Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ನೆರವೇರಿಸುವೆನು. ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಕೇಳಿಕೊಳ್ಳುವುದನ್ನೆಲ್ಲಾ ಮಾಡುತ್ತೇನೆ. ಹೀಗೆ ಪಿತನಿಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ, ಅದನ್ನು ನೆರವೇರಿಸುವೆನು; ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಮತ್ತು ನೀವು ನನ್ನ ಹೆಸರಿನಲ್ಲಿ ಏನಾದರೂ ಬೇಡಿಕೊಂಡರೆ, ನಾನು ನಿಮಗೋಸ್ಕರ ಅದನ್ನು ನೆರವೇರಿಸುವೆನು. ಆಗ ಮಗನ ಮೂಲಕವಾಗಿ ತಂದೆಗೆ ಮಹಿಮೆ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನನ್ನ ಹೆಸರಿನಲ್ಲಿ ನೀವು ಏನೇನು ಕೇಳಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ತಂದೆಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಅನಿ ಮಿಯಾ ತುಮಿ ಮಾಜ್ಯಾ ನಾವಾನ್ ಕಾಯ್ ಮಾಗ್ತ್ಯಾಶಿ ತೆ ಸಗ್ಳೆ ಕರ್‍ತಾ. ಅಶೆ ಲೆಕ್ ಬಾಬಾಚಿ ಮಹಿಮಾ ವೈನಾ ದಾಕ್ವುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:13
36 ತಿಳಿವುಗಳ ಹೋಲಿಕೆ  

ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನಾದರೂ ಬೇಡಿಕೊಳ್ಳಿರಿ ಅದು ನಿಮಗೆ ದೊರೆಯುವುದು.


ಆದಕಾರಣ ನೀವು ಪ್ರಾರ್ಥನೆಮಾಡಿ ಏನೇನು ಬೇಡಿಕೊಳ್ಳುತ್ತೀರೋ ಅದನ್ನೆಲ್ಲಾ ಹೊಂದಿದ್ದೇವೆಂದು ನಂಬಿರಿ; ಅದು ನಿಮಗೆ ಸಿಕ್ಕುವುದೆಂದು ನಿಮಗೆ ಹೇಳುತ್ತೇನೆ.


ನೀವು ನಂಬಿಕೊಂಡು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನೆಲ್ಲಾ ಹೊಂದುವಿರಿ” ಅಂದನು.


“ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು;


ಮತ್ತು ದೇವರ ಚಿತ್ತಾನುಸಾರವಾಗಿ ಏನಾದರೂ ಬೇಡಿಕೊಂಡರೆ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬ ಭರವಸೆಯು ಆತನಲ್ಲಿ ನಮಗುಂಟು.


ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವುದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.


ಆತನ ಆಜ್ಞೆಗಳನ್ನು ಕೈಕೊಂಡು ಆತನಿಗೆ ಮೆಚ್ಚಿಕೆಯಾಗುವ ಕಾರ್ಯಗಳನ್ನು ಮಾಡುವವರಾದರೆ ನಾವು ಏನು ಬೇಡಿಕೊಂಡರೂ ಆತನಿಂದ ಹೊಂದುವೆವು.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.


ನೀವು ನನ್ನ ಹೆಸರಿನಲ್ಲಿ ನನ್ನನ್ನು ಏನಾದರೂ ಬೇಡಿಕೊಂಡರೆ ನಾನು ಅದನ್ನು ನೆರವೇರಿಸುವೆನು.


ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.


ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.


ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.


ದೇವರ ಸನ್ನಿಧಿಯಲ್ಲಿ ಸೇರುವುದಕ್ಕೆ ನಮಗಿರುವ ಭರವಸೆಯೂ ಧೈರ್ಯವೂ ಕ್ರಿಸ್ತನಲ್ಲಿ ಇಟ್ಟಿರುವ ನಂಬಿಕೆಯ ಮೂಲಕ ಆತನಲ್ಲಿಯೇ ನಮಗಿದೆ.


ಆ ದಿನದಲ್ಲಿ ನೀವು ನನ್ನ ಹೆಸರಿನಲ್ಲಿ ಕೇಳಿಕೊಳ್ಳುವಿರಿ, ನಿಮ್ಮ ಪರವಾಗಿ ನಾನು ತಂದೆಯನ್ನು ಬೇಡಿಕೊಳ್ಳುವೆನೆಂದು ನಾನು ನಿಮಗೆ ಹೇಳುವುದಿಲ್ಲ.


ನಾನೂ ಮತ್ತು ನನ್ನ ತಂದೆಯೂ ಒಂದಾಗಿದ್ದೇವೆ” ಎಂದನು.


ಇದರಿಂದ ಆತನ ಮೂಲಕ ಉಭಯತ್ರರು ಒಂದೇ ಆತ್ಮನಲ್ಲಿ ತಂದೆಯ ಬಳಿಗೆ ಪ್ರವೇಶಿಸಲು ಮಾರ್ಗವಾಯಿತು.


ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ ಮತ್ತು ತಂದೆಯಾದ ದೇವರಿಗೆ ಆತನ ಮೂಲಕ ಕೃತಜ್ಞತಾಸ್ತುತ್ತಿಯನ್ನು ಸಲ್ಲಿಸಿರಿ.


ಜಾತ್ರೆಯ ಮಹಾದಿನವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು “ಯಾವನಿಗಾದರೂ ನೀರಡಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.


ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.


ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.


ಯೇಸು ಕೂಗಿ ಹೇಳಿದ ಮಾತೇನಂದರೆ, “ನನ್ನನ್ನು ನಂಬುವವನು ನನ್ನನ್ನೇ ನಂಬುವವನಲ್ಲದೇ ನನ್ನನ್ನು ಕಳುಹಿಸಿಕೊಟ್ಟಾತನನ್ನು ಸಹ ನಂಬುವವನಾಗಿದ್ದಾನೆ.


ಹಾಗೆಯೇ ನಾನು ನಿಮಗೆ ಹೇಳುವುದೇನಂದರೆ, ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.


ಯೇಸು ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವುದನ್ನು ಕಂಡು ಮಗನು ಮಾಡುತ್ತಾನೆಯೇ, ಹೊರತು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು. ಏಕೆಂದರೆ ಆತನು ಯಾವುದನ್ನೆಲ್ಲಾ ಮಾಡುವನೋ ಹಾಗೆಯೇ ಮಗನೂ ಮಾಡುತ್ತಾನೆ.


ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.


ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.


ಹೀಗಿರಲಾಗಿ ಯಾವ ತಂದೆಯಿಂದ ಭೂಪರಲೋಕಗಳಲ್ಲಿರುವ ಪ್ರತಿ ಜನವೂ ಹೆಸರುಗೊಂಡಿರುವುದೋ ಆ ತಂದೆಯ ಮುಂದೆ ನಾನು ಮೊಣಕಾಲೂರಿಕೊಂಡು,


ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು” ಎಂದು ಹೇಳಿದನು.


ಅದಕ್ಕೆ ಯೇಸು “ದೇವರ ವರವೇನೆಂಬುದೂ ಮತ್ತು ನನಗೆ ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವಾತನು ಯಾರೆಂಬುದೂ ನಿನಗೆ ತಿಳಿದಿದ್ದರೆ ನೀನೇ ಅವನನ್ನು ಕೇಳುತ್ತಿದ್ದೆ. ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು” ಅಂದನು.


ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ನಾನು ಹೋಗುವುದು ನಿಮಗೆ ಒಳ್ಳೆಯದು, ಹೇಗೆಂದರೆ ನಾನು ಹೋಗದಿದ್ದರೆ ಆ ಸಹಾಯಕನು ನಿಮ್ಮ ಬಳಿಗೆ ಬರುವುದಿಲ್ಲ. ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸಿಕೊಡುತ್ತೇನೆ.


ಅವನು ಹೊರಗೆ ಹೋದ ಮೇಲೆ ಯೇಸುವು, “ಈಗ ಮನುಷ್ಯಕುಮಾರನು ಮಹಿಮೆ ಹೊಂದುತ್ತಾನೆ, ಮತ್ತು ದೇವರು ಆತನಲ್ಲಿ ಮಹಿಮೆ ಹೊಂದಿದ್ದಾನೆ.


ಆದ್ದರಿಂದ ಅನ್ಯಭಾಷೆಯನ್ನಾಡುವವನು ತನಗೆ ಅದರ ಅರ್ಥವನ್ನು ವಿವೇಚಿಸಿ ಹೇಳುವ ವರಕ್ಕಾಗಿ ದೇವರನ್ನು ಪ್ರಾರ್ಥಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು