Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 21:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದುದರಿಂದ ಆ ಶಿಷ್ಯನು ಸಾಯುವುದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೆ ಅವನು ಸಾಯುವುದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ. “ನಾನು ಬರುವ ತನಕ ಅವನು ಉಳಿದಿರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು?” ಎಂದು ಮಾತ್ರ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಇದರಿಂದಾಗಿ ಆ ಶಿಷ್ಯನಿಗೆ ಸಾವಿಲ್ಲವೆಂಬ ವದಂತಿ ಸೋದರರಲ್ಲಿ ಹಬ್ಬಿತು. ಯೇಸು, ‘ನಾನು ಬರುವ ತನಕ ಅವನು ಹಾಗೆಯೇ ಇರಬೇಕೆಂಬುದು ನನ್ನ ಬಯಕೆಯಾದರೆ ಅದರಿಂದ ನಿನಗೇನಾಗಬೇಕು?’ ಎಂದು ಹೇಳಿದರೇ ಹೊರತು ಅವನಿಗೆ ಸಾವಿಲ್ಲವೆಂದು ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಇದರ ದೆಸೆಯಿಂದ ಆ ಶಿಷ್ಯನು ಸಾಯುವದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೆ ಅವನು ಸಾಯುವದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ; ನಾನು ಬರುವ ತನಕ ಅವನು ಇರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು ಎಂತಲೇ ಆತನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದ್ದರಿಂದ ಸಹೋದರರ (ಶಿಷ್ಯರ) ಮಧ್ಯೆ ಒಂದು ಕಥೆಯೇ ಹರಡಿಕೊಂಡಿತು. ಯೇಸುವಿನ ಪ್ರೀತಿಯ ಈ ಶಿಷ್ಯನು ಸಾಯುವುದಿಲ್ಲವೆಂದು ಅವರು ಹೇಳುತ್ತಿದ್ದರು. ಆದರೆ ಅವನು ಸಾಯುವುದಿಲ್ಲವೆಂದು ಯೇಸು ಹೇಳಲಿಲ್ಲ. “ನಾನು ಬರುವ ತನಕ ಅವನು ಜೀವದಿಂದ ಇರಬೇಕೆಂಬುದು ನನ್ನ ಇಷ್ಟವಾಗಿದ್ದರೆ ಅದರಿಂದ ನಿನಗೇನು?” ಎಂದಷ್ಟೇ ಆತನು ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದ್ದರಿಂದ ಆ ಶಿಷ್ಯನು ಸಾಯುವುದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೂ ಅವನು ಸಾಯುವುದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ. “ನಾನು ಬರುವ ತನಕ ಅವನು ಉಳಿದಿರಬೇಕೆಂಬುದು ನನಗೆ ಮನಸ್ಸಿದ್ದರೆ ಅದು ನಿನಗೇನು?” ಎಂದು ಮಾತ್ರ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 “ಅಶೆ ಹೊವ್ನ್ ಜೆಜುಚ್ಯಾ ವಾಂಗ್ಡಾ ಹೊತ್ತ್ಯಾಂಚ್ಯಾ ಮದ್ದಿ ಹ್ಯೊ ಶಿಸ್ ಮರುಚೆ ನೈಯ್‍ ಮನ್ತಲಿ ಖಬರ್ ಉಟ್ಲಿ”. ಖರೆ ತೊ ಮರ್‍ತಲೆ ನಕ್ಕೊ ಮನುನ್ ಜೆಜುನ್ ಸಾಂಗುಕ್‍ನಾ. ತೆನಿ, “ಮಿಯಾ ಯೆಯ್ ಪತರ್ ಜರ್ ತರ್ ತೊ ಝಿತ್ತೊ ರ್‍ಹಾವ್ಕ್ ಪಾಜೆ ಮನುನ್ ಮಾಕಾ ಪಾಜೆ ಹೊಲ್ಯಾರ್, ತುಕಾ ಕಶ್ಯಾಕ್ ಪಾಜೆ ತೆ?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 21:23
12 ತಿಳಿವುಗಳ ಹೋಲಿಕೆ  

ಆತನು ನಿನ್ನ ಮಾತುಗಳಲ್ಲಿ ಒಂದಕ್ಕಾದರೂ ಉತ್ತರ ದಯಪಾಲಿಸನೆಂಬುದಾಗಿ, ನೀನು ಆತನೊಂದಿಗೆ ವ್ಯಾಜ್ಯವಾಡುವುದೇಕೆ?


“ರಹಸ್ಯವಾದವುಗಳು ನಮ್ಮ ದೇವರಾದ ಯೆಹೋವನವು; ಆದರೆ ಆತನಿಂದ ಪ್ರಕಟವಾದವುಗಳು ಸದಾ ನಮ್ಮ ಮತ್ತು ನಮ್ಮ ಸಂತತಿಯವರ ಪಾಲಾಗಿರುವುದರಿಂದ ನಾವು ಈ ಧರ್ಮಶಾಸ್ತ್ರನಿಯಮಗಳನ್ನು ಅನುಸರಿಸಿ ನಡೆಯಬೇಕಾದ ಹಂಗಿನಲ್ಲಿದ್ದೇವೆ.”


ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗೆಂದನು,


ಭೂನಿವಾಸಿಗಳೆಲ್ಲರೂ ಆತನ ದೃಷ್ಟಿಯಲ್ಲಿ ಶೂನ್ಯರಾಗಿ ಪರಲೋಕ ಸೈನ್ಯದವರಲ್ಲಿಯೂ, ಭೂಲೋಕದವರಲ್ಲಿಯೂ ತನ್ನ ಚಿತ್ತದ ಪ್ರಕಾರ ಮಾಡುತ್ತಾನೆ; ಆತನ ಶಕ್ತಿಯುತ ಕೈಯನ್ನು ತಡೆಹಿಡಿಯಲು ಸಾಧ್ಯವಿಲ್ಲ ‘ನೀನು ಏನು ಮಾಡುತ್ತೀ?’” ಎಂದು ಯಾರೂ ಕೇಳಲಾರರು.


ಆಮೇಲೆ ಮನುಷ್ಯರಿಗೆ, ‘ಇಗೋ, ಕರ್ತನ ಭಯವೇ ಜ್ಞಾನ; ದುಷ್ಟತನವನ್ನು ತ್ಯಜಿಸುವುದೇ ವಿವೇಕ’” ಎಂದು ಹೇಳಿದನು.


ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.


ಆದುದರಿಂದ ಸಹೋದರರೇ, ಪವಿತ್ರಾತ್ಮಭರಿತರೂ, ಜ್ಞಾನಸಂಪನ್ನರೂ ಮತ್ತು ಒಳ್ಳೆಯ ಸಾಕ್ಷಿಯನ್ನುಳಿಸಿಕೊಂಡಿರುವ ಏಳು ಮಂದಿಯನ್ನು ನಿಮ್ಮೊಳಗಿಂದ ನೋಡಿ ಆರಿಸಿಕೊಳ್ಳಿರಿ. ಅವರನ್ನು ಈ ಕೆಲಸಕ್ಕಾಗಿ ನೇಮಿಸುವೆವು.


ಅಲ್ಲಿ ಕ್ರೈಸ್ತ ಸಹೋದರರನ್ನು ಕಂಡೆವು. ಅವರು ನಮ್ಮನ್ನು ತಮ್ಮ ಬಳಿಯಲ್ಲಿ ಏಳು ದಿನ ಇರಬೇಕೆಂದು ಬೇಡಿಕೊಂಡರು. ತರುವಾಯ ರೋಮಾಪುರಕ್ಕೆ ಬಂದೆವು.


ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.


ನೀವು ಈ ರೊಟ್ಟಿಯನ್ನು ತಿಂದು ಈ ಪಾನಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.


ಸಹೋದರರೇ, ಕರ್ತನು ಬರುವ ತನಕ ತಾಳ್ಮೆಯಿಂದಿರಿ. ವ್ಯವಸಾಯಮಾಡುವವರನ್ನು ನೋಡಿರಿ, ಅವನು ಭೂಮಿಯ ಬೆಲೆಬಾಳುವ ಫಲಕ್ಕಾಗಿ ಕಾದಿದ್ದು ಮುಂಗಾರು, ಹಿಂಗಾರು ಮಳೆಗಳು ಬರುವ ತನಕ ತಾಳ್ಮೆಯಿಂದಿರುವನು.


ಆದರೆ ನೀವು ಹೊಂದಿರುವುದನ್ನು ನಾನು ಬರುವ ತನಕ ಭದ್ರವಾಗಿ ಹಿಡಿದುಕೊಂಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು