Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 15:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾನು ದ್ರಾಕ್ಷಿಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅವನು ಬಹಳ ಫಲ ಕೊಡುವನು. ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ಹೌದು, ನಾನೇ ದ್ರಾಕ್ಷಾಬಳ್ಳಿ; ನೀವೇ ಅದರ ಕವಲುಬಳ್ಳಿಗಳು. ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅಂಥವನು ಸಮೃದ್ಧಿಯಾಗಿ ಫಲಕೊಡುವನು. ಏಕೆಂದರೆ, ನನ್ನಿಂದ ಬೇರ್ಪಟ್ಟು ನಿಮ್ಮಿಂದ ಏನೂ ಮಾಡಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನು ದ್ರಾಕ್ಷೇ ಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅವನೇ ಬಹಳ ಫಲಕೊಡುವನು; ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ನಾನೇ ದ್ರಾಕ್ಷಿಬಳ್ಳಿ; ನೀವೇ ಕವಲುಗಳು. ಒಬ್ಬನು ನನ್ನಲ್ಲಿ ನೆಲೆಗೊಂಡಿದ್ದರೆ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ, ಆಗ ಅವನು ಹೆಚ್ಚು ಫಲಕೊಡುವನು. ಆದರೆ ಅವನು ನನ್ನನ್ನು ಬಿಟ್ಟು ಏನೂ ಮಾಡಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ನಾನೇ ದ್ರಾಕ್ಷಿಯ ಬಳ್ಳಿ, ನೀವು ಕವಲುಬಳ್ಳಿಗಳು. ನೀವು ನನ್ನಲ್ಲಿ ಮತ್ತು ನಾನು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಬಹಳ ಫಲಕೊಡುವಿರಿ. ಏಕೆಂದರೆ ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 “ಮಿಯಾ ದ್ರಾಕ್ಷಿಚಿ ಯೆಲ್ ತುಮಿ ತೆ ಫಾಟೆ. ಜೊ ಕೊನ್ ಮಾಜ್ಯಾ ವಾಂಗ್ಡಾ ಎಕ್ ಹೊವ್ನ್ ರ್‍ಹಾತಾ ಅನಿ ಮಿಯಾ ತ್ಯೆಚ್ಯಾ ವಾಂಗ್ಡಾ ಎಕ್ ಹೊವ್ನ್ ರ್‍ಹಾತಾ ತೊ ಜಾಸ್ತಿಚಿ ಫಳ್ ದಿತಾ, ತುಮ್ಚ್ಯಾ ವಾಂಗ್ಡಾ ಮಿಯಾ ನಸ್ತಾನಾ ತುಮಿ ಕಾಯ್ ಬಿ ಕರುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 15:5
28 ತಿಳಿವುಗಳ ಹೋಲಿಕೆ  

ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.


ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ,


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.


ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,


ಧರ್ಮಾತ್ಮನ ಫಲ ಜೀವವೃಕ್ಷ, ಜ್ಞಾನಿಯು ಆತ್ಮಗಳನ್ನು ಆಕರ್ಷಿಸುವನು.


ಸತ್ಯಕ್ಕೆ ವಿರೋಧವಾಗಿ ನಾವೇನೂ ಮಾಡಲಾರೆವು, ಸತ್ಯಾಭಿವೃದ್ದಿಗೋಸ್ಕರವೇ ಸಮಸ್ತವನ್ನು ಮಾಡುತ್ತೇವೆ.


ಯೇಸು ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವುದನ್ನು ಕಂಡು ಮಗನು ಮಾಡುತ್ತಾನೆಯೇ, ಹೊರತು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು. ಏಕೆಂದರೆ ಆತನು ಯಾವುದನ್ನೆಲ್ಲಾ ಮಾಡುವನೋ ಹಾಗೆಯೇ ಮಗನೂ ಮಾಡುತ್ತಾನೆ.


ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.


ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು. ಆದರೆ ಅದು ಸತ್ತರೆ ಬಹಳ ಫಲ ಕೊಡುವುದು


ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತಿದ್ದೀರಿ. ದೇವರಿಗೆ ಫಲಕೊಡುವುದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತು ಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿದ್ದೀರಿ.


ಯೇಸು ಕ್ರಿಸ್ತನ ಮೂಲಕವಾಗಿರುವ ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ.


ಈತನು ದೇವರಿಂದ ಬಂದವನಲ್ಲದಿದ್ದರೆ ಏನೂ ಮಾಡಲಾರದೆ ಇರುತ್ತಿದ್ದನು” ಎಂದನು.


ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವುದಿಲ್ಲ, ನಿಮ್ಮ ಲೆಕ್ಕಕ್ಕೆ ಸಮೃದ್ಧಿಯುಂಟಾಗುವ ಫಲವನ್ನೇ ಅಪೇಕ್ಷಿಸುತ್ತೇನೆ.


ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ.


ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.


ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ದೇಹದ ಅಂಗಗಳೆಲ್ಲವೂ ಅನೇಕವಾಗಿದ್ದು ಒಂದೇ ದೇಹವಾಗಿದೆಯೋ, ಹಾಗೆಯೇ ಕ್ರಿಸ್ತನು ಇದ್ದಾನೆ.


ನೀವು ಜೀವವುಳ್ಳ ಕಲ್ಲಾಗಿರುವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲನ್ನು ಜನರು ನಿರಾಕರಿಸಿದರು ಆದರೆ ಅದು ದೇವರಿಂದ ಆರಿಸಿಕೊಳ್ಳಲ್ಪಟ್ಟದು ಮತ್ತು ಆತನಿಗೆ ಅಮೂಲ್ಯವಾದದ್ದು ಆಗಿದೆ.


ನೀವು ಕ್ರಿಸ್ತನ ದೇಹವು ಮತ್ತು ಒಬ್ಬೊಬ್ಬರಾಗಿ ಅದಕ್ಕೆ ಅಂಗಗಳಾಗಿದ್ದೀರಿ.


ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ.


ಬಿತ್ತುವವನಿಗೆ ಬೀಜವನ್ನೂ, ತಿನ್ನುವವನಿಗೆ ಆಹಾರವನ್ನು ಕೊಡುವಾತನು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು ಅದನ್ನು ಹೆಚ್ಚಿಸಿ ನಿಮ್ಮ ಧರ್ಮಕಾರ್ಯಗಳಿಂದಾಗುವ ಫಲಗಳನ್ನು ವೃದ್ಧಿಪಡಿಸುವನು.


ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳಿದುಕೊಂಡ ದಿನದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ನಿಮ್ಮಲ್ಲಿ ಫಲಕೊಟ್ಟಂತೆ ಲೋಕದಲ್ಲೆಲ್ಲಾ ಫಲಕೊಟ್ಟು ವೃದ್ಧಿಯಾಗುತ್ತಿದೆ.


ಹಾಗೆಯೇ ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬೊಬ್ಬರಾಗಿ ವಿವಿಧ ಅಂಗಗಳಾಗಿದ್ದೇವೆ.


ನಾವು ದೇವರ ಸ್ತೋತ್ರಮಾಡಿ ಪಾನಪಾತ್ರೆಯಲ್ಲಿ ಪಾನ ಮಾಡುವುದು ಕ್ರಿಸ್ತನ ರಕ್ತದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ? ನಾವು ರೊಟ್ಟಿಯನ್ನು ಮುರಿದು ತಿನ್ನುವುದು ಕ್ರಿಸ್ತನ ದೇಹದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ?


ನನ್ನ ಜನರ ಪಾಪವೇ ಅವರಿಗೆ ಜೀವನ; ಅವರು ಅಧರ್ಮವನ್ನು ಆಶಿಸುತ್ತಾರೆ.


ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಕೂಡಲೆ ಎಡವಿ ಬೀಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು