Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅದಕ್ಕೆ ಯೇಸು, “ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿ ಬರುವ ಸಭಾಮಂದಿರಗಳಲ್ಲಿಯೂ, ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸಿದ್ದೇನೆ, ಗುಪ್ತವಾಗಿ ಯಾವುದನ್ನೂ ನಾನು ಮಾತನಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆಗ ಯೇಸು ಸ್ವಾಮಿ, “ನಾನು ಬಹಿರಂಗವಾಗಿಯೇ ಜನರೆಲ್ಲರೂ ಕೇಳುವಂತೆ ಮಾತನಾಡಿದ್ದೇನೆ; ಯೆಹೂದ್ಯರೆಲ್ಲರು ಸಭೆಸೇರುವ ಪ್ರಾರ್ಥನಾಮಂದಿರಗಳಲ್ಲಿಯೂ ಮಹಾದೇವಾಲಯದಲ್ಲಿಯೂ ನಾನು ಯಾವಾಗಲೂ ಬೋಧನೆಮಾಡಿಕೊಂಡು ಬಂದಿದ್ದೇನೆ. ಮುಚ್ಚುಮರೆಯಾಗಿ ಏನನ್ನೂ ಹೇಳಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅದಕ್ಕೆ ಯೇಸು - ನಾನು ಧಾರಾಳವಾಗಿ ಲೋಕದ ಮುಂದೆ ಮಾತಾಡಿದ್ದೇನೆ; ಯೆಹೂದ್ಯರೆಲ್ಲಾ ಕೂಡುವಂಥ ಸಭಾಮಂದಿರಗಳಲ್ಲಿಯೂ ದೇವಾಲಯದಲ್ಲಿಯೂ ಯಾವಾಗಲೂ ಉಪದೇಶಮಾಡುತ್ತಾ ಬಂದೆನು; ಮರೆಯಾಗಿ ಯಾವದನ್ನೂ ಮಾತಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅದಕ್ಕೆ ಯೇಸು, “ನಾನು ಬಹಿರಂಗವಾಗಿ ಜನರೊಂದಿಗೆ ಮಾತಾಡಿದ್ದೇನೆ; ಯಾವಾಗಲೂ ಸಭಾಮಂದಿರಗಳಲ್ಲಿ ಮತ್ತು ದೇವಾಲಯದಲ್ಲಿ ಬೋಧಿಸಿದ್ದೇನೆ. ಯೆಹೂದ್ಯರೆಲ್ಲರೂ ಅಲ್ಲಿಗೆ ಒಟ್ಟಾಗಿ ಸೇರಿಬರುತ್ತಿದ್ದರು. ನಾನು ಯಾವುದನ್ನೂ ರಹಸ್ಯವಾಗಿ ಎಂದೂ ಹೇಳಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೇಸು ಅವನಿಗೆ, “ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿಬರುವ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸುತ್ತಿದ್ದೆನು. ನಾನು ಮುಚ್ಚುಮರೆಯಾಗಿ ಏನೂ ಮಾತನಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತನ್ನಾ ಜೆಜುನ್ ಮಿಯಾ ಕನ್ನಾಬಿ ಸಗ್ಳ್ಯಾಕ್ನಿ ಕಾಯ್ಬಿ ಧಾಪುನ್ ಘೆಯ್ನಸ್ತಾನಾ, ಬೊಲ್ಲಾ, ಮಿಯಾ ದೆವಾಚ್ಯಾ ಗುಡಿತ್ ಅನಿ ಸಿನಾಗೊಗಾತ್ನಿ ಮಾಜಿ ಸಗ್ಳಿ ಶಿಕಾಪಾ ಶಿಕ್ವುಲಾ, ಥೈ ಸಗ್ಳಿ ಲೊಕಾ ಗೊಳಾ ಹೊಲ್ಲಿ ರ್‍ಹಾಯ್ತ್, ಮಿಯಾ ಕಾಯ್ಬಿ ಧಾಪುನ್ ಥವ್ನ್ ಘೆವ್ನ್ ಬೊಲುಕ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:20
25 ತಿಳಿವುಗಳ ಹೋಲಿಕೆ  

ನೋಡಿರಿ, ಈತನು ಬಹಿರಂಗವಾಗಿ ಮಾತನಾಡುತ್ತಿದ್ದಾನೆ ಮತ್ತು ಅವರು ಆತನಿಗೆ ಏನೂ ಹೇಳುತ್ತಿಲ್ಲ. ಬಹುಶಃ ಈತನೇ ನಿಜವಾದ ಕ್ರಿಸ್ತನೆಂದು ಅಧಿಕಾರಿಗಳು ತಿಳಿದುಕೊಂಡಿದ್ದಾರೋ?


ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.


ನನ್ನ ಬಳಿಗೆ ಬಂದು ಇದನ್ನು ಕೇಳಿರಿ, ಆದಿಯಿಂದಲೂ ನಾನು ಗುಟ್ಟಾಗಿ ಮಾತನಾಡಲಿಲ್ಲ, ಭೂಮಿಯು ಉಂಟಾದಂದಿನಿಂದ ನಾನು ಅಲ್ಲಿ ಇದ್ದೇನೆ. ಈಗ ಯೆಹೋವನೆಂಬ ದೇವರು ತನ್ನ ಆತ್ಮದೊಡನೆ ನನ್ನನ್ನು ಕಳುಹಿಸಿದ್ದಾನೆ.


ಯೇಸು ಹಗಲಿನಲ್ಲಿ ದೇವಾಲಯದಲ್ಲಿ ಉಪದೇಶಮಾಡುತ್ತಾ, ರಾತ್ರಿ ಪಟ್ಟಣದ ಹೊರಗೆ ಹೋಗಿ ಎಣ್ಣೆ ಮರಗಳ ತೋಪು ಎನಿಸಿಕೊಳ್ಳುವ ಗುಡ್ಡದಲ್ಲಿ ರಾತ್ರಿಯನ್ನು ಕಳೆಯುತ್ತಾ ಇದ್ದನು.


ಪ್ರಸಿದ್ಧಿಗೆ ಬರಬೇಕೆಂದಿರುವವನು ಯಾರೂ ರಹಸ್ಯವಾಗಿ ಯಾವುದನ್ನೂ ಮಾಡುವುದಿಲ್ಲ. ನೀನು ಇವುಗಳನ್ನು ಮಾಡುವುದರಿಂದ, ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ” ಎಂದು ಹೇಳಿದರು.


ಆತನು ಅವರ ಸಭಾಮಂದಿರಗಳಲ್ಲಿ ಬೋಧಿಸುತ್ತಿದ್ದನು; ಎಲ್ಲರೂ ಆತನನ್ನು ಹೊಗಳಿದರು.


ಅದೇ ಸಮಯದಲ್ಲಿ ಯೇಸು ಗುಂಪಾಗಿ ಕೂಡಿಬಂದಿದ್ದ ಜನರಿಗೆ, “ಕಳ್ಳನನ್ನು ಹಿಡಿಯುವುದಕ್ಕೆ ಬಂದಂತೆ ಕತ್ತಿಗಳನ್ನು ದೊಣ್ಣೆಗಳನ್ನು ತೆಗೆದುಕೊಂಡು ನನ್ನನ್ನು ಹಿಡಿಯುವುದಕ್ಕೆ ಬಂದಿರಾ? ನಾನು ಪ್ರತಿದಿನ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲವಲ್ಲಾ;


ತರುವಾಯ ಯೇಸು ಎಲ್ಲಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚರಿಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.


ನಾನು ರಹಸ್ಯದಲ್ಲಿ ನುಡಿದವನಲ್ಲ, ಅಧೋಲೋಕದೊಳಗಿಂದ ಮಾತನಾಡಿದವನಲ್ಲ. ಶೂನ್ಯವನ್ನೋ ಎಂಬಂತೆ, ‘ನನ್ನನ್ನು ಹುಡುಕಿರಿ’ ಎಂದು ಯಾಕೋಬ ವಂಶದವರಿಗೆ ನಾನು ಅಪ್ಪಣೆಕೊಡಲಿಲ್ಲ. ಯೆಹೋವನೆಂಬ ನಾನು ಸತ್ಯಾನುಸಾರ ನುಡಿಯುವವನು, ಸರಿಯಾದ ಮಾತುಗಳನ್ನೇ ಆಡುತ್ತೇನೆ.


ನಿಮ್ಮ ವಿಷಯವಾಗಿ ಮಾತನಾಡುವುದಕ್ಕೂ, ನಿಮ್ಮ ಮೇಲೆ ತೀರ್ಪು ಮಾಡುವುದಕ್ಕೂ ಅನೇಕ ಸಂಗತಿಗಳು ನನಗುಂಟು. ಆದರೆ ನನ್ನನ್ನು ಕಳುಹಿಸಿ ಕೊಟ್ಟಾತನು ಸತ್ಯವಂತನು. ಆತನಿಂದ ನಾನು ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ” ಎಂದನು.


ಬೆಳಗಿನಜಾವದಲ್ಲಿ ಆತನು ತಿರುಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಆತನ ಬಳಿಗೆ ಬಂದರು. ಆತನು ಕುಳಿತುಕೊಂಡು ಅವರಿಗೆ ಬೋಧಿಸಿದನು.


ಯೇಸುವು ಇದನ್ನು ತಿಳಿದು ದೇವಾಲಯದಲ್ಲಿ ಉಪದೇಶ ಮಾಡುವಾಗ, “ನೀವು ನನ್ನನ್ನು ಬಲ್ಲಿರಿ, ನಾನು ಎಲ್ಲಿಂದ ಬಂದವನೆಂದೂ ನೀವು ಬಲ್ಲಿರಿ, ಆದರೂ ನಾನು ನನ್ನಷ್ಟಕ್ಕೆ ನಾನೇ ಬಂದವನಲ್ಲ. ನನ್ನನ್ನು ಕಳುಹಿಸಿದಾತನು ಸತ್ಯವಂತನು. ನೀವು ಆತನನ್ನು ಅರಿತವರಲ್ಲ.


ಹಬ್ಬದ ಮಧ್ಯಕಾಲದಲ್ಲಿ ಯೇಸು ದೇವಾಲಯಕ್ಕೆ ಹೋಗಿ ಬೋಧಿಸತೊಡಗಿದನು.


ಆಗ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಇವನು ದೇವದೂಷಣೆಯ ಮಾತನಾಡಿದ್ದಾನೆ; ನಮಗೆ ಸಾಕ್ಷಿಗಳು ಇನ್ನು ಯಾತಕ್ಕೆ ಬೇಕು? ನೋಡಿ ಇವನು ಈಗಲೇ ಆಡಿದ ದೂಷಣೆಯ ಮಾತನ್ನು ಕೇಳಿದಿರಲ್ಲಾ;


ಅಗ್ರಿಪ್ಪರಾಜನು ಈ ಸಂಗತಿಗಳನ್ನೆಲ್ಲಾ ತಿಳಿದವನು; ಆದುದರಿಂದ, ಅವನ ಮುಂದೆ ಧೈರ್ಯವಾಗಿ ಮಾತನಾಡುತ್ತೇನೆ. ಇವುಗಳಲ್ಲಿ ಒಂದಾದರೂ ಅವನಿಗೆ ಮುಚ್ಚುಮರೆಯಾದುದಲ್ಲವೆಂದು ನಂಬಿದ್ದೇನೆ, ಏಕೆಂದರೆ ಇದು ಒಂದು ಮೂಲೆಯಲ್ಲಿ ನಡೆದ ಕಾರ್ಯವಲ್ಲ.


ಆದಕಾರಣ ಯಾರಾದರು ನಿಮಗೆ, ‘ಅಗೋ ಕ್ರಿಸ್ತನು ಅಡವಿಯಲ್ಲಿ ಇದ್ದಾನೆಂದು’ ಹೇಳಿದರೆ ಅಡವಿಗೆ ಹೊರಟುಹೋಗಬೇಡಿರಿ; ‘ಇಗೋ ಒಳಕೋಣೆಗಳಲ್ಲಿದ್ದಾನೆಂದು’ ಹೇಳಿದರೆ ನಂಬಬೇಡಿರಿ.


ನೀನು ನೀತಿಯನ್ನು ಸಾಧಿಸಿದ ಶುಭಸಮಾಚಾರವನ್ನು, ಧಾರಳವಾಗಿ ಮಹಾಸಭೆಯಲ್ಲಿ ಪ್ರಕಟಿಸಿದೆನು; ಯೆಹೋವನೇ, ನೀನೇ ಬಲ್ಲೆ.


ನಿನ್ನ ನಾಮ ಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.


ಆತನು ಈ ಮಾತನ್ನು ಸ್ಪಷ್ಟವಾಗಿ ಹೇಳಿದನು. ಆಗ ಪೇತ್ರನು ಆತನನ್ನು ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ “ನೀನು ಹೀಗೆ ಹೇಳುವುದು ಸರಿಯಲ್ಲ” ಎಂದು ಗದರಿಸಿದನು.


ಈ ವಿಷಯಗಳನ್ನು ಕಪೆರ್ನೌಮಿನ ಸಭಾಮಂದಿರದಲ್ಲಿ ಉಪದೇಶ ಮಾಡುವಾಗ ಹೇಳಿದನು.


ನೀನು ನನ್ನನ್ನು ಯಾಕೆ ವಿಚಾರಿಸುತ್ತೀ? ನಾನು ಏನೇನು ಮಾತನಾಡಿದೆನೋ ಅದನ್ನು ಕೇಳಿದವರನ್ನೇ ವಿಚಾರಿಸು. ನಾನು ಹೇಳಿದ್ದನ್ನು ಅವರು ತಿಳಿದಿದ್ದಾರೆ” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು