Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 20:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆತನು ಸತ್ತ ಮೇಲೆ ಜೀವದಿಂದೆದ್ದು ಬರಬೇಕೆಂಬುದಾಗಿ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ಅವರಿಗೆ ಇನ್ನೂ ತಿಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಯೇಸು ಸತ್ತಮೇಲೆ ಮರಳಿ ಜೀವಂತರಾಗಿ ಎದ್ದುಬರಬೇಕು, ಎಂಬ ಪವಿತ್ರಗ್ರಂಥದ ವಾಕ್ಯ ಅವರಿಗೆ ಅದುವರೆಗೆ ಅರ್ಥವಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆತನು ಸತ್ತ ಮೇಲೆ ಜೀವದಿಂದೆದ್ದು ಬರಬೇಕೆಂಬದಾಗಿ ಶಾಸ್ತ್ರದಲ್ಲಿ ಬರೆದಿರುವ ಮಾತು ಅವರಿಗೆ ಇನ್ನೂ ತಿಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 (ಯೇಸು ಸತ್ತು ಜೀವಂತವಾಗಿ ಎದ್ದುಬರಬೇಕೆಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದಿರುವುದು ಈ ಶಿಷ್ಯರಿಗೆ ಇನ್ನೂ ಅರ್ಥವಾಗಿರಲಿಲ್ಲ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೇಸು ಸತ್ತವರೊಳಗಿಂದ ಪುನಃ ಎದ್ದು ಬರಬೇಕು ಎಂಬ ಪವಿತ್ರ ವೇದದ ವಾಕ್ಯವು ಅವರಿಗೆ ಇನ್ನೂ ತಿಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತೊ ಮರ್‍ನಾತ್ನಾ ಝಿತ್ತೊ ಹೊವ್ನ್ ಉಟುಕ್ ಪಾಜೆ ಮನುನ್ ಪವಿತ್ರ್ ಪುಸ್ತಕಾನ್ ಸಾಂಗಟಲ್ಲೆ ತೆಂಕಾ ಅಜುನ್ಬಿ ಕಳುಕ್ ನತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 20:9
22 ತಿಳಿವುಗಳ ಹೋಲಿಕೆ  

ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ; ನಿನ್ನ ಭಕ್ತನಿಗೆ ಅಧೋಲೋಕವನ್ನು ನೋಡಗೊಡಿಸುವುದಿಲ್ಲ.


ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರೆಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.


ಮೃತರಾದ ನಿನ್ನ ಜನರು ಬದುಕುವರು, ನಮ್ಮ ಹೆಣಗಳು ಜೀವದಿಂದ ಏಳುವವು, ಧೂಳಿನ ನಿವಾಸಿಗಳೇ, ಎಚ್ಚರಗೊಂಡು ಹರ್ಷಧ್ವನಿಗೈಯಿರಿ! ಯೆಹೋವನೇ, ನೀನು ಸುರಿಸುವ ಇಬ್ಬನಿಯು ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಗೆ ಹಾಕುವುದು.


ಶಾಸ್ತ್ರದ ಪ್ರಕಾರವೇ ಮೂರನೆಯ ದಿನದಲ್ಲಿ ಎಬ್ಬಿಸಲ್ಪಟ್ಟನು.


ಕ್ರಿಸ್ತನು ಇಂಥ ಶ್ರಮೆಗಳನ್ನು ಅನುಭವಿಸಿ ತನ್ನ ಮಹಿಮಾಪದವಿಗೆ ಸೇರುವುದು ಅಗತ್ಯವಾಗಿತ್ತಲ್ಲವೇ” ಎಂದು ಹೇಳಿದನು.


ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, “ನೀವು ದೇವರ ವಾಕ್ಯವನ್ನಾದರೂ ದೇವರ ಶಕ್ತಿಯನ್ನಾದರೂ ಸರಿಯಾಗಿ ತಿಳಿದುಕೊಳ್ಳದೆ ತಪ್ಪು ಅಭಿಪ್ರಾಯದಲ್ಲಿದ್ದೀರಿ;


ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? ಮರಣವೇ, ನಿನ್ನ ಉಪದ್ರವಗಳಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? ಕನಿಕರವು ನನಗೆ ಕಾಣಿಸದು.


ಆದುದರಿಂದ ಆತನು ಸತ್ತವರೊಳಗಿಂದ ಎದ್ದ ಮೇಲೆ ಈ ಮಾತು ಆತನ ಶಿಷ್ಯರ ನೆನಪಿಗೆ ಬಂದು ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನೂ, ಮತ್ತು ಯೇಸು ತಮಗೆ ಹೇಳಿದ ಮಾತನ್ನೂ ಅವರು ನಂಬಿದರು.


ಅವರು ಈ ಮಾತನ್ನು ಗ್ರಹಿಸಲಿಲ್ಲ. ಅದು ಅವರಿಗೆ ಮರೆಯಾಗಿದ್ದುದರಿಂದ ಅದರ ಅರ್ಥವನ್ನು ಅವರು ತಿಳಿಯದೆ ಹೋದರು. ಆ ಮಾತಿನ ವಿಷಯದಲ್ಲಿ ಅವರು ಆತನನ್ನು ಕೇಳುವುದಕ್ಕೆ ಅಂಜಿದರು.


ನನ್ನ ಶಕ್ತಿಯು ಬೋಕಿಯ ಹಾಗೆ ಒಣಗಿಹೋಗಿದೆ; ನನ್ನ ನಾಲಿಗೆಯು ಬಾಯಿಯ ಅಂಗಳಕ್ಕೆ ಹತ್ತಿಹೋಗಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸುತ್ತೀ.


ಆತನನ್ನು ದೇವರು ಮರಣದ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಏಕೆಂದರೆ ಮರಣವು ಆತನನ್ನು ಹಿಡಿದುಕೊಂಡಿರುವುದು ಅಸಾಧ್ಯವಾಗಿತ್ತು.


ಆಯಾ ವಾಕ್ಯಗಳ ಅರ್ಥವನ್ನು ವಿವರಿಸಿ; ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತು, ಎದ್ದು ಬರುವುದು ಅಗತ್ಯವೆಂತಲೂ “ನಾನು ನಿಮಗೆ ಪ್ರಸಿದ್ಧಿಪಡಿಸುವ ಯೇಸುವೇ ಆ ಕ್ರಿಸ್ತನೆಂತಲೂ” ಸ್ಥಿರಪಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು