Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 17:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ, ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು, ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಾನಿನ್ನು ಲೋಕದಲ್ಲಿ ಇರುವುದಿಲ್ಲ. ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿಮ್ಮ ಬಳಿಗೆ ಬರುತ್ತಿದ್ದೇನೆ. ಪವಿತ್ರ ಪಿತನೇ, ನಾವು ಒಂದಾಗಿರುವಂತೆ ನೀವು ನನಗೆ ಕೊಟ್ಟಿರುವ ಇವರೂ ಒಂದಾಗಿರುವ ಹಾಗೆ ನಿಮ್ಮ ನಾಮದ ಶಕ್ತಿಯಿಂದ ಇವರನ್ನು ಸುರಕ್ಷಿತವಾಗಿರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇನ್ನು ನಾನು ಲೋಕದಲ್ಲಿ ಇರುವದಿಲ್ಲ, ಇವರು ಲೋಕದಲ್ಲಿ ಇರುತ್ತಾರೆ, ನಾನು ನಿನ್ನ ಬಳಿಗೆ ಬರುತ್ತೇನೆ. ಪವಿತ್ರನಾದ ತಂದೆಯೇ, ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಈಗ ನಾನು ನಿನ್ನ ಬಳಿಗೆ ಬರುತ್ತಿದ್ದೇನೆ. ಇನ್ನು ನಾನು ಈ ಲೋಕದಲ್ಲಿರುವುದಿಲ್ಲ. ಆದರೆ ಇವರು ಇನ್ನೂ ಈ ಲೋಕದಲ್ಲಿರುತ್ತಾರೆ. ಪವಿತ್ರನಾದ ತಂದೆಯೇ, (ನೀನು ನನಗೆ ಕೊಟ್ಟ) ನಿನ್ನ ಹೆಸರಿನ ಶಕ್ತಿಯಿಂದ ಇವರನ್ನು ಕಾಯ್ದು ಕಾಪಾಡು. ನೀನೂ ನಾನೂ ಒಂದಾಗಿರುವಂತೆ ಇವರೂ ಒಂದಾಗಿರಲು ಆಗ ಸಾಧ್ಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ. ಇವರಾದರೋ ಲೋಕದಲ್ಲಿರುತ್ತಾರೆ. ನಾನು ನಿಮ್ಮ ಬಳಿಗೆ ಬರುತ್ತೇನೆ. ಪರಿಶುದ್ಧ ತಂದೆಯೇ, ನಾವು ಒಂದಾಗಿರುವಂತೆಯೇ ಇವರೂ ಒಂದಾಗಿರಬೇಕೆಂದು ನೀವು ನನಗೆ ಕೊಟ್ಟ ನಿಮ್ಮ ಹೆಸರಿನ ಶಕ್ತಿಯಿಂದ ಇವರನ್ನು ಕಾಪಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಅತ್ತಾ ಮಿಯಾ ತುಜೆಕ್ಡೆ ಯೆವ್ಲಾಲಾ, ಅನಿ ಲೈ ಎಳ್ ಮಿಯಾ ಹ್ಯಾ ಜಗಾತ್ ರ್‍ಹಾಯ್ನಾ, ಖರೆ ತೆನಿ ಹ್ಯಾ ಜಗಾತುಚ್ ರ್‍ಹಾತ್ಯಾತ್. ಪವಿತ್ರ್ ಬಾಬಾ! ತುಜ್ಯಾ ನಾವಾಚ್ಯಾ ಬಳಾನ್ ತೆಂಕಾ ತಿಯಾ ರಾಕ್, ತೆಚ್ ನಾವ್ ತಿಯಾ ಮಾಕಾಬಿ ದಿಲ್ಲೆ. ಅಸೆ, ಕಶೆ ಮಿಯಾ ಅನಿ ತಿಯಾ ಎಕ್ ಹೊವ್ನ್ ಹಾಂವ್, ತಸೆ ತೆನಿಬಿ ಎಕ್ ಹೊವ್ನ್ ರ್‍ಹಾಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 17:11
48 ತಿಳಿವುಗಳ ಹೋಲಿಕೆ  

ಆದುದರಿಂದ ನೀವು ಹೀಗೆ ಪ್ರಾರ್ಥನೆಮಾಡಬೇಕು,


ಯೆಹೋವನ ನಾಮವು ಬಲವಾದ ಬುರುಜು, ಶಿಷ್ಟನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುವನು.


ಯಾಕೆಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಪ್ರತಿಬಿಂಬವಾಗಿ ಕೈಯಿಂದ ಕಟ್ಟಲ್ಪಟ್ಟ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಪ್ರತ್ಯಕ್ಷನಾಗಲು ಪರಲೋಕದೊಳಗೆ ಪ್ರವೇಶಿಸಿದನು.


ನೀವು ಕರೆಯಲ್ಪಟ್ಟಾಗ ಒಂದೇ ನಿರೀಕ್ಷೆಗಾಗಿ ಕರೆಯಲ್ಪಟ್ಟವರಂತೆಯೇ, ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರು, ಒಬ್ಬನೇ ಆತ್ಮನನ್ನು ಹೊಂದಿದವರು,


ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ, ಎಲ್ಲಾ ಹೆಸರುಗಳಿಗಿಂತ ಶ್ರೇಷ್ಠವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.


ನೀತಿಸ್ವರೂಪನಾದ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ, ಆದರೆ ನಾನು ನಿನ್ನನ್ನು ತಿಳಿದಿದ್ದೇನೆ ಮತ್ತು ಇವರು ನೀನೇ ನನ್ನನ್ನು ಕಳುಹಿಸಿದ್ದೀ ಎಂದು ತಿಳಿದಿದ್ದಾರೆ.


ಪಸ್ಕಹಬ್ಬದ ಹಿಂದಿನ ದಿನ ಯೇಸು, ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆ ಬಂದಿತೆಂದು ತಿಳಿದುಕೊಂಡು, ಈ ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ, ಅವರನ್ನು ಕೊನೆಯವರೆಗೂ ಪ್ರೀತಿಸುತ್ತಾ ಬಂದನು.


ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ” ಎಂದು ಹೇಳಿದನು.


ನಾನು ನನ್ನ ತಂದೆಯಲ್ಲಿಯೂ, ನೀವು ನನ್ನಲ್ಲಿಯೂ ಮತ್ತು ನಾನು ನಿಮ್ಮಲ್ಲಿಯೂ ಇರುವುದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ.


ಯೇಸು ಕ್ರಿಸ್ತನ ಸೇವಕನೂ, ಯಾಕೋಬನ ತಮ್ಮನೂ ಆಗಿರುವ ಯೂದನು ಕರೆಯಲ್ಪಟ್ಟವರಿಗೆ, ತಂದೆಯಾದ ದೇವರಲ್ಲಿ ಪ್ರಿಯರಾದವರಿಗೆ, ಯೇಸು ಕ್ರಿಸ್ತನಿಗಾಗಿ ಕಾಪಾಡಲ್ಪಟ್ಟವರಿಗೆ ಬರೆಯುವುದೇನೆಂದರೆ,


ಇಡೀ ಲೋಕವು ಕೆಡುಕನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂಬುದು ನಮಗೆ ತಿಳಿದಿದೆ.


ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.


ಆದರೆ ಸಮಸ್ತವನ್ನು ಸರಿಮಾಡುವ ಕಾಲವು ಬರುವ ತನಕ ಪರಲೋಕವೇ ಕ್ರಿಸ್ತನ ಸ್ಥಾನವಾಗಿರಬೇಕು. ಆ ಕಾಲದ ವಿಷಯವಾಗಿ ದೇವರು ಪೂರ್ವದಲ್ಲಿದ್ದ ತನ್ನ ಪರಿಶುದ್ಧ ಪ್ರವಾದಿಗಳ ಮುಖಾಂತರ ಹೇಳಿಸಿದ್ದಾನೆ.


ತಂದೆಯು ತನ್ನ ಕೈಯಲ್ಲಿ ಎಲ್ಲದರ ಮೇಲೆ ಅಧಿಕಾರ ಕೊಟ್ಟಿದ್ದಾನೆಂದೂ, ತಾನು ದೇವರ ಬಳಿಯಿಂದ ಬಂದು, ತಿರುಗಿ ದೇವರ ಬಳಿಗೆ ಹೋಗುತ್ತೇನೆಂದೂ ಯೇಸುವಿಗೆ ತಿಳಿದಿತ್ತು.


ಒಣಗಿಡಕ್ಕೆ ಹತ್ತುವ ಕಿಚ್ಚಿನ ಪ್ರಕಾರ, ನೀರನ್ನು ಕುದಿಸುವ ಬೆಂಕಿಯೋಪಾದಿಯಲ್ಲಿಯೂ ನೀನು ಪ್ರತ್ಯಕ್ಷನಾಗಿ, ನಿನ್ನ ನಾಮಮಹತ್ತನ್ನು ನಿನ್ನ ಶತ್ರುಗಳಿಗೆ ತಿಳಿಯಪಡಿಸಿ, ಜನಾಂಗಗಳನ್ನು ನಿನ್ನ ದರ್ಶನದಿಂದ ನಡುಗಿಸಬಾರದೇ!


ನಮ್ಮನ್ನು ರಕ್ಷಿಸುವ ದೇವರೇ, ನಿನ್ನ ನಾಮದ ಘನತೆಗೋಸ್ಕರ ಸಹಾಯಮಾಡು; ನಿನ್ನ ಹೆಸರಿಗೆ ತಕ್ಕಂತೆ ರಕ್ಷಿಸಿ ನಮ್ಮ ಪಾಪಗಳನ್ನು ಅಳಿಸಿಬಿಡು.


ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ, “ದೇವರಾದ ಕರ್ತನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಆತನು ಸರ್ವಶಕ್ತನು, ಇರುವಾತನು, ಇದ್ದಾತನು, ಬರುವಾತನು” ಎಂದು ಹೇಳುತ್ತಿದ್ದವು.


ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ.


ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ.


ಪ್ರಿಯರೇ, ನೀವೆಲ್ಲರೂ ಹೊಂದಾಣಿಕೆಯುಳ್ಳವರಾಗಿರಬೇಕೆಂದು, ನಿಮ್ಮಲ್ಲಿ ಭಿನ್ನತೆಗಳಿರಬಾರದೆಂದು, ನೀವು ಒಂದೇ ಮನಸ್ಸೂ ಮತ್ತು ಒಂದೇ ಉದ್ದೇಶವುಳ್ಳವರಾಗಿದ್ದು ಐಕ್ಯತೆಯಿಂದಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬುದ್ಧಿ ಹೇಳುತ್ತೇನೆ.


ಹಾಗೆಯೇ ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬೊಬ್ಬರಾಗಿ ವಿವಿಧ ಅಂಗಗಳಾಗಿದ್ದೇವೆ.


ದೇವರು ಫರೋಹನನನ್ನು ಕುರಿತು “ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತ ಸ್ಥಾನಕ್ಕೆ ತಂದಿದ್ದೇನೆಂದು ಹೇಳಿದನೆಂಬುದಾಗಿ” ಧರ್ಮಶಾಸ್ತ್ರದಲ್ಲಿ ಬರೆಯಲ್ಪಟ್ಟಿದೆ.


ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ, ಪುನಃ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ” ಎಂದನು.


ಆಗ ಯೇಸು ಅವರಿಗೆ “ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೊರಟು ಹೋಗುತ್ತೇನೆ.


“ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.


ಆದುದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣನಾಗಿರುವ ಹಾಗೆಯೇ ನೀವೂ ಪರಿಪೂರ್ಣರಾಗಿರಿ.


ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ನಡತೆಗೂ, ದುಷ್ಕೃತ್ಯಗಳಿಗೂ ತಕ್ಕ ಹಾಗೆ ನಾನು ನಿಮ್ಮನ್ನು ದಂಡಿಸದೆ, ನನ್ನ ಹೆಸರಿನ ನಿಮಿತ್ತವೇ ನಾನು ನಿಮ್ಮನ್ನು ಸಹಿಸಿಕೊಂಡಿರುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು” ಇದು ಕರ್ತನಾದ ಯೆಹೋವನ ನುಡಿ.


“ಆದರೂ ನಾನು ಯಾವ ಜನಾಂಗಗಳ ಮುಂದೆ ಅವರನ್ನು ಪಾರು ಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡು ಕೈಯನ್ನು ಹಿಂದಕ್ಕೆ ತೆಗೆದುಕೊಂಡೆನು.


‘ಆದರೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಪಾರುಮಾಡುವೆನು ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ, ಅವರ ಸುತ್ತಣ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.


ನಿನ್ನ ನಾಮದ ಮೇಲೆ ದೃಷ್ಟಿಯಿಡು, ನಿನ್ನ ಮಹಿಮೆಯ ಸಿಂಹಾಸನವನ್ನು ಅಸಡ್ಡೆಮಾಡಬೇಡ. ಅವಮಾನಪಡಿಸಬೇಡ; ನೀನು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರು.


ಯೆಹೋವನೇ, ನಮ್ಮ ಅಪರಾಧಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಟ್ಟರೂ, ನಿನ್ನ ಹೆಸರಿನ ನಿಮಿತ್ತ ಕಾರ್ಯವನ್ನು ಸಾಧಿಸು. ನಮ್ಮ ದ್ರೋಹಗಳು ಬಹಳ, ನಿನ್ನ ವಿರುದ್ಧವಾಗಿ ಪಾಪವನ್ನು ಮಾಡಿದ್ದೇವೆ.


“ಯೆಹೋವನಾದ ನಾನೇ ಅದನ್ನು ಕಾಯುತ್ತೇನೆ. ಪ್ರತಿ ಕ್ಷಣವೂ ಅದಕ್ಕೆ ನೀರು ಹೊಯ್ಯುತ್ತಿದ್ದೇನೆ; ಯಾರೂ ಅದಕ್ಕೆ ಕೇಡು ಮಾಡದ ಹಾಗೆ ಹಗಲಿರುಳೂ ಕಾಯುತ್ತೇನೆ.


ಆತನ ಕಣ್ಣುಗಳು ಬೆಂಕಿಯ ಜ್ವಾಲೆಯಂತಿವೆ, ಆತನ ತಲೆಯ ಮೇಲೆ ಅನೇಕ ಕಿರೀಟಗಳುಂಟು, ಆತನಿಗೆ ಒಂದು ಹೆಸರು ಬರೆದುಕೊಡಲ್ಪಟ್ಟಿದೆ, ಅದು ಆತನಿಗೇ ಹೊರತು ಮತ್ತಾರಿಗೂ ತಿಳಿಯದು.


ಕರ್ತನೇ, ನಿನಗೆ ಭಯಪಡದವರು ಮತ್ತು ನಿನ್ನ ನಾಮವನ್ನು ಮಹಿಮೆ ಪಡಿಸದವರು ಯಾರಾದರು ಇದ್ದಾರೆಯೇ? ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ನ್ಯಾಯತೀರ್ಪು ಬೆಳಕಿಗೆ ಬಂದುದರಿಂದ ಸರ್ವಜನಾಂಗಗಳು ನಿನ್ನ ಸನ್ನಿಧಾನಕ್ಕೆ ಬಂದು ನಿನ್ನನ್ನು ಆರಾಧಿಸುವರು.”


ಮುಗ್ಗರಿಸದಂತೆ ನಿಮ್ಮನ್ನು ಕಾಪಾಡಿಕೊಳ್ಳುತ್ತಾ, ತನ್ನ ಮಹಿಮೆಯ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ, ಅತ್ಯಂತ ಹರ್ಷದೊಡನೆ ನಿಲ್ಲಿಸುವುದಕ್ಕೂ ಶಕ್ತನಾಗಿರುವ,


ಕೆಡುಕುನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನನಂತೆ ನಾವು ಇರಬಾರದು. ಅವನು ಯಾಕೆ ತಮ್ಮನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟದ್ದು ಮತ್ತು ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದುದರಿಂದಲೇ.


“ಲೋಕದಲ್ಲಿ ನೀನು ನನಗೆ ಕೊಟ್ಟಿರುವ ಮನುಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರಕಟಪಡಿಸಿದ್ದೇನೆ. ಇವರು ನಿನ್ನವರಾಗಿದ್ದರು ಮತ್ತು ನೀನು ಇವರನ್ನು ನನಗೆ ಕೊಟ್ಟಿದ್ದೀ. ಇವರು ನಿನ್ನ ವಾಕ್ಯಕ್ಕೆ ವಿಧೇಯರಾಗಿದ್ದಾರೆ.


ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣರಾಗಿರಲಿ. ಹೀಗೆ ನೀನು ನನ್ನನ್ನು ಕಳುಹಿಸಿದ್ದೀ, ಎಂದೂ ಮತ್ತು ನೀನು ನನ್ನನ್ನು ಪ್ರೀತಿಸಿದಂತೆ, ಇವರನ್ನೂ ನೀನು ಪ್ರೀತಿಸುತ್ತೀ ಎಂದು ಲೋಕವು ತಿಳಿದುಕೊಳ್ಳುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು