೀತಿಯಲ್ಲಿ ಮಗನನ್ನೂ ಗೌರವಿಸಬೇಕೆಂದು ಹಾಗೆ ಮಾಡಿದ್ದಾನೆ. ಮಗನನ್ನು ಗೌರವಿಸದವನು ಆತನನ್ನು ಕಳುಹಿಸಿದ ತಂದೆಯನ್ನು ಗೌರವಿಸಲಾರನು.


ಈಗ ತಂದೆಯೇ, ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲು, ನಿನ್ನ ಬಳಿಯಲ್ಲಿ ನನಗಿದ್ದ ಮಹಿಮೆಯಂತೆಯೇ ನಿನ್ನೊಂದಿಗೆ ನನ್ನನ್ನು ಮಹಿಮೆಪಡಿಸು.


ಯೇಸು ಈ ಮೊದಲನೆಯ ಸೂಚಕ ಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ, ತನ್ನ ಮಹಿಮೆಯನ್ನು ತೋರ್ಪಡಿಸಿದನು. ಇದರಿಂದ ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು.


ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್.


ಹೇಗೆಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವುದರಿಂದ ಬದುಕಿದರೂ ಸರಿಯೇ ಅಥವಾ ಸತ್ತರೂ ಸರಿಯೇ ನನ್ನ ಶರೀರದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನ್ನ ಬಹು ಅಭಿಲಾಷೆಯಾಗಿದೆ, ಹಾಗೆಯೇ ಆಗುವುದೆಂಬ ಭರವಸೆವುಂಟು.


ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನೆಂದರೆ, “ತಂದೆಯೇ, ಸಮಯ ಬಂದಿದೆ; ಮಗನು ನಿನ್ನನ್ನು ಮಹಿಮೆಪಡಿಸುವುದಕೊಸ್ಕರ ನಿನ್ನ ಮಗನನ್ನು ಮಹಿಮೆಪಡಿಸು.


ಆದಕಾರಣ ಅವರು ಕುರುಡನಾಗಿದ್ದ ಆ ಮನುಷ್ಯನನ್ನು ಎರಡನೆಯ ಸಾರಿ ಕರೆದು, “ನೀನು ದೇವರಿಗೆ ಗೌರವವನ್ನು ಸಲ್ಲಿಸು; ಈ ಮನುಷ್ಯನು ಪಾಪಿಷ್ಠನೆಂದು ನಾವು ಬಲ್ಲೆವು” ಎಂದರು.


ಯೇಸು “ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ ನನ್ನ ಮಹಿಮೆಯು ಏನೂ ಅಲ್ಲ. ನನ್ನನ್ನು ಮಹಿಮೆಪಡಿಸುವವನು ನನ್ನ ತಂದೆಯೇ, ನೀವು ಆತನನ್ನು ನಿಮ್ಮ ದೇವರು ಅನ್ನುತ್ತೀರಿ,


ಹಾಗಾದರೆ “ಅವರು ಬಿದ್ದೇಹೋಗುವಂತೆ ಎಡವಿದರೇನು” ಎಂದು ಕೇಳುತ್ತೇನೆ. ಹಾಗೆ ಎಂದಿಗೂ ಆಗಬಾರದು ಅವರು ಬಿದ್ದುಹೋದದ್ದರಿಂದ ಕ್ರಿಸ್ತನಿಂದ ಉಂಟಾಗುವ ರಕ್ಷಣೆಯು ಅನ್ಯಜನರಿಗೆ ಉಂಟಾಯಿತು. ಇದರಿಂದ ದೇವರು ಅವರಲ್ಲಿ ಅಸೂಯೆ ಹುಟ್ಟಿಸುತ್ತಾನೆ.


ನನ್ನದೆಲ್ಲವೂ ನಿನ್ನದೇ ಮತ್ತು ನಿನ್ನದೆಲ್ಲವೂ ನನ್ನದೇ. ನಾನು ಇವರಲ್ಲಿ ಮಹಿಮೆಗೊಂಡಿದ್ದೇನೆ.


ತಂದೆಯೇ ನಿನ್ನ ಹೆಸರನ್ನು ಮಹಿಮೆಪಡಿಸಿಕೋ” ಎಂದನು. ಅದಕ್ಕೆ, “ಮಹಿಮೆಪಡಿಸಿದ್ದೇನೆ ತಿರುಗಿ ಮಹಿಮೆಪಡಿಸುವೆನು” ಎಂಬ ಸ್ವರವು ಪರಲೋಕದಿಂದ ಬಂದಿತು.


ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ.


ಯೇಸು ಕ್ರಿಸ್ತನ ಮೂಲಕವಾಗಿರುವ ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ.


ಮುಂಜಾನೆಯಲ್ಲಿ ಯೆಹೋವನ ಮಹಿಮೆಯು ನಿಮಗೆ ಕಾಣಿಸುವುದು, ಏಕೆಂದರೆ ನೀವು ಯೆಹೋವನಿಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ಆತನು ಕೇಳಿದ್ದಾನೆ. ನಮ್ಮ ಮೇಲೆ ನೀವು ಗುಣುಗುಟ್ಟುವುದೇನು? ನಾವು ಎಷ್ಟು ಮಾತ್ರದವರು?” ಎಂದು ಹೇಳಿದರು.


ನಾನು ಮಾಡಿದ್ದರಿಂದ ನೀವು ನನ್ನನ್ನು ನಂಬದೆ ಇದ್ದರೂ, ಈ ಕಾರ್ಯಗಳನ್ನಾದರೂ ನಂಬಿರಿ. ಆಗ ನನ್ನಲ್ಲಿ ತಂದೆಯು ಇದ್ದಾನೆಂತಲೂ, ತಂದೆಯಲ್ಲಿ ನಾನು ಇದ್ದೇನೆಂತಲೂ ನಿಮಗೆ ತಿಳಿಯುವುದು ಮತ್ತು ಮನದಟ್ಟಾಗುವುದು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು