Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅದು ಸಿದ್ಧತೆಯ ದಿನವಾದುದರಿಂದ ಯೆಹೂದ್ಯರು, ಸಬ್ಬತ್ ದಿನದಲ್ಲಿ ಮೃತದೇಹಗಳು ಶಿಲುಬೆಯ ಮೇಲೆ ಇರಬಾರದೆಂದು, ಪಿಲಾತನನ್ನು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಕೇಳಿಕೊಂಡರು, ಏಕೆಂದರೆ ಆ ಸಬ್ಬತ್ ದಿನವು ಬಹು ವಿಶೇಷವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅಂದು ಪಾಸ್ಕ ಹಬ್ಬದ ಹಿಂದಿನ ದಿನ. ಮಾರನೆಯ ದಿನ ಸಬ್ಬತ್ ದಿನವೂ ದೊಡ್ಡ ಹಬ್ಬವೂ ಆಗಿತ್ತು. ಸಬ್ಬತ್ ದಿನದಂದು ಶವಗಳು ಶಿಲುಬೆಯ ಮೇಲೆ ತೂಗಾಡುವುದು ಸರಿಯಲ್ಲ ಎಂದುಕೊಂಡು ಶಿಲುಬೆಗೇರಿಸಲಾಗಿದ್ದವರ ಕಾಲುಗಳನ್ನು ಮುರಿದು ಅವರ ಶವವನ್ನು ಅಂದೇ ತೆಗೆಯಿಸಿಬಿಡಲು ಯೆಹೂದ್ಯರು ಪಿಲಾತನಿಂದ ಅಪ್ಪಣೆ ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆ ಹೊತ್ತು ಸೌರಣೆಯ ದಿವಸವಾಗಿದ್ದದರಿಂದ ಯೆಹೂದ್ಯರು - ಸಬ್ಬತ್‍ದಿನದಲ್ಲಿ ಶವಗಳು ಶಿಲುಬೆಯ ಮೇಲೆ ಇರಬಾರದೆಂದು ಪಿಲಾತನನ್ನು - ಅವರ ಕಾಲುಗಳನ್ನು ಮುರಿಸಿ ಅವರನ್ನು ತೆಗೆಸಿಹಾಕಬೇಕೆಂಬದಾಗಿ ಕೇಳಿಕೊಂಡರು; ಯಾಕಂದರೆ ಆ ಸಬ್ಬತ್‍ದಿನವು ಬಹು ವಿಶೇಷವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆ ದಿನವು ಸಿದ್ಧತೆಯ ದಿನವಾಗಿತ್ತು. ಮರುದಿನ ವಿಶೇಷವಾದ ಸಬ್ಬತ್‌ದಿನವಾಗಿತ್ತು. ಸಬ್ಬತ್‌ದಿನದಂದು ದೇಹಗಳು ಶಿಲುಬೆಯ ಮೇಲಿರುವುದು ಯೆಹೂದ್ಯರಿಗೆ ಇಷ್ಟವಿರಲಿಲ್ಲ. ಆದ್ದರಿಂದ ಅವರ ಕಾಲುಗಳನ್ನು ಮುರಿದು ಬೇಗನೆ ಸಾಯಿಸಲು ಆಜ್ಞಾಪಿಸಬೇಕೆಂಬುದಾಗಿ ಅವರು ಪಿಲಾತನನ್ನು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅದು ಪಸ್ಕಹಬ್ಬದ ಸಿದ್ಧತೆಯ ದಿನವಾಗಿತ್ತು. ಮರುದಿನ ವಿಶೇಷ ಸಬ್ಬತ್ ದಿನದಲ್ಲಿ ದೇಹಗಳು ಶಿಲುಬೆಯ ಮೇಲೆ ಇರಬಾರದೆಂದು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಯೆಹೂದ್ಯ ನಾಯಕರು ಪಿಲಾತನನ್ನು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತನ್ನಾ ಜುದೆವಾಂಚ್ಯಾ ಅದಿಕಾರ್‍ಯಾನಿ ಕುರ್ಸಾರ್ ಮಾರಲ್ಲ್ಯಾಂಚೆ ಡೊಕೆ ಮೊಡುನ್ ತೆಂಚಿ ಮಡಿ ಕುರ್ಸಾನಿ ವೈನಾ ಉತ್ರುಕ್ ಪಿಲಾತಾಕ್ನಾ ಪರ್‍ವಾನ್ಗಿ ಘೆಟ್ಲ್ಯಾನಿ. ತೆಚೆಸಾಟ್ನಿ ತೆನಿ ತೊ ದಿಸ್ ಸುಕ್ರಾರ್, ಅನಿ ಸಬ್ಬಾತಾಚಿ ದಿಸಿ ಮಡಿ ಕುರ್ಸಾ ವರ್ತಿ ಥವ್ತಲೊ ಮನ್ ತೆಂಕಾ ನತ್ತೊ, ಹಿ ಪರ್‍ವಾನ್ಗಿ ಮಾಗುನ್ ಘೆಟಲ್ಲ್ಯಾನಿ, ಅನಿ ಹ್ಯೊ ಸಬ್ಬಾತ್‍ ತರ್ ಲೈ ವಿಶೆಸ್ ರಿತಿಚೊ ಪವಿತ್ರ್ ಸಬ್ಬಾತ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:31
12 ತಿಳಿವುಗಳ ಹೋಲಿಕೆ  

ಅದು ಪಸ್ಕ ಹಬ್ಬಕ್ಕೆ ಸಿದ್ಧಮಾಡುವ ದಿನದಲ್ಲಿ ಹೆಚ್ಚು ಕಡಿಮೆ ಬೆಳಿಗ್ಗೆ ಆರು ಘಂಟೆಯಾಗಿತ್ತು. ಅವನು ಯೆಹೂದ್ಯರಿಗೆ, “ಇಗೋ, ನಿಮ್ಮ ಅರಸನು” ಎಂದು ಹೇಳಿದನು.


ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದ್ದುದರಿಂದಲೂ ಆ ಸಮಾಧಿಯು ಸಮೀಪವಾಗಿದ್ದುದರಿಂದಲೂ ಅವರು ಯೇಸುವಿನ ದೇಹವನ್ನು ಅಲ್ಲಿ ಸಮಾಧಿಯಲ್ಲಿಟ್ಟರು.


ಆಗಲೇ ಸಂಜೆಯಾಗಿತ್ತು; ಮತ್ತು ಆ ದಿನವು ‘ಸಿದ್ಧತೆಯ’ ದಿನ, ಅಂದರೆ ಸಬ್ಬತ್ ದಿನದ ಹಿಂದಿನ ದಿನವಾಗಿತ್ತು.


ಆಯಿ ಊರಿನ ಅರಸನನ್ನು ಸಾಯಂಕಾಲದವರೆಗೂ ಮರಕ್ಕೆ ನೇತು ಹಾಕಿಸಿ ಸೂರ್ಯನು ಅಸ್ತಮಿಸುವಾಗ ಯೆಹೋಶುವನು ಅವನ ಶವವನ್ನು ಕೆಳಗಿಳಿಸಿ ಅದನ್ನು ಊರಬಾಗಿಲಲ್ಲಿ ಹಾಕಿಸಿ ಅದರ ಮೇಲೆ ಕಲ್ಲಿನ ದೊಡ್ಡ ರಾಶಿಯನ್ನು ಹಾಕಿಸಿದನು. ಅದು ಇಂದಿನ ವರೆಗೂ ಹಾಗೆಯೇ ಇದೆ.


ಆನಂತರ ಪಿಲಾತನು ಯೇಸುವನ್ನು ಕರೆದುಕೊಂಡು ಹೋಗಿ ಆತನನ್ನು ಕೊರಡೆಯಿಂದ ಹೊಡೆಸಿದನು.


ನನ್ನ ಪ್ರಜೆಯ ಮಾಂಸವನ್ನು ತಿನ್ನುತ್ತಾರೆ. ಅವರ ಚರ್ಮವನ್ನು ಸುಲಿದುಹಾಕಿ ಅವರ ಎಲುಬುಗಳನ್ನು ಮುರಿಯುತ್ತಾರೆ. ಹಂಡೆಯಲ್ಲಿನ ತುಂಡುಗಳಂತೆ, ಕೊಪ್ಪರಿಗೆಯಲ್ಲಿನ ಮಾಂಸದ ಹಾಗೆ ಅವರನ್ನು ಚೂರುಚೂರಾಗಿ ಕತ್ತರಿಸುತ್ತಾರೆ.


ಶಿಷ್ಟನು ತನ್ನ ಪಶುಗಳ ಕ್ಷೇಮವನ್ನು ಲಕ್ಷಿಸುತ್ತಾನೆ, ದುಷ್ಟನ ವಾತ್ಸಲ್ಯವೋ ಕ್ರೂರತನವೇ.


ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು. ಏಳನೆಯ ದಿನದಲ್ಲಿಯೂ ದೇವಾರಾಧನೆಗಾಗಿ ಸಭೆ ಸೇರಬೇಕು. ಈ ಎರಡು ದಿನಗಳಲ್ಲಿ ಯಾವ ಕೆಲಸವನ್ನು ಮಾಡಕೂಡದು. ಊಟಕ್ಕೆ ಬೇಕಾದದ್ದನ್ನು ಮಾತ್ರ ಮಾಡಬಹುದೇ ಹೊರತು ಬೇರೆ ಯಾವ ಕೆಲಸವನ್ನು ಮಾಡಬಾರದು.


ಮರುದಿನ ಅಂದರೆ ಸಿದ್ಧತೆಯ ದಿನ ಕಳೆದ ಮೇಲೆ ಮುಖ್ಯಯಾಜಕರೂ ಫರಿಸಾಯರೂ ಪಿಲಾತನ ಬಳಿಗೆ ಸೇರಿಬಂದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು