Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಗ ಅಲ್ಲಿ ನಿಂತುಕೊಂಡಿದ್ದ ಜನರು ಅದನ್ನು ಕೇಳಿ, “ಗುಡುಗಿತು” ಎಂದರು. ಇನ್ನು ಕೆಲವರು “ದೇವದೂತನು ಈತನ ಸಂಗಡ ಮಾತನಾಡಿದನು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅಲ್ಲಿ ನಿಂತುಕೊಂಡಿದ್ದ ಜನರು ಆ ವಾಣಿಯನ್ನು ಕೇಳಿ, “ಇದೇನು ಗುಡುಗಿನ ಸದ್ದು?” ಎಂದರು. ಕೆಲವರು, “ದೇವದೂತನೊಬ್ಬ ಆತನೊಡನೆ ಮಾತನಾಡಿದನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅಲ್ಲಿ ನಿಂತುಕೊಂಡಿದ್ದ ಜನರು ಅದನ್ನು ಕೇಳಿ - ಗುಡುಗಿತು ಅಂದರು. ಇನ್ನು ಕೆಲವರು - ದೇವದೂತನು ಈತನ ಸಂಗಡ ಮಾತಾಡಿದನು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಅಲ್ಲಿ ನಿಂತಿದ್ದ ಜನರು ಈ ವಾಣಿಯನ್ನು ಕೇಳಿ “ಅದು ಗುಡುಗು” ಎಂದರು. ಆದರೆ ಇತರರು, “ದೇವದೂತನೊಬ್ಬನು ಯೇಸುವಿನೊಂದಿಗೆ ಮಾತಾಡಿದನು!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆಗ ಅಲ್ಲಿ ನಿಂತಿದ್ದ ಜನರು ಅದನ್ನು ಕೇಳಿ, “ಗುಡುಗಿತು,” ಎಂದರು. ಬೇರೆಯವರು, “ದೇವದೂತನೊಬ್ಬನು ಈತನ ಸಂಗಡ ಮಾತನಾಡಿದನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಥೈ ಇಬೆ ಹೊತ್ತ್ಯಾ ಲೊಕಾಂಚ್ಯಾ ತಾಂಡ್ಯಾನ್ ತೊ ಧನ್ ಆಯಿಕ್ಲ್ಯಾನ್ ಅನಿ ಉಲ್ಲ್ಯಾ ಲೊಕಾನಿ ಗುಡ್ಗುಡೊ ತೊ ಮಟ್ಲ್ಯಾನಿ ಅನಿ ಹುರಲ್ಲ್ಯಾನಿ, “ತ್ಯೆಚ್ಯಾ ವಾಂಗ್ಡಾ ಎಕ್ ದೆವಾಚ್ಯಾದುತಾನ್‍ ಬೊಲ್ಲ್ಯಾನ್!” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:29
12 ತಿಳಿವುಗಳ ಹೋಲಿಕೆ  

ಇದಲ್ಲದೆ ಪರಲೋಕದಿಂದ ಜಲಪ್ರವಾಹದ ಘೋಷದಂತೆಯೂ ದೊಡ್ಡ ಗುಡುಗಿನ ಶಬ್ದದಂತೆಯೂ ಇದ್ದ ಮಹಾಶಬ್ದವನ್ನು ಕೇಳಿದೆನು. ನಾನು ಕೇಳಿದ ಆ ಶಬ್ದವು ವೀಣೆಗಳನ್ನು ನುಡಿಸಿಕೊಂಡು ಹಾಡುತ್ತಿರುವ ವೀಣೆಗಾರರ ಶಬ್ದದಂತಿತ್ತು.


ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು. ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ, ಗರ್ಜನೆ, ಗುಡುಗು, ಮಿಂಚುಗಳು, ಭೂಕಂಪವು, ದೊಡ್ಡ ಆಲಿಕಲ್ಲಿನ ಮಳೆಯೂ ಸುರಿಯಿತು.


ತರುವಾಯ ಆ ದೇವದೂತನು ಧೂಪಾರತಿಯನ್ನು ತೆಗೆದುಕೊಂಡು ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂಮಿಯ ಮೇಲೆ ಎಸೆದನು. ಆಗ ಗರ್ಜಿಸುವ ಗುಡುಗು, ಮಹಾಶಬ್ದಗಳು, ಮಿಂಚು, ಭೂಕಂಪವು ಉಂಟಾದವು.


ಕುರಿಮರಿಯಾದಾತನು ಆ ಏಳು ಮುದ್ರೆಗಳಲ್ಲಿ ಒಂದು ಮುದ್ರೆಯನ್ನು ಒಡೆಯುವಾಗ ನಾನು ನೋಡಿದೆನು ಮತ್ತು ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿಯು ಗುಡುಗಿನಂತಿದ್ದ ಸ್ವರದಿಂದ “ಬಾ!” ಎಂದು ಹೇಳುವುದನ್ನು ಕೇಳಿದೆನು.


ಆಗ ಕೆರೂಬಿಗಳ ರೆಕ್ಕೆಗಳ ಶಬ್ದವು ಸರ್ವಶಕ್ತನಾದ ದೇವರು ಮಾತನಾಡುವ ಧ್ವನಿಯಷ್ಟು ಗಂಭೀರವಾಗಿ ಹೊರಗಣ ಅಂಗಳದವರೆಗೂ ಕೇಳಿಸಿತು.


ನಿನ್ನ ಕೈಯೂ, ದೇವರ ಕೈಯೂ ಸಮವೋ? ದೇವರ ಧ್ವನಿಯಂತೆ ಗುಡುಗಬಲ್ಲಿಯಾ?


ಆ ಗುಡುಗು, ಮಿಂಚು, ತುತ್ತೂರಿಯ ಧ್ವನಿ, ಹಾಗೂ ಬೆಟ್ಟದಿಂದ ಹೊರಬರುತ್ತಿದ್ದ ಹೊಗೆಯನ್ನು ಜನರೆಲ್ಲರೂ ನೋಡಿ, ನಡುಗುತ್ತಾ ದೂರದಲ್ಲಿ ನಿಂತುಕೊಂಡರು.


ಮೂರನೆಯ ದಿನದಲ್ಲಿ ಸೂರ್ಯೋದಯವಾಗಲು ಆ ಬೆಟ್ಟದ ಮೇಲೆ ಗುಡುಗು, ಮಿಂಚೂ, ಕಾರ್ಮುಗಿಲೂ, ತುತ್ತೂರಿಯ ಮಹಾಧ್ವನಿಯೂ ಉಂಟಾಗಲು ಪಾಳೆಯಲ್ಲಿದ್ದ ಜನರೆಲ್ಲರೂ ನಡುಗಿದರು.


ಅವನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರು ಧ್ವನಿಯನ್ನು ಮಾತ್ರ ಕೇಳಿ, ಯಾರನ್ನೂ ಕಾಣದೆ ಮೂಕರಂತೆ ವಿಸ್ಮಿತರಾಗಿ ನಿಂತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು