Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 2:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದುದರಿಂದ ಆತನು ಸತ್ತವರೊಳಗಿಂದ ಎದ್ದ ಮೇಲೆ ಈ ಮಾತು ಆತನ ಶಿಷ್ಯರ ನೆನಪಿಗೆ ಬಂದು ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನೂ, ಮತ್ತು ಯೇಸು ತಮಗೆ ಹೇಳಿದ ಮಾತನ್ನೂ ಅವರು ನಂಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವರು ಸತ್ತು ಪುನರುತ್ಥಾನ ಹೊಂದಿದ ಬಳಿಕ ಶಿಷ್ಯರು ಅವರ ಈ ಮಾತುಗಳನ್ನು ಸ್ಮರಿಸಿಕೊಂಡರು. ಪವಿತ್ರಗ್ರಂಥದಲ್ಲೂ ಯೇಸುವಿನ ಮಾತಿನಲ್ಲೂ ಅವರಿಗೆ ಆಗ ವಿಶ್ವಾಸ ಹುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದದರಿಂದ ಆತನು ಸತ್ತು ಬದುಕಿ ಎದ್ದ ಮೇಲೆ ಈ ಮಾತು ಆತನ ಶಿಷ್ಯರ ನೆನಪಿಗೆ ಬಂದು ಶಾಸ್ತ್ರದಲ್ಲಿ ಬರೆದದ್ದನ್ನೂ ಆತನ ಮಾತನ್ನೂ ಅವರು ನಂಬುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೇಸು ಸತ್ತವರೊಳಗಿಂದ ಎದ್ದುಬಂದಾಗ ಆತನ ಶಿಷ್ಯರು ಆತನ ಈ ಮಾತನ್ನು ಜ್ಞಾಪಿಸಿಕೊಂಡರು. ಅವರು ಪವಿತ್ರ ಗ್ರಂಥವನ್ನು ಮತ್ತು ಆತನು ಹೇಳಿದ ಮಾತುಗಳನ್ನು ನಂಬಿದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದ್ದರಿಂದ ಯೇಸು ಸತ್ತವರೊಳಗಿಂದ ಜೀವಂತವಾಗಿ ಎದ್ದಾಗ, ಅವರ ಶಿಷ್ಯರು ಅವರು ಹೇಳಿದ ಈ ಮಾತನ್ನು ನೆನಪು ಮಾಡಿಕೊಂಡು ಪವಿತ್ರ ವೇದವನ್ನೂ ಯೇಸು ತಮಗೆ ಹೇಳಿದ ಮಾತನ್ನೂ ನಂಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತೆಚೆಸಾಟ್ನಿ ತೊ ಮರುನ್ ಝಿತ್ತೊ ಹೊವ್ನ್ ಉಟುನ್ ಯೆಲ್ಲ್ಯಾ ತನ್ನಾ ತ್ಯೆಚ್ಯಾ ಶಿಸಾಕ್ನಿ ತ್ಯೆಚ್ಯಾ ಹ್ಯಾ ಗೊಸ್ಟಿಯಾಂಚಿ ಯಾದ್ ಹೊತ್ತಿ, ಅನಿ ತೆನಿ ಪವಿತ್ರ್ ಪುಸ್ತಕಾ ವರ್ತಿ, ಅನಿ ಜೆಜುನ್ ಸಾಂಗಲ್ಲ್ಯಾ ಗೊಸ್ಟಿಯಾಂಚ್ಯಾ ವರ್ತಿ ವಿಶ್ವಾಸ್ ಕರ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 2:22
13 ತಿಳಿವುಗಳ ಹೋಲಿಕೆ  

ಇದು ಆತನ ಶಿಷ್ಯರಿಗೆ ಮೊದಲು ತಿಳಿಯಲಿಲ್ಲ. ಆದರೆ ಯೇಸು ತನ್ನ ಮಹಿಮೆಯನ್ನು ಹೊಂದಿದ ಮೇಲೆ ಇದು ಆತನ ವಿಷಯವಾಗಿ ಬರೆದಿರುವಂತೆಯೇ, ಇವುಗಳನ್ನು ಆತನಿಗೆ ಮಾಡಿದೆವೆಂದೂ ನೆನಪು ಮಾಡಿಕೊಂಡರು.


ಆದರೆ ಅವರ ಕಾಲ ಬಂದಾಗ ಆತನು ನಮಗೆ ಇಂಥಿಂಥದ್ದನ್ನು ಹೇಳಿದನಲ್ಲಾ ಎಂದು ನಿಮ್ಮ ನೆನಪಿಗೆ ಬರುವಂತೆ, ನಿಮ್ಮ ಸಂಗಡ ಈ ಮಾತುಗಳನ್ನು ಆಡಿದ್ದೇನೆ. ನಾನು ನಿಮ್ಮ ಸಂಗಡ ಇದ್ದುದರಿಂದ ಮೊದಲು ಇವುಗಳನ್ನು ನಿಮಗೆ ಹೇಳಲಿಲ್ಲ.


ಆದರೆ ಆ ಸಹಾಯಕನು, ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನೆಲ್ಲಾ ನಿಮ್ಮ ನೆನಪಿಗೆ ತಂದುಕೊಡುವನು.


ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ; ನಿನ್ನ ಭಕ್ತನಿಗೆ ಅಧೋಲೋಕವನ್ನು ನೋಡಗೊಡಿಸುವುದಿಲ್ಲ.


ಆಗ “ನಿನ್ನ ಆಲಯದ ಮೇಲಿನ ಅಭಿಮಾನವು ಬೆಂಕಿಯಂತೆ ನನ್ನನ್ನು ದಹಿಸುತ್ತಿದೆ” ಎಂದು ಬರೆದಿರುವುದನ್ನು ಆತನ ಶಿಷ್ಯರು ನೆನಪುಮಾಡಿಕೊಂಡರು.


ಆಗ; “ಯೋಹಾನನಾದರೋ ನೀರಿನಿಂದ ದೀಕ್ಷಾಸ್ನಾನಮಾಡಿಸಿದನು; ನಿಮಗಾದರೋ ಪವಿತ್ರಾತ್ಮನಲ್ಲಿ ಸ್ನಾನವಾಗುವುದು” ಎಂದು ಕರ್ತನು ಹೇಳಿದ ಮಾತುಗಳು ನನ್ನ ನೆನಪಿಗೆ ಬಂದಿತು.


ಯೇಸು ಈ ಮೊದಲನೆಯ ಸೂಚಕ ಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ, ತನ್ನ ಮಹಿಮೆಯನ್ನು ತೋರ್ಪಡಿಸಿದನು. ಇದರಿಂದ ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು.


ತರುವಾಯ ಯೇಸು, “ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?” ಅಂದನು.


ಕ್ರಿಸ್ತನು ಇಂಥ ಶ್ರಮೆಗಳನ್ನು ಅನುಭವಿಸಿ ತನ್ನ ಮಹಿಮಾಪದವಿಗೆ ಸೇರುವುದು ಅಗತ್ಯವಾಗಿತ್ತಲ್ಲವೇ” ಎಂದು ಹೇಳಿದನು.


ಯೇಸುವನ್ನೂ ಆತನ ಶಿಷ್ಯರನ್ನೂ ಸಹ ಮದುವೆಗೆ ಕರೆದಿದ್ದರು.


‘ನನಗೆ ನೀನು ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ’ ಎಂದು ಎರಡನೆಯ ಕೀರ್ತನೆಯಲ್ಲಿ ಬರೆದಿರುವ ಮಾತು ನೆರವೇರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು