Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:48 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದೆ ಇರುವವನಿಗೆ ತೀರ್ಪುಮಾಡುವಂಥದ್ದು ಒಂದು ಇದೆ. ಅದು ನಾನು ಆಡುವ ಮಾತೇ, ಕಡೆಯ ದಿನದಲ್ಲಿ ಅದೇ ಅವನಿಗೆ ತೀರ್ಪುಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ನನ್ನನ್ನು ನಿರಾಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದೆ ಹೋದವನಿಗೆ ತೀರ್ಪುಕೊಡುವಂಥದ್ದು ಒಂದು ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ನನ್ನನ್ನು ಲಕ್ಷ್ಯಮಾಡದೆ ನನ್ನ ಮಾತುಗಳನ್ನು ಅಂಗೀಕರಿಸದೆ ಇರುವವನಿಗೆ ತೀರ್ಪುಮಾಡುವಂಥದು ಒಂದು ಇದೆ, ಅದು ಯಾವದಂದರೆ, ನಾನು ಆಡಿದ ಮಾತು; ಅದೇ ಅವನಿಗೆ ಕಡೇ ದಿನದಲ್ಲಿ ತೀರ್ಪುಮಾಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ನನ್ನಲ್ಲಿ ನಂಬಿಕೆ ಇಡದಿರುವವನಿಗೆ ಮತ್ತು ನಾನು ಹೇಳುವುದನ್ನು ತಿರಸ್ಕರಿಸುವವನಿಗೆ ತೀರ್ಪುಮಾಡುವಂಥದ್ದು ನಾನು ಆಡಿದ ಮಾತುಗಳೇ. ಅಂತಿಮ ದಿನದಂದು ಅವೇ ಅವನಿಗೆ ತೀರ್ಪುಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದವರಿಗೆ ತೀರ್ಪು ಮಾಡುವಂಥದ್ದು ಒಂದು ಇದೆ. ಅದು ನಾನು ಮಾತನಾಡಿದ ವಾಕ್ಯವೇ, ಅದೇ ಕಡೇ ದಿನದಲ್ಲಿ ಅವರಿಗೆ ತೀರ್ಪು ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 ಜೊ ಕೊನ್ ಮಾಕಾ ಇನ್ಕಾರ್ ಕರುನ್, ಮಾಜ್ಯಾ ತೊಂಡಾತ್ನಾ ಯೆಲ್ಲಿ ಶಬ್ದಾ ಮಾನುನ್ ಘೆಯ್ನಾ ತ್ಯಾಚ್ ಮಾಜ್ಯಾ ಗೊಸ್ಟಿಯಾ ತೆಂಚಿ ನಿತ್ ಕರ್‍ತಲೊ ಎಕ್ಲೊ ಹಾಯ್, ಆಕ್ರಿಚ್ಯಾ ದಿಸಿ ಮಿಯಾ ಬೊಲಲ್ಲ್ಯಾ ಗೊಸ್ಟಿಯಾಚ್ ತೆಚಿ ನಿತ್ ಹೊಯ್ ಸಾರ್ಕಿ ಕರ್‍ತಾತ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:48
36 ತಿಳಿವುಗಳ ಹೋಲಿಕೆ  

ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ, ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ, ನನ್ನನ್ನು ತಿರಸ್ಕಾರ ಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ತಿರಸ್ಕಾರ ಮಾಡುವವನಾಗಿದ್ದಾನೆ” ಅಂದನು.


ನಾನು ಸಾರುವ ಸುವಾರ್ತೆಯಲ್ಲಿ ಬೋಧಿಸಿರುವ ಪ್ರಕಾರ ದೇವರು ಯೇಸು ಕ್ರಿಸ್ತನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ಹಿಡಿದು ವಿಚಾರಿಸುವ ದಿನದಂದು ಸೂಚಿಸುತ್ತದೆ. ಆ ದಿನದಲ್ಲಿ ಇದೆಲ್ಲಾ ತಿಳಿದು ಬರುವುದು.


ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ವಿಧೇಯರಾಗದವರಿಗೂ ಪ್ರತಿಕಾರ ಮಾಡುವನು.


ಮಾರ್ಥಳು ಆತನಿಗೆ, “ಸತ್ತವರಿಗೆ ಕಡೆಯ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ಎದ್ದು ಬರುವನೆಂದು ನಾನು ಬಲ್ಲೆನು” ಅಂದಳು.


ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?


ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು.


ನಮ್ಮ ಮುಂದಿಟ್ಟಿರುವ ಈ ಅತ್ಯಂತ ಶ್ರೇಷ್ಠವಾದ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದಾದರೂ ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು ಮತ್ತು ಆತನಿಂದ ಕೇಳಿದವರು ಇದನ್ನು ನಮಗೆ ದೃಢಪಡಿಸಿಕೊಟ್ಟರು.


ನಾನು ತಂದೆಯ ಮುಂದೆ ನಿಮ್ಮ ಮೇಲೆ ಅಪವಾದ ಹೊರಿಸುತ್ತಿದ್ದೇನೆಂದು ತಿಳಿಯಬೇಡಿರಿ. ನಿಮ್ಮ ಮೇಲೆ ಅಪವಾದ ಹೊರಿಸುವವನು ಒಬ್ಬನಿದ್ದಾನೆ; ಅವನೇ ನೀವು ನಿರೀಕ್ಷೆಯಿಟ್ಟಿರುವ ಮೋಶೆ!


ಯೇಸು ಅವರಿಗೆ, “‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ಮತ್ತು ನಮ್ಮ ಕಣ್ಣುಗಳಿಗೆ ಅದು ಆಶ್ಚರ್ಯವಾಗಿ ತೋರುತ್ತದೆ ಎಂಬ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?’


ನೀವಾದರೋ ನಿಮ್ಮನ್ನು ಕಷ್ಟಸಂಕಟಗಳಿಂದ ಬಿಡಿಸಿದ ನಿಮ್ಮ ದೇವರಾದ ನನ್ನನ್ನು ಈಗ ತಿರಸ್ಕರಿಸಿ, ನಮಗೊಬ್ಬ ಅರಸನನ್ನು ನೇಮಿಸೆಂದು ಹೇಳುತ್ತೀರಿ ಅನ್ನುತ್ತಾನೆ. ಆದುದರಿಂದ ನೀವು ಕುಲ ಕುಲವಾಗಿಯೂ ಗೋತ್ರಗೋತ್ರವಾಗಿಯೂ ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಿರಿ” ಎಂದು ಅಪ್ಪಣೆ ಮಾಡಿದನು.


ನಾವು ಸಾರುವ ಸುವಾರ್ತೆಯು ಕೆಲವರಿಗೆ ಮರೆಯಾಗಿರುವುದಾದರೆ ನಾಶಮಾರ್ಗದಲ್ಲಿರುವವರಿಗೇ ಅದು ಮರೆಯಾಗಿರುವುದು.


ಆದರೆ ಯೇಸು ಅವರನ್ನು ದೃಷ್ಟಿಸಿ ನೋಡಿ, ಹಾಗಾದರೆ “‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು’ ಎಂದು ಬರೆದಿರುವ ಮಾತೇನು?


ಆದರೆ ಮೊದಲು ಆತನು ಬಹು ಕಷ್ಟಗಳನ್ನನುಭವಿಸಿ ಈಗಿನ ಕಾಲದ ಸಂತತಿಯಿಂದ ತಿರಸ್ಕರಿಸಲ್ಪಡಬೇಕು.


ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ, ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಮಹಾಪ್ರಭಾವದೊಡನೆ ಬರುವಾಗ ಅವನ ಕುರಿತು ನಾಚಿಕೊಳ್ಳುವನು.


ಯೇಸು ಅವರಿಗೆ, “ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕರಿಸಲ್ಪಟ್ಟು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ” ಎಂದು ಹೇಳಿದನು.


ಆದರೆ ಫರಿಸಾಯರೂ ಧರ್ಮೋಪದೇಶಕರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ಅವರು ತಮ್ಮ ಕುರಿತಾದ ದೈವಸಂಕಲ್ಪವನ್ನು ನಿರಾಕರಿಸಿದರು.


ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು.


“‘ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.


“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;


ಆಗ ಯೆಹೋವನು ಸಮುವೇಲನಿಗೆ, “ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳ್ವಿಕೆಯನ್ನು ಬೇಡವೆನ್ನುತ್ತಿದ್ದಾರೆ.


ಆ ಪ್ರವಾದಿಯ ಮಾತನ್ನು ಕೇಳದಿರುವ ಪ್ರತಿಯೊಬ್ಬನು ನಮ್ಮ ಜನರೊಳಗಿಂದ ಸಂಪೂರ್ಣವಾಗಿ ನಾಶವಾಗುವನು’ ಎಂಬುದೇ.


ಇದಲ್ಲದೆ ಆತನು, ಮನುಷ್ಯಕುಮಾರನು ಬಹು ಕಷ್ಟಗಳನ್ನು ಅನುಭವಿಸಿ ಹಿರಿಯರಿಂದಲೂ, ಮುಖ್ಯಯಾಜಕರಿಂದಲೂ, ಶಾಸ್ತ್ರಿಗಳಿಂದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದನು.


ನ್ಯಾಯವಿಚಾರಣೆಯ ದಿನದಲ್ಲಿ ಅಂಥ ಊರಿನ ಗತಿಯು ಸೊದೋಮ್ ಗೊಮೋರಗಳ ಸೀಮೆಯ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ನನ್ನನ್ನು ಕಳುಹಿಸಿದಾತನ ಚಿತ್ತವು ಏನೆಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಯಾರನ್ನೂ ಕಳೆದುಕೊಳ್ಳದೆ ಅವರನ್ನು ಕಡೆ ದಿನದಲ್ಲಿ ಎಬ್ಬಿಸಬೇಕೆಂಬುದೇ.


ದೇವರಿಗೆ ಸೇರಿದವನು ದೇವರ ವಾಕ್ಯಕ್ಕೆ ಕಿವಿಗೊಡುತ್ತಾನೆ. ನೀವು ದೇವರಿಗೆ ಸೇರಿದವರಲ್ಲದ ಕಾರಣ ನೀವು ದೇವರ ವಾಕ್ಯಕ್ಕೆ ಕಿವಿಗೊಡುವುದಿಲ್ಲ” ಎಂದು ಹೇಳಿದನು.


ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ” ಅಂದನು.


ಏಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಸಕ್ರಿಯವಾದದ್ದು ಮತ್ತು ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.


ಸಭೆಯಾಗಿ ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ, ಆ ದಿನವು ಸಮೀಪಿಸುತ್ತಾ ಬರುತ್ತದೆಂದು ನೀವು ತಿಳಿದುಕೊಂಡಿರುವುದರಿಂದ ಒಬ್ಬರನ್ನೊಬ್ಬರು ಮತ್ತಷ್ಟು ಹೆಚ್ಚಾಗಿಯೇ ಪ್ರೋತ್ಸಾಹಿಸುತ್ತಿರೋಣ.


ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ.


ಕಡೆ ದಿನಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು ಕುಚೋದ್ಯ ಮಾಡುತ್ತಾ,


ಆದರೆ ಈಗಿನ ಭೂಮ್ಯಾಕಾಶಗಳು ಅದೇ ವಾಕ್ಯದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲ್ಪಟ್ಟಿವೆ. ಅವು ನ್ಯಾಯ ತೀರ್ಪಿನ ದಿನಕ್ಕಾಗಿ ಮತ್ತು ಭಕ್ತಿಹೀನರ ನಾಶಕ್ಕಾಗಿ ಉಳಿಸಲ್ಪಟ್ಟಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು