Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 2:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇದಾದ ಮೇಲೆ ಯೇಸುವೂ, ಆತನ ತಾಯಿಯೂ, ತಮ್ಮಂದಿರೂ ಮತ್ತು ಆತನ ಶಿಷ್ಯರೂ ಘಟ್ಟಾ ಇಳಿದು ಕಪೆರ್ನೌಮಿಗೆ ಹೋಗಿ ಅಲ್ಲಿ ಅವರು ಕೆಲವು ದಿನ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇದಾದ ಮೇಲೆ ಯೇಸು, ಅವರ ತಾಯಿ, ಸಹೋದರರು ಮತ್ತು ಶಿಷ್ಯರು ಕಪೆರ್ನವುಮಿಗೆ ಹೋಗಿ ಅಲ್ಲಿ ಕೆಲವು ದಿನ ತಂಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇದಾದ ಮೇಲೆ ಆತನೂ ಆತನ ತಾಯಿಯೂ ತಮ್ಮಂದಿರೂ ಆತನ ಶಿಷ್ಯರೂ ಘಟ್ಟಾ ಇಳಿದು ಕಪೆರ್ನೌವಿುಗೆ ಹೋಗಿ ಅಲ್ಲಿ ಕೆಲವು ದಿವಸ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಬಳಿಕ ಯೇಸು ಕಪೆರ್ನೌಮ್ ಎಂಬ ಊರಿಗೆ ಹೋದನು. ಯೇಸುವಿನ ತಾಯಿ ಮತ್ತು ಸಹೋದರರು ಹಾಗೂ ಆತನ ಶಿಷ್ಯರು ಆತನೊಡನೆ ಹೋದರು. ಅವರೆಲ್ಲರೂ ಕಪೆರ್ನೌಮ್‌ನಲ್ಲಿ ಕೆಲವು ದಿನ ತಂಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದಾದ ಮೇಲೆ ಯೇಸು ತಮ್ಮ ತಾಯಿ, ಸಹೋದರರು ಮತ್ತು ಶಿಷ್ಯರೊಡನೆ ಕಪೆರ್ನೌಮಿಗೆ ಹೋದರು. ಅಲ್ಲಿ ಅವರು ಕೆಲವು ದಿವಸ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಹೆ ಹೊಲ್ಲ್ಯಾ ಮಾನಾ ಜೆಜು ತೆಚಿ ಬಾಯ್, ಭಾವಾ, ಅನಿ ಶಿಸಾ ಕಫರ್‍ನವ್ ಮನ್ತಲ್ಯಾ ಗಾಂವಾಕ್ ಗೆಲೊ, ಅನಿ ಎಕ್ ಉಲ್ಲಿ ದಿಸಾ ಥೈಚ್ ರ್‍ಹಾಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 2:12
12 ತಿಳಿವುಗಳ ಹೋಲಿಕೆ  

ಯೇಸು ಜನರ ಗುಂಪುಗಳ ಸಂಗಡ ಇನ್ನೂ ಮಾತನಾಡುತ್ತಿರುವಾಗ ಆತನ ತಾಯಿಯೂ ತಮ್ಮಂದಿರೂ ಆತನನ್ನು ಮಾತನಾಡಿಸಬೇಕೆಂದು ಹೊರಗೆ ಬಂದು ನಿಂತಿದ್ದರು.


ಆದರೆ ಕರ್ತನ ಸಹೋದರನಾದ ಯಾಕೋಬನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.


ಕ್ರೈಸ್ತವಿಶ್ವಾಸಿಯಾದ ಹೆಂಡತಿಯನ್ನು ಕರೆದುಕೊಂಡು ಸಂಚರಿಸುವುದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ, ಕರ್ತನ ಸಹೋದರರಂತೆಯ, ಮತ್ತು ಕೇಫನಂತೆಯೂ ನಮಗೆ ಹಕ್ಕಿಲ್ಲವೇ?


ಈತನು ಆ ಬಡಗಿಯಲ್ಲವೇ? ಈತನು ಮರಿಯಳ ಮಗನಲ್ಲವೇ? ಈತನು ಯಾಕೋಬ, ಯೋಸೆ, ಯೂದ, ಸೀಮೋನ ಇವರ ಅಣ್ಣನಲ್ಲವೇ? ಈತನ ತಂಗಿಯರು ಇಲ್ಲಿ ನಮ್ಮಲ್ಲಿಯೇ ಇದ್ದಾರಲ್ಲವೇ?” ಎಂದು ಹೇಳುತ್ತಾ ಯೇಸುವನ್ನು ತಾತ್ಸಾರ ಮಾಡಿದರು.


ಬಳಿಕ ನಜರೇತೆಂಬ ಊರನ್ನು ಬಿಟ್ಟು ಜೆಬುಲೋನ್‌ ಮತ್ತು ನಫ್ತಾಲಿಯರ ಗಡಿ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನೌಮೆಂಬ ಊರಿನಲ್ಲಿ ವಾಸಿಸತೊಡಗಿದನು.


ದೋಣಿಯನ್ನು ಹತ್ತಿ, ಸಮುದ್ರ ಮಾರ್ಗವಾಗಿ ಕಪೆರ್ನೌಮಿನ ಕಡೆಗೆ ಹೊರಟರು. ಆಗಲೇ ಕತ್ತಲಾಗಿತ್ತು ಆದರೆ ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ.


ಎಲೈ ಕಪೆರ್ನೌಮೇ ನೀನು ಪರಲೋಕಕ್ಕೇರುವೇ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಇಂದಿನ ವರೆಗೆ ಉಳಿದಿರುತ್ತಿತ್ತು.


ಯೇಸುವನ್ನೂ ಆತನ ಶಿಷ್ಯರನ್ನೂ ಸಹ ಮದುವೆಗೆ ಕರೆದಿದ್ದರು.


ಹೀಗಿರಲಾಗಿ, ಯೇಸು ತಾನು ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ ಗಲಿಲಾಯದ ಕಾನಾ ಊರಿಗೆ ಹಿಂತಿರುಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಅರಮನೆಯ ಒಬ್ಬ ಅಧಿಕಾರಿಯ ಮಗನು ಅಸ್ವಸ್ಥನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು