Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ. ನಂಬಿದರೆ ನೀವು ಬೆಳಕಿನ ಮಕ್ಕಳಾರಾಗುವಿರಿ” ಎಂದು ಹೇಳಿದನು. ಇದನ್ನು ಯೇಸು ಹೇಳಿದ ಮೇಲೆ ಅವರನ್ನು ಬಿಟ್ಟುಹೋಗಿ ಅಡಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ನಿಮ್ಮೊಡನೆ ಇನ್ನೂ ಜ್ಯೋತಿ ಇರುವುದರಿಂದ ಆ ಜ್ಯೋತಿಯಲ್ಲಿ ನಂಬಿಕೆಯಿಡಿ. ಆಗ ನೀವು ಜ್ಯೋತಿಯ ಮಕ್ಕಳು ಆಗುವಿರಿ,” ಎಂದರು. ಇದನ್ನು ಕೇಳಿದ ತರುವಾಯ ಯೇಸು ಅಲ್ಲಿಂದ ಹೊರಟು ಜನರ ಕಣ್ಣಿಗೆ ಬೀಳದಂತೆ ಮರೆಯಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ; ನಂಬಿದರೆ ನೀವು ಬೆಳಕಿನವರಾಗುವಿರಿ ಎಂದು ಹೇಳಿದನು. ಇದನ್ನು ಯೇಸು ಹೇಳಿದ ಮೇಲೆ ಅವರನ್ನು ಬಿಟ್ಟುಹೋಗಿ ಅಡಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಆದ್ದರಿಂದ ನೀವು ಬೆಳಕನ್ನು ಇನ್ನೂ ಹೊಂದಿರುವಾಗಲೇ ಅದರಲ್ಲಿ ನಂಬಿಕೆ ಇಡಿರಿ. ಆಗ ನೀವು ಬೆಳಕಿನವರಾಗುವಿರಿ” ಎಂದು ಹೇಳಿದನು. ಈ ಸಂಗತಿಗಳನ್ನು ಹೇಳಿದ ಮೇಲೆ ಯೇಸು ಅಲ್ಲಿಂದ ಹೊರಟು, ತನ್ನನ್ನು ಜನರು ಕಂಡುಕೊಳ್ಳಲಾಗದ ಸ್ಥಳಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ನೀವು ಬೆಳಕಿನ ಪುತ್ರರಾಗುವಂತೆ ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ,” ಎಂದರು. ಯೇಸು ಇವುಗಳನ್ನು ಹೇಳಿ, ಅವರಿಂದ ಹೊರಟುಹೋಗಿ ಅಡಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಕವ್ಡ್ಯಾ ಪತರ್ ಉಜ್ವೊಡ್ ತುಮ್ಚೆ ವಾಂಗ್ಡಾ ರ್‍ಹಾತಾನಾಚ್ ತುಮಿ ತ್ಯೆಚೆವರ್ತಿ ವಿಶ್ವಾಸ್ ಕರಾ, ಅಶೆಚ್ ತುಮಿ ಉಜ್ವೊಡಾಚಿ ಲೊಕಾ ಹೊವ್ನ್ ರ್‍ಹಾತ್ಯಾಶಿ” ಮನುನ್ ಜಬಾಬ್ ದಿಲ್ಯಾನ್. ಎವ್ಡೆ ಸಾಂಗುನ್ ಹೊಲ್ಲ್ಯಾ ಮಾನಾ ಜೆಜು ತೆಂಚೆತ್ನಾ ಭಾಯ್ರ್ ಪಡುನ್ ಗೆಲೊ, ಅನಿ ತೆಂಕಾ ದಿಸುಕ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:36
17 ತಿಳಿವುಗಳ ಹೋಲಿಕೆ  

ಏಕೆಂದರೆ ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿದ್ದು ಬೆಳಕಾಗಿದ್ದೀರಿ. ಬೆಳಕಿನವರಂತೆ ನಡೆದುಕೊಳ್ಳಿರಿ.


ನೀವೆಲ್ಲರೂ ‘ಬೆಳಕಿನ ಮಕ್ಕಳು’ ಹಾಗೂ ‘ಹಗಲಿನ ಮಕ್ಕಳು’ ಆಗಿದ್ದೀರಷ್ಟೆ, ನಾವು ರಾತ್ರಿಯವರೂ ಅಲ್ಲ, ಕತ್ತಲೆಯವರೂ ಅಲ್ಲ.


ಆಗ ಅವರು ಆತನ ಮೇಲೆ ಎಸೆಯಲು, ಕಲ್ಲುಗಳನ್ನು ಎತ್ತಿಕೊಂಡರು. ಆದರೆ ಯೇಸು ಮರೆಯಾಗಿ ದೇವಾಲಯದೊಳಗಿನಿಂದ ಹೊರಗೆ ಹೊರಟು ಹೋದನು.


ಯಜಮಾನನು ಇದನ್ನು ಕೇಳಿ ಅಪ್ರಾಮಾಣಿಕನಾದ ಆ ಪಾರುಪಾತ್ಯಗಾರನನ್ನು ಕುರಿತು, ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಏಕೆಂದರೆ ಈ ಲೋಕದ ಜನರು ತಮ್ಮ ವಿಷಯಗಳಲ್ಲಿ ಬೆಳಕಿನ ಜನರಿಗಿಂತಲೂ ಜಾಣರಾಗಿದ್ದಾರೆ.


ಹೀಗಿರಲಾಗಿ ಯೇಸು ಇನ್ನೂ ಯೆಹೂದ್ಯರೊಳಗೆ ಬಹಿರಂಗವಾಗಿ ತಿರುಗಾಡದೆ, ಅಲ್ಲಿಂದ ಅಡವಿಯ ಹತ್ತಿರದ ಪ್ರದೇಶಕ್ಕೆ ಹೋಗಿ, ಎಫ್ರಾಯೀಮ್ ಎಂಬ ಊರಲ್ಲಿ ತನ್ನ ಶಿಷ್ಯರ ಜೊತೆ ಇದ್ದನು.


ಆ ಯೋಹಾನನು ಸಾಕ್ಷಿಗಾಗಿ ಬಂದನು. ತನ್ನ ಮೂಲಕವಾಗಿ ಎಲ್ಲರೂ ನಂಬುವಂತೆ ಅವನು ಬೆಳಕಿನ ವಿಷಯದಲ್ಲಿ ಸಾಕ್ಷಿಕೊಡಲು ಬಂದನು.


ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ.


ನಾವಾದರೋ ಹಗಲಿನವರಾಗಿರಲಾಗಿ ನಂಬಿಕೆ ಪ್ರೀತಿಗಳೆಂಬ ಎದೆಕವಚವನ್ನೂ, ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ.


ಆದರೆ ಸತ್ಯವನ್ನು ಅನುಸರಿಸಿ ನಡೆಯುವವನು ತಾನು ದೇವರಿಂದ ನಡಿಸಿಕೊಂಡು ಬಂದವನಾಗಿ ತನ್ನ ಕೃತ್ಯಗಳನ್ನು ಪ್ರಕಟಪಡಿಸುವುದಕ್ಕಾಗಿ ಬೆಳಕಿಗೆ ಬರುತ್ತಾನೆ.”


ಬಳಿಕ ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಬಂದು ಅಲ್ಲಿ ರಾತ್ರಿ ಮಲಗಿದನು.


ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಕಟ್ಟಲ್ಪಟ್ಟಿರುವ ಊರು ಮರೆಯಾಗಿರಲಾರದು.


ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು” ಎಂದು ಹೇಳಿದನು.


ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಅವರು ಆತನನ್ನು ನಂಬಲಿಲ್ಲ.


ನನ್ನನ್ನು ನಂಬುವ ಒಬ್ಬನಾದರೂ ಕತ್ತಲಲ್ಲಿ ಇರಬಾರದೆಂದು, ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು