Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆತನ ಶಿಷ್ಯರು ಆತನಿಗೆ, “ಗುರುವೇ, ಆಗಲೇ ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿದ್ದಾರೆ, ಪುನಃ ನೀನು ಅಲ್ಲಿಗೆ ಹೋಗಬೇಕೆಂದಿರುವಿಯಾ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆ ಶಿಷ್ಯರು, “ಗುರುದೇವಾ, ಇತ್ತೀಚೆಗೆ ತಾನೆ ಯೆಹೂದ್ಯರು ನಿಮ್ಮನ್ನು ಕಲ್ಲಿನಿಂದ ಹೊಡೆಯಬೇಕೆಂದಿದ್ದರು. ಪುನಃ ಅಲ್ಲಿಗೇ ಹೋಗಬೇಕೆಂದಿರುವಿರಾ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಶಿಷ್ಯರು - ಗುರುವೇ, ಯೆಹೂದ್ಯರು ಆಗಲೇ ನಿನ್ನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು; ತಿರಿಗಿ ಅಲ್ಲಿಗೇ ಹೋಗುತ್ತೀಯಾ? ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಶಿಷ್ಯರು, “ಗುರುವೇ, ಜುದೇಯದ ಯೆಹೂದ್ಯರು ನಿನ್ನನ್ನು ಕಲ್ಲುಗಳಿಂದ ಕೊಲ್ಲಲು ಪ್ರಯತ್ನಿಸಿದರು. ಅದಾದದ್ದು ಕೇವಲ ಸ್ವಲ್ಪಕಾಲದ ಹಿಂದೆಯಷ್ಟೇ. ಈಗ ನೀನು ಮತ್ತೆ ಅಲ್ಲಿಗೆ ಹೋಗಬೇಕೆನ್ನುವಿಯಾ?” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೇಸುವಿನ ಶಿಷ್ಯರು ಅವರಿಗೆ, “ಬೋಧಕರೇ, ಈಗ ಯೆಹೂದ್ಯರು ನಿಮ್ಮ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿದ್ದಾರೆ. ತಿರುಗಿ ನೀವು ಅಲ್ಲಿಗೆ ಹೋಗಬೇಕೆಂದಿರುವಿರಾ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತನ್ನಾ ಶಿಸಾನಿ, “ಗುರುಜಿ, ಅತ್ತಾ ಎಕ್ ಉಲ್ಲ್ಯಾ ಎಳಾಚ್ಯಾ ಫಾಟಿ ಥೈ ತುಕಾ ಲೊಕಾ ಗುಂಡ್ಯಾನಿ ಮಾರುಕ್ ಮನುನ್ ಉಟಲ್ಲಿ, ಅನಿ ತಿಯಾ ಥೈಚ್ ಜಾವ್ಕ್ ಬಗುಲೆ ಕಾಯ್?” ಮನುನ್ ಜಬಾಬ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:8
11 ತಿಳಿವುಗಳ ಹೋಲಿಕೆ  

ಆಗ ಯೆಹೂದ್ಯರು ಆತನನ್ನು ಕೊಲ್ಲಬೇಕೆಂದು ತಿರುಗಿ ಕಲ್ಲುಗಳನ್ನು ತೆಗೆದುಕೊಂಡರು,


ಆಗ ಅವರು ಆತನ ಮೇಲೆ ಎಸೆಯಲು, ಕಲ್ಲುಗಳನ್ನು ಎತ್ತಿಕೊಂಡರು. ಆದರೆ ಯೇಸು ಮರೆಯಾಗಿ ದೇವಾಲಯದೊಳಗಿನಿಂದ ಹೊರಗೆ ಹೊರಟು ಹೋದನು.


ಅವರು ಪುನಃ ಆತನನ್ನು ಹಿಡಿಯುವುದಕ್ಕೆ ಪ್ರಯತ್ನಿಸಿದರು, ಆದರೆ ಆತನು ಅವರ ಕೈಯಿಂದ ತಪ್ಪಿಸಿಕೊಂಡು ಹೋದನು.


ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.


ಅಂಗಡಿ ಬೀದಿಗಳಲ್ಲಿ ನಮಸ್ಕಾರಗಳು, ಜನರಿಂದ ‘ಗುರುಗಳೆನ್ನಿಸಿಕೊಳ್ಳುವುದು,’ ಇವುಗಳೇ ಅವರಿಗೆ ಇಷ್ಟ.


ಆದರೆ ನೀವು ‘ಬೋಧಕರೆನ್ನಿಸಿಕೊಳ್ಳಬೇಡಿರಿ;’ ಏಕೆಂದರೆ ಕ್ರಿಸ್ತನೊಬ್ಬನೇ ನಿಮಗಿರುವ ಬೋಧಕನು ಮತ್ತು ನೀವೆಲ್ಲರೂ ಸಹೋದರರು.


ಅಷ್ಟರೊಳಗೆ ಶಿಷ್ಯರು “ಗುರುವೇ, ಊಟಮಾಡು” ಎಂದು ಆತನನ್ನು ಕೇಳಿಕೊಂಡರು.


ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋದರನ ವಿಷಯದಲ್ಲಿ ಸಂತೈಸಬೇಕೆಂದು ಬಂದಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು