Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 21:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆತನು ತಿರುಗಿ ಎರಡನೆಯ ಸಾರಿ ಅವನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ?” ಎಂದು ಕೇಳಲು, ಅವನು ಹೌದು ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ ಎಂದನು. ಆತನು ಅವನಿಗೆ “ನನ್ನ ಕುರಿಗಳನ್ನು ಪಾಲಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಯೇಸು ಎರಡನೆಯ ಬಾರಿ, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಲು, “ಹೌದು ಪ್ರಭುವೇ, ನಾನು ನಿಮ್ಮನ್ನು ಪ್ರೀತಿಸುತ್ತೇನೆಂದು ನೀವೇ ಬಲ್ಲಿರಿ,” ಎಂದು ಮರುನುಡಿದನು. ಯೇಸು ಅವನಿಗೆ, “ನನ್ನ ಕುರಿಗಳನ್ನು ಕಾಯಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆತನು ತಿರಿಗಿ ಎರಡನೆಯ ಸಾರಿ ಅವನನ್ನು - ಯೋಹಾನನ ಮಗನಾದ ಸೀಮೋನನೇ, ನನ್ನ ಮೇಲೆ ಪ್ರೀತಿ ಇಟ್ಟಿದ್ದೀಯೋ ಎಂದು ಕೇಳಲು ಅವನು - ಹೌದು, ಸ್ವಾಮೀ, ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬದನ್ನು ನೀನೇ ಬಲ್ಲೆ ಅಂದನು. ಆತನು ಅವನಿಗೆ - ನನ್ನ ಕುರಿಗಳನ್ನು ಕಾಯಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಎರಡನೆಯ ಸಾರಿ ಯೇಸು ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಪೇತ್ರನು, “ಹೌದು, ಪ್ರಭುವೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಕಾಯಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೇಸು ತಿರುಗಿ ಎರಡನೆಯ ಸಾರಿ ಅವನಿಗೆ, “ಯೋಹಾನನ ಮಗ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ?” ಎಂದು ಕೇಳಲು, ಪೇತ್ರನು ಯೇಸುವಿಗೆ, “ಹೌದು ಕರ್ತನೇ, ನಾನು ನಿಮ್ಮ ಮೇಲೆ ಮಮತೆ ಇಟ್ಟಿದ್ದೇನೆಂದು ನೀವೇ ಬಲ್ಲಿರಿ,” ಎಂದನು. ಅದಕ್ಕೆ ಯೇಸು ಅವನಿಗೆ, “ನನ್ನ ಕುರಿಗಳನ್ನು ರಕ್ಷಿಸು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅನಿ ಎಕ್ ಉಲ್ಲೊ ಎಳ್ ಹೊಲ್ಲ್ಯಾ ತನ್ನಾ, ಜೆಜುನ್ ಪೆದ್ರುಕ್, “ಸಿಮಾವ್ ಜುವಾಂವಾಚ್ಯಾ ಲೆಕಾ ತಿಯಾ ಮಾಜೊ ಪ್ರೆಮ್ ಕರ್‍ತೆ ಕಾಯ್?” ಮಟ್ಲ್ಯಾನ್. ತನ್ನಾ ತೆನಿ, “ಹೊಯ್, ಮಿಯಾ ತುಜೊ ಪ್ರೆಮ್ ಕರ್‍ತಾ ಮನುನ್ ತುಕಾ ಗೊತ್ತ್ ಹಾಯ್” ಮನುನ್ ಜಬಾಬ್ ದಿಲ್ಯಾನ್. ಜೆಜುನ್ ತೆಕಾ, “ಮಾಜ್ಯಾ ಬಕ್ರ್ಯಾಕ್ನಿ ಬಗುನ್ ಘೆ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 21:16
18 ತಿಳಿವುಗಳ ಹೋಲಿಕೆ  

ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.


ನಿಮ್ಮ ಮೇಲ್ವಿಚಾರಣೆಯಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲವಂತದಿಂದಲ್ಲ ದೇವರ ಚಿತ್ತಾನುಸಾರ ಇಷ್ಟಪೂರ್ವಕವಾಗಿ, ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧ ಮನಸ್ಸಿನಿಂದಲೇ ಮೇಲ್ವಿಚಾರಣೆ ಮಾಡಿರಿ.


ನೀವು ದಾರಿತಪ್ಪಿದ ಕುರಿಗಳಂತೆ ಇದ್ದವರು. ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳ ಕುರುಬನೂ ಪಾಲಕನೂ ಆಗಿರುವಾತನ ಬಳಿಗೆ ಬಂದಿದ್ದೀರಿ.


ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಉಂಟುಮಾಡಿದವನು ಆತನೇ; ನಾವು ಆತನವರು, ಆತನ ಪ್ರಜೆಯೂ, ಆತನು ಪಾಲಿಸುವ ಹಿಂಡೂ ಆಗಿದ್ದೇವೆ.


ಆತನು ನಮ್ಮ ದೇವರು; ನಾವೋ ಆತನು ಪಾಲಿಸುವ ಪ್ರಜೆಯೂ, ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇಯದು.


ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.


ಇತ್ತ, ಸೀಮೋನ್ ಪೇತ್ರನು ನಿಂತುಕೊಂಡು ಚಳಿ ಕಾಯಿಸಿಕೊಳ್ಳುತ್ತಾ ಇದ್ದನು. ಆಗ ಅಲ್ಲಿದ್ದವರು ಅವನನ್ನು, “ನೀನು ಸಹ ಆತನ ಶಿಷ್ಯರಲ್ಲಿ ಒಬ್ಬನಲ್ಲವೇ?” ಎಂದು ಕೇಳಲು, ಅವನು ಅದನ್ನು ನಿರಾಕರಿಸಿ, “ನಾನಲ್ಲ” ಎಂದನು.


ಆಗ ದ್ವಾರಪಾಲಕಿಯು, “ನೀನು ಸಹ ಆ ಮನುಷ್ಯನ ಶಿಷ್ಯರಲ್ಲಿ ಒಬ್ಬನಲ್ಲವೇ?” ಎಂದು ಪೇತ್ರನನ್ನು ಕೇಳಲು, ಅವನು, “ನಾನಲ್ಲ” ಎಂದನು.


ಮನುಷ್ಯಕುಮಾರನು ದಾರಿತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು” ಎಂದು ಹೇಳಿದನು.


ಅವನು ತಿರುಗಿ ನಿರಾಕರಿಸಿ ಆಣೆಯಿಟ್ಟು, “ಆ ಮನುಷ್ಯನನ್ನು ನಾನರಿಯೆನು” ಎಂದು ಹೇಳಿದನು.


ಆಗ ಎಲ್ಲಾ ದೇಶಗಳ ಜನರನ್ನೂ ಆತನ ಸಮ್ಮುಖದಲ್ಲಿ ತಂದು ಸೇರಿಸುವರು. ಕುರುಬನು ಕುರಿಗಳನ್ನೂ, ಆಡುಗಳನ್ನೂ ಬೇರ್ಪಡಿಸುವ ಪ್ರಕಾರ ಆತನು ಅವರನ್ನು ಬೇರ್ಪಡಿಸುವನು.


“‘ಯೆಹೂದ ಸೀಮೆಯ ಬೇತ್ಲೆಹೇಮೇ, ಯೆಹೂದದ ಮುಖ್ಯಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರಕ್ಕೂ ಸಣ್ಣದಲ್ಲ. ಏಕೆಂದರೆ ನನ್ನ ಪ್ರಜೆಯಾದ ಇಸ್ರಾಯೇಲನ್ನು ಆಳತಕ್ಕ ಒಬ್ಬ ಅಧಿಪತಿಯು ನಿನ್ನೊಳಗಿಂದಲೇ ಉದಯಿಸುವನು.’ ಎಂಬುದಾಗಿ ಪ್ರವಾದಿಯ ಮುಖಾಂತರ ಬರೆಯಲ್ಪಟಿದೆ” ಎಂದು ಹೇಳಿದರು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


ಏಕೆಂದರೆ ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಮರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ಅವರನ್ನು ನಡಿಸುತ್ತಾನೆ. ದೇವರು ಅವರ ಕಣ್ಣಿನಿಂದ ಕಣ್ಣೀರನ್ನೆಲ್ಲಾ ಒರೆಸಿಬಿಡುವನು.” ಎಂದು ಹೇಳಿದರು.


ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು