Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 17:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೇಗೆಂದರೆ, ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿದ್ದಾರೆ ಮತ್ತು ನಾನು ನಿನ್ನ ಬಳಿಯಿಂದ ಬಂದವನೆಂದು ಇವರು ನಿಜವಾಗಿ ತಿಳಿದು, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ನಂಬಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಿಮ್ಮಿಂದ ನಾನು ಕಲಿತುದೆಲ್ಲವನ್ನೂ ಇವರಿಗೆ ತಿಳಿಯಪಡಿಸಿದ್ದೇನೆ. ಅವುಗಳನ್ನು ಇವರು ಅಂಗೀಕರಿಸಿ ನಿಮ್ಮಿಂದಲೇ ನಾನು ಬಂದುದು ನಿಜವೆಂದು ಅರಿತುಕೊಂಡಿದ್ದಾರೆ. ನನ್ನನ್ನು ಕಳುಹಿಸಿದ್ದು ನೀವೇ ಎಂದು ವಿಶ್ವಾಸಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹೇಗಂದರೆ ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ; ಇವರು ಆ ಮಾತುಗಳನ್ನು ಕೈಕೊಂಡು ನನ್ನನ್ನು ನಿನ್ನ ಬಳಿಯಿಂದ ಹೊರಟುಬಂದವನೆಂದು ನಿಜವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿಕೊಟ್ಟಿರುವದಾಗಿ ನಂಬಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿಕೊಂಡಿದ್ದಾರೆ. ನಾನು ನಿಜವಾಗಿಯೂ ನಿನ್ನ ಬಳಿಯಿಂದ ಬಂದಿರುವುದಾಗಿಯೂ ನೀನೇ ನನ್ನನ್ನು ಕಳುಹಿಸಿರುವುದಾಗಿಯೂ ಇವರು ನಂಬಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ ನೀವು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ, ಇವರು ಅಂಗೀಕರಿಸಿದ್ದಾರೆ ಮತ್ತು ನಾನು ನಿಮ್ಮ ಬಳಿಯಿಂದ ಬಂದವನೆಂದು ಇವರು ನಿಶ್ಚಯವಾಗಿ ತಿಳಿದು, ನೀವೇ ನನ್ನನ್ನು ಕಳುಹಿಸಿದ್ದೀರಿ, ಎಂದು ನಂಬಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತಿಯಾ ಮಾಜ್ಯಾ ತಾಬೆತ್ ದಿಲ್ಲಿ ಖಬರ್ ಮಿಯಾ ತೆಂಕಾ ದಿಲಾ. ಅನಿ ತೆನಿ ತಿ ಸ್ವಿಕಾರ್ ಕರ್ಲ್ಯಾನಿ, ಅನಿ ಮಿಯಾ ತುಜೆಕ್ನಾಚ್ ಯೆಲಾ ಮನುನ್ ತೆಂಕಾ ಗೊತ್ತ್ ಹಾಯ್, ಅನಿ ತಿಯಾಚ್ ಮಾಕಾ ಧಾಡುನ್ ದಿಲೆ ಮನುನ್ ತೆನಿ ವಿಶ್ವಾಸ್ ಕರ್‍ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 17:8
31 ತಿಳಿವುಗಳ ಹೋಲಿಕೆ  

ನಾನು ನಿನ್ನ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ, ನಾನು ಈ ಲೋಕದವನಲ್ಲದವನಾಗಿರುವ ಪ್ರಕಾರ ಇವರೂ ಈ ಲೋಕದವರಲ್ಲ. ಆದಕಾರಣ ಲೋಕವು ಇವರನ್ನು ದ್ವೇಷಿಸುತ್ತದೆ.


ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ, ಏಕೆಂದರೆ, ಯಜಮಾನನು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ, ಏಕೆಂದರೆ ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಸಿದ್ದೇನೆ.


ನೀನು ಸಮಸ್ತವನ್ನು ತಿಳಿದವನೆಂದೂ, ನಿನಗೆ ಪ್ರಶ್ನೆ ಮಾಡಬೇಕಾದ ಅಗತ್ಯವಿಲ್ಲವೆಂದೂ ಈಗ ನಮಗೆ ತಿಳಿಯಿತು. ಆದುದರಿಂದ ನಿನ್ನನ್ನು ದೇವರ ಬಳಿಯಿಂದ ಬಂದವನೇ ಎಂದು ನಾವು ನಂಬುತ್ತೇವೆ” ಎಂದರು.


ನೀವು ನನ್ನನ್ನು ಪ್ರೀತಿಸಿ ನಾನು ತಂದೆಯ ಬಳಿಯಿಂದ ಹೊರಟುಬಂದವನೆಂದು ನಂಬಿದ್ದರಿಂದ ತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ.


ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ಸತ್ಯವಾಗಿ ದೇವರ ವಾಕ್ಯವೇ. ಆ ವಾಕ್ಯವು, ನಂಬುವವರಾದ ನಿಮ್ಮೊಳಗೆ ಕೆಲಸ ಮಾಡುತ್ತದೆ.


ತಂದೆಯು ತನ್ನ ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವುದನ್ನು ನಾವು ತಿಳಿದಿದ್ದೇವೆ ಮತ್ತು ಅದರ ವಿಷಯದಲ್ಲಿ ನಾವು ಸಾಕ್ಷಿ ಹೇಳುತ್ತೇವೆ.


ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆಯೇ ಅವರು ಸಹ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ. ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವುದಕ್ಕಾಗಿ, ಅವರೆಲ್ಲರೂ ನಮ್ಮಲ್ಲಿ ಒಂದಾಗಿರಲಿ ಎಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.


ಯೇಸು ಅವರಿಗೆ, “ದೇವರು ನಿಮಗೆ ತಂದೆಯಾಗಿದ್ದರೆ, ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ, ಏಕೆಂದರೆ ನಾನು ದೇವರಿಂದಲೇ ಹೊರಟು ಲೋಕಕ್ಕೆ ಬಂದವನಾಗಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ, ಆದರೆ ದೇವರೇ ನನ್ನನ್ನು ಕಳುಹಿಸಿದ್ದಾನೆ.


ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂಬುದನ್ನು ನೀನು ನಂಬುವುದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುವುದಿಲ್ಲ; ತಂದೆಯು ನನ್ನಲ್ಲಿ ಇದ್ದುಕೊಂಡು ತನ್ನ ಕಾರ್ಯಗಳನ್ನು ಮಾಡುತ್ತಾನೆ.


ಏಕೆಂದರೆ ಇದನ್ನು ನನ್ನಷ್ಟಕ್ಕೆ ನಾನೇ ಮಾತನಾಡುತ್ತಿಲ್ಲ. ನನ್ನನ್ನು ಕಳುಹಿಸಿ ಕೊಟ್ಟ ತಂದೆಯೇ, ನಾನು ಏನು ಹೇಳಬೇಕು ಮತ್ತು ಹೇಗೆ ಮಾತನಾಡಬೇಕು, ಎಂಬುದಾಗಿ ನನಗೆ ಆಜ್ಞಾಪಿಸಿದ್ದಾನೆ.


ಸೀಮೋನ್ ಪೇತ್ರನು ಆತನಿಗೆ “ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳಿವೆಯಲ್ಲಾ.


ಅವರು ವಿವೇಕಮಾರ್ಗದಲ್ಲಿ ಅಂದರೆ ನೀತಿ, ನ್ಯಾಯ ಮತ್ತು ಧರ್ಮಮಾರ್ಗಗಳಲ್ಲಿ ಶಿಕ್ಷಿತರಾಗುವರು.


ಕಡೆಯದಾಗಿ, ಸಹೋದರರೇ, ನಾವು ಕರ್ತನಾದ ಯೇಸುವಿನ ಮುಖಾಂತರ ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ.


ಸಹೋದರರೇ, ನಾನು ನಿಮಗೆ ತಿಳಿಸಿದ ಸುವಾರ್ತೆಯನ್ನು ನಿಮ್ಮ ನೆನಪಿಗೆ ತರುತ್ತೇನೆ; ನೀವು ಅದನ್ನು ಸ್ವೀಕರಿಸಿ, ಅದರಲ್ಲಿ ನಿಂತಿದ್ದೀರಿ.


ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣರಾಗಿರಲಿ. ಹೀಗೆ ನೀನು ನನ್ನನ್ನು ಕಳುಹಿಸಿದ್ದೀ, ಎಂದೂ ಮತ್ತು ನೀನು ನನ್ನನ್ನು ಪ್ರೀತಿಸಿದಂತೆ, ಇವರನ್ನೂ ನೀನು ಪ್ರೀತಿಸುತ್ತೀ ಎಂದು ಲೋಕವು ತಿಳಿದುಕೊಳ್ಳುವುದು.


ನೀನು ನನ್ನನ್ನು ಲೋಕಕ್ಕೆ ಕಳುಹಿಸಿದಂತೆಯೇ, ನಾನು ಸಹ ಇವರನ್ನು ಲೋಕಕ್ಕೆ ಕಳುಹಿಸಿದ್ದೇನೆ.


ಅದಕ್ಕಾತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ಪರಲೋಕ ರಾಜ್ಯದ ಮರ್ಮಗಳನ್ನು ತಿಳಿಯುವ ಭಾಗ್ಯವು ನಿಮಗೆ ಕೊಟ್ಟಿದೆ ಅವರಿಗೆ ಕೊಟ್ಟಿಲ್ಲ.


ನನ್ನ ಬೋಧನೆಯನ್ನು ಬೆಳ್ಳಿಗಿಂತಲೂ ಮತ್ತು ಜ್ಞಾನೋಪದೇಶವನ್ನು ಅಪರಂಜಿಗಿಂತಲೂ ಉತ್ತಮವೆಂದು ಹೊಂದಿಕೊಳ್ಳಿರಿ.


ನಾನು ನಿಮಗೆ ತಿಳಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನೆಂದರೆ, ಕರ್ತನಾದ ಯೇಸು ತಾನು ಹಿಡಿದು ಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು,


ಆತನ ಸಾಕ್ಷಿಯನ್ನು ಸ್ವೀಕರಿಸಿದವನು ದೇವರು ಸತ್ಯವಂತನೆಂದು ದೃಢಪಡಿಸುವವನಾಗಿದ್ದಾನೆ.


ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಖಂಡಿಸಲಿಕ್ಕೆ ಕಳುಹಿಸಲಿಲ್ಲ.


ನನ್ನ ಗದರಿಕೆಗೆ ಲಕ್ಷ್ಯಕೊಡಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ, ನನ್ನ ಮಾತುಗಳನ್ನು ನಿಮಗೆ ತಿಳಿಯಪಡಿಸುವೆನು.


ಕಂದಾ, ಗಮನಿಸಿ ನನ್ನ ಮಾತುಗಳನ್ನು ಕೇಳು, ಕೇಳಿದರೆ, ನಿನ್ನ ಜೀವಮಾನದ ವರ್ಷಗಳು ಹೆಚ್ಚುವವು.


ಕಂದಾ, ನನ್ನ ಮಾತುಗಳನ್ನು ಅಂಗೀಕರಿಸಿ, ನನ್ನ ವಿಧಿಗಳನ್ನು ನಿಧಿಯಂತೆ ಕಾಪಾಡಿಕೋ,


ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೋಸ್ಕರ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.


ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು.


ಯೇಸು ಕ್ರಿಸ್ತನ ಪ್ರಕಟನೆಯು, ಆತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟಣೆಯನ್ನು ಹೊಂದಿದನು. ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಆ ಸಂಗತಿಗಳನ್ನು ತನ್ನ ದಾಸನಾದ ಯೋಹಾನನಿಗೆ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು