Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 17:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ಲೋಕದಲ್ಲಿ ನೀನು ನನಗೆ ಕೊಟ್ಟಿರುವ ಮನುಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರಕಟಪಡಿಸಿದ್ದೇನೆ. ಇವರು ನಿನ್ನವರಾಗಿದ್ದರು ಮತ್ತು ನೀನು ಇವರನ್ನು ನನಗೆ ಕೊಟ್ಟಿದ್ದೀ. ಇವರು ನಿನ್ನ ವಾಕ್ಯಕ್ಕೆ ವಿಧೇಯರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ನೀವು ಲೋಕದಿಂದ ಆರಿಸಿ ನನಗೆ ಕೊಟ್ಟ ಜನರಿಗೆ ನಿಮ್ಮ ನಾಮವನ್ನು ತಿಳಿಯಪಡಿಸಿದ್ದೇನೆ. ಇವರು ನಿಮ್ಮವರಾಗಿದ್ದರು. ಆದರೂ ಇವರನ್ನು ನನಗೆ ಕೊಟ್ಟಿರಿ. ನಿಮ್ಮ ಮಾತಿಗೆ ವಿಧೇಯರಾಗಿ ಇವರು ನಡೆದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಲೋಕದೊಳಗಿಂದ ನೀನು ನನಗೆ ಕೊಟ್ಟ ಮನುಷ್ಯರಿಗೆ ನಿನ್ನ ಹೆಸರನ್ನು ತಿಳಿಯಪಡಿಸಿದೆನು. ಇವರು ನಿನ್ನವರಾಗಿದ್ದರು, ನೀನು ಇವರನ್ನು ನನಗೆ ಕೊಟ್ಟೆ; ಮತ್ತು ಇವರು ನಿನ್ನ ವಾಕ್ಯವನ್ನು ಕೈಕೊಂಡು ನಡೆದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ನೀನು ಈ ಲೋಕದೊಳಗಿಂದ ಕೆಲವು ಜನರನ್ನು ನನಗೆ ಕೊಟ್ಟೆ. ನಿನ್ನ ಸ್ವರೂಪವನ್ನು ನಾನು ಇವರಿಗೆ ತೋರಿಸಿದೆನು. ಇವರು ನಿನ್ನವರಾಗಿದ್ದಾರೆ ಮತ್ತು ನೀನೇ ಇವರನ್ನು ನನಗೆ ಕೊಟ್ಟೆ. ಇವರು ನಿನ್ನ ಆಜ್ಞೆಗಳಿಗೆ ವಿಧೇಯರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಲೋಕದೊಳಗಿಂದ ನೀವು ನನಗೆ ಕೊಟ್ಟ ಈ ನನ್ನ ಶಿಷ್ಯರಿಗೆ ನಾನು ನಿಮ್ಮ ಹೆಸರನ್ನು ಪ್ರಕಟಪಡಿಸಿದ್ದೇನೆ. ಇವರು ನಿಮ್ಮವರಾಗಿದ್ದರು. ನೀವು ಇವರನ್ನು ನನಗೆ ಕೊಟ್ಟಿದ್ದೀರಿ. ಇವರು ನಿಮ್ಮ ವಾಕ್ಯವನ್ನು ಕೈಗೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಹ್ಯಾ ಜಗಾತ್ ಮಾಜೆ ಮನುನ್ ತಿಯಾ ಮಾಕಾ ದಿಲ್ಲ್ಯಾಕ್ನಿ ಮಿಯಾ ತುಜಿ ವಳಕ್ ಕರುನ್ ದಿಲೊ. ತೆನಿ ತುಕಾ ಸಮಂದ್ ಪಡಲ್ಲೆ ಹಾತ್, ಅನಿ ತಿಯಾಚ್ ತೆಂಕಾ ಮಾಜ್ಯಾ ತಾಬೆತ್ ದಿಲೆಯ್, ತೆನಿ ತುಜ್ಯಾ ಗೊಸ್ಟಿಯಾಕ್ನಿ ಖಾಲ್ತಿ ಹೊವ್ನ್ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 17:6
48 ತಿಳಿವುಗಳ ಹೋಲಿಕೆ  

ನಾನು ಅವರಿಗೆ ನಿನ್ನ ಹೆಸರನ್ನು ತಿಳಿಸಿದ್ದೇನೆ. ಇನ್ನೂ ತಿಳಿಸುವೆನು. ಏಕೆಂದರೆ, ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಇವರಲ್ಲಿ ಇರಬೇಕೆಂತಲೂ ಮತ್ತು ನಾನೂ ಅವರಲ್ಲಿ ಇರಬೇಕೆಂದೂ ಪ್ರಾರ್ಥಿಸುತ್ತೇನೆ” ಎಂದನು.


ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.


ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವನನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ.


ತಂದೆಯೇ, ನೀನು ನನಗೆ ಕೊಟ್ಟವರು, ನಾನಿರುವ ಸ್ಥಳದಲ್ಲಿ ನನ್ನೊಂದಿಗೆ ಇದ್ದುಕೊಂಡು, ಜಗದುತ್ಪತ್ತಿಗೂ ಮೊದಲೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ನೋಡಬೇಕೆಂದು, ನಾನು ಆಶಿಸುತ್ತೇನೆ.


ನೀನು ಯಾರಾರನ್ನು ಕೊಟ್ಟಿದ್ದೀಯೋ ಅವರೆಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು, ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವೆ.


ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.


ನೀವು ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಪ್ರೀತಿಸುತ್ತಿತ್ತು. ನೀವಾದರೋ ಲೋಕದ ಕಡೆಯವರಲ್ಲ, ನಾನು ನಿಮ್ಮನ್ನು ಆರಿಸಿಕೊಂಡಿದ್ದರಿಂದಲೇ ಲೋಕವು ನಿಮ್ಮನ್ನು ದ್ವೇಷ ಮಾಡುತ್ತದೆ.


ನಿನ್ನ ಕೃತ್ಯಗಳನ್ನು ಬಲ್ಲೆನು. ನಿನಗಿರುವ ಶಕ್ತಿ ಕೊಂಚವಾಗಿದ್ದರೂ ನೀನು ನನ್ನ ಹೆಸರನ್ನು ನಿರಾಕರಿಸದೆ, ನನ್ನ ವಾಕ್ಯವನ್ನು ಕಾಪಾಡಿದ್ದರಿಂದ ಇಗೋ ನಿನ್ನೆದುರಿನಲ್ಲಿ ಒಂದು ಬಾಗಿಲನ್ನು ತೆರೆದಿಟ್ಟಿದ್ದೇನೆ. ಯಾರೂ ಅದನ್ನು ಮುಚ್ಚಲಾರರು.


ಆದರೆ ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ. ನಾವು ನಮ್ಮ ಭರವಸೆಯನ್ನೂ, ನಿರೀಕ್ಷೆಯ ಮಹತ್ವವನ್ನೂ, ಕಡೆ ತನಕ ಗಟ್ಟಿಯಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.


ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನಾದರೂ ಬೇಡಿಕೊಳ್ಳಿರಿ ಅದು ನಿಮಗೆ ದೊರೆಯುವುದು.


ನಿನ್ನ ನಾಮ ಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.


ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೇ ಉಳಿಸಿರುವೆನು.


ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು. ಅದು ಸೈತಾನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ದೃಢವಾಗಿ ಹಿಡಿದುಕೊಂಡಿರುವಿ. ಸೈತಾನನ ನಿವಾಸವಾದ ನಿನ್ನ ಪಟ್ಟಣದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟಾಗಲೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ನಿರಾಕರಿಸಲಿಲ್ಲ.


“ನಿನ್ನ ನಾಮಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು. ಸಭಾಮಧ್ಯದಲ್ಲಿ ನಿನ್ನನ್ನು ಕೊಂಡಾಡುವೆನು” ಎಂತಲೂ,


ನೀನು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ, ನನ್ನಿಂದ ಕೇಳಿದ ಸ್ವಸ್ಥಬೋಧನಾ ವಾಕ್ಯಗಳನ್ನು ಮಾದರಿಯಾಗಿಟ್ಟುಕೊಂಡು ಅನುಸರಿಸು.


ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.


ದೇವರು ತಾನು ಮುಂದಾಗಿ ತನ್ನ ಜನರಾಗುವುದಕ್ಕೆ ಗೊತ್ತುಮಾಡಿಕೊಂಡಿದ್ದ ಪ್ರಜೆಗಳನ್ನು ತಳ್ಳಿಬಿಡಲಿಲ್ಲ. ಎಲೀಯನ ಬಗ್ಗೆ ಧರ್ಮಶಾಸ್ತ್ರವು ಹೇಳುವ ಮಾತು ನಿಮಗೆ ತಿಳಿಯದೋ?


ಅಲ್ಲಿದ್ದ ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು, ದೇವರ ವಾಕ್ಯವನ್ನು ಹೊಗಳಿದರು. ಮತ್ತು ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.


ಹೀಗೆ “ನೀನು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ನಾನು ಕಳೆದುಕೊಳ್ಳಲಿಲ್ಲ” ಎಂದು ತಾನೇ ಹೇಳಿದ ಮಾತು ನೆರವೇರಿತು.


ನಾನು ಲೋಕದವನಲ್ಲದೆ ಇರುವಂತೆ ಇವರೂ ಲೋಕದವರಲ್ಲ.


ನಾನು ನಿನ್ನ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ, ನಾನು ಈ ಲೋಕದವನಲ್ಲದವನಾಗಿರುವ ಪ್ರಕಾರ ಇವರೂ ಈ ಲೋಕದವರಲ್ಲ. ಆದಕಾರಣ ಲೋಕವು ಇವರನ್ನು ದ್ವೇಷಿಸುತ್ತದೆ.


ನಾನು ನಿಮಗೆ ಹೇಳಿದ ವಾಕ್ಯದ ದೆಸೆಯಿಂದ ಈಗ ನೀವು ಶುದ್ಧರಾಗಿದ್ದೀರಿ.


ತಂದೆಯೇ ನಿನ್ನ ಹೆಸರನ್ನು ಮಹಿಮೆಪಡಿಸಿಕೋ” ಎಂದನು. ಅದಕ್ಕೆ, “ಮಹಿಮೆಪಡಿಸಿದ್ದೇನೆ ತಿರುಗಿ ಮಹಿಮೆಪಡಿಸುವೆನು” ಎಂಬ ಸ್ವರವು ಪರಲೋಕದಿಂದ ಬಂದಿತು.


ನನ್ನನ್ನು ಕಳುಹಿಸಿದಾತನ ಚಿತ್ತವು ಏನೆಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಯಾರನ್ನೂ ಕಳೆದುಕೊಳ್ಳದೆ ಅವರನ್ನು ಕಡೆ ದಿನದಲ್ಲಿ ಎಬ್ಬಿಸಬೇಕೆಂಬುದೇ.


ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ.


ಸತ್ಯವನ್ನು ಎಂದರೆ ಜ್ಞಾನ, ಸುಶಿಕ್ಷೆ, ವಿವೇಕಗಳನ್ನು ಕೊಂಡುಕೋ, ಮಾರಿ ಬಿಡಬೇಡ.


ಜ್ಞಾನವು ನಿನ್ನ ಹೃದಯದೊಳಗೆ ಪ್ರವೇಶಿಸುವುದು, ತಿಳಿವಳಿಕೆಯು ನಿನ್ನ ಆತ್ಮಕ್ಕೆ ಹಿತಕರವಾಗಿರುವುದು.


ನಿನಗೆ ವಿರುದ್ಧವಾಗಿ ಪಾಪಮಾಡದಂತೆ, ನಿನ್ನ ನುಡಿಗಳನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡಿದ್ದೇನೆ.


ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ, ಗಲಾತ್ಯ, ಕಪ್ಪದೋಕ್ಯ, ಆಸ್ಯ, ಬಿಥೂನ್ಯ ಎಂಬ ಸೀಮೆಗಳಲ್ಲಿ ಚದುರಿಹೋಗಿರುವಂಥ ಪರದೇಶಸ್ಥರಾದ ದೇವಜನರಿಗೆ ಅಂದರೆ,


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾವನಾದರೂ ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ” ಅಂದನು.


ಅದಕ್ಕೆ ಯೆಹೂದ್ಯರು “ನೀನು ದೆವ್ವಹಿಡಿದವನೆಂದು ಈಗ ನಮಗೆ ತಿಳಿಯಿತು. ಅಬ್ರಹಾಮನು ಸತ್ತನು ಮತ್ತು ಪ್ರವಾದಿಗಳೂ ಸತ್ತರು, ಆದರೆ ನೀನು ‘ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ’ ಎಂದು ಹೇಳುತ್ತೀಯಲ್ಲಾ?


ನೀನು ನನಗೆ ಕೊಟ್ಟದ್ದೆಲ್ಲವೂ ನಿನ್ನಿಂದಲೇ ಬಂದಿದೆ ಎಂದು ಈಗ ಇವರು ತಿಳಿದುಕೊಂಡಿದ್ದಾರೆ.


ನಾನು ಇವರ ಜೊತೆ ಇದ್ದಾಗ ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು. ಧರ್ಮಶಾಸ್ತ್ರದ ಮಾತು ನೆರವೇರುವಂತೆ ನಾಶಕ್ಕಾಗಿ ಹುಟ್ಟಿದವನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ.


ಸೈರಣೆಯಿಂದಿರಬೇಕೆಂಬ ನನ್ನ ಆಜ್ಞೆಯನ್ನು ನೀನು ಪಾಲಿಸಿದ್ದರಿಂದ, ಭೂಲೋಕದ ನಿವಾಸಿಗಳೆಲ್ಲರನ್ನು ಪರೀಕ್ಷಿಸುವುದಕ್ಕಾಗಿ ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು