Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅವನು ಹೊರಗೆ ಹೋದ ಮೇಲೆ ಯೇಸುವು, “ಈಗ ಮನುಷ್ಯಕುಮಾರನು ಮಹಿಮೆ ಹೊಂದುತ್ತಾನೆ, ಮತ್ತು ದೇವರು ಆತನಲ್ಲಿ ಮಹಿಮೆ ಹೊಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಯೂದನು ಹೊರಟುಹೋದಮೇಲೆ ಯೇಸು ಸ್ವಾಮಿ ಹೀಗೆಂದರು: “ಈಗ ನರಪುತ್ರನ ಮಹಿಮೆ ಪ್ರಕಟವಾಗುವುದು. ಆತನಲ್ಲಿ ದೇವರ ಮಹಿಮೆಯೂ ಪ್ರಕಟವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅವನು ಹೊರಗೆ ಹೋದ ಮೇಲೆ ಯೇಸು - ಈಗ ಮನುಷ್ಯಕುಮಾರನು ಮಹಿಮೆಪಟ್ಟಿದ್ದಾನೆ, ಮತ್ತು ದೇವರು ಆತನಲ್ಲಿ ಮಹಿಮೆಪಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯೂದನು ಹೊರಟುಹೋದ ಮೇಲೆ ಯೇಸು, “ಈಗ ಮನುಷ್ಯಕುಮಾರನಿಗೆ ಮಹಿಮೆಯಾಗುವುದು. ಅಲ್ಲದೆ, ಮನುಷ್ಯಕುಮಾರನ ಮೂಲಕ ದೇವರಿಗೂ ಮಹಿಮೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅವನು ಹೊರಟುಹೋದ ಮೇಲೆ ಯೇಸು, “ಈಗ ಮನುಷ್ಯಪುತ್ರನಾದ ನಾನು ಮಹಿಮೆ ಹೊಂದಲಿದ್ದೇನೆ. ದೇವರೂ ನನ್ನಲ್ಲಿ ಮಹಿಮೆ ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಜುದಾಸ್ ಗೆಲ್ಲ್ಯಾ ತನ್ನಾ, ಜೆಜುನ್, “ಅತ್ತಾ ಮಾನ್ಸಾಚ್ಯಾ ಲೆಕಾಚಿ ಮಹಿಮಾ ದಿಸುಕ್ ಲಾಗ್ಲಾ, ಅನಿ ತ್ಯೆಚ್ಯಾ ವೈನಾ ದೆವಾಚಿಚ್ ಮಹಿಮಾ ದಿಸುನ್ ಯೆತಾ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:31
27 ತಿಳಿವುಗಳ ಹೋಲಿಕೆ  

ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್.


ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ನೆರವೇರಿಸುವೆನು. ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವುದು.


ಆದರೆ ಯೇಸು ತನ್ನನ್ನು ನಂಬುವವರು ಹೊಂದಲಿರುವ ಪವಿತ್ರಾತ್ಮವರವನ್ನು ಕುರಿತು ಹೀಗೆ ಹೇಳಿದನು. ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ ಕಾರಣ ಪವಿತ್ರಾತ್ಮವರವು ಇನ್ನೂ ಕೊಡಲ್ಪಟ್ಟಿರಲಿಲ್ಲ.


ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ.


ದೇವರು ನಮ್ಮ ಕರ್ತನಾದ ಕ್ರಿಸ್ತಯೇಸುವಿನಲ್ಲಿ ಮಾಡಿದ ನಿತ್ಯಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು, ಪರಲೋಕದಲ್ಲಿ ರಾಜತ್ವಗಳಿಗೂ, ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂದು ಉದ್ದೇಶಿಸಿದನು.


ನಮ್ಮ ಪೂರ್ವಿಕರಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಪಿಲಾತನಿಗೆ ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ, ಆತನ ಮುಂದೆ ಆತನನ್ನು ಧಿಕ್ಕರಿಸಿ ಬೇಡವೆಂದು ಕೂಗಿದ್ದೀರಿ.


“ಆದುದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬುದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ” ಎಂದು ಹೇಳಿದನು.


ಆತನು ನನ್ನದನ್ನು ಸ್ವೀಕರಿಸಿ ನಿಮಗೆ ತಿಳಿಯಪಡಿಸುತ್ತಾನಾದ್ದರಿಂದ ನನ್ನನ್ನೇ ಮಹಿಮೆಪಡಿಸುವನು.


ಆಗ ಯೇಸು ಅವರಿಗೆ, “ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆಯು ಬಂದಿದೆ.


ಯೇಸು ಇದನ್ನು ಕೇಳಿ, “ಈ ರೋಗವು ಮರಣಕ್ಕಾಗಿ ಬಂದದ್ದಲ್ಲ; ಇದರಿಂದ ದೇವಕುಮಾರನಿಗೆ ಮಹಿಮೆ ಉಂಟಾಗುವಂತೆ ದೇವರ ಮಹಿಮೆಗೋಸ್ಕರ ಬಂದದ್ದು” ಎಂದು ಹೇಳಿದನು.


ತಂದೆಯಾದ ದೇವರ ಮಹಿಮೆಗಾಗಿ ಪ್ರತಿಯೊಂದು ನಾಲಿಗೆಯು ಯೇಸು ಕ್ರಿಸ್ತನನ್ನು ಕರ್ತನೆಂದು ಅರಿಕೆಮಾಡುವುದು.


ಮುಂದಿನ ಯುಗಗಳಲ್ಲಿ ನಮಗೆ ತೋರಿಸಬೇಕೆಂದು ಕ್ರಿಸ್ತಯೇಸುವಿನಲ್ಲಿರುವ ನಮ್ಮನ್ನು ಆತನೊಂದಿಗೆ ಎಬ್ಬಿಸಿ, ಪರಲೋಕದಲ್ಲಿ ಯೇಸುಕ್ರಿಸ್ತನೊಂದಿಗೆ ನಮ್ಮನ್ನು ಕೂರಿಸಿದ್ದಾನೆ.


ಕ್ರಿಸ್ತನಲ್ಲಿ ಮೊಟ್ಟ ಮೊದಲು ನಿರೀಕ್ಷೆಯನ್ನಿಟ್ಟ ನಾವು ಆತನ ಮಹಿಮೆಯನ್ನು ಸ್ತುತಿಸುವವರಾಗಿರಬೇಕೆಂದು ಹೀಗೆ ಮಾಡಿದನು.


ನಾವೆಲ್ಲರೂ ಮುಸುಕು ತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ನಾವೆಲ್ಲರೂ ಕರ್ತನ ದಾನವಾಗಿರುವ ಆತ್ಮದ ಮಹಿಮೆಯಿಂದ ಅಧಿಕ ಮಹಿಮೆಗೆ ಹೋಗುತ್ತಾ, ಆ ಮಹಿಮೆಯ ಸಾರೂಪ್ಯವುಳ್ಳವರೇ ಆಗುತ್ತೇವೆ. ಇದು ಆತ್ಮನಾಗಿರುವ ಕರ್ತನ ಕಾರ್ಯವೇ ಸರಿ.


ತಂದೆಯೇ ನಿನ್ನ ಹೆಸರನ್ನು ಮಹಿಮೆಪಡಿಸಿಕೋ” ಎಂದನು. ಅದಕ್ಕೆ, “ಮಹಿಮೆಪಡಿಸಿದ್ದೇನೆ ತಿರುಗಿ ಮಹಿಮೆಪಡಿಸುವೆನು” ಎಂಬ ಸ್ವರವು ಪರಲೋಕದಿಂದ ಬಂದಿತು.


ಆದರೆ ನಾನು ಹೊಂದತಕ್ಕ ದೀಕ್ಷಾಸ್ನಾನ ಒಂದುಂಟು, ಅದು ನೆರವೇರುವ ತನಕ ನನಗೆ ನೆಮ್ಮದಿಯಿಲ್ಲ.


ಯೇಸು ಅವನಿಗೆ, “ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು.


ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ, ಆಗ ಅವರು ಯಾವ ಸಂಗತಿಗಳನ್ನು ಕುರಿತಾಗಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಆತನ ಬರೋಣದ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು