Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 2:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೇಸುವನ್ನೂ ಆತನ ಶಿಷ್ಯರನ್ನೂ ಸಹ ಮದುವೆಗೆ ಕರೆದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಯೇಸು ಸ್ವಾಮಿಯ ತಾಯಿ ಅಲ್ಲಿಗೆ ಬಂದಿದ್ದರು. ಯೇಸುವಿಗೂ ಅವರ ಶಿಷ್ಯರಿಗೂ ಆ ಮದುವೆಗೆ ಆಮಂತ್ರಣವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೇಸುವನ್ನೂ ಆತನ ಶಿಷ್ಯರನ್ನೂ ಮದುವೆಗೆ ಕರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೇಸು ಮತ್ತು ಆತನ ಶಿಷ್ಯರನ್ನು ಸಹ ಮದುವೆಗೆ ಆಹ್ವಾನಿಸಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೇಸು ಮತ್ತು ಅವರ ಶಿಷ್ಯರು ಮದುವೆಗೆ ಆಮಂತ್ರಿತರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಜೆಜುಕ್, ಅನಿ ತ್ಯೆಚ್ಯಾ ಶಿಸಾಕ್ನಿಬಿ ತ್ಯಾ ಲಗ್ನಾಕ್ ಬಲ್ವಲ್ಲೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 2:2
30 ತಿಳಿವುಗಳ ಹೋಲಿಕೆ  

ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ ಮತ್ತು ತಂದೆಯಾದ ದೇವರಿಗೆ ಆತನ ಮೂಲಕ ಕೃತಜ್ಞತಾಸ್ತುತ್ತಿಯನ್ನು ಸಲ್ಲಿಸಿರಿ.


ಮುತೈದೆಯು ತನ್ನ ಗಂಡನು ಜೀವದಿಂದಿರುವ ತನಕ ಅವನಿಗೆ ಬದ್ಧಳಾಗಿದ್ದಾಳೆ. ಗಂಡನು ಮರಣಹೊಂದಿದ್ದರೆ ಆಕೆಯು ಬೇಕಾದವನನ್ನು ಮದುವೆಮಾಡಿಕೊಳ್ಳುವುದಕ್ಕೆ ಸ್ವತಂತ್ರಳಾಗಿದ್ದಾಳೆ. ಆದರೆ ಕರ್ತನಲ್ಲಿ ವಿಶ್ವಾಸಿಯಾದವನನ್ನು ಮಾತ್ರ ಆಗಬೇಕು.


ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.


ಹೀಗಿರಲಾಗಿ ನೀವು ತಿಂದರೂ, ಕುಡಿದರೂ, ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.


ಆಗ ಆತನು ಉತ್ತರವಾಗಿ ಅವರಿಗೆ, ‘ನೀವು ಈ ಕೇವಲ ಅಲ್ಪರಾದವರಲ್ಲಿ ಒಬ್ಬನಿಗೆ ಏನನ್ನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.


ಅದಕ್ಕೆ ಉತ್ತರವಾಗಿ ಅರಸನು, ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.


ಈತನು ಜಗಳವಾಡುವುದಿಲ್ಲ, ಕೂಗಾಡುವುದಿಲ್ಲ. ಬೀದಿಗಳಲ್ಲಿ ಈತನ ಧ್ವನಿಯು ಯಾರಿಗೂ ಕೇಳಿಸುವುದಿಲ್ಲ.


ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು.


ಅಲ್ಲಿ ದ್ರಾಕ್ಷಾರಸವು ಸಾಲದೆ ಹೋದಾಗ, ಯೇಸುವಿನ ತಾಯಿಯು ಆತನಿಗೆ “ಅವರಲ್ಲಿ ದ್ರಾಕ್ಷಾರಸವು ಮುಗಿದುಹೋಗಿದೆ” ಎಂದು ತಿಳಿದಳು.


ಇದಾದ ಮೇಲೆ ಯೇಸುವೂ, ಆತನ ತಾಯಿಯೂ, ತಮ್ಮಂದಿರೂ ಮತ್ತು ಆತನ ಶಿಷ್ಯರೂ ಘಟ್ಟಾ ಇಳಿದು ಕಪೆರ್ನೌಮಿಗೆ ಹೋಗಿ ಅಲ್ಲಿ ಅವರು ಕೆಲವು ದಿನ ಇದ್ದರು.


ಆಗ “ನಿನ್ನ ಆಲಯದ ಮೇಲಿನ ಅಭಿಮಾನವು ಬೆಂಕಿಯಂತೆ ನನ್ನನ್ನು ದಹಿಸುತ್ತಿದೆ” ಎಂದು ಬರೆದಿರುವುದನ್ನು ಆತನ ಶಿಷ್ಯರು ನೆನಪುಮಾಡಿಕೊಂಡರು.


ಆದುದರಿಂದ ಆತನು ಸತ್ತವರೊಳಗಿಂದ ಎದ್ದ ಮೇಲೆ ಈ ಮಾತು ಆತನ ಶಿಷ್ಯರ ನೆನಪಿಗೆ ಬಂದು ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನೂ, ಮತ್ತು ಯೇಸು ತಮಗೆ ಹೇಳಿದ ಮಾತನ್ನೂ ಅವರು ನಂಬಿದರು.


ಆ ಮೇಲೆ ಯೇಸು ತನ್ನ ಶಿಷ್ಯರೊಡನೆ ಯೂದಾಯ ದೇಶಕ್ಕೆ ಬಂದು ಅಲ್ಲಿ ಅವರ ಜೊತೆ ಇದ್ದು, ದೀಕ್ಷಾಸ್ನಾನ ಕೊಡುತ್ತಿದ್ದನು.


(ಆದರೆ ಯೇಸು ತಾನೇ ದೀಕ್ಷಾಸ್ನಾನ ಮಾಡಿಸುತ್ತಿರಲಿಲ್ಲ. ಆತನ ಶಿಷ್ಯರೇ ಮಾಡಿಸುತ್ತಿದ್ದರು),


ಅಷ್ಟರಲ್ಲಿ ಆತನ ಶಿಷ್ಯರು ಊಟಕ್ಕೆ ಬೇಕಾದದ್ದನ್ನು ಕೊಂಡುಕೊಳ್ಳುವುದಕ್ಕಾಗಿ ಪಟ್ಟಣದೊಳಕ್ಕೆ ಹೋಗಿದ್ದರು.


ಶಿಷ್ಯರು, “ಆತನಿಗೆ ಯಾರಾದರೂ ಊಟಕ್ಕೆ ತಂದು ಕೊಟ್ಟರೇನೊ?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ತಮ್ಮನಾದ ಅಂದ್ರೆಯನು ಆತನಿಗೆ;


ಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ, “ಮಿಕ್ಕ ತುಂಡುಗಳನ್ನು ಕೂಡಿಸಿರಿ, ಇದರಲ್ಲಿ ಯಾವುದೂ ವ್ಯರ್ಥವಾಗಬಾರದು” ಎಂದು ಹೇಳಿದನು.


ಸಂಜೆಯಾದಾಗ ಆತನ ಶಿಷ್ಯರು ಸಮುದ್ರದ ದಡಕ್ಕೆ ಬಂದು,


ಯೇಸುವಿನ ಶಿಷ್ಯರಲ್ಲಿ ಅನೇಕರು ಇದನ್ನು ಕೇಳಿ “ಇದು ಕಠಿಣವಾದ ಮಾತು, ಇದನ್ನು ಪಾಲಿಸುವವರು ಯಾರು?” ಎಂದು ಮಾತನಾಡಿಕೊಂಡರು.


ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಆತನನ್ನು ಬಿಟ್ಟು ಹೊರಟುಹೋದರು ಮತ್ತು ಆತನ ಜೊತೆಯಲ್ಲಿ ಸಂಚಾರ ಮಾಡುವುದನ್ನು ಬಿಟ್ಟರು.


ಆದಕಾರಣ ಯೇಸು ಇದನ್ನು ನೋಡಿ, ತನ್ನ ಹನ್ನೆರಡು ಮಂದಿ ಶಿಷ್ಯಂದಿರಿಗೆ “ನೀವು ಸಹ ಹೋಗಬೇಕೆಂದು ಇದ್ದೀರಾ?” ಎಂದು ಕೇಳಿದ್ದಕ್ಕೆ,


ಅದಕ್ಕೆ ಯೇಸು “ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ತೆಗೆದುಕೊಂಡೆನಲ್ಲವೇ? ಆದರೂ ನಿಮ್ಮಲ್ಲಿಯೂ ಒಬ್ಬನು ಸೈತಾನನಿದ್ದಾನೆ” ಎಂದನು.


ಈ ಮಾತು, ಆತನು ಸೀಮೋನ್ ಇಸ್ಕರಿಯೋತನ ಮಗನಾದ ಯೂದನ ವಿಷಯವಾಗಿ ಹೇಳಿದನು, ಏಕೆಂದರೆ, ಅವನು ಹನ್ನೆರಡು ಮಂದಿಯಲ್ಲಿ ಒಬ್ಬನಾಗಿದ್ದು, ಅವನೇ ಆತನನ್ನು ಹಿಡಿದು ಕೊಡುವುದಕ್ಕಿದ್ದನು.


ಆದುದರಿಂದ ಆತನ ಸಹೋದರರು ಆತನಿಗೆ “ನೀನು ಮಾಡುವ ಕಾರ್ಯಗಳನ್ನು ನಿನ್ನ ಶಿಷ್ಯರೂ ಸಹ ನೋಡುವಂತೆ, ಇಲ್ಲಿಂದ ಹೊರಟು, ಯೂದಾಯಕ್ಕೆ ಹೋಗು.


ಆಮೇಲೆ ಅವರು ಒಂದು ವರ್ಷ ಪೂರ್ತಿಯಾಗಿ ಸಭೆಯವರೊಂದಿಗಿದ್ದುಕೊಂಡು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಪ್ರಥಮಬಾರಿಗೆ ‘ಕ್ರೈಸ್ತರು’ ಎಂಬ ಹೆಸರು ಬಂದದ್ದು.


ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರೂ ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ಧನಸಹಾಯ ಮಾಡಬೇಕೆಂದು ತೀರ್ಮಾನಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು