Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:45 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಆತನು ಗಲಿಲಾಯವನ್ನು ತಲುಪಿದಾಗ ಗಲಿಲಾಯದವರು ಆತನನ್ನು ಸ್ವಾಗತಿಸಿದರು. ಯೆರೂಸಲೇಮಿನ ಪಸ್ಕಹಬ್ಬದ ಸಮಯದಲ್ಲಿ ಆತನು ಅಲ್ಲಿ ಮಾಡಿದ್ದನ್ನೆಲ್ಲಾ ಅವರು ನೋಡಿದ್ದರು, ಏಕೆಂದರೆ, ಅವರೂ ಹಬ್ಬಕ್ಕೆ ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಗಲಿಲೇಯವನ್ನು ತಲುಪಿದೊಡನೆ ಜನರು ಅವರನ್ನು ಆದರದಿಂದ ಬರಮಾಡಿಕೊಂಡರು. ಏಕೆಂದರೆ, ಹಬ್ಬಕ್ಕಾಗಿ ಆ ಜನರು ಜೆರುಸಲೇಮಿಗೆ ಹೋಗಿದ್ದಾಗ ಹಬ್ಬದ ಸಮಯದಲ್ಲಿ ಯೇಸು ಮಾಡಿದ್ದನ್ನೆಲ್ಲಾ ನೋಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಗಲಿಲಾಯದವರು ತಾವೂ ಯೆರೂಸಲೇವಿುನ ಜಾತ್ರೆಗೆ ಹೋಗಿ ಆತನು ಅಲ್ಲಿ ಮಾಡಿದ್ದನ್ನೆಲ್ಲಾ ನೋಡಿದ್ದರಿಂದ ಆತನು ಗಲಿಲಾಯಕ್ಕೆ ಬಂದಾಗ ಆತನನ್ನು ಆದರದಿಂದ ಅಂಗೀಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಆತನು ಗಲಿಲಾಯವನ್ನು ತಲುಪಿದಾಗ, ಅಲ್ಲಿಯ ಜನರು ಆತನನ್ನು ಸ್ವಾಗತಿಸಿದರು. ಈ ಜನರು ಪಸ್ಕಹಬ್ಬಕ್ಕಾಗಿ ಜೆರುಸಲೇಮಿಗೆ ಹೋಗಿದ್ದಾಗ ಹಬ್ಬದ ಸಮಯದಲ್ಲಿ ಆತನು ಮಾಡಿದ ಕಾರ್ಯಗಳನ್ನೆಲ್ಲಾ ನೋಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಯೇಸು ಗಲಿಲಾಯವನ್ನು ತಲುಪಿದಾಗ ಗಲಿಲಾಯದವರು ಅವರನ್ನು ಸ್ವಾಗತಿಸಿದರು. ಪಸ್ಕಹಬ್ಬದ ಸಮಯದಲ್ಲಿ ಯೇಸು ಯೆರೂಸಲೇಮಿನಲ್ಲಿ ಮಾಡಿದವುಗಳನ್ನೆಲ್ಲಾ ಕಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ತೊ ಗಾಲಿಲಿಯಾಕ್ ಯೆವ್ನ್ ಪಾವಲ್ಲ್ಯಾ ತನ್ನಾ ಥೈತ್ಲ್ಯಾ ಲೊಕಾನಿ ತೆಕಾ ಸ್ವಾಗತ್ ಕರ್ಲ್ಯಾನಿ, ಕಶ್ಯಾಕ್ ಮಟ್ಲ್ಯಾರ್ ತೆನಿ ಜೆರುಜಲೆಮಾಕ್ ಪಾಸ್ಕಾಚ್ಯಾ ಸನಾಕ್ ಗೆಲ್ಲ್ಯಾ ತನ್ನಾ ಜೆಜುನ್ ಕರಲ್ಲಿ ಸಗ್ಳಿ ಕಾಮಾ ತೆನಿ ಬಗಟಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:45
10 ತಿಳಿವುಗಳ ಹೋಲಿಕೆ  

ಆತನು ಪಸ್ಕಹಬ್ಬದ ಜಾತ್ರೆಯಲ್ಲಿ ಯೆರೂಸಲೇಮಿನಲ್ಲಿ ಇದ್ದಾಗ ಬಹು ಜನರು ಆತನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು.


ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ, “ಗುರುವೇ, ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು. ನೀನು ಮಾಡುವಂಥ ಈ ಸೂಚಕ ಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವುದು ಯಾರಿಂದಲೂ ಆಗದು” ಎಂದು ಹೇಳಿದನು.


ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ, ಪಂಚಾಶತ್ತಮ ದಿನದ ಹಬ್ಬದಲ್ಲಿಯೂ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿಯೂ ಅಂತು ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಬಾರದು.


ಆದರೆ ಯೇಸು ಯೆರೂಸಲೇಮಿಗೆ ಹೋಗುವವನಾದ್ದರಿಂದ, ಆ ಸಮಾರ್ಯದವರು ಆತನನ್ನು ಸೇರಿಸಿಕೊಳ್ಳಲಿಲ್ಲ.


ಯೇಸು ಹಿಂತಿರುಗಿ ಬಂದಾಗ ಜನರೆಲ್ಲರೂ ಆತನಿಗಾಗಿ ಕಾಯುತ್ತಿದ್ದು ಅವನನ್ನು ಸಂತೋಷದಿಂದ ಸ್ವೀಕರಿಸಿದರು.


ಅದೇ ಸಮಯದಲ್ಲಿ ಕೆಲವರು ಯೇಸುವಿನ ಹತ್ತಿರದಲ್ಲಿದ್ದು, ಪಿಲಾತನು ಗಲಿಲಾಯದವರ ರಕ್ತವನ್ನು ಅವರು ಕೊಟ್ಟ ಬಲಿಗಳ ಸಂಗಡ ಬೆರಸಿದನೆಂದು ಆತನಿಗೆ ತಿಳಿಸಿದರು.


ಇದು ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಮೇಲೆ ಮಾಡಿದ ಎರಡನೆಯ ಸೂಚಕಕಾರ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು