Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 16:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಇಗೋ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಸ್ಥಳಕ್ಕೆ ಚದರಿಹೋಗಿ ನನ್ನನ್ನು ಒಬ್ಬಂಟಿಗನಾಗಿ ಬಿಡುವ ಸಮಯವು ಬರುತ್ತದೆ. ಹೌದು, ಅದು ಈಗಲೇ ಬಂದಿದೆ. ಆದರೂ ನಾನು ಏಕಾಂಗಿಯಲ್ಲ, ಏಕೆಂದರೆ ತಂದೆಯು ನನ್ನ ಸಂಗಡ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ನೀವೆಲ್ಲರೂ ನನ್ನನ್ನು ಒಬ್ಬಂಟಿಗನಾಗಿ ಬಿಟ್ಟು ನಿಮ್ಮನಿಮ್ಮ ಮನೆಗೆ ಚದರಿಹೋಗುವ ಕಾಲವು ಬರುತ್ತದೆ. ಈಗಾಗಲೇ ಬಂದಿದೆ. ಆದರೆ ಪಿತನು ನನ್ನೊಡನೆ ಇರುವುದರಿಂದ ನಾನು ಒಬ್ಬಂಟಿಗನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ನೋಡಿರಿ, ನಿಮ್ಮಲ್ಲಿ ಒಬ್ಬೊಬ್ಬನು ತನ್ನತನ್ನ ಸ್ಥಳಕ್ಕೆ ಚದರಿಹೋಗಿ ನನ್ನನ್ನು ಒಂಟಿಗನಾಗಿ ಬಿಡುವ ಕಾಲ ಬರುವದು, ಈಗ ಬಂದಿದೆ. ಆದರೆ ನಾನು ಒಂಟಿಗನಲ್ಲ, ತಂದೆಯು ನನ್ನ ಸಂಗಡ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನನಗೆ ಕಿವಿಗೊಡಿರಿ. ನೀವು ಚದರಿಹೋಗುವ ಕಾಲ ಬರುತ್ತಿದೆ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಮನೆಗೆ ಚದರಿಹೋಗುವನು. ಆ ಸಮಯ ಈಗಲೇ ಬಂದಿದೆ. ನೀವು ನನ್ನನ್ನು ಬಿಟ್ಟು ಹೋಗುವಿರಿ. ನಾನು ಒಬ್ಬಂಟಿಗನಾಗಿರುವೆನು. ಆದರೆ ನಿಜವಾಗಿ ನಾನೆಂದಿಗೂ ಒಬ್ಬಂಟಿಗನಲ್ಲ. ಏಕೆಂದರೆ ತಂದೆಯು ನನ್ನೊಂದಿಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಇಗೋ, ನಿಮ್ಮಲ್ಲಿ ಪ್ರತಿಯೊಬ್ಬನು ನಿಮ್ಮ ನಿಮ್ಮ ಮನೆಗೆ ಚದುರಿಹೋಗಿ ನನ್ನನ್ನು ಒಬ್ಬಂಟಿಗನನ್ನಾಗಿ ಬಿಡುವ ಗಳಿಗೆ ಬರುತ್ತದೆ. ಹೌದು, ಈಗಲೇ ಬಂದಿದೆ. ಆದರೂ ನಾನು ಒಬ್ಬಂಟಿಗನಲ್ಲ. ಏಕೆಂದರೆ ತಂದೆ ನನ್ನ ಸಂಗಡ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತುಮಿ ಸಗ್ಳಿ ಲೊಕಾ ಮಾಳ್ಬರ್ ಹೊವ್ನ್ ತುಮ್ಚ್ಯಾ ಘರಾಕ್ನಿ ಪಳುನ್ ಜಾತಲೊ ಎಳ್ ಯೆಲೊ, ಅನಿ ತೊ ಯೆವ್ನ್ ಪಾವಲ್ಲೊಚ್ ಹಾಯ್, ಅನಿ ಮಿಯಾ ಎಕ್ಲೊಚ್ ಹುರ್‍ತಾ, ಖರೆ ಮಿಯಾ ಎಕ್ಲೊಚ್ ನಾಂವ್, ಕಶ್ಯಾಕ್ ಮಟ್ಲ್ಯಾರ್ ಬಾಬಾಚ್ ಮಾಜ್ಯಾ ವಾಂಗ್ಡಾ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 16:32
22 ತಿಳಿವುಗಳ ಹೋಲಿಕೆ  

ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


ಆಗ ಯೇಸು, ಅವರಿಗೆ, “ಕುರುಬನನ್ನು ಹೊಡೆಯುವೆನು; ಹಿಂಡಿನ ಕುರಿಗಳು ಚದರಿಹೋಗುವವು ಎಂದು ಬರೆದಿರುವ ಹಾಗೆ ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಹಿಂಜರಿಯುವಿರಿ.”


ನನ್ನನ್ನು ಕಳುಹಿಸಿಕೊಟ್ಟಾತನು ನನ್ನ ಸಂಗಡ ಇದ್ದಾನೆ. ನಾನು ಆತನಿಗೆ ಮೆಚ್ಚಿಕೆಯಾದದ್ದನ್ನು ಯಾವಾಗಲೂ ಮಾಡುವುದರಿಂದ, ಆತನು ನನ್ನನ್ನು ಒಬ್ಬಂಟಿಗನಾಗಿ ಬಿಡುವುದಿಲ್ಲ” ಎಂದನು.


ನಾನು ತೀರ್ಪು ಮಾಡಿದರೂ ನನ್ನ ತೀರ್ಪು ಸತ್ಯವಾದದ್ದೇ. ಏಕೆಂದರೆ ನಾನು ಒಬ್ಬಂಟಿಗನಲ್ಲ, ನನ್ನನ್ನು ಕಳುಹಿಸಿಕೊಟ್ಟ ನನ್ನ ತಂದೆಯೂ ನನ್ನ ಜೊತೆಯಲ್ಲಿ ಇದ್ದಾನೆ.


ಆಗ ಯೇಸು ಅವರಿಗೆ, “ನೀವೆಲ್ಲರೂ ನನ್ನನ್ನು ಬಿಟ್ಟು ಓಡಿಹೋಗುವಿರಿ. ಏಕೆಂದರೆ; “‘ನಾನು ಕುರುಬನನ್ನು ಹೊಡೆಯುವೆನು; ಕುರಿಗಳು ಚದರಿ ಹೋಗುವವು’ ಎಂದು ಬರೆದಿದೆಯಲ್ಲಾ ಅಂದನು.


ಆದರೆ ಪ್ರವಾದಿಗಳು ಬರೆದ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು” ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.


ತರುವಾಯ ಆ ಶಿಷ್ಯರು ಪುನಃ ತಮ್ಮ ಮನೆಗೆ ಹೋದರು.


“ಈ ಸಂಗತಿಗಳನ್ನು ಸಾಮ್ಯರೂಪವಾಗಿ ನಿಮಗೆ ಹೇಳಿದ್ದೇನೆ, ಆದರೆ ಇನ್ನು ಮೇಲೆ ಸಾಮ್ಯರೂಪವಾಗಿ ನಿಮ್ಮೊಂದಿಗೆ ಮಾತನಾಡದೆ ತಂದೆಯ ಕುರಿತಾಗಿ ಸ್ಪಷ್ಟವಾಗಿ ತಿಳಿಸುವ ಕಾಲವು ಬರುತ್ತದೆ.


ಅವರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವು ಬರಲಿದೆ.


ಅದಕ್ಕಿಂತ ಹೆಚ್ಚಾಗಿ, ನಿಜವಾದ ಆರಾಧಕರು ತಂದೆಯನ್ನು ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ, ಅದುದರಿಂದ, ತಂದೆಯು ನಿಜವಾಗಿಯೂ ಈ ರೀತಿ ಆರಾಧಿಸುವವರನ್ನೇ ಹುಡುಕುತ್ತಾನೆ.


ಯೇಸು ಆಕೆಗೆ “ಅಮ್ಮಾ, ನನ್ನ ಮಾತನ್ನು ನಂಬು, ಒಂದು ಕಾಲ ಬರುತ್ತದೆ. ಆ ಕಾಲದಲ್ಲಿ ನೀವು ತಂದೆಯನ್ನು ಆರಾಧಿಸಬೇಕಾದರೆ, ಯೆರೂಸಲೇಮಿಗಾಗಲಿ ಅಥವಾ ಈ ಬೆಟ್ಟಕ್ಕಾಗಲಿ ಹೋಗುವುದಿಲ್ಲ.


ಆಗ ಯೇಸು ಅವರಿಗೆ, “ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆಯು ಬಂದಿದೆ.


ಅದಕ್ಕೆ ಆಶ್ಚರ್ಯಪಡಬೇಡಿರಿ. ಒಂದು ಕಾಲ ಬರುತ್ತದೆ, ಆಗ ಸಮಾಧಿಗಳಲ್ಲಿರುವವರೆಲ್ಲಾ ಆತನ ಸ್ವರವನ್ನು ಕೇಳಿ,


ನಿಮಗೆ ನಿಜನಿಜವಾಗಿ ಹೇಳುತ್ತೇನೆ ಸತ್ತವರು ದೇವಕುಮಾರನ ಸ್ವರವನ್ನು ಕೇಳುವ ಕಾಲ ಬರುತ್ತದೆ, ಅದು ಈಗಾಗಲೇ ಬಂದಿದೆ, ಕೇಳಿದವರು ಬದುಕುವರು.


ಆಗ ಆತನ ಸಂಗಡವಿದ್ದವರೆಲ್ಲರು ಆತನನ್ನು ಬಿಟ್ಟು ಓಡಿಹೋದರು.


ಸೌಲನಿಗೆ ಅವನ ಕೊಲೆಗೆ ಸಮ್ಮತಿಸಿದನು. ಆ ದಿನದಲ್ಲಿ ಯೆರೂಸಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರು ಹೊರತಾಗಿ ಎಲ್ಲರೂ ಯೂದಾಯ, ಸಮಾರ್ಯ ಸೀಮೆಗಳಿಗೆ ಚದರಿಹೋದರು.


ಅದಕ್ಕೆ ಯೇಸು, “ಈಗ ನೀವು ನಂಬುತ್ತೀರಿ.


ತರುವಾಯ ಆ ಶಿಷ್ಯನಿಗೆ, “ಇಗೋ, ನಿನ್ನ ತಾಯಿ” ಎಂದು ಹೇಳಿದನು. ಆ ಗಳಿಗೆಯಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲೇ ಇರಿಸಿಕೊಂಡನು.


ಒಬ್ಬರಿಗೊಬ್ಬರು ವಂದನೆಮಾಡಿ ಹಡಗನ್ನು ಹತ್ತಿದೆವು; ಅವರು ಹಿಂತಿರುಗಿ ತಮ್ಮತಮ್ಮ ಮನೆಗಳಿಗೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು