Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆಗ ಯೇಸು ಅವನಿಗೆ, “ನೀನು ನನಗಾಗಿ ಪ್ರಾಣವನ್ನೇ ಕೊಡುವೆಯಾ? ನಿನಗೆ ನಿಜನಿಜವಾಗಿ ಹೇಳುತ್ತೇನೆ: ನೀನು ನನ್ನನ್ನು ಮೂರು ಸಾರಿ ನಿರಾಕರಿಸುವ ತನಕ ಕೋಳಿಯು ಕೂಗುವುದೇ ಇಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಆಗ ಯೇಸು, “ನನಗಾಗಿ ಪ್ರಾಣವನ್ನುಕೊಡಲು ಸಿದ್ಧನಿರುವೆಯಾ? ನಾನು ನಿನಗೆ ನಿಜವಾಗಿ ಹೇಳುತ್ತೇನೆ ಕೇಳು: ನೀನು ನನ್ನನ್ನು ಅರಿಯೆನೆಂದು ಮೂರುಬಾರಿ ತಿರಸ್ಕರಿಸುವ ತನಕ ನಾಳೆ ಮುಂಜಾನೆ ಕೋಳಿ ಕೂಗುವುದಿಲ್ಲ,” ಎಂದು ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಯೇಸು - ನನಗಾಗಿ ಪ್ರಾಣ ಕೊಟ್ಟೀಯಾ? ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನ ವಿಷಯದಲ್ಲಿ ಅವನನ್ನು ಅರಿಯೆನೆಂದು ಮೂರು ಸಾರಿ ಹೇಳುವ ತನಕ ಕೋಳಿ ಕೂಗುವದೇ ಇಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಯೇಸು, “ನೀನು ನನಗೋಸ್ಕರ ನಿನ್ನ ಪ್ರಾಣವನ್ನು ನಿಜವಾಗಿಯೂ ಕೊಡುವೆಯಾ? ನಾನು ನಿನಗೆ ಸತ್ಯವನ್ನು ಹೇಳುತ್ತೇನೆ, ನಾಳೆ ಮುಂಜಾನೆ ಕೋಳಿ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ತಿಳಿದಿಲ್ಲವೆಂದು ಮೂರುಸಾರಿ ಹೇಳುವೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಯೇಸು ಅವನಿಗೆ, “ನೀನು ನನಗಾಗಿ ನಿನ್ನ ಪ್ರಾಣವನ್ನೇ ಕೊಡುವೆಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ನಿರಾಕರಿಸುವ ತನಕ ಹುಂಜ ಕೂಗುವುದೇ ಇಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ತನ್ನಾ ಜೆಜುನ್ ತೆಕಾ, ತಿಯಾ ಖರೆಚ್! ಮಾಜೆಸಾಟಿ ಮರುಕ್ ತಯಾರ್ ಹಾಸ್ ಕಾಯ್? ಮಿಯಾ ತುಕಾ ಖರೆ ಹೊತ್ತೆ ಸಾಂಗುಕ್ ಲಾಗ್ಲಾ, ಕೊಂಬೊ ಭೊಕುಚ್ಯಾ ಅದ್ದಿ ತಿಯಾ ತಿನ್ದಾ ತುಕಾ ಮಾಜಿ ವಳಕುಚ್ ನಾ ಮನುನ್ ಸಾಂಗ್ತೆಯ್, ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:38
16 ತಿಳಿವುಗಳ ಹೋಲಿಕೆ  

ಆತನು, “ಪೇತ್ರನೇ, ನನ್ನ ವಿಷಯದಲ್ಲಿ ಇವನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವ ತನಕ ಈಹೊತ್ತು ಕೋಳಿ ಕೂಗುವುದಿಲ್ಲವೆಂದು ನಿನಗೆ ಹೇಳುತ್ತೇನೆ” ಅಂದನು.


ಯೇಸು ಪೇತ್ರನಿಗೆ, “ನಿನಗೆ ಸತ್ಯವಾಗಿ ಹೇಳುತ್ತೇನೆ, ಇದೇ ರಾತ್ರಿಯಲ್ಲಿ ಕೋಳಿ ಕೂಗುವುದಕ್ಕಿಂತ ಮೊದಲೇ ನೀನು ನನ್ನನ್ನು ಮೂರು ಸಾರಿ ನಿರಾಕರಿಸುವಿ” ಅಂದನು.


ಯೇಸುವು ಆತನಿಗೆ, “ಸತ್ಯವಾಗಿ ಹೇಳುತ್ತೇನೆ ಇಂದು ಈ ರಾತ್ರಿಯಲ್ಲಿಯೇ ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ನಿರಾಕರಿಸುವೆ” ಎಂದನು.


ಗರ್ವದಿಂದ ಭಂಗ, ಉಬ್ಬಿನಿಂದ ದೊಬ್ಬು.


ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳದಂತೆ ಎಚ್ಚರಿಕೆಯಾಗಿರಲಿ.


ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ತರುವುದು, ದೀನಮನಸ್ಸುಳ್ಳವನು ಮಾನವನ್ನು ಪಡೆಯುವನು.


ತನ್ನಲ್ಲೇ ಭರವಸವಿಡುವವನು ಮೂಢನು, ಜ್ಞಾನದಿಂದ ನಡೆಯುವವನು ಉದ್ಧಾರ ಹೊಂದುವನು.


ಆದರೆ ಅವನು, “ಕರ್ತನೇ, ನಿನ್ನ ಸಂಗಡ ಸೆರೆಮನೆಗೆ ಹೋಗುವುದಕ್ಕೂ ಸಾಯುವುದಕ್ಕೂ ನಾನು ಸಿದ್ಧನಾಗಿದ್ದೇನೆ” ಅನ್ನಲು,


ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು.


ಅದಕ್ಕೆ ಯೇಸು, “ಈಗ ನೀವು ನಂಬುತ್ತೀರಿ.


ಹೀಗೆ ಮೂರು ಸಾರಿ ಆಯಿತು. ಅನಂತರ ಎಲ್ಲವೂ ತಿರುಗಿ ಆಕಾಶಕ್ಕೆ ಎತ್ತಲ್ಪಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು