Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯೆಹೂದ್ಯರು ಅವನಿಗೆ, “ಈತನು ದುಷ್ಕರ್ಮಿಯಲ್ಲದಿದ್ದರೆ ನಾವು ಈತನನ್ನು ನಿನಗೆ ಒಪ್ಪಿಸಿ ಕೊಡುತ್ತಿರಲಿಲ್ಲ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅವರು, “ಇವನು ಅಪರಾಧಿಯಲ್ಲದಿದ್ದರೆ, ಇವನನ್ನು ನಿಮಗೆ ತಂದೊಪ್ಪಿಸುತ್ತಿರಲಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅವರು ಅವನಿಗೆ - ಇವನು ದುಷ್ಕರ್ಮಿಯಲ್ಲದಿದ್ದರೆ ನಾವು ಇವನನ್ನು ನಿನಗೆ ಒಪ್ಪಿಸಿಕೊಡುತ್ತಿದ್ದಿಲ್ಲವೆಂದು ಉತ್ತರ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಯೆಹೂದ್ಯರು, “ಇವನು ಒಬ್ಬ ಕೆಟ್ಟ ಮನುಷ್ಯ. ಆದಕಾರಣ, ನಾವು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬಂದೆವು” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಯೆಹೂದಿ ನಾಯಕರು, “ಈತನು ದುಷ್ಕರ್ಮಿಯಲ್ಲದಿದ್ದರೆ ನಾವು ಈತನನ್ನು ನಿನಗೆ ಒಪ್ಪಿಸಿಕೊಡುತ್ತಿರಲಿಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತನ್ನಾ ತೆನಿ, “ತೆನಿ ಕಾಯ್ಬಿ ಚುಕ್ ಕರಲ್ಲಿ ನಸ್ಲ್ಯಾರ್, ಅಮಿ ತೆಕಾ ತುಜೆಕ್ಡೆ ಹಾನಿನಸಿ ಹೊತ್ತಾಂವ್” ಮನುನ್ ಜಬಾಬ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:30
11 ತಿಳಿವುಗಳ ಹೋಲಿಕೆ  

ನಮ್ಮ ಪೂರ್ವಿಕರಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಪಿಲಾತನಿಗೆ ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ, ಆತನ ಮುಂದೆ ಆತನನ್ನು ಧಿಕ್ಕರಿಸಿ ಬೇಡವೆಂದು ಕೂಗಿದ್ದೀರಿ.


ಈ ಮಾತಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಿಸಿದನು, ಆದರೆ ಯೆಹೂದ್ಯರು, “ನೀನು ಈ ಮನುಷ್ಯನನ್ನು ಬಿಡಿಸಿದರೆ, ನೀನು ಕೈಸರನಿಗೆ ಮಿತ್ರನಲ್ಲ, ತನ್ನನ್ನು ತಾನೇ ಅರಸನಾಗಿ ಮಾಡಿಕೊಳ್ಳುವವನು, ಕೈಸರನಿಗೆ ವಿರೋಧಿ” ಎಂದು ಕೂಗಿ ಹೇಳಿದರು.


ಮುಖ್ಯಯಾಜಕರು ಆತನ ಮೇಲೆ ತುಂಬಾ ದೂರು ಹೇಳುತ್ತಿದ್ದರು.


ಅವರಿಗೆ, “ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೆ ಒಪ್ಪಿಸಿಕೊಡುವರು. ಅವರು ಅವನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳ ಕೈಗೆ ಒಪ್ಪಿಸುವರು.


ಹೀಗಿರಲಾಗಿ ಪಿಲಾತನು ಹೊರಗೆ ಅವರ ಬಳಿಗೆ ಬಂದು, “ಈ ಮನುಷ್ಯನ ಮೇಲೆ ಏನು ದೂರು ತಂದಿದ್ದೀರಿ?” ಎಂದು ಕೇಳಿದನು.


ಆಗ ಪಿಲಾತನು ಅವರಿಗೆ, “ನೀವೇ ಆತನನ್ನು ತೆಗೆದುಕೊಂಡು ಹೋಗಿ ನಿಮ್ಮ ಧರ್ಮಶಾಸ್ತ್ರದ ಪ್ರಕಾರ ಆತನಿಗೆ ತೀರ್ಪು ಮಾಡಿರಿ” ಎಂದು ಹೇಳಿದನು. ಅದಕ್ಕೆ ಯೆಹೂದ್ಯರು, “ಮರಣ ದಂಡನೆಯನ್ನು ವಿಧಿಸುವ ಅಧಿಕಾರವು ನಮಗೆ ಇಲ್ಲ” ಎಂದರು.


ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಬಂಧಿಸಲ್ಪಟ್ಟವನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.


ನಿಮ್ಮಲ್ಲಿ ಯಾವನಾದರು ಕೊಲೆಗಾರನು, ಕಳ್ಳನು, ದುಷ್ಟನು, ಪರರ ಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಶಿಕ್ಷಾಪಾತ್ರನಾಗಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು