Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ತಾನು ಕಂಡು ಕೇಳಿದ್ದಕ್ಕೆ ಸಾಕ್ಷಿ ಕೊಡುತ್ತಾನೆ. ಆದರೆ ಆತನ ಸಾಕ್ಷಿಯನ್ನು ಯಾರೂ ಸ್ವೀಕರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆತನು ತಾನು ಕಂಡದ್ದನ್ನೂ ಕೇಳಿದ್ದನ್ನೂ ಕುರಿತೇ ಸಾಕ್ಷಿ ಹೇಳುತ್ತಾನೆ. ಆದರೂ ಆತನ ಮಾತನ್ನು ಯಾರೂ ಅಂಗೀಕರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ತಾನು ನೋಡಿ ಕೇಳಿದ್ದಕ್ಕೆ ಸಾಕ್ಷಿಕೊಡುತ್ತಾನೆ; ಆದರೆ ಆತನ ಸಾಕ್ಷಿಯನ್ನು ಯಾರೂ ಒಪ್ಪುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆತನು ತಾನು ಕಂಡಿರುವುದರ ಬಗ್ಗೆ ಮತ್ತು ಕೇಳಿರುವುದರ ಬಗ್ಗೆ ಸಾಕ್ಷಿ ನೀಡುತ್ತಾನೆ. ಆದರೆ ಆತನ ಸಾಕ್ಷಿಯನ್ನು ಜನರು ಸ್ವೀಕರಿಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅವರು ಯಾವುದನ್ನು ಕಂಡು ಕೇಳಿದರೋ ಅದಕ್ಕೆ ಸಾಕ್ಷಿಕೊಡುತ್ತಾರೆ. ಆದರೆ ಅವರ ಸಾಕ್ಷಿಯನ್ನು ಯಾರೂ ಸ್ವೀಕರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತೊ ಜೆ ಕಾಯ್ ಅಪ್ನಿ ಬಗಟ್ಲ್ಯಾನಾಯ್, ಅನಿ ಆಯಿಕ್ಲ್ಯಾನಾಯ್ ತ್ಯೆಚ್ಯಾ ವಿಶಯಾತುಚ್ ಲೊಕಾ ಸ್ವಿಕಾರ್ ಕರಿನಾತ್. ಖರೆ ಅಜುನ್‍ಬಿ ಕೊನ್ಬಿ ತೆನಿ ದಿಲ್ಲಿ ಸಾಕ್ಷಿ ಮಾನುನ್ ಘೆಯ್ನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:32
13 ತಿಳಿವುಗಳ ಹೋಲಿಕೆ  

ನಿನಗೆ ನಿಜನಿಜವಾಗಿ ಹೇಳುತ್ತೇನೆ, ನಾವು ತಿಳಿದಿರುವುದನ್ನು ಮಾತನಾಡುತ್ತೇವೆ ಮತ್ತು ನೋಡಿದ್ದಕ್ಕೆ ಸಾಕ್ಷಿ ಕೊಡುತ್ತೇವೆ. ಆದರೂ ನೀವು ನಮ್ಮ ಸಾಕ್ಷಿಯನ್ನು ಸ್ವೀಕರಿಸುವುದಿಲ್ಲ.


ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ, ಏಕೆಂದರೆ, ಯಜಮಾನನು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ, ಏಕೆಂದರೆ ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಸಿದ್ದೇನೆ.


ಆತನು ತನ್ನ ಸ್ವಂತ ಜನರ ಬಳಿಗೆ ಬಂದನು; ಆದರೆ ಸ್ವಂತ ಜನರು ಆತನನ್ನು ಸ್ವೀಕರಿಸಲಿಲ್ಲ.


ನಿಮ್ಮ ವಿಷಯವಾಗಿ ಮಾತನಾಡುವುದಕ್ಕೂ, ನಿಮ್ಮ ಮೇಲೆ ತೀರ್ಪು ಮಾಡುವುದಕ್ಕೂ ಅನೇಕ ಸಂಗತಿಗಳು ನನಗುಂಟು. ಆದರೆ ನನ್ನನ್ನು ಕಳುಹಿಸಿ ಕೊಟ್ಟಾತನು ಸತ್ಯವಂತನು. ಆತನಿಂದ ನಾನು ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ” ಎಂದನು.


ಏಕೆಂದರೆ, ತಂದೆಯು ಮಗನನ್ನು ಪ್ರೀತಿಸುತ್ತಾನೆ, ತಾನು ಮಾಡುವುದನ್ನೆಲ್ಲಾ ಅವನಿಗೆ ತೋರಿಸುತ್ತಾನೆ. ಇದಲ್ಲದೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು. ಅವುಗಳನ್ನು ನೋಡಿ ನಿಮಗೆ ಆಶ್ಚರ್ಯವಾಗುವುದು.


ಆತನ ಸಾಕ್ಷಿಯನ್ನು ಸ್ವೀಕರಿಸಿದವನು ದೇವರು ಸತ್ಯವಂತನೆಂದು ದೃಢಪಡಿಸುವವನಾಗಿದ್ದಾನೆ.


ಆಗ ಅವರು ಯೋಹಾನನ ಬಳಿಗೆ ಬಂದು ಅವನಿಗೆ “ಗುರುವೇ, ಯೊರ್ದನ್ ನದಿಯ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬನ ವಿಷಯದಲ್ಲಿ ನೀನು ಸಾಕ್ಷಿ ಕೊಟ್ಟೆಯಲ್ಲಾ, ಇಗೋ, ಆತನು ದೀಕ್ಷಾಸ್ನಾನ ಕೊಡುತ್ತಿದ್ದಾನೆ, ಆತನ ಬಳಿಗೆ ಎಲ್ಲರೂ ಹೋಗುತ್ತಿದ್ದಾರೆ.” ಎಂದು ಹೇಳಲು


ನಾವು ಕೇಳಿದ ಸಂಗತಿಯನ್ನು ನಮ್ಮಲ್ಲಿ ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು?


ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ? ಇಗೋ, ನನ್ನ ಗದರಿಕೆಯಿಂದಲೇ ನಾನು ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಕಾಡನ್ನಾಗಿ ಮಾಡುತ್ತೇನೆ. ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವವು.


ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನೂ ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯಲ್ಪಡುವುದು.


ಅದಕ್ಕೆ ಪಿಲಾತನು, “ಹಾಗಾದರೆ ನೀನು ಅರಸನೋ?” ಎಂದನು. ಯೇಸು, “ನನ್ನನ್ನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿದವನು, ಇದಕ್ಕಾಗಿಯೇ ಲೋಕಕ್ಕೆ ಬಂದಿದ್ದೇನೆ. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನು ನನ್ನ ಸ್ವರವನ್ನು ಕೇಳುತ್ತಾನೆ” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು