Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಜನರು ಆ ಸ್ತ್ರೀಗೆ, “ನಾವು ಆತನನ್ನು ನಂಬಿರುವುದು ಇನ್ನು ನಿನ್ನ ಮಾತಿನ ಮೇಲೆ ಅಲ್ಲ. ನಾವು ಸ್ವತಃ ಕಿವಿಯಾರೆ ಕೇಳಿ ಈತನು ನಿಜವಾಗಿಯೂ ಲೋಕರಕ್ಷಕನೇ ಎಂದು ತಿಳಿದುಕೊಂಡಿದ್ದೇವೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಆಗ ಅವರು, ಆ ಮಹಿಳೆಗೆ, “ನೀನು ಹೇಳಿದುದರಿಂದ ಮಾತ್ರವೇ ಈಗ ನಾವು ನಂಬುತ್ತಿಲ್ಲ, ನಾವೇ ಕಿವಿಯಾರೆ ಕೇಳಿ ನಂಬಿದ್ದೇವೆ; ಲೋಕೋದ್ಧಾರಕ ಇವರೇ ಎಂದು ನಮಗೀಗ ತಿಳಿಯಿತು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಆ ಹೆಂಗಸಿಗೆ - ನಾವು ಆತನನ್ನು ನಂಬಿರುವದು ಇನ್ನು ನಿನ್ನ ಮಾತಿನ ಮೇಲೆ ಅಲ್ಲ; ನಾವು ಕಿವಿಯಾರೆ ಕೇಳಿ ಈತನು ಲೋಕರಕ್ಷಕನೇ ಹೌದೆಂದು ತಿಳುಕೊಂಡಿದ್ದೇವೆ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಅವರು ಆ ಸ್ತ್ರೀಗೆ, “ನಾವು ಮೊದಲು ನಿನ್ನ ಮಾತನ್ನು ಕೇಳಿ ಯೇಸುವನ್ನು ನಂಬಿದೆವು. ಆದರೆ ಈಗ ಸ್ವತಃ ನಾವೇ ಆತನ ಮಾತನ್ನು ಕೇಳಿದ್ದರಿಂದ ನಂಬುತ್ತೇವೆ. ನಿಜವಾಗಿಯೂ ಈತನೇ ಲೋಕರಕ್ಷಕನೆಂದು ಈಗ ನಮಗೆ ತಿಳಿದಿದೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಜನರು ಆ ಸ್ತ್ರೀಗೆ, “ನಾವು ಇನ್ನು ಮುಂದೆ ನಂಬುವುದು ನಿನ್ನ ಮಾತಿನಿಂದಲ್ಲ. ಏಕೆಂದರೆ ನಾವೇ ಸ್ವತಃ ಕೇಳಿದ್ದೇವೆ. ಈತನು ನಿಜವಾಗಿಯೂ ಲೋಕ ರಕ್ಷಕನೆಂದು ತಿಳಿದಿದ್ದೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಅನಿ ತೆನಿ ತ್ಯಾ ಬಾಯ್ಕೊಮನ್ಸಿಕ್, “ಅಮಿ ಅತ್ತಾ ವಿಶ್ವಾಸ್, ಕರ್‍ತಾವ್, ಖಾಲಿ ತಿಯಾ ಸಾಂಗಲ್ಲ್ಯಾ ಗೊಸ್ಟಿ ವೈನಾ ನ್ಹಯ್, ಅಮಿ ಅಮ್ಚ್ಯಾ ಕಾನಾನಿ ತೆನಿ ಸಾಂಗ್ತಲಿ ಖಬರ್ ಆಯಿಕ್ಲಾಂವ್, ಅನಿ ಹ್ಯೊಚ್ ಹ್ಯಾ ಜಗಾಚೊ ರಾಕ್‍ನ್ದಾರ್ ಮನುನ್ ಅಮ್ಕಾ ಕಳ್ಳೆ” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:42
23 ತಿಳಿವುಗಳ ಹೋಲಿಕೆ  

ತಂದೆಯು ತನ್ನ ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವುದನ್ನು ನಾವು ತಿಳಿದಿದ್ದೇವೆ ಮತ್ತು ಅದರ ವಿಷಯದಲ್ಲಿ ನಾವು ಸಾಕ್ಷಿ ಹೇಳುತ್ತೇವೆ.


ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.


ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.


ಇದಕ್ಕಾಗಿ ನಾವು ಕಷ್ಟಪಡುತ್ತಿದ್ದೇವೆ, ಪ್ರಯಾಸಪಡುತ್ತಿದ್ದೇವೆ, ಯಾಕೆಂದರೆ ಎಲ್ಲಾ ಮನುಷ್ಯರಿಗೂ, ವಿಶೇಷವಾಗಿ ನಂಬುವವರಿಗೆ, ರಕ್ಷಕನಾಗಿರುವ ಜೀವವುಳ್ಳ ದೇವರ ಮೇಲೆ ನಾವು ನಿರೀಕ್ಷೆಯನ್ನಿಟ್ಟುಕೊಂಡವರಾಗಿದ್ದೇವೆ.


ಹೇಗೆಂದರೆ, ಕ್ರಿಸ್ತನಲ್ಲಿ ದೇವರು ಜಗತ್ತನ್ನು ತನ್ನೊಡನೆ ಸಂಧಾನಮಾಡಿಕೊಳ್ಳುತ್ತಿದ್ದಾನೆ; ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೇ, ಈ ಸಂಧಾನದ ಸಂದೇಶವನ್ನು ಎಲ್ಲರಿಗೂ ಸಾರುವಂತೆ ಅದನ್ನು ನಮ್ಮ ಮೇಲೆ ಹೊರಿಸಿದ್ದಾನೆ.


ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.


ಹೇಗೆಂದರೆ, ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿದ್ದಾರೆ ಮತ್ತು ನಾನು ನಿನ್ನ ಬಳಿಯಿಂದ ಬಂದವನೆಂದು ಇವರು ನಿಜವಾಗಿ ತಿಳಿದು, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ನಂಬಿದ್ದಾರೆ.


“ಅಲ್ಲಿ ಒಬ್ಬನಿದ್ದಾನೆ, ನಾನು ಇದುವರೆಗೆ ಮಾಡಿದ್ದನ್ನೆಲ್ಲಾ ನನಗೆ ತಿಳಿಸಿದನು. ಬಂದು ಅವನನ್ನು ನೋಡಿರಿ. ಬರತಕ್ಕ ಕ್ರಿಸ್ತನು ಅವನೇ ಇರಬಹುದೋ?” ಎಂದು ಹೇಳಿದಳು.


ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.


ಆತನು ಅನ್ಯಜನರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಕೀರ್ತಿ” ಅಂದನು.


ಯೇಸು ಬಂದಾಗ ಲಾಜರನನ್ನು ಸಮಾಧಿಯಲ್ಲಿಟ್ಟು ಆಗಲೇ ನಾಲ್ಕು ದಿನಗಳಾಯಿತೆಂದು ಆತನಿಗೆ ತಿಳಿದು ಬಂದಿತು.


ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು.


ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ. ಭೂಮಿಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡುವರು.


ಇನ್ನೂ ಹೆಚ್ಚು ಜನರು ಆತನ ವಾಕ್ಯವನ್ನು ಕೇಳಿ ನಂಬಿದರು,


ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ, ಪಾಪಕ್ಷಮಾಪಣೆಯನ್ನೂ ದಯಪಾಲಿಸುವುದಕ್ಕಾಗಿ ಅವನನ್ನು ಪ್ರಭುವನ್ನಾಗಿಯೂ, ರಕ್ಷಕನಾಗಿಯೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.


“ಅವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲರಿಗೆ ಒಬ್ಬ ರಕ್ಷಕನನ್ನು ಹುಟ್ಟಿಸಿದ್ದಾನೆ.


ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತ ಯಜ್ಞವಾಗಿದ್ದಾನೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳಿಗೂ ಪ್ರಾಯಶ್ಚಿತ್ತವಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು