Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:55 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಆಗ ಯೆಹೂದ್ಯರ ಪಸ್ಕಹಬ್ಬ ಹತ್ತಿರವಾಗಿರಲಾಗಿ, ಬಹು ಜನರು ತಮ್ಮನ್ನು ಶುದ್ಧ ಮಾಡಿಕೊಳ್ಳುವುದಕ್ಕಾಗಿ ಹಬ್ಬಕ್ಕಿಂತ ಮೊದಲೇ ಹಳ್ಳಿಗಳಿಂದ ಯೆರೂಸಲೇಮಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

55 ಆಗ ಯೆಹೂದ್ಯರ ಪಾಸ್ಕಹಬ್ಬವು ಸಮೀಪಿಸಿತ್ತು. ಹಬ್ಬಕ್ಕೆ ಮುಂಚೆ ನಡೆಯುವ ಶುದ್ಧೀಕರಣಕ್ಕಾಗಿ ಹಲವರು ಜೆರುಸಲೇಮಿಗೆ ಗ್ರಾಮಾಂತರ ಪ್ರದೇಶಗಳಿಂದ ಮೊದಲೇ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

55 ಆಗ ಯೆಹೂದ್ಯರ ಪಸ್ಕಹಬ್ಬ ಹತ್ತಿರವಾಗಿರಲಾಗಿ ಬಹು ಜನರು ತಮ್ಮನ್ನು ಶುದ್ಧಿಮಾಡಿಕೊಳ್ಳುವದಕ್ಕಾಗಿ ಹಬ್ಬಕ್ಕಿಂತ ಮುಂಚೆ ಹಳ್ಳಿಗಳಿಂದ ಯೆರೂಸಲೇವಿುಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ಆಗ ಯೆಹೂದ್ಯರ ಪಸ್ಕಹಬ್ಬವು ಸಮೀಪವಾಗಿತ್ತು. ಪಸ್ಕಹಬ್ಬಕ್ಕಿಂತ ಮೊದಲೇ ತಮ್ಮ ಗ್ರಾಮಗಳಿಂದ ಅನೇಕ ಜನರು ಜೆರುಸಲೇಮಿಗೆ ಹೋಗಿದ್ದರು. ವಿಶೇಷವಾದ ಕಾರ್ಯಗಳನ್ನು ಮಾಡಿ ಪಸ್ಕಹಬ್ಬಕ್ಕಾಗಿ ತಮ್ಮನ್ನು ಶುದ್ಧೀಕರಿಸಿಕೊಳ್ಳಬೇಕೆಂದು ಅವರು ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

55 ಆಗ ಯೆಹೂದ್ಯರ ಪಸ್ಕಹಬ್ಬವು ಹತ್ತಿರವಾಗಿತ್ತು. ಅನೇಕರು ತಮ್ಮನ್ನು ಶುದ್ಧಿ ಮಾಡಿಕೊಳ್ಳುವುದಕ್ಕಾಗಿ ಪಸ್ಕಕ್ಕೆ ಮುಂಚೆ ಹಳ್ಳಿಗಳಿಂದ ಯೆರೂಸಲೇಮಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

55 ಪಾಸ್ಕಾಚೊ ಸನ್ ತೊಂಡಾರ್ ಯೆತಲೊ ಹೊತ್ತೊ , ತೆಚೆಸಾಟ್ನಿ ಲೊಕಾ ಗಾವಾ ಗಾವಾನಿತ್ನಾ ಸನಾಚ್ಯಾ ಅದ್ದಿ ಶುದ್ದಾಚಾರಾಚಿ ಶಾಸ್ತರಾ ಕರುನ್ ಘೆವಸಾಟ್ನಿ ಮನುನ್ ಜೆರುಜಲೆಮಾಕ್ ಗೆಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:55
30 ತಿಳಿವುಗಳ ಹೋಲಿಕೆ  

ಪಸ್ಕ ಹಬ್ಬಕ್ಕೆ ಇನ್ನು ಆರು ದಿನಗಳು ಇರಲಾಗಿ ಯೇಸುವು, ಸತ್ತವರೊಳಗಿಂದ ಎಬ್ಬಿಸಿದ ಲಾಜರನು ವಾಸವಾಗಿದ್ದ ಬೇಥಾನ್ಯಕ್ಕೆ ಬಂದನು.


ಆಗ ಯೆಹೂದ್ಯರ ಪಸ್ಕದ ಹಬ್ಬವು ಹತ್ತಿರವಾಗಿತ್ತು.


ಆಗ ಯೆಹೂದ್ಯರ ಪಸ್ಕ ಹಬ್ಬವು ಹತ್ತಿರ ಬಂದುದರಿಂದ ಯೇಸು ಯೆರೂಸಲೇಮಿಗೆ ಹೋದನು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಜನರ ಬಳಿಗೆ ಹೋಗಿ, ಈ ದಿನ ಮತ್ತು ನಾಳೆ ಅವರನ್ನು ಶುದ್ಧಗೊಳಿಸು. ನನ್ನ ಬರುವಿಕೆಗಾಗಿ ಅವರನ್ನು ಸಿದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು,


ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ “ನಿಮ್ಮ ಮಧ್ಯಲ್ಲಿರುವ ಅನ್ಯ ದೇವರುಗಳನ್ನು ತೆಗೆದುಹಾಕಿ ನಿಮ್ಮನ್ನು ಶುದ್ಧಪಡಿಸಿಕೊಂಡು, ವಸ್ತ್ರಗಳನ್ನು ಬದಲಾಯಿಸಿರಿ,


ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.


ಪ್ರತಿ ಮನುಷ್ಯನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯನ್ನು ತೆಗೆದುಕೊಂಡು ತಿನ್ನಲಿ, ಆ ಪಾನಪಾತ್ರೆಯಲ್ಲಿ ಕುಡಿಯಲಿ.


ನಾನು ಶುದ್ಧಮಾಡಿಕೊಂಡವನಾಗಿ, ಅವುಗಳನ್ನು ಒಪ್ಪಿಸುತ್ತಿರುವಲ್ಲಿ, ಇವರು ನನ್ನನ್ನು ದೇವಾಲಯದಲ್ಲಿ ಕಂಡರು; ಆಗ ನನ್ನೊಂದಿಗೆ ಜನರ ಗುಂಪೇನೂ ಇರಲಿಲ್ಲ; ಗದ್ದಲವೂ ಇರಲಿಲ್ಲ. ನನ್ನನ್ನು ಕಂಡವರು ಆಸ್ಯಸೀಮೆಯಿಂದ ಬಂದ ಕೆಲವು ಯೆಹೂದ್ಯರೇ.


ಮುಂಜಾನೆ ಅವರು ಯೇಸುವನ್ನು ಕಾಯಫನ ಬಳಿಯಿಂದ ಅರಮನೆಗೆ ಕರೆದುಕೊಂಡು ಹೋದರು. ಅವರು ತಮಗೆ ಮೈಲಿಗೆಯಾಗಿ ಪಸ್ಕದ ಊಟ ಮಾಡುವುದಕ್ಕೆ ಅಡ್ಡಿಯಾದೀತೆಂದು ಅರಮನೆಯ ಒಳಗೆ ಹೋಗಲಿಲ್ಲ.


ಪಸ್ಕಹಬ್ಬದ ಹಿಂದಿನ ದಿನ ಯೇಸು, ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆ ಬಂದಿತೆಂದು ತಿಳಿದುಕೊಂಡು, ಈ ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ, ಅವರನ್ನು ಕೊನೆಯವರೆಗೂ ಪ್ರೀತಿಸುತ್ತಾ ಬಂದನು.


ಇದಾದ ಮೇಲೆ ಯೆಹೂದ್ಯರ ಒಂದು ಜಾತ್ರೆ ಇದ್ದುದರಿಂದ ಯೇಸು ಯೆರೂಸಲೇಮಿಗೆ ಹೋದನು.


ಯೆಹೂದ್ಯರ ಶುದ್ಧಾಚಾರ ಪದ್ಧತಿಯ ಪ್ರಕಾರ ಅಲ್ಲಿ ಆರು ಕಲ್ಲಿನ ಬಾನೆಗಳು ಇದ್ದವು. ಪ್ರತಿಯೊಂದು ಬಾನೆಯೂ ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವ ಅಳತೆಯುಳ್ಳದ್ದಾಗಿತ್ತು.


ಪಸ್ಕಹಬ್ಬ ಎಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿನಗಳಿದ್ದಾಗ ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲುವುದಕ್ಕೆ ಮಾರ್ಗವನ್ನು ಹುಡುಕುತ್ತಿದ್ದರು.


ಯೇಸು ಈ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದ ನಂತರ ತನ್ನ ಶಿಷ್ಯರಿಗೆ, “ಎರಡು ದಿನಗಳಾದ ಮೇಲೆ ಪಸ್ಕಹಬ್ಬ ಬರುತ್ತದೆಂದು ನೀವು ಬಲ್ಲಿರಿ;


ಯೆಹೋವನೇ, ನಾನು ನಿರ್ದೋಷಿ ಎಂದು, ಕೈಗಳನ್ನು ತೊಳೆದುಕೊಂಡವನಾಗಿ,


ಔತಣದ ಸರದಿ ತೀರಿದ ನಂತರ ಯೋಬನು, “ನನ್ನ ಮಕ್ಕಳು ಒಂದು ವೇಳೆ ಹೃದಯದಲ್ಲಿ ದೇವರನ್ನು ದೂಷಿಸಿ ಪಾಪ ಮಾಡಿರಬಹುದು” ಎಂದು ಅವರನ್ನು ಕರೆಯಿಸಿ ಶುದ್ಧಿಪಡಿಸಿ, ಬೆಳಿಗ್ಗೆ ಎದ್ದು ಅವರ ಸಂಖ್ಯೆಗೆ ತಕ್ಕಂತೆ ಹೋಮಗಳನ್ನು ಅರ್ಪಿಸುತ್ತಿದ್ದನು. ಹೀಗೆ ಯೋಬನು ಕ್ರಮವಾಗಿ ಮಾಡುವುದು ದೈನಂದಿನ ಕ್ರಮವಾಗಿತ್ತು.


ಅವನು, “ಹೌದು, ಶುಭಕರವಾಗಿದೆ; ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕೆ ಬಂದಿದ್ದೇನೆ. ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ನನ್ನ ಜೊತೆಯಲ್ಲಿ ಯಜ್ಞಕ್ಕೆ ಬನ್ನಿರಿ” ಎಂದು ಹೇಳಿ ಇಷಯನನ್ನೂ, ಅವನ ಮಕ್ಕಳನ್ನೂ ಶುದ್ಧೀಕರಿಸಿ ಅವರನ್ನೂ ಯಜ್ಞಕ್ಕೆ ಕರೆದನು.


ಆದರೆ ಕೆಲವು ಜನರಿಗೆ ಮನುಷ್ಯನ ಶವಸೋಂಕು ಇದ್ದುದರಿಂದ ಅಶುದ್ಧರಾಗಿ ಆ ದಿನದಲ್ಲಿ ಪಸ್ಕಹಬ್ಬವನ್ನು ಆಚರಿಸಲಾಗದೆ ಮೋಶೆ ಮತ್ತು ಆರೋನರ ಬಳಿಗೆ ಬಂದರು.


“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನಿಮ್ಮಲ್ಲಿಯಾಗಲಿ, ನಿಮ್ಮ ಸಂತತಿಯವರಲ್ಲಿಯಾಗಲಿ ಶವ ಸೋಂಕಿನಿಂದ ಅಶುದ್ಧರಾದವರೂ ಅಥವಾ ದೂರ ಪ್ರಯಾಣದಲ್ಲಿರುವವರೂ ಯೆಹೋವನ ಆಜ್ಞಾನುಸಾರ ಪಸ್ಕಹಬ್ಬವನ್ನು ಆಚರಿಸಲೇಬೇಕು.’


ಆಗ ಮನುಷ್ಯಕುಮಾರನನ್ನು ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿ ಕೊಡಲಾಗುವುದು” ಎಂದು ಹೇಳಿದನು.


ಪಸ್ಕವೆಂದು ಕರೆಯಲ್ಪಡುವ ಹುಳಿಯಿಲ್ಲದ ರೊಟ್ಟಿಯ ಹಬ್ಬವು ಹತ್ತಿರವಾದಾಗ,


ನೀನು ಅವರನ್ನು ಕರೆದುಕೊಂಡು ಹೋಗಿ, ಅವರೊಡನೆ ನಿನ್ನನ್ನು ಶುದ್ಧಿಮಾಡಿಕೊಂಡು ಅವರು ತಮ್ಮ ಕ್ಷೌರದ ಶಪಥವನ್ನು ತೀರಿಸಿಕೊಳ್ಳುವುದಕ್ಕಾಗಿ, ಆಗುವ ವೆಚ್ಚವನ್ನು ನೀನು ಕೊಡು. ಹೀಗೆ ಮಾಡಿದರೆ ಎಲ್ಲರೂ ನಿನ್ನ ವಿಷಯವಾಗಿ ತಾವು ಕೇಳಿದ ಸುದ್ದಿ ನಿಜವಲ್ಲವೆಂತಲೂ, ನೀನು ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುತ್ತೀ, ಎಂತಲೂ ತಿಳಿದುಕೊಳ್ಳುವರು.


ಆಗ ಪೌಲನು ಮರುದಿನ ಆ ನಾಲ್ವರೊಡನೆ ಹೋಗಿ ಶುದ್ಧಾಚಾರದ ವಿಧಿಯನ್ನು ನೆರವೇರಿಸಿದನು. ಅನಂತರ ಶುದ್ಧಾಚಾರ ಮುಗಿಯುವ ದಿನವನ್ನು ತಿಳಿಸುವುದಕ್ಕಾಗಿ ದೇವಾಲಯದೊಳಗೆ ಹೋದನು. ಅವರಲ್ಲಿ ಪ್ರತಿಯೊಬ್ಬನಿಗಾಗಿ ಯಾವಾಗ ಬಲಿಯರ್ಪಣೆಯಾಗುವುದೆಂದು ಅಲ್ಲಿ ಸೂಚಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು