Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಗ ಅವರು ಯೋಹಾನನ ಬಳಿಗೆ ಬಂದು ಅವನಿಗೆ “ಗುರುವೇ, ಯೊರ್ದನ್ ನದಿಯ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬನ ವಿಷಯದಲ್ಲಿ ನೀನು ಸಾಕ್ಷಿ ಕೊಟ್ಟೆಯಲ್ಲಾ, ಇಗೋ, ಆತನು ದೀಕ್ಷಾಸ್ನಾನ ಕೊಡುತ್ತಿದ್ದಾನೆ, ಆತನ ಬಳಿಗೆ ಎಲ್ಲರೂ ಹೋಗುತ್ತಿದ್ದಾರೆ.” ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅವರು ಯೊವಾನ್ನನ ಬಳಿಗೆ ಬಂದು, “ಗುರುವೇ, ಜೋರ್ಡನಿನ ಆಚೆಕಡೆಯಲ್ಲಿ ನಿಮ್ಮೊಡನೆ ಒಬ್ಬನು ಇದ್ದನಲ್ಲವೆ? ಆತನನ್ನು ಕುರಿತು ನೀವೇ ಸಾಕ್ಷಿ ಹೇಳಲಿಲ್ಲವೆ? ಈಗ ನೋಡಿ, ಆತನೇ ದೀಕ್ಷಾಸ್ನಾನ ಮಾಡಿಸುತ್ತಿದ್ದಾನೆ. ಎಲ್ಲರೂ ಆತನ ಬಳಿಗೆ ಹೊಗುತ್ತಿದ್ದಾರೆ,” ಎಂದು ದೂರಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಗ ಅವರು ಯೋಹಾನನ ಬಳಿಗೆ ಬಂದು ಅವನಿಗೆ - ಗುರುವೇ, ಯೊರ್ದನ್‍ಹೊಳೆಯ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಅವನೂ ಸ್ನಾನ ಮಾಡಿಸುತ್ತಾನೆ, ಅವನ ಬಳಿಗೆ ಎಲ್ಲರು ಹೋಗುತ್ತಾರೆ ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದ್ದರಿಂದ ಶಿಷ್ಯರು ಯೋಹಾನನ ಬಳಿಗೆ ಬಂದು, “ಗುರುವೇ, ಜೋರ್ಡನ್ ನದಿಯ ಆಚೆದಡದಲ್ಲಿ ನಿನ್ನೊಂದಿಗಿದ್ದ ವ್ಯಕ್ತಿಯನ್ನು ಜ್ಞಾಪಿಸಿಕೊ. ಆತನ ಕುರಿತಾಗಿ ನೀನೇ ಸಾಕ್ಷಿ ಹೇಳಲಿಲ್ಲವೇ? ಆತನು ಜನರಿಗೆ ದೀಕ್ಷಾಸ್ನಾನ ಕೊಡುತ್ತಿದ್ದಾನೆ. ಅನೇಕ ಜನರು ಆತನ ಬಳಿಗೆ ಹೋಗುತ್ತಿದ್ದಾರೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವರು ಯೋಹಾನನ ಬಳಿಗೆ ಬಂದು ಅವನಿಗೆ, “ಗುರುವೇ, ಯೊರ್ದನ್ ನದಿಯ ಆಚೆದಡದಲ್ಲಿ ನಿನ್ನೊಡನೆ ಇದ್ದ ಒಬ್ಬರ ಬಗ್ಗೆ ನೀನು ಸಾಕ್ಷಿ ಕೊಟ್ಟೆಯಲ್ಲಾ. ಇಗೋ, ಅವರು ದೀಕ್ಷಾಸ್ನಾನ ಮಾಡಿಸುತ್ತಿದ್ದಾರೆ ಮತ್ತು ಎಲ್ಲರೂ ಅವರ ಬಳಿಗೆ ಹೋಗುತ್ತಿದ್ದಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತನ್ನಾ ತೆನಿ ಜುವಾಂವಾಕ್ಡೆ ಗೆಲ್ಯಾನಿ, ಅನಿ “ಗುರುಜಿ, ತುಕಾ ಯಾದ್ ಹಾಯ್ ಕಾಯ್ ಜೊರ್ದಾನಾಚ್ಯಾ ತಿಕುಲ್ಯಾ ದಿಸ್ ಉಗಾವ್ತಲ್ಯಾ ದಿಕ್ಕಾತ್ ತೊ ಮಾನುಸ್ ತುಕಾ ಯಾದ್ ಹಾಯ್ ಕಾಯ್? ಅನಿ ತ್ಯೆಚ್ಯಾ ವಿಶಯಾತ್ ತಿಯಾ ಸಾಕ್ಷಿ ದಿಲ್ಲೆ ಅನಿ ಸಗ್ಳೆ ಲೊಕಾ ತೆಚೆಕ್ಡೆ ಜಾವ್ಲ್ಯಾತ್!” ತೊ ಅತ್ತಾ ಬಾಲ್ತಿಮ್ ದಿವ್‍ಲಾಲಾ, ಮನುನ್ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:26
23 ತಿಳಿವುಗಳ ಹೋಲಿಕೆ  

ಆ ಯೋಹಾನನು ಸಾಕ್ಷಿಗಾಗಿ ಬಂದನು. ತನ್ನ ಮೂಲಕವಾಗಿ ಎಲ್ಲರೂ ನಂಬುವಂತೆ ಅವನು ಬೆಳಕಿನ ವಿಷಯದಲ್ಲಿ ಸಾಕ್ಷಿಕೊಡಲು ಬಂದನು.


ಹೀಗಿರಲಾಗಿ ಫರಿಸಾಯರು, “ನಮ್ಮ ಯತ್ನವೇನೂ ನಡೆಯಲಿಲ್ಲ ನೋಡಿರಿ, ಲೋಕವೆಲ್ಲಾ ಆತನ ಹಿಂದೆ ಹೋಯಿತಲ್ಲಾ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.


ನಾವು ಅವನನ್ನು ಹೀಗೆಯೇ ಬಿಟ್ಟರೆ ಎಲ್ಲರೂ ಆತನ್ನನ್ನೇ ನಂಬುವರು. ರೋಮನ್ನರು ಬಂದು ನಮ್ಮ ಸ್ಥಳವನ್ನೂ ಮತ್ತು ರಾಷ್ಟ್ರವನ್ನೂ ವಶ ಮಾಡಿಕೊಂಡಾರು” ಎಂದರು.


ಆತನ ವಿಷಯವಾಗಿ ಯೋಹಾನನು ಸಾಕ್ಷಿಕೊಡುತ್ತಾನೆ, ಹೇಗೆಂದರೆ “‘ನನ್ನ ನಂತರ ಬರುವಾತನು ನನಗಿಂತ ಮೊದಲೇ ಇದ್ದುದರಿಂದ ಆತನು ನನಗಿಂತಲೂ ಉನ್ನತನು’ ಎಂದು ನಾನು ಹೇಳಿದಾತನು ಈತನೇ” ಎಂದು ಘೋಷಿಸಿದನು.


ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ಸತ್ಯದ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು. ಎಲ್ಲರೂ ನನಗೆ ಅಡ್ಡಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆಮಾಡುವರು.


ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ, “ಗುರುವೇ, ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು. ನೀನು ಮಾಡುವಂಥ ಈ ಸೂಚಕ ಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವುದು ಯಾರಿಂದಲೂ ಆಗದು” ಎಂದು ಹೇಳಿದನು.


ನಿಜವಾದ ಬೆಳಕು ಲೋಕಕ್ಕೆ ಬರುವುದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು.


ಅಂಗಡಿ ಬೀದಿಗಳಲ್ಲಿ ನಮಸ್ಕಾರಗಳು, ಜನರಿಂದ ‘ಗುರುಗಳೆನ್ನಿಸಿಕೊಳ್ಳುವುದು,’ ಇವುಗಳೇ ಅವರಿಗೆ ಇಷ್ಟ.


ಆಗ ಸಮಸ್ತ ಪ್ರಯಾಸವನ್ನು, ಕೈಗೂಡುವ ಸಕಲ ಕಾರ್ಯವನ್ನು ನೋಡಿ ಇವು ಪರಸ್ಪರ ಮತ್ಸರಕ್ಕೆ ಆಸ್ಪದವೆಂದು ಗ್ರಹಿಸಿಕೊಂಡೆನು. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.


ಪ್ರಾರ್ಥನೆಯನ್ನು ಕೇಳುವವನೇ, ನರರೆಲ್ಲರೂ ನಿನ್ನ ಬಳಿಗೆ ಬರುವರು.


ಆದರೆ ನೀವು ‘ಬೋಧಕರೆನ್ನಿಸಿಕೊಳ್ಳಬೇಡಿರಿ;’ ಏಕೆಂದರೆ ಕ್ರಿಸ್ತನೊಬ್ಬನೇ ನಿಮಗಿರುವ ಬೋಧಕನು ಮತ್ತು ನೀವೆಲ್ಲರೂ ಸಹೋದರರು.


ಯೇಸು ಯೋಹಾನನಿಗಿಂತ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಅವರಿಗೆ ದೀಕ್ಷಾಸ್ನಾನ ಮಾಡಿಸುತ್ತಾನೆಂಬ ಸುದ್ದಿಯನ್ನು ಫರಿಸಾಯರು ಕೇಳಿದರೆಂದು ಕರ್ತನಿಗೆ ತಿಳಿದಾಗ,


(ಆದರೆ ಯೇಸು ತಾನೇ ದೀಕ್ಷಾಸ್ನಾನ ಮಾಡಿಸುತ್ತಿರಲಿಲ್ಲ. ಆತನ ಶಿಷ್ಯರೇ ಮಾಡಿಸುತ್ತಿದ್ದರು),


ಅಷ್ಟರೊಳಗೆ ಶಿಷ್ಯರು “ಗುರುವೇ, ಊಟಮಾಡು” ಎಂದು ಆತನನ್ನು ಕೇಳಿಕೊಂಡರು.


ನೀವು ಯೋಹಾನನ ಬಳಿಗೆ ದೂತರನ್ನು ಕೇಳಿಕೊಂಡು ಬರುವುದಕ್ಕೆ ಕಳುಹಿಸಿದಿರಿ. ಅವನು ಸತ್ಯಕ್ಕೆ ಸಾಕ್ಷಿ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು