Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 15:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ದಣಿಗಿಂತ ಆಳು ದೊಡ್ಡವನಲ್ಲವೆಂಬುದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕ ಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಕೈಗೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಗೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಧಣಿಗಿಂತಲೂ ದಾಸನು ದೊಡ್ಡವನಲ್ಲವೆಂದು ನಾನು ನಿಮಗೆ ಹೇಳಿದ್ದನ್ನು ನೆನಪಿಗೆ ತಂದುಕೊಳ್ಳಿ. ಅವರು ನನ್ನನ್ನು ಹಿಂಸೆಗೆ ಗುರಿಮಾಡಿದಂತೆ ನಿಮ್ಮನ್ನೂ ಹಿಂಸೆಗೆ ಗುರಿಮಾಡುವರು. ನನ್ನ ಬೋಧನೆಯ ಮಾತನ್ನು ಅವರು ಅನುಸರಿಸಿ ನಡೆದರೆ ನಿಮ್ಮ ಬೋಧನೆಯ ಮಾತನ್ನು ಅನುಸರಿಸಿ ನಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ದಣಿಗಿಂತ ಆಳು ದೊಡ್ಡವನಲ್ಲವೆಂಬದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು; ಅವರು ನನ್ನ ಮಾತನ್ನು ಕೈಕೊಂಡು ನಡೆದರೆ ನಿಮ್ಮ ಮಾತನ್ನು ಸಹ ಕೈಕೊಂಡು ನಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಸೇವಕನು ತನ್ನ ಒಡೆಯನಿಗಿಂತ ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಿಸಿಕೊಳ್ಳಿ. ಜನರು ನನ್ನನ್ನು ಹಿಂಸಿಸಿದಂತೆ ನಿಮ್ಮನ್ನೂ ಹಿಂಸಿಸುವರು ಮತ್ತು ನನ್ನ ಉಪದೇಶಕ್ಕೆ ವಿಧೇಯರಾದರೆ ನಿಮ್ಮ ಉಪದೇಶಕ್ಕೂ ವಿಧೇಯರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ‘ಧಣಿಗಿಂತ ಆಳು ದೊಡ್ಡವನಲ್ಲ,’ ಎಂದು ನಾನು ನಿಮಗೆ ಹೇಳಿದ ಮಾತನ್ನು ನೆನಪಿಗೆ ತಂದುಕೊಳ್ಳಿರಿ. ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಅನುಸರಿಸಿದರೆ ನಿಮ್ಮ ಮಾತನ್ನು ಸಹ ಅನುಸರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಮಿಯಾ ತುಮ್ಕಾ ಸಾಂಗಲ್ಲೆ ಯಾದ್ ಥವ್ನ್ ಘೆವಾ ಆಳ್ ಅಪ್ನಾಚ್ಯಾ ಧನಿಯಾಚ್ಯಾನ್ಕಿಬಿ ಮೊಟೊ ನ್ಹಯ್ ಜರ್ ತರ್ ಲೊಕಾ ಮಾಕಾ ತರಾಸ್ ದಿತ್ಯಾತ್ , ತರ್ ಲೊಕಾ ತುಮ್ಕಾಬಿ ತರಾಸ್ ದಿತ್ಯಾತುಚ್, ತೆನಿ ಮಾಜ್ಯಾ ಶಿಕಾಪಾಕ್ ಖಾಲ್ತಿ ಹೊಲ್ಯಾನಿತರ್, ತುಮ್ಚ್ಯಾಬಿ ಶಿಕಾಪಾಕ್ನಿ ಖಾಲ್ತಿ ಹೊತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 15:20
22 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವಿನಲ್ಲಿ ಸದ್ಭಕ್ತರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ತನ್ನ ದಣಿಗಿಂತ ಆಳು ದೊಡ್ಡವನಲ್ಲ. ಹಾಗೆಯೇ ಕಳುಹಿಸಲ್ಪಟ್ಟವನು ಕಳುಹಿಸಿದವನಿಗಿಂತ ದೊಡ್ಡವನಲ್ಲ.


“ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ, ಒಡೆಯನಿಗಿಂತ ಆಳು ದೊಡ್ಡವನಲ್ಲ.


ಇಸ್ರಾಯೇಲ್ ವಂಶದವರೋ ನಿನಗೆ ಕಿವಿಗೊಡಲು ಸಿದ್ಧರಿಲ್ಲ; ನನಗೂ ಕಿವಿಗೊಡಲು ಸಿದ್ಧರಿಲ್ಲ; ಅವರೆಲ್ಲರೂ ನಾಚಿಕೆಗೆಟ್ಟವರೂ, ಹಟಮಾರಿಗಳು ಆಗಿದ್ದಾರೆ.


ಹಿಂಸೆಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ. ಕೆಡವಲ್ಪಟ್ಟವರಾಗಿದ್ದರೂ ನಶಿಸಿಹೊಗುವವರಲ್ಲ.


ಸ್ವಂತ ಕೈಗಳಿಂದ ಕೆಲಸಮಾಡಿ ದುಡಿಯುವವರೂ ಆಗಿದ್ದೇವೆ. ಶಪಿಸುವವರನ್ನು ಆಶೀರ್ವದಿಸುತ್ತೇವೆ. ಜನರು ಹಿಂಸಿಸುವಾಗ ಸಹಿಸಿಕೊಳ್ಳುತ್ತೇವೆ.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾವನಾದರೂ ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ” ಅಂದನು.


ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ; ಆದರೆ ಪೂರ್ಣವಾಗಿ ಕಲಿತವನಾದ ಪ್ರತಿಯೊಬ್ಬನು ತನ್ನ ಗುರುವಿನಂತಾಗಿರುವನು.


ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ಪ್ರವಾದಿಗಳನ್ನೂ ಕೊಂದರು ಹಾಗು ನಮ್ಮನ್ನೂ ಅಟ್ಟಿಬಿಟ್ಟರು. ಅವರು ದೇವರನ್ನು ಮೆಚ್ಚಿಸುವವರಲ್ಲ ಮತ್ತು ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.


ಆಗ ಯೆಹೂದ್ಯರು ಆತನನ್ನು ಕೊಲ್ಲಬೇಕೆಂದು ತಿರುಗಿ ಕಲ್ಲುಗಳನ್ನು ತೆಗೆದುಕೊಂಡರು,


ಆಗ ಮುಖ್ಯಯಾಜಕರೂ ಮತ್ತು ಫರಿಸಾಯರೂ ಆತನನ್ನು ಹಿಡಿಯಬೇಕೆಂಬುದಾಗಿ ಯೋಚಿಸಿ, ಅವನಿರುವ ಸ್ಥಳವು ಯಾರಿಗಾದರೂ ಗೊತ್ತಾದರೆ ಅದನ್ನು ತಮಗೆ ತಿಳಿಸಬೇಕೆಂದು ಅಪ್ಪಣೆ ಕೊಟ್ಟಿದ್ದರು.


ಆಗ ಅವರು ಆತನ ಮೇಲೆ ಎಸೆಯಲು, ಕಲ್ಲುಗಳನ್ನು ಎತ್ತಿಕೊಂಡರು. ಆದರೆ ಯೇಸು ಮರೆಯಾಗಿ ದೇವಾಲಯದೊಳಗಿನಿಂದ ಹೊರಗೆ ಹೊರಟು ಹೋದನು.


ಜನರು ಆತನ ವಿಷಯವಾಗಿ ಗೊಣಗುಟ್ಟಿದ ಮಾತುಗಳನ್ನು ಫರಿಸಾಯರು ಕೇಳಿಸಿಕೊಂಡು ಮುಖ್ಯಯಾಜಕರೂ ಮತ್ತು ಫರಿಸಾಯರೂ ಆತನನ್ನು ಬಂಧಿಸಲು ದೇವಾಲಯದ ಕಾವಲುಗಾರರನ್ನು ಕಳುಹಿಸಿದರು.


ಆದಕಾರಣ ಯೆಹೂದ್ಯರು, ಯೇಸು ಸಬ್ಬತ್ ದಿನಗಳಲ್ಲಿ ಇಂಥಾ ಕಾರ್ಯಗಳನ್ನು ಮಾಡುತ್ತಾನಲ್ಲಾ ಎಂದು ಆತನನ್ನು ಹಿಂಸಿಸತೊಡಗಿದರು.


ಸಿಮೆಯೋನನು ಅವರನ್ನು ಆಶೀರ್ವದಿಸಿ ತಾಯಿಯಾದ ಮರಿಯಳಿಗೆ, “ಇಗೋ, ಈತನು ಇಸ್ರಾಯೇಲ್ ಜನರಲ್ಲಿ ಅನೇಕರು ಬೀಳುವುದಕ್ಕೂ, ಅನೇಕರು ಏಳುವುದಕ್ಕೂ ಕಾರಣನಾಗಿರುವನು ಮತ್ತು ಜನರು ವಿರೋಧಿಸಿ ಮಾತನಾಡುವುದಕ್ಕೂ ಗುರುತಾಗಿರುವನು;


ಆಗ ಯೆಹೋವನು ಸಮುವೇಲನಿಗೆ, “ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳ್ವಿಕೆಯನ್ನು ಬೇಡವೆನ್ನುತ್ತಿದ್ದಾರೆ.


ಅದಕ್ಕೆ ಯೆಹೂದ್ಯರು “ನೀನು ದೆವ್ವಹಿಡಿದವನೆಂದು ಈಗ ನಮಗೆ ತಿಳಿಯಿತು. ಅಬ್ರಹಾಮನು ಸತ್ತನು ಮತ್ತು ಪ್ರವಾದಿಗಳೂ ಸತ್ತರು, ಆದರೆ ನೀನು ‘ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ’ ಎಂದು ಹೇಳುತ್ತೀಯಲ್ಲಾ?


ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.


ಆಗ ಯೇಸು ಅವರಿಗೆ, “ನಾನು ಕುಡಿಯುವ ಪಾತ್ರೆಯಲ್ಲಿ ನೀವು ಕುಡಿಯುವಿರಿ. ನನಗಾಗುವ ದೀಕ್ಷಾಸ್ನಾನವು ನಿಮಗಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು