Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಆದರೂ ಹಿರೀಸಭೆಯವರಲ್ಲಿಯೂ ಸಹ ಅನೇಕರು ಆತನನ್ನು ನಂಬಿದರು, ಆದರೆ ತಮಗೆ ಸಭೆಯಿಂದ ಬಹಿಷ್ಕಾರವಾದೀತೆಂದು, ಫರಿಸಾಯರ ನಿಮಿತ್ತ ಅವರು ಬಹಿರಂಗವಾಗಿ ಅದನ್ನು ಜನರ ಮುಂದೆ ಅರಿಕೆಮಾಡಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಯೆಹೂದ್ಯರಲ್ಲಿ ಹಲವುಮಂದಿ ಮುಖಂಡರಿಗೆ ಯೇಸುವಿನಲ್ಲಿ ವಿಶ್ವಾಸಮೂಡಿತು. ಆದರೆ ಫರಿಸಾಯರು ಪ್ರಾರ್ಥನಾಮಂದಿರಗಳಿಂದ ತಮಗೆ ಬಹಿಷ್ಕಾರ ಹಾಕಿಯಾರೆಂಬ ಅಂಜಿಕೆಯ ಕಾರಣ ಅವರು ತಮ್ಮ ವಿಶ್ವಾಸವನ್ನು ಬಯಲುಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಆದರೂ ಹಿರೀಸಭೆಯವರಲ್ಲಿಯೂ ಅನೇಕರು ಆತನನ್ನು ನಂಬಿದರು. ಆದರೆ ತಮಗೆ ಸಭೆಯಿಂದ ಬಹಿಷ್ಕಾರವಾದೀತೆಂದು ಫರಿಸಾಯರಿಗೆ ಅಂಜಿಕೊಂಡು ಅದನ್ನು ಜನರ ಮುಂದೆ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಆದರೆ ಅನೇಕ ಜನರು ಯೇಸುವಿನಲ್ಲಿ ನಂಬಿಕೆ ಇಟ್ಟರು. ಅನೇಕ ಯೆಹೂದ್ಯನಾಯಕರು ಸಹ ಯೇಸುವಿನಲ್ಲಿ ನಂಬಿಕೆಯಿಟ್ಟರು. ಆದರೆ ಅವರು ಫರಿಸಾಯರಿಗೆ ಹೆದರಿಕೊಂಡು ತಮ್ಮ ನಂಬಿಕೆಯನ್ನು ಬಹಿರಂಗಪಡಿಸಲಿಲ್ಲ. ತಮ್ಮನ್ನು ಫರಿಸಾಯರು ಸಭಾಮಂದಿರದಿಂದ ಬಹಿಷ್ಕರಿಸುತ್ತಾರೆ ಎಂಬ ಭಯ ಅವರಿಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಆದರೂ ಅಧಿಕಾರಿಗಳಲ್ಲಿ ಅನೇಕರು ಆ ಸಮಯದಲ್ಲಿ ಯೇಸುವನ್ನು ನಂಬಿದರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕಾರ ಆಗಬಾರದೆಂದು ಅವರು ತಮ್ಮ ನಂಬಿಕೆಯನ್ನು ಬಹಿರಂಗವಾಗಿ ಅರಿಕೆ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಉಲ್ಲೆ ಜುದೆವಾಂಚೆ ಅದಿಕಾರಿಬಿ ಜೆಜುವರ್ತಿ ವಿಶ್ವಾಸ್ ಕರಿತ್ ಖರೆ ಫಾರಿಜೆವಾಕ್ನಿ ಲಾಗುನ್ ತೆನಿ ತೊ ವಿಶ್ವಾಸ್ ದಾಕ್ವುನ್ ದಿ ನಸಿತ್ ಅಶೆಚ್ ಸಿನಾಗೊಗಾನಿತ್ನಾ ಭಾಯ್ರ್ ಘಾಲ್ತಲೆ ತೆಂಕಾ ನಕ್ಕೊ ಹೊಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:42
25 ತಿಳಿವುಗಳ ಹೋಲಿಕೆ  

ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ, ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ.


ಅವನ ತಂದೆ ತಾಯಿಗಳು ಯೆಹೂದ್ಯರಿಗೆ ಭಯಪಟ್ಟದ್ದರಿಂದ ಹೀಗೆ ಹೇಳಿದರು. ಏಕೆಂದರೆ ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ತೀರ್ಮಾನಿಸಿಕೊಂಡಿದ್ದರು.


ಆದರೂ ಯೆಹೂದ್ಯರ ಭಯದಿಂದ ಯಾರೂ ಆತನ ವಿಷಯದಲ್ಲಿ ಬಹಿರಂಗವಾಗಿ ಮಾತನಾಡಲಿಲ್ಲ.


ಮನುಷ್ಯನ ಭಯ ಉರುಲು, ಯೆಹೋವನ ಭರವಸ ಉದ್ಧಾರ.


“ಹಾಗಾದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುವನೋ, ನಾನು ಸಹ ಅವನನ್ನು ನನ್ನವನೆಂದು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು.


ಯೇಸುಕ್ರಿಸ್ತನು ದೇವರ ಮಗನಾಗಿದ್ದಾನೆಂದು ಯಾರು ಒಪ್ಪಿಕೊಳ್ಳುತ್ತಾರೋ ಅವರಲ್ಲಿ ದೇವರು ನೆಲೆಗೊಂಡಿರುತ್ತಾನೆ, ಹಾಗೂ ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.


ದೇವರಾತ್ಮ ಪ್ರೇರಿತವಾದ ನುಡಿಗಳು ಎಂದು ತಿಳಿದುಕೊಳ್ಳುವುದು ಹೇಗೆಂದರೆ, ಯೇಸು ಕ್ರಿಸ್ತನು ಮನುಷ್ಯ ರೂಪವನ್ನು ಧರಿಸಿಕೊಂಡು ಬಂದನು ಎಂದು ಒಪ್ಪಿಕೊಳ್ಳುವ ಆತ್ಮವು ದೇವರಿಂದ ಪ್ರೇರಿತವಾಗಿ ಬಂದದ್ದಾಗಿದೆ.


ಹೃದಯದಿಂದ ನಂಬುವುದರ ಮೂಲಕ ನೀತಿಯು ದೊರಕುತ್ತದೆ. ಬಾಯಿಂದ ಅರಿಕೆಮಾಡುವುದರ ಮೂಲಕ ರಕ್ಷಣೆಯಾಗುತ್ತದೆ.


ಅಪೊಸ್ತಲರು ತಾವು ಯೇಸುವಿನ ಹೆಸರಿನ ನಿಮಿತ್ತವಾಗಿ ಅವಮಾನಪಡುವುದಕ್ಕೆ ಯೋಗ್ಯರೆನಿಸಿಕೊಂಡೆವೆಂದು ಸಂತೋಷಪಟ್ಟರು.


ಇದಾದ ಮೇಲೆ ಯೆಹೂದ್ಯರ ಭಯದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾಯದ ಯೋಸೇಫನು ಯೇಸುವಿನ ದೇಹವನ್ನು ತೆಗೆದುಕೊಂಡು ಹೋಗುವುದಕ್ಕೆ ಅಪ್ಪಣೆಯಾಗಬೇಕೆಂದು ಪಿಲಾತನನ್ನು ಕೇಳಿಕೊಂಡನು. ಆಗ ಪಿಲಾತನು ಅಪ್ಪಣೆ ಕೊಡಲಾಗಿ, ಅವನು ಬಂದು ಆತನ ದೇಹವನ್ನು ತೆಗೆದುಕೊಂಡು ಹೋದನು.


ಅವರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವು ಬರಲಿದೆ.


ಏಕೆಂದರೆ ಅವನ ನಿಮಿತ್ತ ಅನೇಕ ಯೆಹೂದ್ಯರು ಯೇಸುವಿನಲ್ಲಿ ನಂಬಿಕೆಯಿಟ್ಟಿದ್ದರು.


ಆದುದರಿಂದ ಮರಿಯಳ ಬಳಿಗೆ ಬಂದಿದ್ದ ಯೆಹೂದ್ಯರಲ್ಲಿ ಅನೇಕರು ಯೇಸುವಿನ ಕಾರ್ಯವನ್ನು ನೋಡಿ ಆತನಲ್ಲಿ ನಂಬಿಕೆಯಿಟ್ಟರು.


ಈ ಮಾತಿಗೆ ಅವರು, “ನೀನು ಕೇವಲ ಪಾಪದಲ್ಲಿ ಹುಟ್ಟಿದವನು, ನೀನು ನಮಗೆ ಉಪದೇಶಮಾಡುತ್ತಿಯೋ?” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.


ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ, “ಗುರುವೇ, ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು. ನೀನು ಮಾಡುವಂಥ ಈ ಸೂಚಕ ಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವುದು ಯಾರಿಂದಲೂ ಆಗದು” ಎಂದು ಹೇಳಿದನು.


“ನಾನು ನಿಮಗೆ ಹೇಳುತ್ತೇನೆ, ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಮನುಷ್ಯಕುಮಾರನು ಸಹ ಆ ವ್ಯಕ್ತಿಯನ್ನು ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು.


“ಮನುಷ್ಯಕುಮಾರನ ನಿಮಿತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರ ಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು.


ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು, “ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ” ಎಂದು ಹೇಳಿದ್ದಾರಲ್ಲಾ; ಅವರಿಗಂತು ಅವಮಾನವಾಗುವುದು.


ನೀನು ಯಾರಿಗೆ ಹೆದರಿ ನನ್ನನ್ನು ಮರೆತು ನನಗೆ ಮೋಸಮಾಡಿದಿ? ಈ ದ್ರೋಹಕ್ಕೂ ಹಿಂದೆಗೆಯಲಿಲ್ಲವಲ್ಲಾ! ನೀನು ನನಗೆ ಅಂಜದೆ ಇರುವುದಕ್ಕೆ ನಾನು ಬಹುಕಾಲದಿಂದ ಸುಮ್ಮನೆ ಇದ್ದದ್ದೇ ಕಾರಣವಲ್ಲವೇ?.


ಇದನ್ನು ಕೇಳಿ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ಕಸ್ದೀಯರು ತಮ್ಮನ್ನು ಮೊರೆಹೊಕ್ಕಿರುವ ಯೆಹೂದ್ಯರಿಗೆ ನನ್ನನ್ನು ಒಪ್ಪಿಸುವರೋ ಏನೋ; ಅವರು ನನ್ನನ್ನು ಹಿಂಸಿಸಬಹುದು ಎಂದು ಶಂಕೆಪಡುತ್ತೇನೆ” ಎಂದು ಉತ್ತರಕೊಟ್ಟನು.


ತರುವಾಯ ಪಿಲಾತನು ಮುಖ್ಯಯಾಜಕರನ್ನೂ, ಅಧಿಕಾರಿಗಳನ್ನೂ, ಪ್ರಜೆಗಳನ್ನೂ ಒಟ್ಟಾಗಿ ಕರೆಯಿಸಿ,


ಜನರಲ್ಲಿ ಅನೇಕರು ಆತನನ್ನು ನಂಬಿ, “ಕ್ರಿಸ್ತನು ಬಂದಾಗ ಈತನು ಮಾಡಿದ್ದಕ್ಕಿಂತ ಹೆಚ್ಚು ಸೂಚಕ ಕಾರ್ಯಗಳನ್ನು ಮಾಡುವನೇನೋ?” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು