Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 20:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಎಂಟು ದಿನಗಳಾದ ಮೇಲೆ ಆತನ ಶಿಷ್ಯರು ಪುನಃ ಒಳಗಿದ್ದಾಗ ತೋಮನೂ ಅವರ ಜೊತೆ ಇದ್ದನು. ಬಾಗಿಲುಗಳು ಮುಚ್ಚಿದ್ದವು ಆಗ ಯೇಸು ಬಂದು ನಡುವೆ ನಿಂತು ನಿಮಗೆ “ಸಮಾಧಾನವಾಗಲಿ ಎಂದನು”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಎಂಟು ದಿನಗಳು ಕಳೆದವು. ಶಿಷ್ಯರು ಪುನಃ ಒಳಗೆ ಒಟ್ಟುಗೂಡಿದ್ದರು. ತೋಮನೂ ಅವರೊಡನೆ ಇದ್ದನು. ಬಾಗಿಲುಗಳು ಮುಚ್ಚಿದ್ದರೂ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಶಾಂತಿ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಎಂಟು ದಿವಸಗಳಾದ ಮೇಲೆ ಆತನ ಶಿಷ್ಯರು ತಿರಿಗಿ ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ನಡುವೆ ನಿಂತು - ನಿಮಗೆ ಸಮಾಧಾನವಾಗಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಒಂದು ವಾರದ ನಂತರ ಶಿಷ್ಯರು ಮನೆಯೊಂದರಲ್ಲಿ ಒಟ್ಟಾಗಿ ಸೇರಿದ್ದರು. ತೋಮನು ಅವರೊಂದಿಗೆ ಇದ್ದನು. ಬಾಗಿಲುಗಳನ್ನು ಮುಚ್ಚಲಾಗಿತ್ತು. ಆಗ ಯೇಸು ಬಂದು ಅವರ ಮಧ್ಯದಲ್ಲಿ ನಿಂತುಕೊಂಡು ಅವರಿಗೆ, “ಶಾಂತಿಯು ನಿಮ್ಮೊಂದಿಗಿರಲಿ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಎಂಟು ದಿವಸಗಳಾದ ಮೇಲೆ ಯೇಸುವಿನ ಶಿಷ್ಯರು ಪುನಃ ಮನೆಯ ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಿಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು, “ನಿಮಗೆ ಸಮಾಧಾನವಾಗಲಿ!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಎಕ್ ವಾರಾಚ್ಯಾ ಮಾನಾ ಶಿಸಾ ದಾರಾ ಲಾವುನ್ ಘೆವ್ನ್ ಭುತ್ತುರ್ ಗೊಳಾ ಹೊವ್ನ್ ಹೊತ್ತಿ, ಅನಿ ಥೊಮಸ್‍ಬಿ ತೆಂಚ್ಯಾ ವಾಂಗ್ಡಾ ಹೊತ್ತೊ. ದಾರಾ ಧಾಪಲ್ಲಿ ಹೊತ್ತಿ ಜಾಲ್ಯಾರ್‍ಬಿ ಜೆಜು ತೆಂಚ್ಯಾ ಮದ್ದಿ ಯೆವ್ನ್ ಇಬೆ ರ್‍ಹಾಲೊ, ಅನಿ, “ಶಾಂತಿ ತುಮ್ಚ್ಯಾ ವಾಂಗ್ಡಾ ರ್‍ಹಾಂವ್ದಿತ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 20:26
14 ತಿಳಿವುಗಳ ಹೋಲಿಕೆ  

ಅದೇ ದಿನ ಎಂದರೆ ವಾರದ ಮೊದಲನೆಯ ದಿನದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡಿರಲು, ಆಗ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಸಮಾಧಾನವಾಗಲಿ” ಎಂದನು.


ಯೇಸು ಅವರಿಗೆ, “ನಿಮಗೆ ಸಮಾಧಾನವಾಗಲಿ” ಎಂದು ಪುನಃ ಹೇಳಿ, “ತಂದೆಯು ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ” ಎಂದನು.


“ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.


ಯೇಸು ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಪೇತ್ರ ಯೋಹಾನ ಯಾಕೋಬರನ್ನು ಕರೆದುಕೊಂಡು ಪ್ರಾರ್ಥನೆಮಾಡುವುದಕ್ಕೆ ಬೆಟ್ಟವನ್ನು ಹತ್ತಿದನು.


ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ತಮ್ಮ ಯೋಹಾನನನ್ನೂ ಮಾತ್ರ ಏಕಾಂತವಾಗಿ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು.


ಬೆಟ್ಟಗಳು ಸ್ಥಳವನ್ನು ಬಿಟ್ಟುಹೋದಾವು, ಗುಡ್ಡಗಳು ಕದಲಿಯಾವು; ಆದರೆ ನನ್ನ ಕೃಪೆಯು ನಿನ್ನನ್ನು ಬಿಟ್ಟುಹೋಗದು, ಸಮಾಧಾನದ ನನ್ನ ಒಪ್ಪಂದವು ಕದಲದು ಎಂದು ನಿನ್ನನ್ನು ಕರುಣಿಸುವ ಯೆಹೋವನು ಅನ್ನುತ್ತಾನೆ.


ಯೆಹೋವನೇ, ನೀನು ನಮಗೆ ಸಮಾಧಾನವನ್ನು ವಿಧಿಸುವಿ, ಏಕೆಂದರೆ ನೀನೇ ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದಿ.


ಇಲ್ಲದಿದ್ದರೆ ಅವರು ನನ್ನ ಸಂಗಡ ಸಮಾಧಾನ ಮಾಡಿಕೊಳ್ಳುವ ಹಾಗೆ ನನ್ನನ್ನು ಆಶ್ರಯಿಸಲಿ, ನನ್ನ ಸಂಗಡ ಸಮಾಧಾನ ಮಾಡಿಕೊಳ್ಳಲಿ.


ಅನಂತರ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕುಳಿತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ನೋಡಿದವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು.


ಅವರು ಈ ಸಂಗತಿಗಳನ್ನು ಕುರಿತು ಮಾತನಾಡುತ್ತಿರುವಾಗ ಯೇಸುವೇ ಅವರ ನಡುವೆ ನಿಂತು, “ನಿಮಗೆ ಸಮಾಧಾನವಾಗಲಿ” ಎಂದು ಅವರಿಗೆ ಹೇಳಿದನು.


ಆಗ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಸಹ ಯೇಸುವಿನೊಂದಿಗೆ ಸಾಯುವುದಕ್ಕೆ ಹೋಗೋಣ” ಎಂದು ಹೇಳಿದನು.


ತರುವಾಯ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ಪುನಃ ಕಾಣಿಸಿಕೊಂಡನು:


ಯೇಸು ಸತ್ತವರೊಳಗಿಂದ ಜೀವಿತನಾಗಿ ಎದ್ದ ಮೇಲೆ, ತನ್ನ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ.


ಯೇಸುವು ಬಾಧೆಪಟ್ಟು ಸತ್ತ ನಂತರ ತಾನು ಜೀವಂತನಾಗಿ ಎದ್ದು ಬಂದಿದ್ದೇನೆ ಎಂದು ಅನೇಕ ಸಂಭವಗಳ ಮೂಲಕ ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಸ್ಪಷ್ಟಪಡಿಸಿದನು. ಸತತವಾಗಿ ನಲವತ್ತು ದಿನಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯದ ವಿಷಯವನ್ನು ಕುರಿತು ಅವರಿಗೆ ಬೋಧಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು