Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:44 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಸತ್ತಿದ್ದವನು ಹೊರಗೆ ಬಂದನು. ಅವನ ಕೈಕಾಲುಗಳು ಶವ ವಸ್ತ್ರಗಳಿಂದ ಸುತ್ತಿದ್ದವು. ಅವನ ಮುಖಕ್ಕೆ ವಸ್ತ್ರ ಸುತ್ತಲಾಗಿತ್ತು. ಯೇಸು ಅವರಿಗೆ, “ಅವನನ್ನು ಬಿಡಿಸಿರಿ, ಅವನು ಹೋಗಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಸತ್ತಿದ್ದವನು ಕೂಡಲೇ ಹೊರಗೆ ಬಂದನು. ಅವನ ಕೈಕಾಲುಗಳು ಶವವಸ್ತ್ರದಿಂದ ಸುತ್ತಿದ್ದವು; ಮುಖವು ಬಟ್ಟೆಯಿಂದ ಮುಚ್ಚಿತ್ತು. ಆಗ ಯೇಸು, “ಕಟ್ಟುಗಳನ್ನು ಬಿಚ್ಚಿ ಅವನನ್ನು ಹೋಗಲು ಬಿಡಿ,” ಎಂದು ಅಲ್ಲಿದ್ದವರಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಸತ್ತಿದ್ದವನು ಹೊರಗೆ ಬಂದನು; ಅವನ ಕೈಕಾಲುಗಳು ಬಟ್ಟೆಗಳಿಂದ ಕಟ್ಟಿದ್ದವು, ಅವನ ಮುಖವು ಕೈಪಾವುಡದಿಂದ ಸುತ್ತಿತ್ತು. ಯೇಸು ಅವರಿಗೆ - ಅವನನ್ನು ಬಿಚ್ಚಿರಿ, ಹೋಗಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಸತ್ತುಹೋಗಿದ್ದವನು (ಲಾಜರನು) ಹೊರಗೆ ಬಂದನು. ಅವನ ಕೈಕಾಲುಗಳನ್ನು ಬಟ್ಟೆಗಳಿಂದ ಸುತ್ತಲಾಗಿತ್ತು. ಅವನ ಮುಖವನ್ನು ಕರವಸ್ತ್ರದಿಂದ ಮುಚ್ಚಲಾಗಿತ್ತು. ಆಗ ಯೇಸು, “ಅವನಿಗೆ ಸುತ್ತಿರುವ ಬಟ್ಟೆಗಳನ್ನು ತೆಗೆದುಹಾಕಿರಿ, ಅವನು ಹೋಗಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಆಗ ಸತ್ತಿದ್ದವನು ಹೊರಗೆ ಬಂದನು. ಅವನ ಕೈಕಾಲುಗಳು ಶವವಸ್ತ್ರದಿಂದ ಕಟ್ಟಿದ್ದವು, ಮುಖಕ್ಕೆ ವಸ್ತ್ರ ಸುತ್ತಲಾಗಿತ್ತು. ಯೇಸು ಅಲ್ಲಿದ್ದವರಿಗೆ, “ಕಟ್ಟುಗಳನ್ನು ಬಿಚ್ಚಿ ಅವನನ್ನು ಹೋಗಲು ಬಿಡಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ಮರಲ್ಲೊ ಮಾನುಸ್ ಭಾಯ್ರ್ ಯೆಲೊ, ತ್ಯೆಚ್ಯಾ ಹಾತಾಕ್ನಿ ಅನಿ ಪಾಂಯಾಕ್ನಿ ಫಾಳಿಯಾ ಲಪಟಲ್ಲ್ಯಾ ಹೊತ್ತ್ಯಾ ಅನಿ ತ್ಯೆಚ್ಯಾ ತೊಂಡಾರ್ ಬಿ ಎಕ್ ಕಪ್ಡೊ ಲಪ್ಟಲ್ಲೊ ಹೊತ್ತೊ. ತನ್ನಾ ಜೆಜುನ್ ತೆಂಕಾ, “ತೆಕಾ ಲಪ್ಟಲ್ಲೊ ಕಪ್ಡೊ ಸೊಡ್ವಾ ಅನಿ ತೊ ಜಾಂವ್ದಿತ್” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:44
20 ತಿಳಿವುಗಳ ಹೋಲಿಕೆ  

ನಿಮಗೆ ನಿಜನಿಜವಾಗಿ ಹೇಳುತ್ತೇನೆ ಸತ್ತವರು ದೇವಕುಮಾರನ ಸ್ವರವನ್ನು ಕೇಳುವ ಕಾಲ ಬರುತ್ತದೆ, ಅದು ಈಗಾಗಲೇ ಬಂದಿದೆ, ಕೇಳಿದವರು ಬದುಕುವರು.


ಆತನ ತಲೆಯ ಮೇಲಿದ್ದ ಕೈವಸ್ತ್ರವು, ಆ ನಾರು ಬಟ್ಟೆಗಳೊಂದಿಗೆ ಇರದೇ, ಸುತ್ತಿ ಒಂದು ಕಡೆಯಲ್ಲಿ ಪ್ರತ್ಯೇಕವಾಗಿ ಇಟ್ಟಿರುವುದನ್ನು ನೋಡಿದನು.


ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಹೊಂದಿದವನಾಗಿ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ಪ್ರಭಾವವುಳ್ಳ ತನ್ನ ದೇಹದಂತೆ ರೂಪಾಂತರಪಡಿಸುವನು.


ನಾನೂ ಮತ್ತು ನನ್ನ ತಂದೆಯೂ ಒಂದಾಗಿದ್ದೇವೆ” ಎಂದನು.


ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನು ಸಹ ತನಗೆ ಬೇಕಾದವರನ್ನು ಬದುಕಿಸುತ್ತಾನೆ.


ಅನ್ನುತ್ತಲೇ ಸತ್ತಿದ್ದವನು ಎದ್ದು ಕುಳಿತುಕೊಂಡು ಮಾತನಾಡುವುದಕ್ಕೆ ತೊಡಗಿದನು. ಯೇಸು ಅವನನ್ನು ಅವನ ತಾಯಿಗೆ ಒಪ್ಪಿಸಿದನು.


“ಯೆಹೋವನೇ ಸಾಯಿಸುವವನೂ ಬದುಕಿಸುವವನೂ; ಪಾತಾಳದಲ್ಲಿ ದೊಬ್ಬುವವನೂ ಮೇಲಕ್ಕೆ ಬರಮಾಡುವವನೂ ಆತನೇ.


ಅನಂತರ ದೇವರು “ಬೆಳಕಾಗಲಿ” ಎಂದು ಆಜ್ಞಾಪಿಸಲು ಬೆಳಕಾಯಿತು.


ಸದಾ ಜೀವಿಸುವವನೂ ಆಗಿದ್ದೇನೆ. ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ.


ಆಗ ಅವರು ಯೇಸುವಿನ ದೇಹವನ್ನು ತೆಗೆದುಕೊಂಡು ಯೆಹೂದ್ಯರಲ್ಲಿ ಹೂಣಿಡುವ ಪದ್ಧತಿಯ ಪ್ರಕಾರ ಅದನ್ನು ಆ ಸುಗಂಧ ದ್ರವ್ಯಗಳ ಸಹಿತವಾಗಿ ನಾರುಬಟ್ಟೆಯಲ್ಲಿ ಸುತ್ತಿದರು.


ಅವರೆಲ್ಲರೂ ಬಹಳ ಆಶ್ಚರ್ಯದಿಂದ ಬೆರಗಾದರು. ಆ ಮೇಲೆ ಆತನು ಅವರಿಗೆ, ಇದು ಯಾರಿಗೂ ತಿಳಿಯಬಾರದೆಂದು ಕಟ್ಟಪ್ಪಣೆ ಮಾಡಿದನು. ಆ ಹುಡುಗಿಗೆ ಊಟ ಮಾಡಲು ಏನಾದರೂ ಕೊಡಿರಿ ಎಂದು ಹೇಳಿದನು.


ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? ಮರಣವೇ, ನಿನ್ನ ಉಪದ್ರವಗಳಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? ಕನಿಕರವು ನನಗೆ ಕಾಣಿಸದು.


ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು; ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು.


ಅವನು ಬಗ್ಗಿ ನೋಡಿದಾಗ ನಾರುಬಟ್ಟೆಗಳು ಬಿದ್ದಿರುವುದನ್ನು ಕಂಡನು. ಆದರೂ ಅವನು ಒಳಗೆ ಹೋಗಲಿಲ್ಲ.


ಯೇಸು, “ಆ ಕಲ್ಲನ್ನು ತೆಗೆದು ಹಾಕಿರಿ” ಎನ್ನಲು, ತೀರಿಹೋದವನ ಸಹೋದರಿಯಾದ ಮಾರ್ಥಳು ಆತನಿಗೆ, “ಕರ್ತನೇ, ಅವನು ಸತ್ತು ನಾಲ್ಕು ದಿನಗಳಾದವು, ಈಗ ದುರ್ವಾಸನೆ ಬಂದಿರಬಹುದು” ಎಂದಳು.


ಬಳಿಕ ಮತ್ತೊಬ್ಬನು ಬಂದು, ‘ದೊರೆಯೇ, ಇಗೋ ನೀನು ಕೊಟ್ಟ ನಾಣ್ಯ. ನೀನು ಇಡದೆಯಿರುವುದನ್ನು ಎತ್ತಿಕೊಂಡು ಹೋಗುವವನು, ಬಿತ್ತದೆಯಿರುವುದನ್ನು ಕೊಯ್ಯುವ ಕಠಿಣ ಮನುಷ್ಯನು ಎಂದು ನಿನಗೆ ಹೆದರಿಕೊಂಡು ಇದನ್ನು ವಸ್ತ್ರದಲ್ಲಿ ಕಟ್ಟಿ ಇಟ್ಟುಕೊಂಡೆನು’ ಅಂದನು.


ಆತನು ಹೀಗೆ ಹೇಳಿದ ಮೇಲೆ, “ಲಾಜರನೇ, ಹೊರಗೆ ಬಾ!” ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು