Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:41 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಯೆಶಾಯನು ಯೇಸುವಿನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಈ ಮಾತನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಯೇಸುವಿನ ಮಹಿಮೆಯನ್ನು ಮನಗಂಡು, ಅವರನ್ನು ಕುರಿತು ಮಾತನಾಡುವಾಗ ಯೆಶಾಯನು ಹೇಳಿದ ಮಾತುಗಳಿವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಯೆಶಾಯನು ಆತನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯದಲ್ಲಿ ಮಾತಾಡುತ್ತಿರುವಾಗ ಆ ಮಾತನ್ನು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಯೆಶಾಯನು ಆತನ (ಯೇಸುವಿನ) ಮಹಿಮೆಯನ್ನು ನೋಡಿದ್ದರಿಂದಲೇ ಹೀಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಯೆಶಾಯನು ಯೇಸುವಿನ ಮಹಿಮೆಯನ್ನು ಕಂಡಿದ್ದರಿಂದ ಅವರ ವಿಷಯವಾಗಿ ಇವುಗಳನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಇಸಾಯಿಯಾನ್ ತಸೆ ಸಾಂಗಲ್ಲೆ ಕಾಯ್ ಮಟ್ಲ್ಯಾರ್ ಜೆಜುಚಿ ಮಹಿಮಾ ಬಗಟಲ್ಲ್ಯಾನ್ ತಸೆಮನುನ್ ತೆನಿ ಅಶೆಚ್ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:41
13 ತಿಳಿವುಗಳ ಹೋಲಿಕೆ  

ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ.


ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.


ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪ ಕ್ಷಮಾಪಣೆಯನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿ ಹೇಳಿದ್ದಾರೆ” ಅಂದನು.


ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.


ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮೇಲೆ ಬೀಳಲು ಅವನು, “ಹೀಗೆ ಮಾಡಬೇಡ ನೋಡು, ನಾನು ನಿನಗೂ, ಯೇಸುವಿನ ಬಗ್ಗೆ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಸೇವೆಯನ್ನು ಮಾಡುವ ದಾಸನಾಗಿದ್ದೇನೆ, ದೇವರಿಗೆ ಆರಾಧನೆ ಮಾಡು, ಯೇಸುವಿನ ಸಾಕ್ಷಿಯು ಪ್ರವಾದನೆಯ ಆತ್ಮವೇ” ಎಂದು ಹೇಳಿದನು.


ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಯನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬುದನ್ನು ಅವರು ಪರಿಶೋಧನೆ ಮಾಡಿದರು.


ಯೇಸು ಅವನಿಗೆ, “ಫಿಲಿಪ್ಪನೇ, ನಾನು ಇಷ್ಟು ಕಾಲ ನಿಮ್ಮ ಜೊತೆಯಲ್ಲಿಯೇ ಇದ್ದರೂ ಇನ್ನೂ ನೀನು ನನ್ನನ್ನು ತಿಳಿಯಲಿಲ್ಲವೇ! ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ, ಮತ್ತು ನಮಗೆ ತಂದೆಯನ್ನು ತೋರಿಸು ಎಂದು ನೀನು ಹೇಳುವುದಾದರು ಹೇಗೆ?


ಧರ್ಮಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ತಿಳಿದು ಅವುಗಳನ್ನು ಪರಿಶೋಧಿಸುತ್ತಿರಾ? ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿ ಕೊಡುವವುಗಳಾಗಿವೆ.


ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು