Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದಕಾರಣ ಯೆಹೂದ್ಯರು, ಯೇಸು ಸಬ್ಬತ್ ದಿನಗಳಲ್ಲಿ ಇಂಥಾ ಕಾರ್ಯಗಳನ್ನು ಮಾಡುತ್ತಾನಲ್ಲಾ ಎಂದು ಆತನನ್ನು ಹಿಂಸಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಯೇಸು ಇದನ್ನು ಸಬ್ಬತ್ ದಿನದಲ್ಲಿ ಮಾಡಿದ್ದರಿಂದ ಯೆಹೂದ್ಯರು ಅವರಿಗೆ ಕಿರುಕುಳಕೊಡಲು ತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದಕಾರಣ ಯೆಹೂದ್ಯರು - ಯೇಸು ಸಬ್ಬತ್‍ದಿನದಲ್ಲಿ ಇಂಥ ಕೆಲಸಗಳನ್ನು ಮಾಡುತ್ತಾನಲ್ಲಾ ಎಂದು ಆತನನ್ನು ಹಿಂಸಿಸುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೇಸು ಈ ಕಾರ್ಯಗಳನ್ನು ಸಬ್ಬತ್‌ದಿನದಲ್ಲಿ ಮಾಡುತ್ತಿದ್ದನು. ಈ ಕಾರಣದಿಂದಾಗಿ ಯೆಹೂದ್ಯರು ಯೇಸುವನ್ನು ಹಿಂಸಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೇಸು ಇವುಗಳನ್ನು ಸಬ್ಬತ್ ದಿನದಲ್ಲಿ ಮಾಡಿದ ಕಾರಣ ಯೆಹೂದ್ಯರು ಯೇಸುವನ್ನು ಹಿಂಸಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತೆಚೆಸಾಟ್ನಿ ತೆನಿ ಜೆಜುಕ್ ತರಾಸ್ ದಿವ್ಕ್ ಚಾಲು ಕರ್ಲ್ಯಾನಿ. ಕಶ್ಯಾಕ್ ಮಟ್ಲ್ಯಾರ್ ತೆನಿ ಹೆ ಕಾಮ್ ಸಬ್ಬಾತಾ ದಿಸಿ ಕರಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:16
15 ತಿಳಿವುಗಳ ಹೋಲಿಕೆ  

ದಣಿಗಿಂತ ಆಳು ದೊಡ್ಡವನಲ್ಲವೆಂಬುದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕ ಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಕೈಗೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಗೊಳ್ಳುತ್ತಿದ್ದರು.


ಅವರು ಪುನಃ ಆತನನ್ನು ಹಿಡಿಯುವುದಕ್ಕೆ ಪ್ರಯತ್ನಿಸಿದರು, ಆದರೆ ಆತನು ಅವರ ಕೈಯಿಂದ ತಪ್ಪಿಸಿಕೊಂಡು ಹೋದನು.


ಆಮೇಲೆ ಯೆರೂಸಲೇಮಿನವರಲ್ಲಿ ಕೆಲವರು “ಅವರು ಕೊಲ್ಲಬೇಕೆಂದು ಹುಡುಕುವುದು ಈತನನ್ನೇ ಅಲ್ಲವೇ?


ಆದರೆ ಆತನು ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ, ಏಕೆಂದರೆ, ಯೇಸು ಆ ಸ್ಥಳದಲ್ಲಿ ಇದ್ದ ಜನರ ಗುಂಪಿನ ಮಧ್ಯದಲ್ಲಿ ಮರೆಯಾದನು.


ಆದರೆ ಅವರು ಕ್ರೋಧಭರಿತರಾಗಿದ್ದರಿಂದ, ಈ ಯೇಸುವಿಗೆ ಏನು ಮಾಡೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ತಕ್ಷಣ ಫರಿಸಾಯರು ಹೊರಕ್ಕೆ ಹೋಗಿ ಹೆರೋದ್ಯರನ್ನು ಕೂಡಿಕೊಂಡು ಯಾವ ಉಪಾಯದಿಂದ ಯೇಸುವನ್ನು ಕೊಲ್ಲಬಹುದು ಎಂದು ಆತನಿಗೆ ವಿರೋಧವಾಗಿ ಒಳಸಂಚುಮಾಡಿದರು.


ತರುವಾಯ ಯೇಸು ಆ ಮನುಷ್ಯನಿಗೆ “ನಿನ್ನ ಕೈ ಚಾಚು” ಎಂದು ಹೇಳಿದನು. ಅವನು ಚಾಚಿದನು. ಅದು ಸಂಪೂರ್ಣವಾಸಿಯಾಗಿ ಮತ್ತೊಂದು ಕೈಯಂತಾಯಿತು.


ಯೆಹೂದ್ಯರು ಯೆರೂಸಲೇಮಿನಿಂದ ಯಾಜಕರನ್ನೂ, ಲೇವಿಯರನ್ನೂ ಯೋಹಾನನ ಬಳಿಗೆ ಕಳುಹಿಸಿ, “ನೀನು ಯಾರು?” ಎಂದು ಕೇಳಿದ್ದಕ್ಕೆ,


ಆದುದರಿಂದ ಯೆಹೂದ್ಯರು ಸ್ವಸ್ಥವಾದವನಿಗೆ, “ಈ ದಿನ ಸಬ್ಬತ್ ದಿನವಾದುದರಿಂದ ನೀನು ಹಾಸಿಗೆಯನ್ನು ಹೊತ್ತುಕೊಂಡು ಹೋಗುವುದು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿದೆಯೆಂದು” ಹೇಳಿದ್ದಕ್ಕೆ,


ಆ ಮನುಷ್ಯನು ಅಲ್ಲಿಂದ ಹೋಗಿ, ತನ್ನನ್ನು ಸ್ವಸ್ಥಪಡಿಸಿದಾತನು ಯೇಸುವೇ ಎಂದು ಯೆಹೂದ್ಯರಿಗೆ ತಿಳಿಸಿದನು.


ಅದಕ್ಕೆ ಯೇಸು ಅವರಿಗೆ, “ನನ್ನ ತಂದೆಯು ಇಂದಿನವರೆಗೂ ಕೆಲಸ ಮಾಡುತ್ತಿದ್ದಾನೆ, ನಾನೂ ಕೆಲಸ ಮಾಡುತ್ತೇನೆ” ಎಂದು ಹೇಳಿದನು.


ಯೇಸು ಈ ಮಾತನ್ನು ಹೇಳಿದ್ದರಿಂದ, ಆತನು ಸಬ್ಬತ್ ದಿನವನ್ನು ಅಲಕ್ಷ್ಯಮಾಡಿದ್ದಲ್ಲದೇ, ದೇವರನ್ನು ತನ್ನ ಸ್ವಂತ ತಂದೆ ಎಂದು ಹೇಳಿ ತನ್ನನ್ನು ದೇವರಿಗೆ ಸರಿಸಮಾನ ಮಾಡಿಕೊಂಡನೆಂದು ಯೆಹೂದ್ಯರು ಆತನನ್ನು ಕೊಲ್ಲುವುದಕ್ಕೆ ಇನ್ನಷ್ಟು ಪ್ರಯತ್ನಪಟ್ಟರು.


ಯೇಸು ಅವರಿಗೆ “ನಾನು ಒಂದು ಸೂಚಕ ಕಾರ್ಯವನ್ನು ಮಾಡಿದೆನು, ಅದಕ್ಕೆ ನೀವೆಲ್ಲರೂ ಬೆರಗಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು