Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆತನು ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು “ಕಪಾಲಸ್ಥಳ” ಎಂಬ ಸ್ಥಳಕ್ಕೆ ಹೋದನು. ಇದನ್ನು ಇಬ್ರಿಯ ಭಾಷೆಯಲ್ಲಿ “ಗೊಲ್ಗೊಥಾ” ಎಂದು ಕರೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಯೇಸು ಸ್ವಾಮಿ ತಮ್ಮ ಶಿಲುಬೆಯನ್ನು ತಾವೇ ಹೊತ್ತುಕೊಂಡು ‘ಕಪಾಲ’ ಎಂಬ ಸ್ಥಳಕ್ಕೆ ಹೋದರು. ಇದಕ್ಕೆ ಯೆಹೂದ್ಯರ ಭಾಷೆಯಲ್ಲಿ ‘ಗೊಲ್ಗೊಥಾ’ ಎಂದು ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವರು ಯೇಸುವನ್ನು ತೆಗೆದುಕೊಂಡು ಹೋದರು; ಆತನು ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ಕಪಾಲಸ್ಥಳವೆಂಬ ಸ್ಥಾನಕ್ಕೆ ಹೋದನು. ಇದಕ್ಕೆ ಇಬ್ರಿಯ ಮಾತಿನಲ್ಲಿ ಗೊಲ್ಗೊಥಾ ಎಂದು ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೇಸು ತನ್ನ ಸ್ವಂತ ಶಿಲುಬೆಯನ್ನು ಹೊತ್ತುಕೊಂಡು, “ಕಪಾಲ” ಎಂಬ ಸ್ಥಳಕ್ಕೆ ಹೊರಟನು. (ಯೆಹೂದ್ಯರ ಭಾಷೆಯಲ್ಲಿ ಈ ಸ್ಥಳದ ಹೆಸರು “ಗೊಲ್ಗೊಥಾ.”)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೇಸು ತಮ್ಮ ಶಿಲುಬೆಯನ್ನು ತಾವೇ ಹೊತ್ತುಕೊಂಡು “ತಲೆಬುರುಡೆಯ ಸ್ಥಳ” ಎಂಬ ಸ್ಥಳಕ್ಕೆ ಹೋದರು. ಅದು ಅರಮಾಯ ಭಾಷೆಯಲ್ಲಿ “ಗೊಲ್ಗೊಥಾ” ಎಂದು ಅರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಅಶೆ ತೆನಿ ಜೆಜುಕ್ ಘೆಟ್ಲ್ಯಾನಿ ಅನಿ ಜೆಜುನ್ ಅಪ್ನಾಚೊ ಕುರಿಸ್ ವಾವುನ್ ಘೆಟ್ಲ್ಯಾನ್, ಅನಿ ಬುರ್‍ಡ್ಯಾಚೊ ಜಾಗೊ ಮನ್ತಲ್ಯಾ ಜಾಗ್ಯಾಕ್ ಯೆವ್ನ್ ಪಾವ್ಲೊ ತಶೆ ಮಟ್ಲ್ಯಾರ್ ಹೆಬ್ರೆವ್ ಬಾಶೆತ್ ಗೊಲ್ಗೊಥಾ ಮನ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:17
23 ತಿಳಿವುಗಳ ಹೋಲಿಕೆ  

ಅವರು ಕಪಾಲವೆಂಬ ಸ್ಥಳಕ್ಕೆ ಬಂದಾಗ ಅಲ್ಲಿ ಯೇಸುವನ್ನೂ ದುಷ್ಕರ್ಮಿಗಳನ್ನೂ ಶಿಲುಬೆಗೆ ಹಾಕಿದರು. ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯಲ್ಲಿಯೂ ಹಾಕಿದರು.


ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರದ ಹೊರತು ಅವನು ನನ್ನ ಶಿಷ್ಯನಾಗಿರಲಾರನು.


ಅವರು ಯೇಸುವನ್ನು ಕರೆದುಕೊಂಡು ಹೋಗುತ್ತಿರುವಾಗ ಹೊಲದಿಂದ ಬರುತ್ತಿದ್ದ, ಕುರೇನೆ ಪಟ್ಟಣದ ಸೀಮೋನನೆಂಬುವನನ್ನು ಕರೆದು, ಶಿಲುಬೆಯನ್ನು ಅವನ ಮೇಲೆ ಹೊರಿಸಿ ಯೇಸುವಿನ ಹಿಂದೆ ಹೊತ್ತುಕೊಂಡು ಬರುವ ಹಾಗೆ ಮಾಡಿದರು.


ಅವನನ್ನು ಊರ ಹೊರಕ್ಕೆ ನೂಕಿಕೊಂಡು ಹೋಗಿ ಕೊಲ್ಲುವುದಕ್ಕೆ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಕಾಲುಗಳ ಬಳಿಯಲ್ಲಿ ಇಟ್ಟರು.


ಇಸ್ರಾಯೇಲರ ಅರಸನಾದ ಈ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಇಳಿದು ಬಂದರೆ ನಾವು ನೋಡಿ ನಂಬುತ್ತೇವೆ” ಎಂದು ತಮ್ಮತಮ್ಮೊಳಗೆ ಅಣಕಿಸುತ್ತಾ ಮಾತನಾಡುತ್ತಿದ್ದರು. ಆತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರು ಸಹ ಆತನನ್ನು ನಿಂದಿಸುತ್ತಿದ್ದರು.


ಇದಲ್ಲದೆ ಆತನ ಶಿಲುಬೆಯ ಮೇಲೆ “ಇವನು ಯೆಹೂದ್ಯರ ಅರಸನು” ಎಂಬುದಾಗಿ ಲಿಖಿತವಾದ ಸೂಚನೆಯನ್ನು ಹಾಕಲಾಗಿತ್ತು.


ಇದಲ್ಲದೆ ಆತನು ಎಲ್ಲರಿಗೂ ಹೇಳಿದ್ದೇನಂದರೆ, “ಯಾವನಿಗಾದರೂ ನನ್ನ ಹಿಂದೆ ಬರುವುದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ತಾನು ನಿರಾಕರಿಸಿ ಪ್ರತಿದಿನವು ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


“ಈತನು ಯೆಹೂದ್ಯರ ಅರಸನು” ಎಂದು ಆತನ ಮೇಲೆ ಹೊರಿಸಿದ್ದ ದೋಷಾರೋಪಣೆಯನ್ನು, ಶಿಲುಬೆಯ ಮೇಲೆ ಬರೆಯಲಾಗಿತ್ತು.


ಯೇಸು ಅವನನ್ನು ದೃಷ್ಟಿಸಿ ನೋಡಿ ಪ್ರೀತಿಸಿ ಅವನಿಗೆ, “ನಿನಗೆ ಒಂದು ಕಡಿಮೆಯಾಗಿದೆ. ಹೋಗು ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.


ಆ ಮೇಲೆ ಆತನು ತನ್ನ ಶಿಷ್ಯರ ಜೊತೆಗೆ ಜನರ ಗುಂಪನ್ನೂ ಹತ್ತಿರ ಕರೆದು ಅವರಿಗೆ ಹೇಳಿದ್ದೇನಂದರೆ, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ಇದಲ್ಲದೆ ಆತನ ಮೇಲೆ ಹೊರಿಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು; ಅದೇನೆಂದರೆ, “ಈತನು ಯೇಸು, ಯೆಹೂದ್ಯರ ಅರಸನು” ಎಂಬುದೇ.


ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ “ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ಮತ್ತು ಯಾವನಾದರೂ ತನ್ನ ಶಿಲುಬೆಯನ್ನು ತೆಗೆದುಕೊಂಡು ನನ್ನನ್ನು ಹಿಂಬಾಲಿಸದಿದ್ದರೆ ನನ್ನ ಶಿಷ್ಯನಾಗಲು ಯೋಗ್ಯನಲ್ಲ.


ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತು ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆ ಎಂಬುದಾಗಿ ಜನರ ಎದುರಿನಲ್ಲಿ ಅವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.


“ದೂಷಿಸಿದ ಆ ಮನುಷ್ಯನನ್ನು ಪಾಳೆಯದ ಹೊರಗೆ ಒಯ್ಯಬೇಕು. ಅವನ ದೂಷಣೆಯ ಮಾತುಗಳನ್ನು ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು.


ಆನಂತರ ಅಬ್ರಹಾಮನು ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ತನ್ನ ಮಗನಾದ ಇಸಾಕನ ಮೇಲೆ ಹೊರಿಸಿ, ತನ್ನ ಕೈಯಲ್ಲೇ ಬೆಂಕಿಯನ್ನೂ ಕತ್ತಿಯನ್ನೂ ತೆಗೆದುಕೊಂಡ ನಂತರ ಅವರಿಬ್ಬರೂ ಹೊರಟರು.


ಅಲ್ಲಿ ಕುರಿಬಾಗಿಲು ಎಂಬ ಸ್ಥಳದ ಬಳಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಅದನ್ನು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯುತ್ತಾರೆ.


ಈ ಮಾತುಗಳನ್ನು ಪಿಲಾತನು ಕೇಳಿ ಯೇಸುವನ್ನು ಹೊರಗೆ ಕರೆದುಕೊಂಡು ಬಂದು ಇಬ್ರಿಯ ಮಾತಿನಲ್ಲಿ, ಗಬ್ಬಥಾ ಎಂದು ಕರೆಯಲ್ಪಟ್ಟ, “ಕಲ್ಲು ಹಾಸಿದ ಕಟ್ಟೆ” ಎಂಬ ಸ್ಥಳಕ್ಕೆ ಹೋಗಿ ನ್ಯಾಯಾಸನದ ಮೇಲೆ ಕುಳಿತುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು